Homeಎಕಾನಮಿಆತ್ಮನಿರ್ಭರ ಭಾರತ: ಹೊಸ ಆರ್ಥಿಕ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್

ಆತ್ಮನಿರ್ಭರ ಭಾರತ: ಹೊಸ ಆರ್ಥಿಕ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್

'ಆತ್ಮನಿರ್ಭರ್ ಭಾರತ್ ರೋಜ್‌ ಗಾರ್ ಯೋಜನೆ'ಯನ್ನು ಘೋಷಣೆ ಮಾಡಿ, ಹೊಸ ಉದ್ಯೋಗ ಸೃಷ್ಟಿಗೆ ಈ ಯೋಜನೆ ಸಹಕಾರಿಯಾಗಲಿದೆ ಎಂದರು.

- Advertisement -
- Advertisement -

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಆತ್ಮನಿರ್ಭರತೆಯ ಭಾಗವಾಗಿ (3.0) ಹೊಸ ಆರ್ಥಿಕ ಪ್ಯಾಕೇಜ್ ಘೋಷಿಸಿ, ಭಾರತದ ಆರ್ಥಿಕತೆಯಲ್ಲಿ ಚೇತರಿಕೆ ಕಾಣುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಆತ್ಮನಿರ್ಭರ್ ಭಾರತ್ ರೋಜ್‌ ಗಾರ್ ಯೋಜನೆ’ಯನ್ನು ಘೋಷಣೆ ಮಾಡಿ, “ಹೊಸ ಉದ್ಯೋಗ ಸೃಷ್ಟಿಗೆ ಈ ಯೋಜನೆ ಸಹಕಾರಿಯಾಗಲಿದೆ. ಹೊಸ ಯೋಜನೆಯಲ್ಲಿ ನೌಕರರಿಗೆ ಇಪಿಎಫ್ ಸೌಲಭ್ಯ ಸಿಗಲಿದೆ. ಮಾರ್ಚ್‌ನಿಂದ ಸೆಪ್ಟಂಬರ್ ಒಳಗೆ ಕೆಲಸ ಕಳೆದುಕೊಂಡವರಿಗೂ ಇಪಿಎಫ್ ಸೌಲಭ್ಯ ಸಿಗಲಿದೆ” ಎಂದು ಹೇಳಿದರು.

ಇದನ್ನೂ ಓದಿ: ಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿರುವ ಬಾಂಗ್ಲಾದೇಶ!

ಕೊರೊನಾ ಬಿಕ್ಕಟ್ಟಿನ ನಡುವೆ ಕುಸಿದಿದ್ದ ಆರ್ಥಿಕತೆಯನ್ನು ಮೇಲೆತ್ತಲು ಈಗಾಗಲೇ ಕೈಗೊಂಡಿರುವ ಕ್ರಮಗಳನ್ನು ಉತ್ತೇಜಿಸಲು ಹೊಸ ಕ್ರಮಗಳನ್ನು ಘೋಷಿಸಿ, ದೆಹಲಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, “ಆರ್ಥಿಕತೆಯಲ್ಲಿ ವಿಶಿಷ್ಟ ಚೇತರಿಕೆಯನ್ನು ಬಿಂಬಿಸುವ ಕೆಲವು ಸೂಚಕಗಳು ಇವೆ” ಎಂದು ಹೇಳಿದರು.

ದೇಶದಲ್ಲಿ ಕೊರೊನಾ ಪ್ರಕರಣಗಳ ಬಗ್ಗೆ ಮಾತನಾಡಿದ ಅವರು, “ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 10 ಲಕ್ಷದಿಂದ 4.89 ಲಕ್ಷಕ್ಕೆ ಇಳಿಕೆಯಾಗಿದೆ. ಒಟ್ಟು ಸಾವಿನ ಪ್ರಮಾಣವು ಶೇಕಡ 1.47 ರಷ್ಟಿದೆ” ಎಂದು ಹೇಳಿದರು.

ಇದನ್ನೂ ಓದಿ: ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ಇದರ ನಡುವೆಯೇ, 2020ರ ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು ಸಕಾರಾತ್ಮಕ ಬೆಳವಣಿಗೆಗೆ ಮರಳುವ ಸಾಧ್ಯತೆಯಿದೆ ಎಂದು ಆರ್‌ಬಿಐ ಊಹಿಸಿ ಹೇಳಿಕೆ ನೀಡಿದೆ.

ಜುಲೈ-ಸೆಪ್ಟೆಂಬರ್ ಅವಧಿಯ ಜಿಡಿಪಿಯು ಶೇಕಡಾ 8.6 ರಷ್ಟು ಕುಗ್ಗುವ ಸಾಧ್ಯತೆಯಿದೆ ಎಂದು ಆರ್‌ಬಿಐ ಅಧಿಕಾರಿಯೊಬ್ಬರು ಈ ಹಿಂದೆ ಪಿಟಿಐಗೆ ತಿಳಿಸಿದ್ದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

ಆರ್ಥಿಕತೆಯ ಚೇತರಿಕೆಯ ಸೂಚಕಗಳ ಕುರಿತು ಕೆಲವು ವಿವರಗಳು:

  • ಸಂಯೋಜಿತ ಖರೀದಿ ವ್ಯವಸ್ಥಾಪಕರ ಸೂಚ್ಯಂಕ (ಪಿಎಂಐ) ಅಕ್ಟೋಬರ್‌ನಲ್ಲಿ ಶೇ 58.9 ಕ್ಕೆ ಏರಿದ್ದು, ಹಿಂದಿನ ತಿಂಗಳಲ್ಲಿ ಇದು 54.6 ರಷ್ಟಿತ್ತು. ಇದು ಕಳೆದ ಒಂಬತ್ತು ವರ್ಷಗಳಲ್ಲಿ ಉತ್ಪಾದನೆಯಲ್ಲಿ ಪ್ರಬಲ ಹೆಚ್ಚಳವನ್ನು ದಾಖಲಿಸಿದೆ.
  • ಇಂಧನ ಬಳಕೆಯ ಬೆಳವಣಿಗೆಯು ವರ್ಷದಿಂದ ವರ್ಷಕ್ಕೆ ಶೇ 12 ಕ್ಕೆ ಏರಿಕೆಯಾಗುತ್ತಿದ್ದು, ಅಕ್ಟೋಬರ್‌ನಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು ಶೇಕಡಾ 10 ರಷ್ಟು ಏರಿಕೆಯಾಗಿ 1.05 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ.
  • ದೈನಂದಿನ ರೈಲ್ವೆ ಸರಕು ಸಾಗಣೆ ವರ್ಷದಿಂದ ವರ್ಷಕ್ಕೆ ಸರಾಸರಿ 20 ಶೇಕಡ ಮತ್ತು 12 ಪ್ರತಿಶತದಷ್ಟು ಹೆಚ್ಚಾಗಿದೆ. ಬ್ಯಾಂಕ್ ಸಾಲವನ್ನು 5.1 ಶೇಕಡಾ ಸುಧಾರಿಸಿದೆ.
  • ವಿದೇಶಿ ನೇರ ಹೂಡಿಕೆಯ (ಎಫ್‌ಡಿಐ) ಒಳಹರಿವು ಏಪ್ರಿಲ್-ಆಗಸ್ಟ್‌ನಲ್ಲಿ 35.37 ಬಿಲಿಯನ್ ಡಾಲರ್‌ಗೆ ತಲುಪಿದ್ದು, ವರ್ಷದಿಂದ ವರ್ಷಕ್ಕೆ ಶೇ 13 ರಷ್ಟು ಏರಿಕೆ ಕಂಡಿದೆ.
  • ಒಂದು ದೇಶ ಒಂದು ಪಡಿತರ ಚೀಟಿ ಯೋಜನೆ ಯಶಸ್ವಿಯಾಗಿದೆ. ಸ್ವನಿಧಿ ಯೋಜನೆಯಡಿ 26.26 ಕೋ.ರೂ. ಸಾಲ ನೀಡಲಾಗಿದೆ ಎಂದಿರುವ ನಿರ್ಮಲಾ ದೇಶ ಅಭಿವೃದ್ಧಿಯತ್ತ ಸಾಗಿದೆ.
  • ಬೀದಿಬದಿ ವ್ಯಾಪಾರಿಗಳಿಗೆ ಆತ್ಮ ನಿರ್ಭರ ನಿಧಿ ಯೋಜನೆ ಸಾಲ ನೀಡಲಾಗಿದೆ. 26.62 ಲಕ್ಷ ಅರ್ಜಿಗಳು ಬಂದಿದ್ದವು. ಈವರೆಗೆ ಒಟ್ಟು 1373 ಕೋಟಿ ರೂ.ಸಾಲ ನೀಡಲಾಗಿದೆ. ವಲಸೆ ಕಾರ್ಮಿಕರ ವಿಚಾರದಲ್ಲಿ ಪೋರ್ಟಲ್ ತಯಾರು ಮಾಡುತ್ತಿದ್ದು, ಇದಕ್ಕೆ ರಾಜ್ಯ ಸರಕಾರಗಳ ಸಹಾಯ ಪಡೆಯುತ್ತಿದ್ದೇವೆ.

ಈಗಾಗಲೇ ಘೋಷಿಸಿರುವ ಯೋಜನೆಗಳೇ ಇನ್ನೂ ಜನಸಾಮಾನ್ಯರನ್ನು ತಲುಪಿಲ್ಲ. ಕೊರೊನಾ ಸಂದರ್ಭದಲ್ಲಿ ಪ್ರಧಾನಿ ಘೋಷಿಸಿದ 20 ಲಕ್ಷ ಕೋಟಿ ಪ್ಯಾಕೇಜ್ ಏನಾಗಿದೆ ಎಂಬುದು ಯಾರಿಗೂ ತಿಳಿದಿಲ್ಲ. ಈ ಹಿಂದೆ ಆರ್‌ಬಿಐ ಉಪ ಗವರ್ನರ್ ಮಾತನಾಡಿ, ಭಾರತದ ಆರ್ಥಿಕತೆ ಚೇತರಿಸಿಕೊಳ್ಳಲು ಇನ್ನೂ ಕೆಲವು ವರ್ಷಗಳೇ ಬೇಕಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಹೀಗಿರುವಾಗ ಈ ಅಂಕಿ ಅಂಶಗಳು ಏನನ್ನು ಹೇಳುತ್ತಿವೆ ಎಂಬುದು ಎಲ್ಲರಿಗೂ ಕಾಡುವ ಪ್ರಶ್ನೆಯಾಗಿದೆ. ಆದರೆ ಈ ಅಂಕಿ ಅಂಶಗಳಲ್ಲಿನ ಬದಲಾವಣೆ ದೇಶದ ಕಟ್ಟಕಡೆಯ ವ್ಯಕ್ತಿಯ ಜೀವನಮಟ್ಟದಲ್ಲಿ ಯಾವುದೇ ಗುರುತರವಾದ ಬದಲಾವಣೆಯನ್ನು ತರಲಾರದು ಎನ್ನುವುದಂತೂ ಖಚಿತ.


ಇದನ್ನೂ ಓದಿ: ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...