Homeಸಿನಿಮಾಕ್ರೀಡೆಬದಲಾಗಬೇಕಿರುವುದು ದ್ಯುತಿಯ ನಿರ್ಧಾರವಲ್ಲ, ಸಮಾಜದ ಮನಸ್ಥಿತಿ

ಬದಲಾಗಬೇಕಿರುವುದು ದ್ಯುತಿಯ ನಿರ್ಧಾರವಲ್ಲ, ಸಮಾಜದ ಮನಸ್ಥಿತಿ

- Advertisement -
- Advertisement -

ತನ್ನ ಓಟದ ವೈಖರಿ ಮೂಲಕ ಕ್ರೀಡಾಭಿಮಾನಿಗಳ ಮನಗೆದ್ದಿದ್ದ ಭಾರತದ ಹಾಲಿ ರಾಷ್ಟ್ರೀಯ ಚಾಂಪಿಯನ್ ದ್ಯುತಿ ಚಾಂದ್, ತನ್ನ ಗೆಳತಿಯೊಂದಿಗೆ ಸಂಬಂಧ ಹೊಂದಿರುವುದಾಗಿ ನೀಡಿರುವ ಬಹಿರಂಗ ಹೇಳಿಕೆಯು ಎಲ್ಲೆಡೆ ಚರ್ಚಾಸ್ಪದ ವಿಷಯವಾಗಿದೆ.

ಒಡಿಶಾ ಮೂಲದ ದ್ಯುತಿ, 100 ಮೀಟರ್ಸ್ ಓಟದಲ್ಲಿ ಏಷ್ಯನ್ ಕ್ರೀಡಾಕೂಟ ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ದಾಖಲೆ ಮಾಡಿದ್ದಾರೆ.

ಓಟಗಾರ್ತಿಯಾಗಿ ಪರಿಚಿತರಾಗಿದ್ದ ಇವರು ತನ್ನ ಗೆಳತಿಯೊಂದಿಗೆ ಸಂಬಂಧ ಇದ್ದು, ಪರಸ್ಪರ ಪ್ರೀತಿಸುತ್ತಿರುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ಸಲಿಂಗಕಾಮವನ್ನು ಬಹಿರಂಗವಾಗಿ ಹೇಳಿಕೊಂಡ ಮೊದಲ ಅಥ್ಲಿಟ್ ಎಂಬ ಹೆಗ್ಗಳಿಕೆಯು ಇವರದಾಗಿದೆ.

ದ್ಯುತಿ ಅವರ ಸಲಿಂಗಕಾಮದ ವಿಷಯವನ್ನು ತಿರಸ್ಕರಿಸಿರುವ ಅವರ ಕುಟುಂಬದ ಸದಸ್ಯರು, ಅವಳಿಗೆ ಏನು ತಿಳಿಯುವುದಿಲ್ಲ. ಯಾರದೋ ಒತ್ತಾಯಕ್ಕೆ ಮಣಿದು ಹೀಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಮನೆಯಿಂದ ಬಹಿಷ್ಕಾರ ಹಾಕುವುದಾಗಿಯೂ ಒತ್ತಡ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ದ್ಯುತಿ `ಸಂಗಾತಿಯ ಆಯ್ಕೆ ವೈಯಕ್ತಿಕವಾದದ್ದು, ನಾನು ನನ್ನ ಬಾಳಸಂಗಾತಿಯನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಪರಸ್ಪರ ಒಪ್ಪಿಗೆಯಿಂದಲೇ ನಾವಿಬ್ಬರು ಪ್ರೀತಿಸುತ್ತಿದ್ದೇವೆ. ನಾನು ಮೊದಲಿನಿಂದಲೂ ಸಲಿಂಗಕಾಮವನ್ನು ಬೆಂಬಲಿಸಿದ್ದೆ. ಇನ್ನು ಮುಂದೆಯೂ ಬೆಂಬಲಿಸುತ್ತೇನೆ. ನನ್ನ ಕುಟುಂಬದವರ ಒತ್ತಡಕ್ಕೆ ನಾನು ಮಣಿಯುವುದಿಲ್ಲ’ ಎಂದಿದ್ದಾರೆ.

ಅಥ್ಲೆಟ್‍ನಲ್ಲಿ ಮಿಂಚುತ್ತಿರುವ ದ್ಯುತಿ, ತನ್ನ ವೈಯಕ್ತಿಕ ಜೀವನದಲ್ಲಿ ತಾನು ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ದಿಟ್ಟತೆಯಿಂದಿರುವುದು ಸಂತಸದ ವಿಷಯ.

ಇದನ್ನು ಓದಿ: ಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

ಸುಪ್ರೀಂಕೋರ್ಟ್ ಕಳೆದ ವರ್ಷವಷ್ಟೇ `ಸಲಿಂಗಕಾಮ ಅಪರಾಧವಲ್ಲ’ ಎಂಬ ಕಾನೂನು ಭಾರತದಲ್ಲಿ ಮಾಡಿದೆ. ಆಗಿದ್ದರೂ ಸಲಿಂಗಕಾಮದ ಪ್ರಕರಣಗಳು ಬೆಳಕಿಗೆ ಬಂದಾಗ ಆ ವ್ಯಕ್ತಿಯ ಕುಟುಂಬವಾಗಲಿ, ಇಡೀ ಸಮಾಜವಾಗಲಿ ಅವರ ನಿರ್ಧಾರವನ್ನು ಒಪ್ಪಿಕೊಳ್ಳದೇ ಇರುವುದು ಇಡೀ ಸಮಾಜದ ಮೌಢ್ಯ, ಅಮಾನವೀಯ ಮನಸ್ಥಿತಿಯನ್ನು ತೋರಿಸುತ್ತದೆ.

ತಾನು ಇಷ್ಟಪಟ್ಟವರು ಅದೇ ಲಿಂಗದವರು ಎಂಬ ಕಾರಣಕ್ಕೆ ಕುಟುಂಬ ಹಾಗೂ ಇಡೀ ಸಮಾಜ ಅವರನ್ನು ಅಪರಾಧಿಯಾಗಿ ನೋಡುವುದು ಯಾವ ರೀತಿ ಸರಿ? ಪರಸ್ಪರ ಪ್ರೀತಿ ಹಾಗೂ ಸಮ್ಮತಿಯನ್ನು ಕುಟುಂಬವಾಗಲೀ ಸಮಾಜವಾಗಲೀ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದರ ಹಿಂದಿನ ಕಾರಣ ಸಮಾಜದಲ್ಲಿ ಸಲಿಂಗಕಾಮದ ಕುರಿತು ಅರಿವಿನ ಕೊರತೆ ಇರುವುದು ಕಂಡುಬರುತ್ತದೆ.

ದ್ಯುತಿ ಪ್ರಕರಣ ಮೊದಲನೆಯದಲ್ಲ. ಇಂತಹ ನೂರಾರು ಪ್ರೇಮ ಘಟನೆಗಳು ನಡೆದಿದ್ದರು ಅವು ಬೆಳಕಿಗೆ ಬರುವುದಿಲ್ಲ. ಬೆಳಕಿಗೆ ಬಂದ ಬೆರಳೆಣಿಕೆ ಪ್ರಕರಣಗಳಲ್ಲಿ ಆ ವ್ಯಕ್ತಿಯ ಅಭಿಪ್ರಾಯಕ್ಕಿಂತ ಜನರ ಅಭಿಪ್ರಾಯಗಳಿಗೆ ಮನ್ನಣೆ ದೊರೆತು, ವ್ಯಕ್ತಿಯ ಭಾವನೆಗಳನ್ನು ಚಿವುಟಿ ಹಾಕಲಾಗುತ್ತದೆ.

ಹಾಗಾಗಿ ಸಲಿಂಗಕಾಮದಂತಹ ಸೂಕ್ಷ್ಮ ಹಾಗೂ ಮಾನವೀಯ ಕಾನೂನುಗಳನ್ನು ಜಾರಿ ಮಾಡುವುದರ ಜೊತೆಗೆ ಈ ಕುರಿತು ಜನರಿಗೆ ಜಾಗೃತಿ ಮೂಡಿಸುವ ಜವಾಬ್ದಾರಿಯೂ ನ್ಯಾಯಾಂಗದ್ದಾಗಿರಬೇಕು. ಇಲ್ಲವಾದಲ್ಲಿ ಇಂತಹ ಎಷ್ಟೋ ಕಾನೂನುಗಳು ಪೇಪರ್ಗಳ ಪುಟಗಳಲ್ಲಿ ಮಾತ್ರ ಉಳಿದು ಹೋಗುವಂತಹ ಪರಿಸ್ಥಿತಿ ಬರುತ್ತದೆ.

ಈ ನಿಟ್ಟಿನಲ್ಲಿ ಸರ್ಕಾರಗಳು ಸಮಾಜದಲ್ಲಿ ಸಲಿಂಗಕಾಮದ ಕುರಿತಾಗಿ ಅರಿವು ಮೂಡಿಸಲು ಮುಂದಾಗಬೇಕು.

ಇದನ್ನು ಓದಿ: ಕ್ಯಾಪ್ಟನ್ ಕೂಲ್ ಧೋನಿಗೂ ಸಿಟ್ಟು ಬಂತು ನೋಡಿ !

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...