Homeಸಿನಿಮಾಕ್ರೀಡೆಬದಲಾಗಬೇಕಿರುವುದು ದ್ಯುತಿಯ ನಿರ್ಧಾರವಲ್ಲ, ಸಮಾಜದ ಮನಸ್ಥಿತಿ

ಬದಲಾಗಬೇಕಿರುವುದು ದ್ಯುತಿಯ ನಿರ್ಧಾರವಲ್ಲ, ಸಮಾಜದ ಮನಸ್ಥಿತಿ

- Advertisement -
- Advertisement -

ತನ್ನ ಓಟದ ವೈಖರಿ ಮೂಲಕ ಕ್ರೀಡಾಭಿಮಾನಿಗಳ ಮನಗೆದ್ದಿದ್ದ ಭಾರತದ ಹಾಲಿ ರಾಷ್ಟ್ರೀಯ ಚಾಂಪಿಯನ್ ದ್ಯುತಿ ಚಾಂದ್, ತನ್ನ ಗೆಳತಿಯೊಂದಿಗೆ ಸಂಬಂಧ ಹೊಂದಿರುವುದಾಗಿ ನೀಡಿರುವ ಬಹಿರಂಗ ಹೇಳಿಕೆಯು ಎಲ್ಲೆಡೆ ಚರ್ಚಾಸ್ಪದ ವಿಷಯವಾಗಿದೆ.

ಒಡಿಶಾ ಮೂಲದ ದ್ಯುತಿ, 100 ಮೀಟರ್ಸ್ ಓಟದಲ್ಲಿ ಏಷ್ಯನ್ ಕ್ರೀಡಾಕೂಟ ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ದಾಖಲೆ ಮಾಡಿದ್ದಾರೆ.

ಓಟಗಾರ್ತಿಯಾಗಿ ಪರಿಚಿತರಾಗಿದ್ದ ಇವರು ತನ್ನ ಗೆಳತಿಯೊಂದಿಗೆ ಸಂಬಂಧ ಇದ್ದು, ಪರಸ್ಪರ ಪ್ರೀತಿಸುತ್ತಿರುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ಸಲಿಂಗಕಾಮವನ್ನು ಬಹಿರಂಗವಾಗಿ ಹೇಳಿಕೊಂಡ ಮೊದಲ ಅಥ್ಲಿಟ್ ಎಂಬ ಹೆಗ್ಗಳಿಕೆಯು ಇವರದಾಗಿದೆ.

ದ್ಯುತಿ ಅವರ ಸಲಿಂಗಕಾಮದ ವಿಷಯವನ್ನು ತಿರಸ್ಕರಿಸಿರುವ ಅವರ ಕುಟುಂಬದ ಸದಸ್ಯರು, ಅವಳಿಗೆ ಏನು ತಿಳಿಯುವುದಿಲ್ಲ. ಯಾರದೋ ಒತ್ತಾಯಕ್ಕೆ ಮಣಿದು ಹೀಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಮನೆಯಿಂದ ಬಹಿಷ್ಕಾರ ಹಾಕುವುದಾಗಿಯೂ ಒತ್ತಡ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ದ್ಯುತಿ `ಸಂಗಾತಿಯ ಆಯ್ಕೆ ವೈಯಕ್ತಿಕವಾದದ್ದು, ನಾನು ನನ್ನ ಬಾಳಸಂಗಾತಿಯನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಪರಸ್ಪರ ಒಪ್ಪಿಗೆಯಿಂದಲೇ ನಾವಿಬ್ಬರು ಪ್ರೀತಿಸುತ್ತಿದ್ದೇವೆ. ನಾನು ಮೊದಲಿನಿಂದಲೂ ಸಲಿಂಗಕಾಮವನ್ನು ಬೆಂಬಲಿಸಿದ್ದೆ. ಇನ್ನು ಮುಂದೆಯೂ ಬೆಂಬಲಿಸುತ್ತೇನೆ. ನನ್ನ ಕುಟುಂಬದವರ ಒತ್ತಡಕ್ಕೆ ನಾನು ಮಣಿಯುವುದಿಲ್ಲ’ ಎಂದಿದ್ದಾರೆ.

ಅಥ್ಲೆಟ್‍ನಲ್ಲಿ ಮಿಂಚುತ್ತಿರುವ ದ್ಯುತಿ, ತನ್ನ ವೈಯಕ್ತಿಕ ಜೀವನದಲ್ಲಿ ತಾನು ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ದಿಟ್ಟತೆಯಿಂದಿರುವುದು ಸಂತಸದ ವಿಷಯ.

ಇದನ್ನು ಓದಿ: ಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

ಸುಪ್ರೀಂಕೋರ್ಟ್ ಕಳೆದ ವರ್ಷವಷ್ಟೇ `ಸಲಿಂಗಕಾಮ ಅಪರಾಧವಲ್ಲ’ ಎಂಬ ಕಾನೂನು ಭಾರತದಲ್ಲಿ ಮಾಡಿದೆ. ಆಗಿದ್ದರೂ ಸಲಿಂಗಕಾಮದ ಪ್ರಕರಣಗಳು ಬೆಳಕಿಗೆ ಬಂದಾಗ ಆ ವ್ಯಕ್ತಿಯ ಕುಟುಂಬವಾಗಲಿ, ಇಡೀ ಸಮಾಜವಾಗಲಿ ಅವರ ನಿರ್ಧಾರವನ್ನು ಒಪ್ಪಿಕೊಳ್ಳದೇ ಇರುವುದು ಇಡೀ ಸಮಾಜದ ಮೌಢ್ಯ, ಅಮಾನವೀಯ ಮನಸ್ಥಿತಿಯನ್ನು ತೋರಿಸುತ್ತದೆ.

ತಾನು ಇಷ್ಟಪಟ್ಟವರು ಅದೇ ಲಿಂಗದವರು ಎಂಬ ಕಾರಣಕ್ಕೆ ಕುಟುಂಬ ಹಾಗೂ ಇಡೀ ಸಮಾಜ ಅವರನ್ನು ಅಪರಾಧಿಯಾಗಿ ನೋಡುವುದು ಯಾವ ರೀತಿ ಸರಿ? ಪರಸ್ಪರ ಪ್ರೀತಿ ಹಾಗೂ ಸಮ್ಮತಿಯನ್ನು ಕುಟುಂಬವಾಗಲೀ ಸಮಾಜವಾಗಲೀ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದರ ಹಿಂದಿನ ಕಾರಣ ಸಮಾಜದಲ್ಲಿ ಸಲಿಂಗಕಾಮದ ಕುರಿತು ಅರಿವಿನ ಕೊರತೆ ಇರುವುದು ಕಂಡುಬರುತ್ತದೆ.

ದ್ಯುತಿ ಪ್ರಕರಣ ಮೊದಲನೆಯದಲ್ಲ. ಇಂತಹ ನೂರಾರು ಪ್ರೇಮ ಘಟನೆಗಳು ನಡೆದಿದ್ದರು ಅವು ಬೆಳಕಿಗೆ ಬರುವುದಿಲ್ಲ. ಬೆಳಕಿಗೆ ಬಂದ ಬೆರಳೆಣಿಕೆ ಪ್ರಕರಣಗಳಲ್ಲಿ ಆ ವ್ಯಕ್ತಿಯ ಅಭಿಪ್ರಾಯಕ್ಕಿಂತ ಜನರ ಅಭಿಪ್ರಾಯಗಳಿಗೆ ಮನ್ನಣೆ ದೊರೆತು, ವ್ಯಕ್ತಿಯ ಭಾವನೆಗಳನ್ನು ಚಿವುಟಿ ಹಾಕಲಾಗುತ್ತದೆ.

ಹಾಗಾಗಿ ಸಲಿಂಗಕಾಮದಂತಹ ಸೂಕ್ಷ್ಮ ಹಾಗೂ ಮಾನವೀಯ ಕಾನೂನುಗಳನ್ನು ಜಾರಿ ಮಾಡುವುದರ ಜೊತೆಗೆ ಈ ಕುರಿತು ಜನರಿಗೆ ಜಾಗೃತಿ ಮೂಡಿಸುವ ಜವಾಬ್ದಾರಿಯೂ ನ್ಯಾಯಾಂಗದ್ದಾಗಿರಬೇಕು. ಇಲ್ಲವಾದಲ್ಲಿ ಇಂತಹ ಎಷ್ಟೋ ಕಾನೂನುಗಳು ಪೇಪರ್ಗಳ ಪುಟಗಳಲ್ಲಿ ಮಾತ್ರ ಉಳಿದು ಹೋಗುವಂತಹ ಪರಿಸ್ಥಿತಿ ಬರುತ್ತದೆ.

ಈ ನಿಟ್ಟಿನಲ್ಲಿ ಸರ್ಕಾರಗಳು ಸಮಾಜದಲ್ಲಿ ಸಲಿಂಗಕಾಮದ ಕುರಿತಾಗಿ ಅರಿವು ಮೂಡಿಸಲು ಮುಂದಾಗಬೇಕು.

ಇದನ್ನು ಓದಿ: ಕ್ಯಾಪ್ಟನ್ ಕೂಲ್ ಧೋನಿಗೂ ಸಿಟ್ಟು ಬಂತು ನೋಡಿ !

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...