Homeಚಳವಳಿಕನಸುಗಾರ್ತಿಯೊಬ್ಬಳ ಕಣ್ಣೀರು : ಆತಿಶಿ ಮರ್ಲೀನಾ ಎಂಬ ಶೈಕ್ಷಣಿಕ ಚೈತನ್ಯದ ಕುರಿತು

ಕನಸುಗಾರ್ತಿಯೊಬ್ಬಳ ಕಣ್ಣೀರು : ಆತಿಶಿ ಮರ್ಲೀನಾ ಎಂಬ ಶೈಕ್ಷಣಿಕ ಚೈತನ್ಯದ ಕುರಿತು

ದೆಹಲಿ ಸರ್ಕಾರಿ ಶಾಲೆಗಳ ಅಭಿವೃದ್ದಿಯ ಹಿಂದಿನ ಪ್ರೇರಕ ಶಕ್ತಿ ಇವರು.

- Advertisement -
- Advertisement -

| ಪುರುಷೋತ್ತಮ ಬಿಳಿಮಲೆ |

 

ನಾಡಿದ್ದು ಜೂನ್ 8ನೇ ತಾರೀಕಿಗೆ 39 ವರ್ಷ ತುಂಬಲಿರುವ ಆತಿಶಿ ಮರ್ಲಿನಾ ಅವರನ್ನು ಅವರ ಶೈಕ್ಷಣಿಕ ಕಾರ್ಯಕ್ರಮಗಳಿಗಾಗಿ ನಾನು ಹತ್ತಿರದಿಂದ ಬಲ್ಲೆ. ಜೆ ಎನ್ ಯುವಿನ ಚರ್ಚೆಗಳಲ್ಲಿ ಆಗಾಗ ಕಾಣಿಸಿಕೊಳ್ಳುವ ಆಕೆಗೆ ಭಾರತೀಯ ಇತಿಹಾಸ ಮತ್ತು ವರ್ತಮಾನದ ಬಗ್ಗೆ ಆಳವಾದ ತಿಳುವಳಿಕೆಯಿದೆ. ಅವಳ ತಂದೆಯ ಹೆಸರು ಪ್ರೊ. ವಿಜಯ್ ಸಿಂಗ್ , ತಾಯಿ ತೃಪ್ತಿ ವಹಿ. ಇಬ್ಬರೂ ದೆಹಲಿ ವಿವಿಯಲ್ಲಿ ಪ್ರಾಧ್ಯಾಪಕರಾಗಿದ್ದರು. ಎಡಪಂಥೀಯ ಒಲವಿರುವ ಈ ದಂಪತಿಗಳು ಮಾರ್ಕ್ಸ್ ಮತ್ತು ಲೆನಿನ್ ಅವರ ನೆನಪಿಗಾಗಿ ಅತಿಶಿ ಹೆಸರಿಗೆ ಮರ್ಲೀನಾ ಸೇರಿಸಿದರು.

ದೆಹಲಿಯ ಸ್ಪ್ರಿಂಗ್ ಡೇಲ್ ಶಾಲೆಯಲ್ಲಿ ಹೈಸ್ಕೂಲು ಕಲಿತ ಅತಿಶಿಯು ತನ್ನ ಸ್ವಂತ ಪ್ರತಿಭೆಯಿಂದ ದೆಹಲಿಯ ಪ್ರಖ್ಯಾತವಾದ ಸೈಂಟ್ ಸ್ಟೀಫನ್ ನಲ್ಲಿ ಪ್ರವೇಶ ಪಡೆದು, 2001ರಲ್ಲಿ ದೆಹಲಿ ವಿವಿಗೇ ಪ್ರಥಮಳಾಗಿ ಇತಿಹಾಸದಲ್ಲಿ ಪದವಿ ಪಡೆದಳು. ತಕ್ಷಣ ಅವಳಿಗೆ ಬ್ರಿಟನ್ನಿನ ಚೀವಿನಿಂಗ್ ( Chevening Scholarship) ಶಿಷ್ಯವೇತನ ದೊರೆತದ್ದರಿಂದ ಮುಂದಿನ ಶಿಕ್ಷಣಕ್ಕಾಗಿ ಆಕೆ ಆಕ್ಸಫರ್ಡ್ ವಿವಿಗೆ ತೆರಳಿ, 2003ರಲ್ಲಿ ಇತಿಹಾಸದಲ್ಲಿ ಎಂ ಎ ಪದವಿ ಪಡೆದಳು.

ದೆಹಲಿಯ ಸರ್ಕಾರಿ ಶಾಲೆ

ಮುಂದೆ ರೋಡ್ ಸ್ಕಾಲರ್ ಶಿಪ್ ಪಡೆಯುವಲ್ಲಿ ಯಶಸ್ವಿಯಾದ ಆಕೆ 2005ರವರೆಗೆ ಲಂಡನ್ನಿನ ಅತ್ಯಂತ ಶ್ರೀಮಂತವಾದ ಮೆಗ್ಡಲಿನ್ ಕಾಲೇಜಿನಲ್ಲಿ ( Magdalen College) ತನ್ನ ಸಂಶೋಧನೆ ಮತ್ತು ಅಧ್ಯಾಪನವನ್ನು ಮುಂದುವರಿಸಿ, 2006ರಲ್ಲಿ ಭಾರತಕ್ಕೆ ಹಿಂದಿರುಗಿ, ಸ್ವಲ್ಪ ಕಾಲ ಆಂಧ್ರದ ಋಷಿವ್ಯಾಲಿ ಶಾಲೆಯಲ್ಲಿ ಇತಿಹಾಸ ಮತ್ತು ಇಂಗ್ಲಿಷ್ ಅಧ್ಯಾಪಕಿಯಾಗಿ ಕೆಲಸ ಮಾಡಿದಳು.

2007ರಲ್ಲಿ ಆಕೆ ಮಧ್ಯಪ್ರದೇಶದ ಹಳ್ಳಿಯೊಂದಕ್ಕೆ ತೆರಳಿ ಸಾವಯವ ಕೃಷಿ ಮತ್ತು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯಲ್ಲಿ ತನ್ನನ್ನು ತೊಡಗಿಸಿಕೊಂಡಳು. ಅಲ್ಲಿಯ ಸಂಭಾವನಾ ಸಂಸ್ಥೆಯನ್ನು ( Sambhavana Institute of Public policy) ಆಕೆ ಬೆಳೆಸಿದ ರೀತಿ ಅನನ್ಯವಾದುದು. 2015ರಲ್ಲಿ ನಡೆದ ಖಾಂಡ್ವಾ ಸತ್ಯಾಗ್ರಹದ ಪ್ರೇರಕ ಶಕ್ತಿ ಈಕೆಯೇ.

ಮಧ್ಯಪ್ರದೇಶದಿಂದ ಆಕೆಯನ್ನು ಬಿಡಿಸಿದ ಪ್ರೊ. ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ ಅವರು 2011ರಲ್ಲಿ ಅವಳನ್ನು ದೆಹಲಿಗೆ ಕರೆತಂದರು. ಆತಿಶಿ ಭ್ರಷ್ಟಾಚಾರ ವಿರೋಧಿ ಆಂದೋಲನದಲ್ಲಿ ತನ್ನನ್ನು ತೀವ್ರವಾಗಿ ತೊಡಗಿಸಿಕೊಂಡು 2013ರಲ್ಲಿ ಆಪ್ ( AAP)ನ ಸೈದ್ಧಾಂತಿಕೆಯನ್ನು ರೂಪಿಸುವ ಸಮಿತಿಗಳಲ್ಲಿ ಆಳವಾಗಿ ಕೆಲಸ ಮಾಡಿದಳು. ಆಪ್ ನ ಪರವಾಗಿ ಆಕೆ ಟೆಲಿವಿಷನ್ ಚ್ಯಾನೆಲ್ ಗಳಲ್ಲಿ ಮಾತಾಡುತ್ತಿದ್ದ ರೀತಿಯಿಂದ ಆಕೆ ವಿಶ್ವದಾದ್ಯಂತ ಜನರ ಗಮನ ಸೆಳೆದಳು. ಒಳ್ಳೆಯ ಭಾಷೆ, ಆಳವಾದ ತಿಳುವಳಿಕೆ, ನಿರುದ್ವಿಗ್ನವಾಗದ ವಿಷಯ ಮಂಡನೆ, ಇದಿರಾಳಿಯ ಮಾತಿಗೂ ಸಂಯಮದಿಂದ ಕಿವಿಗೊಡುತ್ತಿದ್ದ ರೀತಿಯಿಂದ ಆಕೆ ದೆಹಲಿಯಲ್ಲಿ ಅಪಾರ ಜನಪ್ರಿಯತೆಯನ್ನು ಪಡೆದಳು.

ದೆಹಲಿಯಲ್ಲಿ ಆಪ್ ಸರಕಾರ ರಚನೆಯಾದ ಮೇಲೆ ಮುಖ್ಯಮಂತ್ರಿ ಕೇಜ್ರಿವಾಲ್, ಆತಿಶಿ ಅವರನ್ನು ಶಿಕ್ಷಣ ಮಂತ್ರಿ ಮನೀಶ್ ಸಿಸೋಡಿಯಾ ಅವರ ಶೈಕ್ಷಣಿಕ ಸಲಹೆಗಾರರೆಂದು ನೇಮಕ ಮಾಡಿದರು. ಜುಲಾಯಿ 2015ರಿಂದ ಎಪ್ರಿಲ್ 17, 2018ರವರೆಗೆ ಈ ಹುದ್ದೆಯಲ್ಲಿ ಅಭೂತಪೂರ್ವವಾಗಿ ಕೆಲಸ ಮಾಡಿ, ದೆಹಲಿಯ ಸರಕಾರೀ ಶಾಲೆಗಳ ಸ್ವರೂಪವನ್ನೇ ಅತಿಶಿ ಬದಲು ಮಾಡಿದಳು. ಆದರೆ ಆತಿಶಿಯ ನೇಮಕಾತಿಯೇ ಕಾನೂನು ಬಾಹಿರ ಎಂದು ಹೇಳಿದ ಕೇಂದ್ರ ಸರಕಾರವು ಆಕೆಯ ನೇಮಕಾತಿಯನ್ನೇ ರದ್ದುಗೊಳಿಸಿತು. ಸುಮಾರು ಎರಡು ವರ್ಷಗಳ ತನ್ನ ಸೇವಾವಧಿಯಲ್ಲಿ ಆಕೆ ತಿಂಗಳಿಗೆ ಕೇವಲ ಒಂದು ರೂಪಾಯಿ ಸಂಭಾವನೆ ಮಾತ್ರ ಪಡೆಯುತ್ತಿದ್ದಳು.

ಆಡಳಿತವನ್ನು ಜನರ ಹತ್ತಿರ ಕೊಂಡೊಯ್ಯುವ ಆಕೆಯ ಮೊಹಲ್ಲಾ ಸಭಾ ( ಅದರ ಕೆಲವು ಪ್ರಾಯೋಗಿಕ ಸಭೆಗಳಲ್ಲಿ ನಾನು ಭಾಗಿಯಾಗಿದ್ದೆ) ಯೋಜನೆಯನ್ನು ದೆಹಲಿಯ ರಾಜ್ಯಪಾಲರು ಕೊನೆಗೂ ಅಂಗೀಕರಿಸಲೇ ಇಲ್ಲ.

ಇಂಥ ಕನಸುಕಂಗಳ , ಹೋರಾಟಗಾರ್ತಿ ಅತಿಶಿ ಇವತ್ತು ಸಾರ್ವಜನಿಕರೆದುರು ಕಣ್ಣೀರು ಸುರಿಸುವಂಥ ವಾತಾವರಣ ನಿರ್ಮಾಣವಾಗಿದೆ. ಉತ್ತರ ದೆಹಲಿಯಲ್ಲಿ ಆಕೆ ಲೋಕ ಸಭೆಗೆ ಸ್ಪರ್ಧಿಸುವ ಪ್ರದೇಶಗಳಲ್ಲಿ ಆಕೆಯ ಚಾರಿತ್ರ್ಯ ಹರಣ ಮಾಡುವಂಥ ಅಶ್ಲೀಲ ಕರಪತ್ರಗಳನ್ನು ಹಂಚಲಾಗಿದೆ. ಅವಳ ಹೆಸರಿನ ಮುಂದಿರುವ ಮಾರ್ಲೀನಾ ಪದವನ್ನು ಗಮನಿಸಿ, ಆಕೆ ಬೇರಾವುದೋ ಧರ್ಮದವಳೆಂದು ಭಾವಿಸಿ, ಜನರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡಲಾಗಿದೆ. ಇಂಥ ಕೆಲಸಗಳನ್ನು ಯಾರು ಮಾಡುತ್ತಾರೆ ಎಂದು ನಾನೇನೂ ಹೇಳಬೇಕಾಗಿಲ್ಲವಲ್ಲ! ಅವಳ ಇದಿರಾಳಿ ಕ್ರಿಕೆಟಿಗ ಗೌತಮ್ ಗಂಭೀರ್ ಇಂಥ ಲುಚ್ಛ ಕೆಲಸ ಮಾಡಿರಲಾರ, ಆದರೆ ಕರಪತ್ರವನ್ನು ಖಂಡಿಸುವ ಘನತೆಯನ್ನೂ ಆತ ತೋರಿಲ್ಲ.

ದೆಹಲಿಯಲ್ಲಿ ನನ್ನ ಕಣ್ಣೆದುರೇ ಬೆಳೆದವರು ಇಬ್ಬರು- ಒಬ್ಬ ಕನ್ನಯ್ಯ ಕುಮಾರ್ ಮತ್ತು ಇನ್ನೊಬ್ಬರು ಆತಿಶಿ. ಅವರು ಎಷ್ಟು ಒಳ್ಳೆಯವರು, ಸಾಮಾಜಿಕ ಕಳಕಳಿಯುಳ್ಳವರು ಮತ್ತು ಪ್ರತಿಭಾವಂತರೆಂಬುದೆಂಬುದನ್ನು ನಾನು ಹತ್ತಿರದಿಂದ ಬಲ್ಲೆ. ಈ ಪ್ರತಿಭೆಗಳನ್ನು ಎಳವೆಯಲ್ಲಿಯೇ ಮಟ್ಟ ಹಾಕಲು ಎಷ್ಟೊಂದು ಶಕ್ತಿಗಳು, ಎಷ್ಟೊಂದು ಬಗೆಯಲ್ಲಿ ಕೆಲಸ ಮಾಡುತ್ತಿವೆ ಎಂಬುದನ್ನು ನೋಡಿದಾಗ ನಿಜಕ್ಕೂ ದಿಗ್ಭ್ರಮೆಯಾಗುತ್ತದೆ.
ನಮ್ಮ ದೇಶಕ್ಕೆ ನಿಜಕ್ಕೂ ಏನು ಬೇಕಾಗಿದೆ ಎಂದೇ ತಿಳಿಯುತ್ತಿಲ್ಲ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...