Homeಎಕಾನಮಿಆತ್ಮನಿರ್ಭರ ಭಾರತ: ಹೊಸ ಆರ್ಥಿಕ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್

ಆತ್ಮನಿರ್ಭರ ಭಾರತ: ಹೊಸ ಆರ್ಥಿಕ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್

'ಆತ್ಮನಿರ್ಭರ್ ಭಾರತ್ ರೋಜ್‌ ಗಾರ್ ಯೋಜನೆ'ಯನ್ನು ಘೋಷಣೆ ಮಾಡಿ, ಹೊಸ ಉದ್ಯೋಗ ಸೃಷ್ಟಿಗೆ ಈ ಯೋಜನೆ ಸಹಕಾರಿಯಾಗಲಿದೆ ಎಂದರು.

- Advertisement -
- Advertisement -

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಆತ್ಮನಿರ್ಭರತೆಯ ಭಾಗವಾಗಿ (3.0) ಹೊಸ ಆರ್ಥಿಕ ಪ್ಯಾಕೇಜ್ ಘೋಷಿಸಿ, ಭಾರತದ ಆರ್ಥಿಕತೆಯಲ್ಲಿ ಚೇತರಿಕೆ ಕಾಣುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಆತ್ಮನಿರ್ಭರ್ ಭಾರತ್ ರೋಜ್‌ ಗಾರ್ ಯೋಜನೆ’ಯನ್ನು ಘೋಷಣೆ ಮಾಡಿ, “ಹೊಸ ಉದ್ಯೋಗ ಸೃಷ್ಟಿಗೆ ಈ ಯೋಜನೆ ಸಹಕಾರಿಯಾಗಲಿದೆ. ಹೊಸ ಯೋಜನೆಯಲ್ಲಿ ನೌಕರರಿಗೆ ಇಪಿಎಫ್ ಸೌಲಭ್ಯ ಸಿಗಲಿದೆ. ಮಾರ್ಚ್‌ನಿಂದ ಸೆಪ್ಟಂಬರ್ ಒಳಗೆ ಕೆಲಸ ಕಳೆದುಕೊಂಡವರಿಗೂ ಇಪಿಎಫ್ ಸೌಲಭ್ಯ ಸಿಗಲಿದೆ” ಎಂದು ಹೇಳಿದರು.

ಇದನ್ನೂ ಓದಿ: ಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿರುವ ಬಾಂಗ್ಲಾದೇಶ!

ಕೊರೊನಾ ಬಿಕ್ಕಟ್ಟಿನ ನಡುವೆ ಕುಸಿದಿದ್ದ ಆರ್ಥಿಕತೆಯನ್ನು ಮೇಲೆತ್ತಲು ಈಗಾಗಲೇ ಕೈಗೊಂಡಿರುವ ಕ್ರಮಗಳನ್ನು ಉತ್ತೇಜಿಸಲು ಹೊಸ ಕ್ರಮಗಳನ್ನು ಘೋಷಿಸಿ, ದೆಹಲಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, “ಆರ್ಥಿಕತೆಯಲ್ಲಿ ವಿಶಿಷ್ಟ ಚೇತರಿಕೆಯನ್ನು ಬಿಂಬಿಸುವ ಕೆಲವು ಸೂಚಕಗಳು ಇವೆ” ಎಂದು ಹೇಳಿದರು.

ದೇಶದಲ್ಲಿ ಕೊರೊನಾ ಪ್ರಕರಣಗಳ ಬಗ್ಗೆ ಮಾತನಾಡಿದ ಅವರು, “ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 10 ಲಕ್ಷದಿಂದ 4.89 ಲಕ್ಷಕ್ಕೆ ಇಳಿಕೆಯಾಗಿದೆ. ಒಟ್ಟು ಸಾವಿನ ಪ್ರಮಾಣವು ಶೇಕಡ 1.47 ರಷ್ಟಿದೆ” ಎಂದು ಹೇಳಿದರು.

ಇದನ್ನೂ ಓದಿ: ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ಇದರ ನಡುವೆಯೇ, 2020ರ ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು ಸಕಾರಾತ್ಮಕ ಬೆಳವಣಿಗೆಗೆ ಮರಳುವ ಸಾಧ್ಯತೆಯಿದೆ ಎಂದು ಆರ್‌ಬಿಐ ಊಹಿಸಿ ಹೇಳಿಕೆ ನೀಡಿದೆ.

ಜುಲೈ-ಸೆಪ್ಟೆಂಬರ್ ಅವಧಿಯ ಜಿಡಿಪಿಯು ಶೇಕಡಾ 8.6 ರಷ್ಟು ಕುಗ್ಗುವ ಸಾಧ್ಯತೆಯಿದೆ ಎಂದು ಆರ್‌ಬಿಐ ಅಧಿಕಾರಿಯೊಬ್ಬರು ಈ ಹಿಂದೆ ಪಿಟಿಐಗೆ ತಿಳಿಸಿದ್ದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

ಆರ್ಥಿಕತೆಯ ಚೇತರಿಕೆಯ ಸೂಚಕಗಳ ಕುರಿತು ಕೆಲವು ವಿವರಗಳು:

  • ಸಂಯೋಜಿತ ಖರೀದಿ ವ್ಯವಸ್ಥಾಪಕರ ಸೂಚ್ಯಂಕ (ಪಿಎಂಐ) ಅಕ್ಟೋಬರ್‌ನಲ್ಲಿ ಶೇ 58.9 ಕ್ಕೆ ಏರಿದ್ದು, ಹಿಂದಿನ ತಿಂಗಳಲ್ಲಿ ಇದು 54.6 ರಷ್ಟಿತ್ತು. ಇದು ಕಳೆದ ಒಂಬತ್ತು ವರ್ಷಗಳಲ್ಲಿ ಉತ್ಪಾದನೆಯಲ್ಲಿ ಪ್ರಬಲ ಹೆಚ್ಚಳವನ್ನು ದಾಖಲಿಸಿದೆ.
  • ಇಂಧನ ಬಳಕೆಯ ಬೆಳವಣಿಗೆಯು ವರ್ಷದಿಂದ ವರ್ಷಕ್ಕೆ ಶೇ 12 ಕ್ಕೆ ಏರಿಕೆಯಾಗುತ್ತಿದ್ದು, ಅಕ್ಟೋಬರ್‌ನಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು ಶೇಕಡಾ 10 ರಷ್ಟು ಏರಿಕೆಯಾಗಿ 1.05 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ.
  • ದೈನಂದಿನ ರೈಲ್ವೆ ಸರಕು ಸಾಗಣೆ ವರ್ಷದಿಂದ ವರ್ಷಕ್ಕೆ ಸರಾಸರಿ 20 ಶೇಕಡ ಮತ್ತು 12 ಪ್ರತಿಶತದಷ್ಟು ಹೆಚ್ಚಾಗಿದೆ. ಬ್ಯಾಂಕ್ ಸಾಲವನ್ನು 5.1 ಶೇಕಡಾ ಸುಧಾರಿಸಿದೆ.
  • ವಿದೇಶಿ ನೇರ ಹೂಡಿಕೆಯ (ಎಫ್‌ಡಿಐ) ಒಳಹರಿವು ಏಪ್ರಿಲ್-ಆಗಸ್ಟ್‌ನಲ್ಲಿ 35.37 ಬಿಲಿಯನ್ ಡಾಲರ್‌ಗೆ ತಲುಪಿದ್ದು, ವರ್ಷದಿಂದ ವರ್ಷಕ್ಕೆ ಶೇ 13 ರಷ್ಟು ಏರಿಕೆ ಕಂಡಿದೆ.
  • ಒಂದು ದೇಶ ಒಂದು ಪಡಿತರ ಚೀಟಿ ಯೋಜನೆ ಯಶಸ್ವಿಯಾಗಿದೆ. ಸ್ವನಿಧಿ ಯೋಜನೆಯಡಿ 26.26 ಕೋ.ರೂ. ಸಾಲ ನೀಡಲಾಗಿದೆ ಎಂದಿರುವ ನಿರ್ಮಲಾ ದೇಶ ಅಭಿವೃದ್ಧಿಯತ್ತ ಸಾಗಿದೆ.
  • ಬೀದಿಬದಿ ವ್ಯಾಪಾರಿಗಳಿಗೆ ಆತ್ಮ ನಿರ್ಭರ ನಿಧಿ ಯೋಜನೆ ಸಾಲ ನೀಡಲಾಗಿದೆ. 26.62 ಲಕ್ಷ ಅರ್ಜಿಗಳು ಬಂದಿದ್ದವು. ಈವರೆಗೆ ಒಟ್ಟು 1373 ಕೋಟಿ ರೂ.ಸಾಲ ನೀಡಲಾಗಿದೆ. ವಲಸೆ ಕಾರ್ಮಿಕರ ವಿಚಾರದಲ್ಲಿ ಪೋರ್ಟಲ್ ತಯಾರು ಮಾಡುತ್ತಿದ್ದು, ಇದಕ್ಕೆ ರಾಜ್ಯ ಸರಕಾರಗಳ ಸಹಾಯ ಪಡೆಯುತ್ತಿದ್ದೇವೆ.

ಈಗಾಗಲೇ ಘೋಷಿಸಿರುವ ಯೋಜನೆಗಳೇ ಇನ್ನೂ ಜನಸಾಮಾನ್ಯರನ್ನು ತಲುಪಿಲ್ಲ. ಕೊರೊನಾ ಸಂದರ್ಭದಲ್ಲಿ ಪ್ರಧಾನಿ ಘೋಷಿಸಿದ 20 ಲಕ್ಷ ಕೋಟಿ ಪ್ಯಾಕೇಜ್ ಏನಾಗಿದೆ ಎಂಬುದು ಯಾರಿಗೂ ತಿಳಿದಿಲ್ಲ. ಈ ಹಿಂದೆ ಆರ್‌ಬಿಐ ಉಪ ಗವರ್ನರ್ ಮಾತನಾಡಿ, ಭಾರತದ ಆರ್ಥಿಕತೆ ಚೇತರಿಸಿಕೊಳ್ಳಲು ಇನ್ನೂ ಕೆಲವು ವರ್ಷಗಳೇ ಬೇಕಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಹೀಗಿರುವಾಗ ಈ ಅಂಕಿ ಅಂಶಗಳು ಏನನ್ನು ಹೇಳುತ್ತಿವೆ ಎಂಬುದು ಎಲ್ಲರಿಗೂ ಕಾಡುವ ಪ್ರಶ್ನೆಯಾಗಿದೆ. ಆದರೆ ಈ ಅಂಕಿ ಅಂಶಗಳಲ್ಲಿನ ಬದಲಾವಣೆ ದೇಶದ ಕಟ್ಟಕಡೆಯ ವ್ಯಕ್ತಿಯ ಜೀವನಮಟ್ಟದಲ್ಲಿ ಯಾವುದೇ ಗುರುತರವಾದ ಬದಲಾವಣೆಯನ್ನು ತರಲಾರದು ಎನ್ನುವುದಂತೂ ಖಚಿತ.


ಇದನ್ನೂ ಓದಿ: ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...