Homeಚಳವಳಿಕನಸುಗಾರ್ತಿಯೊಬ್ಬಳ ಕಣ್ಣೀರು : ಆತಿಶಿ ಮರ್ಲೀನಾ ಎಂಬ ಶೈಕ್ಷಣಿಕ ಚೈತನ್ಯದ ಕುರಿತು

ಕನಸುಗಾರ್ತಿಯೊಬ್ಬಳ ಕಣ್ಣೀರು : ಆತಿಶಿ ಮರ್ಲೀನಾ ಎಂಬ ಶೈಕ್ಷಣಿಕ ಚೈತನ್ಯದ ಕುರಿತು

ದೆಹಲಿ ಸರ್ಕಾರಿ ಶಾಲೆಗಳ ಅಭಿವೃದ್ದಿಯ ಹಿಂದಿನ ಪ್ರೇರಕ ಶಕ್ತಿ ಇವರು.

- Advertisement -
- Advertisement -

| ಪುರುಷೋತ್ತಮ ಬಿಳಿಮಲೆ |

 

ನಾಡಿದ್ದು ಜೂನ್ 8ನೇ ತಾರೀಕಿಗೆ 39 ವರ್ಷ ತುಂಬಲಿರುವ ಆತಿಶಿ ಮರ್ಲಿನಾ ಅವರನ್ನು ಅವರ ಶೈಕ್ಷಣಿಕ ಕಾರ್ಯಕ್ರಮಗಳಿಗಾಗಿ ನಾನು ಹತ್ತಿರದಿಂದ ಬಲ್ಲೆ. ಜೆ ಎನ್ ಯುವಿನ ಚರ್ಚೆಗಳಲ್ಲಿ ಆಗಾಗ ಕಾಣಿಸಿಕೊಳ್ಳುವ ಆಕೆಗೆ ಭಾರತೀಯ ಇತಿಹಾಸ ಮತ್ತು ವರ್ತಮಾನದ ಬಗ್ಗೆ ಆಳವಾದ ತಿಳುವಳಿಕೆಯಿದೆ. ಅವಳ ತಂದೆಯ ಹೆಸರು ಪ್ರೊ. ವಿಜಯ್ ಸಿಂಗ್ , ತಾಯಿ ತೃಪ್ತಿ ವಹಿ. ಇಬ್ಬರೂ ದೆಹಲಿ ವಿವಿಯಲ್ಲಿ ಪ್ರಾಧ್ಯಾಪಕರಾಗಿದ್ದರು. ಎಡಪಂಥೀಯ ಒಲವಿರುವ ಈ ದಂಪತಿಗಳು ಮಾರ್ಕ್ಸ್ ಮತ್ತು ಲೆನಿನ್ ಅವರ ನೆನಪಿಗಾಗಿ ಅತಿಶಿ ಹೆಸರಿಗೆ ಮರ್ಲೀನಾ ಸೇರಿಸಿದರು.

ದೆಹಲಿಯ ಸ್ಪ್ರಿಂಗ್ ಡೇಲ್ ಶಾಲೆಯಲ್ಲಿ ಹೈಸ್ಕೂಲು ಕಲಿತ ಅತಿಶಿಯು ತನ್ನ ಸ್ವಂತ ಪ್ರತಿಭೆಯಿಂದ ದೆಹಲಿಯ ಪ್ರಖ್ಯಾತವಾದ ಸೈಂಟ್ ಸ್ಟೀಫನ್ ನಲ್ಲಿ ಪ್ರವೇಶ ಪಡೆದು, 2001ರಲ್ಲಿ ದೆಹಲಿ ವಿವಿಗೇ ಪ್ರಥಮಳಾಗಿ ಇತಿಹಾಸದಲ್ಲಿ ಪದವಿ ಪಡೆದಳು. ತಕ್ಷಣ ಅವಳಿಗೆ ಬ್ರಿಟನ್ನಿನ ಚೀವಿನಿಂಗ್ ( Chevening Scholarship) ಶಿಷ್ಯವೇತನ ದೊರೆತದ್ದರಿಂದ ಮುಂದಿನ ಶಿಕ್ಷಣಕ್ಕಾಗಿ ಆಕೆ ಆಕ್ಸಫರ್ಡ್ ವಿವಿಗೆ ತೆರಳಿ, 2003ರಲ್ಲಿ ಇತಿಹಾಸದಲ್ಲಿ ಎಂ ಎ ಪದವಿ ಪಡೆದಳು.

ದೆಹಲಿಯ ಸರ್ಕಾರಿ ಶಾಲೆ

ಮುಂದೆ ರೋಡ್ ಸ್ಕಾಲರ್ ಶಿಪ್ ಪಡೆಯುವಲ್ಲಿ ಯಶಸ್ವಿಯಾದ ಆಕೆ 2005ರವರೆಗೆ ಲಂಡನ್ನಿನ ಅತ್ಯಂತ ಶ್ರೀಮಂತವಾದ ಮೆಗ್ಡಲಿನ್ ಕಾಲೇಜಿನಲ್ಲಿ ( Magdalen College) ತನ್ನ ಸಂಶೋಧನೆ ಮತ್ತು ಅಧ್ಯಾಪನವನ್ನು ಮುಂದುವರಿಸಿ, 2006ರಲ್ಲಿ ಭಾರತಕ್ಕೆ ಹಿಂದಿರುಗಿ, ಸ್ವಲ್ಪ ಕಾಲ ಆಂಧ್ರದ ಋಷಿವ್ಯಾಲಿ ಶಾಲೆಯಲ್ಲಿ ಇತಿಹಾಸ ಮತ್ತು ಇಂಗ್ಲಿಷ್ ಅಧ್ಯಾಪಕಿಯಾಗಿ ಕೆಲಸ ಮಾಡಿದಳು.

2007ರಲ್ಲಿ ಆಕೆ ಮಧ್ಯಪ್ರದೇಶದ ಹಳ್ಳಿಯೊಂದಕ್ಕೆ ತೆರಳಿ ಸಾವಯವ ಕೃಷಿ ಮತ್ತು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯಲ್ಲಿ ತನ್ನನ್ನು ತೊಡಗಿಸಿಕೊಂಡಳು. ಅಲ್ಲಿಯ ಸಂಭಾವನಾ ಸಂಸ್ಥೆಯನ್ನು ( Sambhavana Institute of Public policy) ಆಕೆ ಬೆಳೆಸಿದ ರೀತಿ ಅನನ್ಯವಾದುದು. 2015ರಲ್ಲಿ ನಡೆದ ಖಾಂಡ್ವಾ ಸತ್ಯಾಗ್ರಹದ ಪ್ರೇರಕ ಶಕ್ತಿ ಈಕೆಯೇ.

ಮಧ್ಯಪ್ರದೇಶದಿಂದ ಆಕೆಯನ್ನು ಬಿಡಿಸಿದ ಪ್ರೊ. ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ ಅವರು 2011ರಲ್ಲಿ ಅವಳನ್ನು ದೆಹಲಿಗೆ ಕರೆತಂದರು. ಆತಿಶಿ ಭ್ರಷ್ಟಾಚಾರ ವಿರೋಧಿ ಆಂದೋಲನದಲ್ಲಿ ತನ್ನನ್ನು ತೀವ್ರವಾಗಿ ತೊಡಗಿಸಿಕೊಂಡು 2013ರಲ್ಲಿ ಆಪ್ ( AAP)ನ ಸೈದ್ಧಾಂತಿಕೆಯನ್ನು ರೂಪಿಸುವ ಸಮಿತಿಗಳಲ್ಲಿ ಆಳವಾಗಿ ಕೆಲಸ ಮಾಡಿದಳು. ಆಪ್ ನ ಪರವಾಗಿ ಆಕೆ ಟೆಲಿವಿಷನ್ ಚ್ಯಾನೆಲ್ ಗಳಲ್ಲಿ ಮಾತಾಡುತ್ತಿದ್ದ ರೀತಿಯಿಂದ ಆಕೆ ವಿಶ್ವದಾದ್ಯಂತ ಜನರ ಗಮನ ಸೆಳೆದಳು. ಒಳ್ಳೆಯ ಭಾಷೆ, ಆಳವಾದ ತಿಳುವಳಿಕೆ, ನಿರುದ್ವಿಗ್ನವಾಗದ ವಿಷಯ ಮಂಡನೆ, ಇದಿರಾಳಿಯ ಮಾತಿಗೂ ಸಂಯಮದಿಂದ ಕಿವಿಗೊಡುತ್ತಿದ್ದ ರೀತಿಯಿಂದ ಆಕೆ ದೆಹಲಿಯಲ್ಲಿ ಅಪಾರ ಜನಪ್ರಿಯತೆಯನ್ನು ಪಡೆದಳು.

ದೆಹಲಿಯಲ್ಲಿ ಆಪ್ ಸರಕಾರ ರಚನೆಯಾದ ಮೇಲೆ ಮುಖ್ಯಮಂತ್ರಿ ಕೇಜ್ರಿವಾಲ್, ಆತಿಶಿ ಅವರನ್ನು ಶಿಕ್ಷಣ ಮಂತ್ರಿ ಮನೀಶ್ ಸಿಸೋಡಿಯಾ ಅವರ ಶೈಕ್ಷಣಿಕ ಸಲಹೆಗಾರರೆಂದು ನೇಮಕ ಮಾಡಿದರು. ಜುಲಾಯಿ 2015ರಿಂದ ಎಪ್ರಿಲ್ 17, 2018ರವರೆಗೆ ಈ ಹುದ್ದೆಯಲ್ಲಿ ಅಭೂತಪೂರ್ವವಾಗಿ ಕೆಲಸ ಮಾಡಿ, ದೆಹಲಿಯ ಸರಕಾರೀ ಶಾಲೆಗಳ ಸ್ವರೂಪವನ್ನೇ ಅತಿಶಿ ಬದಲು ಮಾಡಿದಳು. ಆದರೆ ಆತಿಶಿಯ ನೇಮಕಾತಿಯೇ ಕಾನೂನು ಬಾಹಿರ ಎಂದು ಹೇಳಿದ ಕೇಂದ್ರ ಸರಕಾರವು ಆಕೆಯ ನೇಮಕಾತಿಯನ್ನೇ ರದ್ದುಗೊಳಿಸಿತು. ಸುಮಾರು ಎರಡು ವರ್ಷಗಳ ತನ್ನ ಸೇವಾವಧಿಯಲ್ಲಿ ಆಕೆ ತಿಂಗಳಿಗೆ ಕೇವಲ ಒಂದು ರೂಪಾಯಿ ಸಂಭಾವನೆ ಮಾತ್ರ ಪಡೆಯುತ್ತಿದ್ದಳು.

ಆಡಳಿತವನ್ನು ಜನರ ಹತ್ತಿರ ಕೊಂಡೊಯ್ಯುವ ಆಕೆಯ ಮೊಹಲ್ಲಾ ಸಭಾ ( ಅದರ ಕೆಲವು ಪ್ರಾಯೋಗಿಕ ಸಭೆಗಳಲ್ಲಿ ನಾನು ಭಾಗಿಯಾಗಿದ್ದೆ) ಯೋಜನೆಯನ್ನು ದೆಹಲಿಯ ರಾಜ್ಯಪಾಲರು ಕೊನೆಗೂ ಅಂಗೀಕರಿಸಲೇ ಇಲ್ಲ.

ಇಂಥ ಕನಸುಕಂಗಳ , ಹೋರಾಟಗಾರ್ತಿ ಅತಿಶಿ ಇವತ್ತು ಸಾರ್ವಜನಿಕರೆದುರು ಕಣ್ಣೀರು ಸುರಿಸುವಂಥ ವಾತಾವರಣ ನಿರ್ಮಾಣವಾಗಿದೆ. ಉತ್ತರ ದೆಹಲಿಯಲ್ಲಿ ಆಕೆ ಲೋಕ ಸಭೆಗೆ ಸ್ಪರ್ಧಿಸುವ ಪ್ರದೇಶಗಳಲ್ಲಿ ಆಕೆಯ ಚಾರಿತ್ರ್ಯ ಹರಣ ಮಾಡುವಂಥ ಅಶ್ಲೀಲ ಕರಪತ್ರಗಳನ್ನು ಹಂಚಲಾಗಿದೆ. ಅವಳ ಹೆಸರಿನ ಮುಂದಿರುವ ಮಾರ್ಲೀನಾ ಪದವನ್ನು ಗಮನಿಸಿ, ಆಕೆ ಬೇರಾವುದೋ ಧರ್ಮದವಳೆಂದು ಭಾವಿಸಿ, ಜನರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡಲಾಗಿದೆ. ಇಂಥ ಕೆಲಸಗಳನ್ನು ಯಾರು ಮಾಡುತ್ತಾರೆ ಎಂದು ನಾನೇನೂ ಹೇಳಬೇಕಾಗಿಲ್ಲವಲ್ಲ! ಅವಳ ಇದಿರಾಳಿ ಕ್ರಿಕೆಟಿಗ ಗೌತಮ್ ಗಂಭೀರ್ ಇಂಥ ಲುಚ್ಛ ಕೆಲಸ ಮಾಡಿರಲಾರ, ಆದರೆ ಕರಪತ್ರವನ್ನು ಖಂಡಿಸುವ ಘನತೆಯನ್ನೂ ಆತ ತೋರಿಲ್ಲ.

ದೆಹಲಿಯಲ್ಲಿ ನನ್ನ ಕಣ್ಣೆದುರೇ ಬೆಳೆದವರು ಇಬ್ಬರು- ಒಬ್ಬ ಕನ್ನಯ್ಯ ಕುಮಾರ್ ಮತ್ತು ಇನ್ನೊಬ್ಬರು ಆತಿಶಿ. ಅವರು ಎಷ್ಟು ಒಳ್ಳೆಯವರು, ಸಾಮಾಜಿಕ ಕಳಕಳಿಯುಳ್ಳವರು ಮತ್ತು ಪ್ರತಿಭಾವಂತರೆಂಬುದೆಂಬುದನ್ನು ನಾನು ಹತ್ತಿರದಿಂದ ಬಲ್ಲೆ. ಈ ಪ್ರತಿಭೆಗಳನ್ನು ಎಳವೆಯಲ್ಲಿಯೇ ಮಟ್ಟ ಹಾಕಲು ಎಷ್ಟೊಂದು ಶಕ್ತಿಗಳು, ಎಷ್ಟೊಂದು ಬಗೆಯಲ್ಲಿ ಕೆಲಸ ಮಾಡುತ್ತಿವೆ ಎಂಬುದನ್ನು ನೋಡಿದಾಗ ನಿಜಕ್ಕೂ ದಿಗ್ಭ್ರಮೆಯಾಗುತ್ತದೆ.
ನಮ್ಮ ದೇಶಕ್ಕೆ ನಿಜಕ್ಕೂ ಏನು ಬೇಕಾಗಿದೆ ಎಂದೇ ತಿಳಿಯುತ್ತಿಲ್ಲ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...