Homeಸಿನಿಮಾಕ್ರೀಡೆಬದಲಾಗಬೇಕಿರುವುದು ದ್ಯುತಿಯ ನಿರ್ಧಾರವಲ್ಲ, ಸಮಾಜದ ಮನಸ್ಥಿತಿ

ಬದಲಾಗಬೇಕಿರುವುದು ದ್ಯುತಿಯ ನಿರ್ಧಾರವಲ್ಲ, ಸಮಾಜದ ಮನಸ್ಥಿತಿ

- Advertisement -
- Advertisement -

ತನ್ನ ಓಟದ ವೈಖರಿ ಮೂಲಕ ಕ್ರೀಡಾಭಿಮಾನಿಗಳ ಮನಗೆದ್ದಿದ್ದ ಭಾರತದ ಹಾಲಿ ರಾಷ್ಟ್ರೀಯ ಚಾಂಪಿಯನ್ ದ್ಯುತಿ ಚಾಂದ್, ತನ್ನ ಗೆಳತಿಯೊಂದಿಗೆ ಸಂಬಂಧ ಹೊಂದಿರುವುದಾಗಿ ನೀಡಿರುವ ಬಹಿರಂಗ ಹೇಳಿಕೆಯು ಎಲ್ಲೆಡೆ ಚರ್ಚಾಸ್ಪದ ವಿಷಯವಾಗಿದೆ.

ಒಡಿಶಾ ಮೂಲದ ದ್ಯುತಿ, 100 ಮೀಟರ್ಸ್ ಓಟದಲ್ಲಿ ಏಷ್ಯನ್ ಕ್ರೀಡಾಕೂಟ ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ದಾಖಲೆ ಮಾಡಿದ್ದಾರೆ.

ಓಟಗಾರ್ತಿಯಾಗಿ ಪರಿಚಿತರಾಗಿದ್ದ ಇವರು ತನ್ನ ಗೆಳತಿಯೊಂದಿಗೆ ಸಂಬಂಧ ಇದ್ದು, ಪರಸ್ಪರ ಪ್ರೀತಿಸುತ್ತಿರುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ಸಲಿಂಗಕಾಮವನ್ನು ಬಹಿರಂಗವಾಗಿ ಹೇಳಿಕೊಂಡ ಮೊದಲ ಅಥ್ಲಿಟ್ ಎಂಬ ಹೆಗ್ಗಳಿಕೆಯು ಇವರದಾಗಿದೆ.

ದ್ಯುತಿ ಅವರ ಸಲಿಂಗಕಾಮದ ವಿಷಯವನ್ನು ತಿರಸ್ಕರಿಸಿರುವ ಅವರ ಕುಟುಂಬದ ಸದಸ್ಯರು, ಅವಳಿಗೆ ಏನು ತಿಳಿಯುವುದಿಲ್ಲ. ಯಾರದೋ ಒತ್ತಾಯಕ್ಕೆ ಮಣಿದು ಹೀಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಮನೆಯಿಂದ ಬಹಿಷ್ಕಾರ ಹಾಕುವುದಾಗಿಯೂ ಒತ್ತಡ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ದ್ಯುತಿ `ಸಂಗಾತಿಯ ಆಯ್ಕೆ ವೈಯಕ್ತಿಕವಾದದ್ದು, ನಾನು ನನ್ನ ಬಾಳಸಂಗಾತಿಯನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಪರಸ್ಪರ ಒಪ್ಪಿಗೆಯಿಂದಲೇ ನಾವಿಬ್ಬರು ಪ್ರೀತಿಸುತ್ತಿದ್ದೇವೆ. ನಾನು ಮೊದಲಿನಿಂದಲೂ ಸಲಿಂಗಕಾಮವನ್ನು ಬೆಂಬಲಿಸಿದ್ದೆ. ಇನ್ನು ಮುಂದೆಯೂ ಬೆಂಬಲಿಸುತ್ತೇನೆ. ನನ್ನ ಕುಟುಂಬದವರ ಒತ್ತಡಕ್ಕೆ ನಾನು ಮಣಿಯುವುದಿಲ್ಲ’ ಎಂದಿದ್ದಾರೆ.

ಅಥ್ಲೆಟ್‍ನಲ್ಲಿ ಮಿಂಚುತ್ತಿರುವ ದ್ಯುತಿ, ತನ್ನ ವೈಯಕ್ತಿಕ ಜೀವನದಲ್ಲಿ ತಾನು ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ದಿಟ್ಟತೆಯಿಂದಿರುವುದು ಸಂತಸದ ವಿಷಯ.

ಇದನ್ನು ಓದಿ: ಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

ಸುಪ್ರೀಂಕೋರ್ಟ್ ಕಳೆದ ವರ್ಷವಷ್ಟೇ `ಸಲಿಂಗಕಾಮ ಅಪರಾಧವಲ್ಲ’ ಎಂಬ ಕಾನೂನು ಭಾರತದಲ್ಲಿ ಮಾಡಿದೆ. ಆಗಿದ್ದರೂ ಸಲಿಂಗಕಾಮದ ಪ್ರಕರಣಗಳು ಬೆಳಕಿಗೆ ಬಂದಾಗ ಆ ವ್ಯಕ್ತಿಯ ಕುಟುಂಬವಾಗಲಿ, ಇಡೀ ಸಮಾಜವಾಗಲಿ ಅವರ ನಿರ್ಧಾರವನ್ನು ಒಪ್ಪಿಕೊಳ್ಳದೇ ಇರುವುದು ಇಡೀ ಸಮಾಜದ ಮೌಢ್ಯ, ಅಮಾನವೀಯ ಮನಸ್ಥಿತಿಯನ್ನು ತೋರಿಸುತ್ತದೆ.

ತಾನು ಇಷ್ಟಪಟ್ಟವರು ಅದೇ ಲಿಂಗದವರು ಎಂಬ ಕಾರಣಕ್ಕೆ ಕುಟುಂಬ ಹಾಗೂ ಇಡೀ ಸಮಾಜ ಅವರನ್ನು ಅಪರಾಧಿಯಾಗಿ ನೋಡುವುದು ಯಾವ ರೀತಿ ಸರಿ? ಪರಸ್ಪರ ಪ್ರೀತಿ ಹಾಗೂ ಸಮ್ಮತಿಯನ್ನು ಕುಟುಂಬವಾಗಲೀ ಸಮಾಜವಾಗಲೀ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದರ ಹಿಂದಿನ ಕಾರಣ ಸಮಾಜದಲ್ಲಿ ಸಲಿಂಗಕಾಮದ ಕುರಿತು ಅರಿವಿನ ಕೊರತೆ ಇರುವುದು ಕಂಡುಬರುತ್ತದೆ.

ದ್ಯುತಿ ಪ್ರಕರಣ ಮೊದಲನೆಯದಲ್ಲ. ಇಂತಹ ನೂರಾರು ಪ್ರೇಮ ಘಟನೆಗಳು ನಡೆದಿದ್ದರು ಅವು ಬೆಳಕಿಗೆ ಬರುವುದಿಲ್ಲ. ಬೆಳಕಿಗೆ ಬಂದ ಬೆರಳೆಣಿಕೆ ಪ್ರಕರಣಗಳಲ್ಲಿ ಆ ವ್ಯಕ್ತಿಯ ಅಭಿಪ್ರಾಯಕ್ಕಿಂತ ಜನರ ಅಭಿಪ್ರಾಯಗಳಿಗೆ ಮನ್ನಣೆ ದೊರೆತು, ವ್ಯಕ್ತಿಯ ಭಾವನೆಗಳನ್ನು ಚಿವುಟಿ ಹಾಕಲಾಗುತ್ತದೆ.

ಹಾಗಾಗಿ ಸಲಿಂಗಕಾಮದಂತಹ ಸೂಕ್ಷ್ಮ ಹಾಗೂ ಮಾನವೀಯ ಕಾನೂನುಗಳನ್ನು ಜಾರಿ ಮಾಡುವುದರ ಜೊತೆಗೆ ಈ ಕುರಿತು ಜನರಿಗೆ ಜಾಗೃತಿ ಮೂಡಿಸುವ ಜವಾಬ್ದಾರಿಯೂ ನ್ಯಾಯಾಂಗದ್ದಾಗಿರಬೇಕು. ಇಲ್ಲವಾದಲ್ಲಿ ಇಂತಹ ಎಷ್ಟೋ ಕಾನೂನುಗಳು ಪೇಪರ್ಗಳ ಪುಟಗಳಲ್ಲಿ ಮಾತ್ರ ಉಳಿದು ಹೋಗುವಂತಹ ಪರಿಸ್ಥಿತಿ ಬರುತ್ತದೆ.

ಈ ನಿಟ್ಟಿನಲ್ಲಿ ಸರ್ಕಾರಗಳು ಸಮಾಜದಲ್ಲಿ ಸಲಿಂಗಕಾಮದ ಕುರಿತಾಗಿ ಅರಿವು ಮೂಡಿಸಲು ಮುಂದಾಗಬೇಕು.

ಇದನ್ನು ಓದಿ: ಕ್ಯಾಪ್ಟನ್ ಕೂಲ್ ಧೋನಿಗೂ ಸಿಟ್ಟು ಬಂತು ನೋಡಿ !

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...