Homeಸಿನಿಮಾಕ್ರೀಡೆಬದಲಾಗಬೇಕಿರುವುದು ದ್ಯುತಿಯ ನಿರ್ಧಾರವಲ್ಲ, ಸಮಾಜದ ಮನಸ್ಥಿತಿ

ಬದಲಾಗಬೇಕಿರುವುದು ದ್ಯುತಿಯ ನಿರ್ಧಾರವಲ್ಲ, ಸಮಾಜದ ಮನಸ್ಥಿತಿ

- Advertisement -
- Advertisement -

ತನ್ನ ಓಟದ ವೈಖರಿ ಮೂಲಕ ಕ್ರೀಡಾಭಿಮಾನಿಗಳ ಮನಗೆದ್ದಿದ್ದ ಭಾರತದ ಹಾಲಿ ರಾಷ್ಟ್ರೀಯ ಚಾಂಪಿಯನ್ ದ್ಯುತಿ ಚಾಂದ್, ತನ್ನ ಗೆಳತಿಯೊಂದಿಗೆ ಸಂಬಂಧ ಹೊಂದಿರುವುದಾಗಿ ನೀಡಿರುವ ಬಹಿರಂಗ ಹೇಳಿಕೆಯು ಎಲ್ಲೆಡೆ ಚರ್ಚಾಸ್ಪದ ವಿಷಯವಾಗಿದೆ.

ಒಡಿಶಾ ಮೂಲದ ದ್ಯುತಿ, 100 ಮೀಟರ್ಸ್ ಓಟದಲ್ಲಿ ಏಷ್ಯನ್ ಕ್ರೀಡಾಕೂಟ ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ದಾಖಲೆ ಮಾಡಿದ್ದಾರೆ.

ಓಟಗಾರ್ತಿಯಾಗಿ ಪರಿಚಿತರಾಗಿದ್ದ ಇವರು ತನ್ನ ಗೆಳತಿಯೊಂದಿಗೆ ಸಂಬಂಧ ಇದ್ದು, ಪರಸ್ಪರ ಪ್ರೀತಿಸುತ್ತಿರುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ಸಲಿಂಗಕಾಮವನ್ನು ಬಹಿರಂಗವಾಗಿ ಹೇಳಿಕೊಂಡ ಮೊದಲ ಅಥ್ಲಿಟ್ ಎಂಬ ಹೆಗ್ಗಳಿಕೆಯು ಇವರದಾಗಿದೆ.

ದ್ಯುತಿ ಅವರ ಸಲಿಂಗಕಾಮದ ವಿಷಯವನ್ನು ತಿರಸ್ಕರಿಸಿರುವ ಅವರ ಕುಟುಂಬದ ಸದಸ್ಯರು, ಅವಳಿಗೆ ಏನು ತಿಳಿಯುವುದಿಲ್ಲ. ಯಾರದೋ ಒತ್ತಾಯಕ್ಕೆ ಮಣಿದು ಹೀಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಮನೆಯಿಂದ ಬಹಿಷ್ಕಾರ ಹಾಕುವುದಾಗಿಯೂ ಒತ್ತಡ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ದ್ಯುತಿ `ಸಂಗಾತಿಯ ಆಯ್ಕೆ ವೈಯಕ್ತಿಕವಾದದ್ದು, ನಾನು ನನ್ನ ಬಾಳಸಂಗಾತಿಯನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಪರಸ್ಪರ ಒಪ್ಪಿಗೆಯಿಂದಲೇ ನಾವಿಬ್ಬರು ಪ್ರೀತಿಸುತ್ತಿದ್ದೇವೆ. ನಾನು ಮೊದಲಿನಿಂದಲೂ ಸಲಿಂಗಕಾಮವನ್ನು ಬೆಂಬಲಿಸಿದ್ದೆ. ಇನ್ನು ಮುಂದೆಯೂ ಬೆಂಬಲಿಸುತ್ತೇನೆ. ನನ್ನ ಕುಟುಂಬದವರ ಒತ್ತಡಕ್ಕೆ ನಾನು ಮಣಿಯುವುದಿಲ್ಲ’ ಎಂದಿದ್ದಾರೆ.

ಅಥ್ಲೆಟ್‍ನಲ್ಲಿ ಮಿಂಚುತ್ತಿರುವ ದ್ಯುತಿ, ತನ್ನ ವೈಯಕ್ತಿಕ ಜೀವನದಲ್ಲಿ ತಾನು ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ದಿಟ್ಟತೆಯಿಂದಿರುವುದು ಸಂತಸದ ವಿಷಯ.

ಇದನ್ನು ಓದಿ: ಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

ಸುಪ್ರೀಂಕೋರ್ಟ್ ಕಳೆದ ವರ್ಷವಷ್ಟೇ `ಸಲಿಂಗಕಾಮ ಅಪರಾಧವಲ್ಲ’ ಎಂಬ ಕಾನೂನು ಭಾರತದಲ್ಲಿ ಮಾಡಿದೆ. ಆಗಿದ್ದರೂ ಸಲಿಂಗಕಾಮದ ಪ್ರಕರಣಗಳು ಬೆಳಕಿಗೆ ಬಂದಾಗ ಆ ವ್ಯಕ್ತಿಯ ಕುಟುಂಬವಾಗಲಿ, ಇಡೀ ಸಮಾಜವಾಗಲಿ ಅವರ ನಿರ್ಧಾರವನ್ನು ಒಪ್ಪಿಕೊಳ್ಳದೇ ಇರುವುದು ಇಡೀ ಸಮಾಜದ ಮೌಢ್ಯ, ಅಮಾನವೀಯ ಮನಸ್ಥಿತಿಯನ್ನು ತೋರಿಸುತ್ತದೆ.

ತಾನು ಇಷ್ಟಪಟ್ಟವರು ಅದೇ ಲಿಂಗದವರು ಎಂಬ ಕಾರಣಕ್ಕೆ ಕುಟುಂಬ ಹಾಗೂ ಇಡೀ ಸಮಾಜ ಅವರನ್ನು ಅಪರಾಧಿಯಾಗಿ ನೋಡುವುದು ಯಾವ ರೀತಿ ಸರಿ? ಪರಸ್ಪರ ಪ್ರೀತಿ ಹಾಗೂ ಸಮ್ಮತಿಯನ್ನು ಕುಟುಂಬವಾಗಲೀ ಸಮಾಜವಾಗಲೀ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದರ ಹಿಂದಿನ ಕಾರಣ ಸಮಾಜದಲ್ಲಿ ಸಲಿಂಗಕಾಮದ ಕುರಿತು ಅರಿವಿನ ಕೊರತೆ ಇರುವುದು ಕಂಡುಬರುತ್ತದೆ.

ದ್ಯುತಿ ಪ್ರಕರಣ ಮೊದಲನೆಯದಲ್ಲ. ಇಂತಹ ನೂರಾರು ಪ್ರೇಮ ಘಟನೆಗಳು ನಡೆದಿದ್ದರು ಅವು ಬೆಳಕಿಗೆ ಬರುವುದಿಲ್ಲ. ಬೆಳಕಿಗೆ ಬಂದ ಬೆರಳೆಣಿಕೆ ಪ್ರಕರಣಗಳಲ್ಲಿ ಆ ವ್ಯಕ್ತಿಯ ಅಭಿಪ್ರಾಯಕ್ಕಿಂತ ಜನರ ಅಭಿಪ್ರಾಯಗಳಿಗೆ ಮನ್ನಣೆ ದೊರೆತು, ವ್ಯಕ್ತಿಯ ಭಾವನೆಗಳನ್ನು ಚಿವುಟಿ ಹಾಕಲಾಗುತ್ತದೆ.

ಹಾಗಾಗಿ ಸಲಿಂಗಕಾಮದಂತಹ ಸೂಕ್ಷ್ಮ ಹಾಗೂ ಮಾನವೀಯ ಕಾನೂನುಗಳನ್ನು ಜಾರಿ ಮಾಡುವುದರ ಜೊತೆಗೆ ಈ ಕುರಿತು ಜನರಿಗೆ ಜಾಗೃತಿ ಮೂಡಿಸುವ ಜವಾಬ್ದಾರಿಯೂ ನ್ಯಾಯಾಂಗದ್ದಾಗಿರಬೇಕು. ಇಲ್ಲವಾದಲ್ಲಿ ಇಂತಹ ಎಷ್ಟೋ ಕಾನೂನುಗಳು ಪೇಪರ್ಗಳ ಪುಟಗಳಲ್ಲಿ ಮಾತ್ರ ಉಳಿದು ಹೋಗುವಂತಹ ಪರಿಸ್ಥಿತಿ ಬರುತ್ತದೆ.

ಈ ನಿಟ್ಟಿನಲ್ಲಿ ಸರ್ಕಾರಗಳು ಸಮಾಜದಲ್ಲಿ ಸಲಿಂಗಕಾಮದ ಕುರಿತಾಗಿ ಅರಿವು ಮೂಡಿಸಲು ಮುಂದಾಗಬೇಕು.

ಇದನ್ನು ಓದಿ: ಕ್ಯಾಪ್ಟನ್ ಕೂಲ್ ಧೋನಿಗೂ ಸಿಟ್ಟು ಬಂತು ನೋಡಿ !

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...