Homeಸಿನಿಮಾಕ್ರೀಡೆಬದಲಾಗಬೇಕಿರುವುದು ದ್ಯುತಿಯ ನಿರ್ಧಾರವಲ್ಲ, ಸಮಾಜದ ಮನಸ್ಥಿತಿ

ಬದಲಾಗಬೇಕಿರುವುದು ದ್ಯುತಿಯ ನಿರ್ಧಾರವಲ್ಲ, ಸಮಾಜದ ಮನಸ್ಥಿತಿ

- Advertisement -
- Advertisement -

ತನ್ನ ಓಟದ ವೈಖರಿ ಮೂಲಕ ಕ್ರೀಡಾಭಿಮಾನಿಗಳ ಮನಗೆದ್ದಿದ್ದ ಭಾರತದ ಹಾಲಿ ರಾಷ್ಟ್ರೀಯ ಚಾಂಪಿಯನ್ ದ್ಯುತಿ ಚಾಂದ್, ತನ್ನ ಗೆಳತಿಯೊಂದಿಗೆ ಸಂಬಂಧ ಹೊಂದಿರುವುದಾಗಿ ನೀಡಿರುವ ಬಹಿರಂಗ ಹೇಳಿಕೆಯು ಎಲ್ಲೆಡೆ ಚರ್ಚಾಸ್ಪದ ವಿಷಯವಾಗಿದೆ.

ಒಡಿಶಾ ಮೂಲದ ದ್ಯುತಿ, 100 ಮೀಟರ್ಸ್ ಓಟದಲ್ಲಿ ಏಷ್ಯನ್ ಕ್ರೀಡಾಕೂಟ ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ದಾಖಲೆ ಮಾಡಿದ್ದಾರೆ.

ಓಟಗಾರ್ತಿಯಾಗಿ ಪರಿಚಿತರಾಗಿದ್ದ ಇವರು ತನ್ನ ಗೆಳತಿಯೊಂದಿಗೆ ಸಂಬಂಧ ಇದ್ದು, ಪರಸ್ಪರ ಪ್ರೀತಿಸುತ್ತಿರುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ಸಲಿಂಗಕಾಮವನ್ನು ಬಹಿರಂಗವಾಗಿ ಹೇಳಿಕೊಂಡ ಮೊದಲ ಅಥ್ಲಿಟ್ ಎಂಬ ಹೆಗ್ಗಳಿಕೆಯು ಇವರದಾಗಿದೆ.

ದ್ಯುತಿ ಅವರ ಸಲಿಂಗಕಾಮದ ವಿಷಯವನ್ನು ತಿರಸ್ಕರಿಸಿರುವ ಅವರ ಕುಟುಂಬದ ಸದಸ್ಯರು, ಅವಳಿಗೆ ಏನು ತಿಳಿಯುವುದಿಲ್ಲ. ಯಾರದೋ ಒತ್ತಾಯಕ್ಕೆ ಮಣಿದು ಹೀಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಮನೆಯಿಂದ ಬಹಿಷ್ಕಾರ ಹಾಕುವುದಾಗಿಯೂ ಒತ್ತಡ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ದ್ಯುತಿ `ಸಂಗಾತಿಯ ಆಯ್ಕೆ ವೈಯಕ್ತಿಕವಾದದ್ದು, ನಾನು ನನ್ನ ಬಾಳಸಂಗಾತಿಯನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಪರಸ್ಪರ ಒಪ್ಪಿಗೆಯಿಂದಲೇ ನಾವಿಬ್ಬರು ಪ್ರೀತಿಸುತ್ತಿದ್ದೇವೆ. ನಾನು ಮೊದಲಿನಿಂದಲೂ ಸಲಿಂಗಕಾಮವನ್ನು ಬೆಂಬಲಿಸಿದ್ದೆ. ಇನ್ನು ಮುಂದೆಯೂ ಬೆಂಬಲಿಸುತ್ತೇನೆ. ನನ್ನ ಕುಟುಂಬದವರ ಒತ್ತಡಕ್ಕೆ ನಾನು ಮಣಿಯುವುದಿಲ್ಲ’ ಎಂದಿದ್ದಾರೆ.

ಅಥ್ಲೆಟ್‍ನಲ್ಲಿ ಮಿಂಚುತ್ತಿರುವ ದ್ಯುತಿ, ತನ್ನ ವೈಯಕ್ತಿಕ ಜೀವನದಲ್ಲಿ ತಾನು ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ದಿಟ್ಟತೆಯಿಂದಿರುವುದು ಸಂತಸದ ವಿಷಯ.

ಇದನ್ನು ಓದಿ: ಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

ಸುಪ್ರೀಂಕೋರ್ಟ್ ಕಳೆದ ವರ್ಷವಷ್ಟೇ `ಸಲಿಂಗಕಾಮ ಅಪರಾಧವಲ್ಲ’ ಎಂಬ ಕಾನೂನು ಭಾರತದಲ್ಲಿ ಮಾಡಿದೆ. ಆಗಿದ್ದರೂ ಸಲಿಂಗಕಾಮದ ಪ್ರಕರಣಗಳು ಬೆಳಕಿಗೆ ಬಂದಾಗ ಆ ವ್ಯಕ್ತಿಯ ಕುಟುಂಬವಾಗಲಿ, ಇಡೀ ಸಮಾಜವಾಗಲಿ ಅವರ ನಿರ್ಧಾರವನ್ನು ಒಪ್ಪಿಕೊಳ್ಳದೇ ಇರುವುದು ಇಡೀ ಸಮಾಜದ ಮೌಢ್ಯ, ಅಮಾನವೀಯ ಮನಸ್ಥಿತಿಯನ್ನು ತೋರಿಸುತ್ತದೆ.

ತಾನು ಇಷ್ಟಪಟ್ಟವರು ಅದೇ ಲಿಂಗದವರು ಎಂಬ ಕಾರಣಕ್ಕೆ ಕುಟುಂಬ ಹಾಗೂ ಇಡೀ ಸಮಾಜ ಅವರನ್ನು ಅಪರಾಧಿಯಾಗಿ ನೋಡುವುದು ಯಾವ ರೀತಿ ಸರಿ? ಪರಸ್ಪರ ಪ್ರೀತಿ ಹಾಗೂ ಸಮ್ಮತಿಯನ್ನು ಕುಟುಂಬವಾಗಲೀ ಸಮಾಜವಾಗಲೀ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದರ ಹಿಂದಿನ ಕಾರಣ ಸಮಾಜದಲ್ಲಿ ಸಲಿಂಗಕಾಮದ ಕುರಿತು ಅರಿವಿನ ಕೊರತೆ ಇರುವುದು ಕಂಡುಬರುತ್ತದೆ.

ದ್ಯುತಿ ಪ್ರಕರಣ ಮೊದಲನೆಯದಲ್ಲ. ಇಂತಹ ನೂರಾರು ಪ್ರೇಮ ಘಟನೆಗಳು ನಡೆದಿದ್ದರು ಅವು ಬೆಳಕಿಗೆ ಬರುವುದಿಲ್ಲ. ಬೆಳಕಿಗೆ ಬಂದ ಬೆರಳೆಣಿಕೆ ಪ್ರಕರಣಗಳಲ್ಲಿ ಆ ವ್ಯಕ್ತಿಯ ಅಭಿಪ್ರಾಯಕ್ಕಿಂತ ಜನರ ಅಭಿಪ್ರಾಯಗಳಿಗೆ ಮನ್ನಣೆ ದೊರೆತು, ವ್ಯಕ್ತಿಯ ಭಾವನೆಗಳನ್ನು ಚಿವುಟಿ ಹಾಕಲಾಗುತ್ತದೆ.

ಹಾಗಾಗಿ ಸಲಿಂಗಕಾಮದಂತಹ ಸೂಕ್ಷ್ಮ ಹಾಗೂ ಮಾನವೀಯ ಕಾನೂನುಗಳನ್ನು ಜಾರಿ ಮಾಡುವುದರ ಜೊತೆಗೆ ಈ ಕುರಿತು ಜನರಿಗೆ ಜಾಗೃತಿ ಮೂಡಿಸುವ ಜವಾಬ್ದಾರಿಯೂ ನ್ಯಾಯಾಂಗದ್ದಾಗಿರಬೇಕು. ಇಲ್ಲವಾದಲ್ಲಿ ಇಂತಹ ಎಷ್ಟೋ ಕಾನೂನುಗಳು ಪೇಪರ್ಗಳ ಪುಟಗಳಲ್ಲಿ ಮಾತ್ರ ಉಳಿದು ಹೋಗುವಂತಹ ಪರಿಸ್ಥಿತಿ ಬರುತ್ತದೆ.

ಈ ನಿಟ್ಟಿನಲ್ಲಿ ಸರ್ಕಾರಗಳು ಸಮಾಜದಲ್ಲಿ ಸಲಿಂಗಕಾಮದ ಕುರಿತಾಗಿ ಅರಿವು ಮೂಡಿಸಲು ಮುಂದಾಗಬೇಕು.

ಇದನ್ನು ಓದಿ: ಕ್ಯಾಪ್ಟನ್ ಕೂಲ್ ಧೋನಿಗೂ ಸಿಟ್ಟು ಬಂತು ನೋಡಿ !

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...