Homeಎಕಾನಮಿಆತ್ಮನಿರ್ಭರ ಭಾರತ: ಹೊಸ ಆರ್ಥಿಕ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್

ಆತ್ಮನಿರ್ಭರ ಭಾರತ: ಹೊಸ ಆರ್ಥಿಕ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್

'ಆತ್ಮನಿರ್ಭರ್ ಭಾರತ್ ರೋಜ್‌ ಗಾರ್ ಯೋಜನೆ'ಯನ್ನು ಘೋಷಣೆ ಮಾಡಿ, ಹೊಸ ಉದ್ಯೋಗ ಸೃಷ್ಟಿಗೆ ಈ ಯೋಜನೆ ಸಹಕಾರಿಯಾಗಲಿದೆ ಎಂದರು.

- Advertisement -
- Advertisement -

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಆತ್ಮನಿರ್ಭರತೆಯ ಭಾಗವಾಗಿ (3.0) ಹೊಸ ಆರ್ಥಿಕ ಪ್ಯಾಕೇಜ್ ಘೋಷಿಸಿ, ಭಾರತದ ಆರ್ಥಿಕತೆಯಲ್ಲಿ ಚೇತರಿಕೆ ಕಾಣುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಆತ್ಮನಿರ್ಭರ್ ಭಾರತ್ ರೋಜ್‌ ಗಾರ್ ಯೋಜನೆ’ಯನ್ನು ಘೋಷಣೆ ಮಾಡಿ, “ಹೊಸ ಉದ್ಯೋಗ ಸೃಷ್ಟಿಗೆ ಈ ಯೋಜನೆ ಸಹಕಾರಿಯಾಗಲಿದೆ. ಹೊಸ ಯೋಜನೆಯಲ್ಲಿ ನೌಕರರಿಗೆ ಇಪಿಎಫ್ ಸೌಲಭ್ಯ ಸಿಗಲಿದೆ. ಮಾರ್ಚ್‌ನಿಂದ ಸೆಪ್ಟಂಬರ್ ಒಳಗೆ ಕೆಲಸ ಕಳೆದುಕೊಂಡವರಿಗೂ ಇಪಿಎಫ್ ಸೌಲಭ್ಯ ಸಿಗಲಿದೆ” ಎಂದು ಹೇಳಿದರು.

ಇದನ್ನೂ ಓದಿ: ಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿರುವ ಬಾಂಗ್ಲಾದೇಶ!

ಕೊರೊನಾ ಬಿಕ್ಕಟ್ಟಿನ ನಡುವೆ ಕುಸಿದಿದ್ದ ಆರ್ಥಿಕತೆಯನ್ನು ಮೇಲೆತ್ತಲು ಈಗಾಗಲೇ ಕೈಗೊಂಡಿರುವ ಕ್ರಮಗಳನ್ನು ಉತ್ತೇಜಿಸಲು ಹೊಸ ಕ್ರಮಗಳನ್ನು ಘೋಷಿಸಿ, ದೆಹಲಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, “ಆರ್ಥಿಕತೆಯಲ್ಲಿ ವಿಶಿಷ್ಟ ಚೇತರಿಕೆಯನ್ನು ಬಿಂಬಿಸುವ ಕೆಲವು ಸೂಚಕಗಳು ಇವೆ” ಎಂದು ಹೇಳಿದರು.

ದೇಶದಲ್ಲಿ ಕೊರೊನಾ ಪ್ರಕರಣಗಳ ಬಗ್ಗೆ ಮಾತನಾಡಿದ ಅವರು, “ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 10 ಲಕ್ಷದಿಂದ 4.89 ಲಕ್ಷಕ್ಕೆ ಇಳಿಕೆಯಾಗಿದೆ. ಒಟ್ಟು ಸಾವಿನ ಪ್ರಮಾಣವು ಶೇಕಡ 1.47 ರಷ್ಟಿದೆ” ಎಂದು ಹೇಳಿದರು.

ಇದನ್ನೂ ಓದಿ: ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ಇದರ ನಡುವೆಯೇ, 2020ರ ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು ಸಕಾರಾತ್ಮಕ ಬೆಳವಣಿಗೆಗೆ ಮರಳುವ ಸಾಧ್ಯತೆಯಿದೆ ಎಂದು ಆರ್‌ಬಿಐ ಊಹಿಸಿ ಹೇಳಿಕೆ ನೀಡಿದೆ.

ಜುಲೈ-ಸೆಪ್ಟೆಂಬರ್ ಅವಧಿಯ ಜಿಡಿಪಿಯು ಶೇಕಡಾ 8.6 ರಷ್ಟು ಕುಗ್ಗುವ ಸಾಧ್ಯತೆಯಿದೆ ಎಂದು ಆರ್‌ಬಿಐ ಅಧಿಕಾರಿಯೊಬ್ಬರು ಈ ಹಿಂದೆ ಪಿಟಿಐಗೆ ತಿಳಿಸಿದ್ದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

ಆರ್ಥಿಕತೆಯ ಚೇತರಿಕೆಯ ಸೂಚಕಗಳ ಕುರಿತು ಕೆಲವು ವಿವರಗಳು:

  • ಸಂಯೋಜಿತ ಖರೀದಿ ವ್ಯವಸ್ಥಾಪಕರ ಸೂಚ್ಯಂಕ (ಪಿಎಂಐ) ಅಕ್ಟೋಬರ್‌ನಲ್ಲಿ ಶೇ 58.9 ಕ್ಕೆ ಏರಿದ್ದು, ಹಿಂದಿನ ತಿಂಗಳಲ್ಲಿ ಇದು 54.6 ರಷ್ಟಿತ್ತು. ಇದು ಕಳೆದ ಒಂಬತ್ತು ವರ್ಷಗಳಲ್ಲಿ ಉತ್ಪಾದನೆಯಲ್ಲಿ ಪ್ರಬಲ ಹೆಚ್ಚಳವನ್ನು ದಾಖಲಿಸಿದೆ.
  • ಇಂಧನ ಬಳಕೆಯ ಬೆಳವಣಿಗೆಯು ವರ್ಷದಿಂದ ವರ್ಷಕ್ಕೆ ಶೇ 12 ಕ್ಕೆ ಏರಿಕೆಯಾಗುತ್ತಿದ್ದು, ಅಕ್ಟೋಬರ್‌ನಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು ಶೇಕಡಾ 10 ರಷ್ಟು ಏರಿಕೆಯಾಗಿ 1.05 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ.
  • ದೈನಂದಿನ ರೈಲ್ವೆ ಸರಕು ಸಾಗಣೆ ವರ್ಷದಿಂದ ವರ್ಷಕ್ಕೆ ಸರಾಸರಿ 20 ಶೇಕಡ ಮತ್ತು 12 ಪ್ರತಿಶತದಷ್ಟು ಹೆಚ್ಚಾಗಿದೆ. ಬ್ಯಾಂಕ್ ಸಾಲವನ್ನು 5.1 ಶೇಕಡಾ ಸುಧಾರಿಸಿದೆ.
  • ವಿದೇಶಿ ನೇರ ಹೂಡಿಕೆಯ (ಎಫ್‌ಡಿಐ) ಒಳಹರಿವು ಏಪ್ರಿಲ್-ಆಗಸ್ಟ್‌ನಲ್ಲಿ 35.37 ಬಿಲಿಯನ್ ಡಾಲರ್‌ಗೆ ತಲುಪಿದ್ದು, ವರ್ಷದಿಂದ ವರ್ಷಕ್ಕೆ ಶೇ 13 ರಷ್ಟು ಏರಿಕೆ ಕಂಡಿದೆ.
  • ಒಂದು ದೇಶ ಒಂದು ಪಡಿತರ ಚೀಟಿ ಯೋಜನೆ ಯಶಸ್ವಿಯಾಗಿದೆ. ಸ್ವನಿಧಿ ಯೋಜನೆಯಡಿ 26.26 ಕೋ.ರೂ. ಸಾಲ ನೀಡಲಾಗಿದೆ ಎಂದಿರುವ ನಿರ್ಮಲಾ ದೇಶ ಅಭಿವೃದ್ಧಿಯತ್ತ ಸಾಗಿದೆ.
  • ಬೀದಿಬದಿ ವ್ಯಾಪಾರಿಗಳಿಗೆ ಆತ್ಮ ನಿರ್ಭರ ನಿಧಿ ಯೋಜನೆ ಸಾಲ ನೀಡಲಾಗಿದೆ. 26.62 ಲಕ್ಷ ಅರ್ಜಿಗಳು ಬಂದಿದ್ದವು. ಈವರೆಗೆ ಒಟ್ಟು 1373 ಕೋಟಿ ರೂ.ಸಾಲ ನೀಡಲಾಗಿದೆ. ವಲಸೆ ಕಾರ್ಮಿಕರ ವಿಚಾರದಲ್ಲಿ ಪೋರ್ಟಲ್ ತಯಾರು ಮಾಡುತ್ತಿದ್ದು, ಇದಕ್ಕೆ ರಾಜ್ಯ ಸರಕಾರಗಳ ಸಹಾಯ ಪಡೆಯುತ್ತಿದ್ದೇವೆ.

ಈಗಾಗಲೇ ಘೋಷಿಸಿರುವ ಯೋಜನೆಗಳೇ ಇನ್ನೂ ಜನಸಾಮಾನ್ಯರನ್ನು ತಲುಪಿಲ್ಲ. ಕೊರೊನಾ ಸಂದರ್ಭದಲ್ಲಿ ಪ್ರಧಾನಿ ಘೋಷಿಸಿದ 20 ಲಕ್ಷ ಕೋಟಿ ಪ್ಯಾಕೇಜ್ ಏನಾಗಿದೆ ಎಂಬುದು ಯಾರಿಗೂ ತಿಳಿದಿಲ್ಲ. ಈ ಹಿಂದೆ ಆರ್‌ಬಿಐ ಉಪ ಗವರ್ನರ್ ಮಾತನಾಡಿ, ಭಾರತದ ಆರ್ಥಿಕತೆ ಚೇತರಿಸಿಕೊಳ್ಳಲು ಇನ್ನೂ ಕೆಲವು ವರ್ಷಗಳೇ ಬೇಕಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಹೀಗಿರುವಾಗ ಈ ಅಂಕಿ ಅಂಶಗಳು ಏನನ್ನು ಹೇಳುತ್ತಿವೆ ಎಂಬುದು ಎಲ್ಲರಿಗೂ ಕಾಡುವ ಪ್ರಶ್ನೆಯಾಗಿದೆ. ಆದರೆ ಈ ಅಂಕಿ ಅಂಶಗಳಲ್ಲಿನ ಬದಲಾವಣೆ ದೇಶದ ಕಟ್ಟಕಡೆಯ ವ್ಯಕ್ತಿಯ ಜೀವನಮಟ್ಟದಲ್ಲಿ ಯಾವುದೇ ಗುರುತರವಾದ ಬದಲಾವಣೆಯನ್ನು ತರಲಾರದು ಎನ್ನುವುದಂತೂ ಖಚಿತ.


ಇದನ್ನೂ ಓದಿ: ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...