Homeಚಳವಳಿಕನಸುಗಾರ್ತಿಯೊಬ್ಬಳ ಕಣ್ಣೀರು : ಆತಿಶಿ ಮರ್ಲೀನಾ ಎಂಬ ಶೈಕ್ಷಣಿಕ ಚೈತನ್ಯದ ಕುರಿತು

ಕನಸುಗಾರ್ತಿಯೊಬ್ಬಳ ಕಣ್ಣೀರು : ಆತಿಶಿ ಮರ್ಲೀನಾ ಎಂಬ ಶೈಕ್ಷಣಿಕ ಚೈತನ್ಯದ ಕುರಿತು

ದೆಹಲಿ ಸರ್ಕಾರಿ ಶಾಲೆಗಳ ಅಭಿವೃದ್ದಿಯ ಹಿಂದಿನ ಪ್ರೇರಕ ಶಕ್ತಿ ಇವರು.

- Advertisement -
- Advertisement -

| ಪುರುಷೋತ್ತಮ ಬಿಳಿಮಲೆ |

 

ನಾಡಿದ್ದು ಜೂನ್ 8ನೇ ತಾರೀಕಿಗೆ 39 ವರ್ಷ ತುಂಬಲಿರುವ ಆತಿಶಿ ಮರ್ಲಿನಾ ಅವರನ್ನು ಅವರ ಶೈಕ್ಷಣಿಕ ಕಾರ್ಯಕ್ರಮಗಳಿಗಾಗಿ ನಾನು ಹತ್ತಿರದಿಂದ ಬಲ್ಲೆ. ಜೆ ಎನ್ ಯುವಿನ ಚರ್ಚೆಗಳಲ್ಲಿ ಆಗಾಗ ಕಾಣಿಸಿಕೊಳ್ಳುವ ಆಕೆಗೆ ಭಾರತೀಯ ಇತಿಹಾಸ ಮತ್ತು ವರ್ತಮಾನದ ಬಗ್ಗೆ ಆಳವಾದ ತಿಳುವಳಿಕೆಯಿದೆ. ಅವಳ ತಂದೆಯ ಹೆಸರು ಪ್ರೊ. ವಿಜಯ್ ಸಿಂಗ್ , ತಾಯಿ ತೃಪ್ತಿ ವಹಿ. ಇಬ್ಬರೂ ದೆಹಲಿ ವಿವಿಯಲ್ಲಿ ಪ್ರಾಧ್ಯಾಪಕರಾಗಿದ್ದರು. ಎಡಪಂಥೀಯ ಒಲವಿರುವ ಈ ದಂಪತಿಗಳು ಮಾರ್ಕ್ಸ್ ಮತ್ತು ಲೆನಿನ್ ಅವರ ನೆನಪಿಗಾಗಿ ಅತಿಶಿ ಹೆಸರಿಗೆ ಮರ್ಲೀನಾ ಸೇರಿಸಿದರು.

ದೆಹಲಿಯ ಸ್ಪ್ರಿಂಗ್ ಡೇಲ್ ಶಾಲೆಯಲ್ಲಿ ಹೈಸ್ಕೂಲು ಕಲಿತ ಅತಿಶಿಯು ತನ್ನ ಸ್ವಂತ ಪ್ರತಿಭೆಯಿಂದ ದೆಹಲಿಯ ಪ್ರಖ್ಯಾತವಾದ ಸೈಂಟ್ ಸ್ಟೀಫನ್ ನಲ್ಲಿ ಪ್ರವೇಶ ಪಡೆದು, 2001ರಲ್ಲಿ ದೆಹಲಿ ವಿವಿಗೇ ಪ್ರಥಮಳಾಗಿ ಇತಿಹಾಸದಲ್ಲಿ ಪದವಿ ಪಡೆದಳು. ತಕ್ಷಣ ಅವಳಿಗೆ ಬ್ರಿಟನ್ನಿನ ಚೀವಿನಿಂಗ್ ( Chevening Scholarship) ಶಿಷ್ಯವೇತನ ದೊರೆತದ್ದರಿಂದ ಮುಂದಿನ ಶಿಕ್ಷಣಕ್ಕಾಗಿ ಆಕೆ ಆಕ್ಸಫರ್ಡ್ ವಿವಿಗೆ ತೆರಳಿ, 2003ರಲ್ಲಿ ಇತಿಹಾಸದಲ್ಲಿ ಎಂ ಎ ಪದವಿ ಪಡೆದಳು.

ದೆಹಲಿಯ ಸರ್ಕಾರಿ ಶಾಲೆ

ಮುಂದೆ ರೋಡ್ ಸ್ಕಾಲರ್ ಶಿಪ್ ಪಡೆಯುವಲ್ಲಿ ಯಶಸ್ವಿಯಾದ ಆಕೆ 2005ರವರೆಗೆ ಲಂಡನ್ನಿನ ಅತ್ಯಂತ ಶ್ರೀಮಂತವಾದ ಮೆಗ್ಡಲಿನ್ ಕಾಲೇಜಿನಲ್ಲಿ ( Magdalen College) ತನ್ನ ಸಂಶೋಧನೆ ಮತ್ತು ಅಧ್ಯಾಪನವನ್ನು ಮುಂದುವರಿಸಿ, 2006ರಲ್ಲಿ ಭಾರತಕ್ಕೆ ಹಿಂದಿರುಗಿ, ಸ್ವಲ್ಪ ಕಾಲ ಆಂಧ್ರದ ಋಷಿವ್ಯಾಲಿ ಶಾಲೆಯಲ್ಲಿ ಇತಿಹಾಸ ಮತ್ತು ಇಂಗ್ಲಿಷ್ ಅಧ್ಯಾಪಕಿಯಾಗಿ ಕೆಲಸ ಮಾಡಿದಳು.

2007ರಲ್ಲಿ ಆಕೆ ಮಧ್ಯಪ್ರದೇಶದ ಹಳ್ಳಿಯೊಂದಕ್ಕೆ ತೆರಳಿ ಸಾವಯವ ಕೃಷಿ ಮತ್ತು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯಲ್ಲಿ ತನ್ನನ್ನು ತೊಡಗಿಸಿಕೊಂಡಳು. ಅಲ್ಲಿಯ ಸಂಭಾವನಾ ಸಂಸ್ಥೆಯನ್ನು ( Sambhavana Institute of Public policy) ಆಕೆ ಬೆಳೆಸಿದ ರೀತಿ ಅನನ್ಯವಾದುದು. 2015ರಲ್ಲಿ ನಡೆದ ಖಾಂಡ್ವಾ ಸತ್ಯಾಗ್ರಹದ ಪ್ರೇರಕ ಶಕ್ತಿ ಈಕೆಯೇ.

ಮಧ್ಯಪ್ರದೇಶದಿಂದ ಆಕೆಯನ್ನು ಬಿಡಿಸಿದ ಪ್ರೊ. ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ ಅವರು 2011ರಲ್ಲಿ ಅವಳನ್ನು ದೆಹಲಿಗೆ ಕರೆತಂದರು. ಆತಿಶಿ ಭ್ರಷ್ಟಾಚಾರ ವಿರೋಧಿ ಆಂದೋಲನದಲ್ಲಿ ತನ್ನನ್ನು ತೀವ್ರವಾಗಿ ತೊಡಗಿಸಿಕೊಂಡು 2013ರಲ್ಲಿ ಆಪ್ ( AAP)ನ ಸೈದ್ಧಾಂತಿಕೆಯನ್ನು ರೂಪಿಸುವ ಸಮಿತಿಗಳಲ್ಲಿ ಆಳವಾಗಿ ಕೆಲಸ ಮಾಡಿದಳು. ಆಪ್ ನ ಪರವಾಗಿ ಆಕೆ ಟೆಲಿವಿಷನ್ ಚ್ಯಾನೆಲ್ ಗಳಲ್ಲಿ ಮಾತಾಡುತ್ತಿದ್ದ ರೀತಿಯಿಂದ ಆಕೆ ವಿಶ್ವದಾದ್ಯಂತ ಜನರ ಗಮನ ಸೆಳೆದಳು. ಒಳ್ಳೆಯ ಭಾಷೆ, ಆಳವಾದ ತಿಳುವಳಿಕೆ, ನಿರುದ್ವಿಗ್ನವಾಗದ ವಿಷಯ ಮಂಡನೆ, ಇದಿರಾಳಿಯ ಮಾತಿಗೂ ಸಂಯಮದಿಂದ ಕಿವಿಗೊಡುತ್ತಿದ್ದ ರೀತಿಯಿಂದ ಆಕೆ ದೆಹಲಿಯಲ್ಲಿ ಅಪಾರ ಜನಪ್ರಿಯತೆಯನ್ನು ಪಡೆದಳು.

ದೆಹಲಿಯಲ್ಲಿ ಆಪ್ ಸರಕಾರ ರಚನೆಯಾದ ಮೇಲೆ ಮುಖ್ಯಮಂತ್ರಿ ಕೇಜ್ರಿವಾಲ್, ಆತಿಶಿ ಅವರನ್ನು ಶಿಕ್ಷಣ ಮಂತ್ರಿ ಮನೀಶ್ ಸಿಸೋಡಿಯಾ ಅವರ ಶೈಕ್ಷಣಿಕ ಸಲಹೆಗಾರರೆಂದು ನೇಮಕ ಮಾಡಿದರು. ಜುಲಾಯಿ 2015ರಿಂದ ಎಪ್ರಿಲ್ 17, 2018ರವರೆಗೆ ಈ ಹುದ್ದೆಯಲ್ಲಿ ಅಭೂತಪೂರ್ವವಾಗಿ ಕೆಲಸ ಮಾಡಿ, ದೆಹಲಿಯ ಸರಕಾರೀ ಶಾಲೆಗಳ ಸ್ವರೂಪವನ್ನೇ ಅತಿಶಿ ಬದಲು ಮಾಡಿದಳು. ಆದರೆ ಆತಿಶಿಯ ನೇಮಕಾತಿಯೇ ಕಾನೂನು ಬಾಹಿರ ಎಂದು ಹೇಳಿದ ಕೇಂದ್ರ ಸರಕಾರವು ಆಕೆಯ ನೇಮಕಾತಿಯನ್ನೇ ರದ್ದುಗೊಳಿಸಿತು. ಸುಮಾರು ಎರಡು ವರ್ಷಗಳ ತನ್ನ ಸೇವಾವಧಿಯಲ್ಲಿ ಆಕೆ ತಿಂಗಳಿಗೆ ಕೇವಲ ಒಂದು ರೂಪಾಯಿ ಸಂಭಾವನೆ ಮಾತ್ರ ಪಡೆಯುತ್ತಿದ್ದಳು.

ಆಡಳಿತವನ್ನು ಜನರ ಹತ್ತಿರ ಕೊಂಡೊಯ್ಯುವ ಆಕೆಯ ಮೊಹಲ್ಲಾ ಸಭಾ ( ಅದರ ಕೆಲವು ಪ್ರಾಯೋಗಿಕ ಸಭೆಗಳಲ್ಲಿ ನಾನು ಭಾಗಿಯಾಗಿದ್ದೆ) ಯೋಜನೆಯನ್ನು ದೆಹಲಿಯ ರಾಜ್ಯಪಾಲರು ಕೊನೆಗೂ ಅಂಗೀಕರಿಸಲೇ ಇಲ್ಲ.

ಇಂಥ ಕನಸುಕಂಗಳ , ಹೋರಾಟಗಾರ್ತಿ ಅತಿಶಿ ಇವತ್ತು ಸಾರ್ವಜನಿಕರೆದುರು ಕಣ್ಣೀರು ಸುರಿಸುವಂಥ ವಾತಾವರಣ ನಿರ್ಮಾಣವಾಗಿದೆ. ಉತ್ತರ ದೆಹಲಿಯಲ್ಲಿ ಆಕೆ ಲೋಕ ಸಭೆಗೆ ಸ್ಪರ್ಧಿಸುವ ಪ್ರದೇಶಗಳಲ್ಲಿ ಆಕೆಯ ಚಾರಿತ್ರ್ಯ ಹರಣ ಮಾಡುವಂಥ ಅಶ್ಲೀಲ ಕರಪತ್ರಗಳನ್ನು ಹಂಚಲಾಗಿದೆ. ಅವಳ ಹೆಸರಿನ ಮುಂದಿರುವ ಮಾರ್ಲೀನಾ ಪದವನ್ನು ಗಮನಿಸಿ, ಆಕೆ ಬೇರಾವುದೋ ಧರ್ಮದವಳೆಂದು ಭಾವಿಸಿ, ಜನರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡಲಾಗಿದೆ. ಇಂಥ ಕೆಲಸಗಳನ್ನು ಯಾರು ಮಾಡುತ್ತಾರೆ ಎಂದು ನಾನೇನೂ ಹೇಳಬೇಕಾಗಿಲ್ಲವಲ್ಲ! ಅವಳ ಇದಿರಾಳಿ ಕ್ರಿಕೆಟಿಗ ಗೌತಮ್ ಗಂಭೀರ್ ಇಂಥ ಲುಚ್ಛ ಕೆಲಸ ಮಾಡಿರಲಾರ, ಆದರೆ ಕರಪತ್ರವನ್ನು ಖಂಡಿಸುವ ಘನತೆಯನ್ನೂ ಆತ ತೋರಿಲ್ಲ.

ದೆಹಲಿಯಲ್ಲಿ ನನ್ನ ಕಣ್ಣೆದುರೇ ಬೆಳೆದವರು ಇಬ್ಬರು- ಒಬ್ಬ ಕನ್ನಯ್ಯ ಕುಮಾರ್ ಮತ್ತು ಇನ್ನೊಬ್ಬರು ಆತಿಶಿ. ಅವರು ಎಷ್ಟು ಒಳ್ಳೆಯವರು, ಸಾಮಾಜಿಕ ಕಳಕಳಿಯುಳ್ಳವರು ಮತ್ತು ಪ್ರತಿಭಾವಂತರೆಂಬುದೆಂಬುದನ್ನು ನಾನು ಹತ್ತಿರದಿಂದ ಬಲ್ಲೆ. ಈ ಪ್ರತಿಭೆಗಳನ್ನು ಎಳವೆಯಲ್ಲಿಯೇ ಮಟ್ಟ ಹಾಕಲು ಎಷ್ಟೊಂದು ಶಕ್ತಿಗಳು, ಎಷ್ಟೊಂದು ಬಗೆಯಲ್ಲಿ ಕೆಲಸ ಮಾಡುತ್ತಿವೆ ಎಂಬುದನ್ನು ನೋಡಿದಾಗ ನಿಜಕ್ಕೂ ದಿಗ್ಭ್ರಮೆಯಾಗುತ್ತದೆ.
ನಮ್ಮ ದೇಶಕ್ಕೆ ನಿಜಕ್ಕೂ ಏನು ಬೇಕಾಗಿದೆ ಎಂದೇ ತಿಳಿಯುತ್ತಿಲ್ಲ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...