Homeಚಳವಳಿಕನಸುಗಾರ್ತಿಯೊಬ್ಬಳ ಕಣ್ಣೀರು : ಆತಿಶಿ ಮರ್ಲೀನಾ ಎಂಬ ಶೈಕ್ಷಣಿಕ ಚೈತನ್ಯದ ಕುರಿತು

ಕನಸುಗಾರ್ತಿಯೊಬ್ಬಳ ಕಣ್ಣೀರು : ಆತಿಶಿ ಮರ್ಲೀನಾ ಎಂಬ ಶೈಕ್ಷಣಿಕ ಚೈತನ್ಯದ ಕುರಿತು

ದೆಹಲಿ ಸರ್ಕಾರಿ ಶಾಲೆಗಳ ಅಭಿವೃದ್ದಿಯ ಹಿಂದಿನ ಪ್ರೇರಕ ಶಕ್ತಿ ಇವರು.

- Advertisement -
- Advertisement -

| ಪುರುಷೋತ್ತಮ ಬಿಳಿಮಲೆ |

 

ನಾಡಿದ್ದು ಜೂನ್ 8ನೇ ತಾರೀಕಿಗೆ 39 ವರ್ಷ ತುಂಬಲಿರುವ ಆತಿಶಿ ಮರ್ಲಿನಾ ಅವರನ್ನು ಅವರ ಶೈಕ್ಷಣಿಕ ಕಾರ್ಯಕ್ರಮಗಳಿಗಾಗಿ ನಾನು ಹತ್ತಿರದಿಂದ ಬಲ್ಲೆ. ಜೆ ಎನ್ ಯುವಿನ ಚರ್ಚೆಗಳಲ್ಲಿ ಆಗಾಗ ಕಾಣಿಸಿಕೊಳ್ಳುವ ಆಕೆಗೆ ಭಾರತೀಯ ಇತಿಹಾಸ ಮತ್ತು ವರ್ತಮಾನದ ಬಗ್ಗೆ ಆಳವಾದ ತಿಳುವಳಿಕೆಯಿದೆ. ಅವಳ ತಂದೆಯ ಹೆಸರು ಪ್ರೊ. ವಿಜಯ್ ಸಿಂಗ್ , ತಾಯಿ ತೃಪ್ತಿ ವಹಿ. ಇಬ್ಬರೂ ದೆಹಲಿ ವಿವಿಯಲ್ಲಿ ಪ್ರಾಧ್ಯಾಪಕರಾಗಿದ್ದರು. ಎಡಪಂಥೀಯ ಒಲವಿರುವ ಈ ದಂಪತಿಗಳು ಮಾರ್ಕ್ಸ್ ಮತ್ತು ಲೆನಿನ್ ಅವರ ನೆನಪಿಗಾಗಿ ಅತಿಶಿ ಹೆಸರಿಗೆ ಮರ್ಲೀನಾ ಸೇರಿಸಿದರು.

ದೆಹಲಿಯ ಸ್ಪ್ರಿಂಗ್ ಡೇಲ್ ಶಾಲೆಯಲ್ಲಿ ಹೈಸ್ಕೂಲು ಕಲಿತ ಅತಿಶಿಯು ತನ್ನ ಸ್ವಂತ ಪ್ರತಿಭೆಯಿಂದ ದೆಹಲಿಯ ಪ್ರಖ್ಯಾತವಾದ ಸೈಂಟ್ ಸ್ಟೀಫನ್ ನಲ್ಲಿ ಪ್ರವೇಶ ಪಡೆದು, 2001ರಲ್ಲಿ ದೆಹಲಿ ವಿವಿಗೇ ಪ್ರಥಮಳಾಗಿ ಇತಿಹಾಸದಲ್ಲಿ ಪದವಿ ಪಡೆದಳು. ತಕ್ಷಣ ಅವಳಿಗೆ ಬ್ರಿಟನ್ನಿನ ಚೀವಿನಿಂಗ್ ( Chevening Scholarship) ಶಿಷ್ಯವೇತನ ದೊರೆತದ್ದರಿಂದ ಮುಂದಿನ ಶಿಕ್ಷಣಕ್ಕಾಗಿ ಆಕೆ ಆಕ್ಸಫರ್ಡ್ ವಿವಿಗೆ ತೆರಳಿ, 2003ರಲ್ಲಿ ಇತಿಹಾಸದಲ್ಲಿ ಎಂ ಎ ಪದವಿ ಪಡೆದಳು.

ದೆಹಲಿಯ ಸರ್ಕಾರಿ ಶಾಲೆ

ಮುಂದೆ ರೋಡ್ ಸ್ಕಾಲರ್ ಶಿಪ್ ಪಡೆಯುವಲ್ಲಿ ಯಶಸ್ವಿಯಾದ ಆಕೆ 2005ರವರೆಗೆ ಲಂಡನ್ನಿನ ಅತ್ಯಂತ ಶ್ರೀಮಂತವಾದ ಮೆಗ್ಡಲಿನ್ ಕಾಲೇಜಿನಲ್ಲಿ ( Magdalen College) ತನ್ನ ಸಂಶೋಧನೆ ಮತ್ತು ಅಧ್ಯಾಪನವನ್ನು ಮುಂದುವರಿಸಿ, 2006ರಲ್ಲಿ ಭಾರತಕ್ಕೆ ಹಿಂದಿರುಗಿ, ಸ್ವಲ್ಪ ಕಾಲ ಆಂಧ್ರದ ಋಷಿವ್ಯಾಲಿ ಶಾಲೆಯಲ್ಲಿ ಇತಿಹಾಸ ಮತ್ತು ಇಂಗ್ಲಿಷ್ ಅಧ್ಯಾಪಕಿಯಾಗಿ ಕೆಲಸ ಮಾಡಿದಳು.

2007ರಲ್ಲಿ ಆಕೆ ಮಧ್ಯಪ್ರದೇಶದ ಹಳ್ಳಿಯೊಂದಕ್ಕೆ ತೆರಳಿ ಸಾವಯವ ಕೃಷಿ ಮತ್ತು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯಲ್ಲಿ ತನ್ನನ್ನು ತೊಡಗಿಸಿಕೊಂಡಳು. ಅಲ್ಲಿಯ ಸಂಭಾವನಾ ಸಂಸ್ಥೆಯನ್ನು ( Sambhavana Institute of Public policy) ಆಕೆ ಬೆಳೆಸಿದ ರೀತಿ ಅನನ್ಯವಾದುದು. 2015ರಲ್ಲಿ ನಡೆದ ಖಾಂಡ್ವಾ ಸತ್ಯಾಗ್ರಹದ ಪ್ರೇರಕ ಶಕ್ತಿ ಈಕೆಯೇ.

ಮಧ್ಯಪ್ರದೇಶದಿಂದ ಆಕೆಯನ್ನು ಬಿಡಿಸಿದ ಪ್ರೊ. ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ ಅವರು 2011ರಲ್ಲಿ ಅವಳನ್ನು ದೆಹಲಿಗೆ ಕರೆತಂದರು. ಆತಿಶಿ ಭ್ರಷ್ಟಾಚಾರ ವಿರೋಧಿ ಆಂದೋಲನದಲ್ಲಿ ತನ್ನನ್ನು ತೀವ್ರವಾಗಿ ತೊಡಗಿಸಿಕೊಂಡು 2013ರಲ್ಲಿ ಆಪ್ ( AAP)ನ ಸೈದ್ಧಾಂತಿಕೆಯನ್ನು ರೂಪಿಸುವ ಸಮಿತಿಗಳಲ್ಲಿ ಆಳವಾಗಿ ಕೆಲಸ ಮಾಡಿದಳು. ಆಪ್ ನ ಪರವಾಗಿ ಆಕೆ ಟೆಲಿವಿಷನ್ ಚ್ಯಾನೆಲ್ ಗಳಲ್ಲಿ ಮಾತಾಡುತ್ತಿದ್ದ ರೀತಿಯಿಂದ ಆಕೆ ವಿಶ್ವದಾದ್ಯಂತ ಜನರ ಗಮನ ಸೆಳೆದಳು. ಒಳ್ಳೆಯ ಭಾಷೆ, ಆಳವಾದ ತಿಳುವಳಿಕೆ, ನಿರುದ್ವಿಗ್ನವಾಗದ ವಿಷಯ ಮಂಡನೆ, ಇದಿರಾಳಿಯ ಮಾತಿಗೂ ಸಂಯಮದಿಂದ ಕಿವಿಗೊಡುತ್ತಿದ್ದ ರೀತಿಯಿಂದ ಆಕೆ ದೆಹಲಿಯಲ್ಲಿ ಅಪಾರ ಜನಪ್ರಿಯತೆಯನ್ನು ಪಡೆದಳು.

ದೆಹಲಿಯಲ್ಲಿ ಆಪ್ ಸರಕಾರ ರಚನೆಯಾದ ಮೇಲೆ ಮುಖ್ಯಮಂತ್ರಿ ಕೇಜ್ರಿವಾಲ್, ಆತಿಶಿ ಅವರನ್ನು ಶಿಕ್ಷಣ ಮಂತ್ರಿ ಮನೀಶ್ ಸಿಸೋಡಿಯಾ ಅವರ ಶೈಕ್ಷಣಿಕ ಸಲಹೆಗಾರರೆಂದು ನೇಮಕ ಮಾಡಿದರು. ಜುಲಾಯಿ 2015ರಿಂದ ಎಪ್ರಿಲ್ 17, 2018ರವರೆಗೆ ಈ ಹುದ್ದೆಯಲ್ಲಿ ಅಭೂತಪೂರ್ವವಾಗಿ ಕೆಲಸ ಮಾಡಿ, ದೆಹಲಿಯ ಸರಕಾರೀ ಶಾಲೆಗಳ ಸ್ವರೂಪವನ್ನೇ ಅತಿಶಿ ಬದಲು ಮಾಡಿದಳು. ಆದರೆ ಆತಿಶಿಯ ನೇಮಕಾತಿಯೇ ಕಾನೂನು ಬಾಹಿರ ಎಂದು ಹೇಳಿದ ಕೇಂದ್ರ ಸರಕಾರವು ಆಕೆಯ ನೇಮಕಾತಿಯನ್ನೇ ರದ್ದುಗೊಳಿಸಿತು. ಸುಮಾರು ಎರಡು ವರ್ಷಗಳ ತನ್ನ ಸೇವಾವಧಿಯಲ್ಲಿ ಆಕೆ ತಿಂಗಳಿಗೆ ಕೇವಲ ಒಂದು ರೂಪಾಯಿ ಸಂಭಾವನೆ ಮಾತ್ರ ಪಡೆಯುತ್ತಿದ್ದಳು.

ಆಡಳಿತವನ್ನು ಜನರ ಹತ್ತಿರ ಕೊಂಡೊಯ್ಯುವ ಆಕೆಯ ಮೊಹಲ್ಲಾ ಸಭಾ ( ಅದರ ಕೆಲವು ಪ್ರಾಯೋಗಿಕ ಸಭೆಗಳಲ್ಲಿ ನಾನು ಭಾಗಿಯಾಗಿದ್ದೆ) ಯೋಜನೆಯನ್ನು ದೆಹಲಿಯ ರಾಜ್ಯಪಾಲರು ಕೊನೆಗೂ ಅಂಗೀಕರಿಸಲೇ ಇಲ್ಲ.

ಇಂಥ ಕನಸುಕಂಗಳ , ಹೋರಾಟಗಾರ್ತಿ ಅತಿಶಿ ಇವತ್ತು ಸಾರ್ವಜನಿಕರೆದುರು ಕಣ್ಣೀರು ಸುರಿಸುವಂಥ ವಾತಾವರಣ ನಿರ್ಮಾಣವಾಗಿದೆ. ಉತ್ತರ ದೆಹಲಿಯಲ್ಲಿ ಆಕೆ ಲೋಕ ಸಭೆಗೆ ಸ್ಪರ್ಧಿಸುವ ಪ್ರದೇಶಗಳಲ್ಲಿ ಆಕೆಯ ಚಾರಿತ್ರ್ಯ ಹರಣ ಮಾಡುವಂಥ ಅಶ್ಲೀಲ ಕರಪತ್ರಗಳನ್ನು ಹಂಚಲಾಗಿದೆ. ಅವಳ ಹೆಸರಿನ ಮುಂದಿರುವ ಮಾರ್ಲೀನಾ ಪದವನ್ನು ಗಮನಿಸಿ, ಆಕೆ ಬೇರಾವುದೋ ಧರ್ಮದವಳೆಂದು ಭಾವಿಸಿ, ಜನರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡಲಾಗಿದೆ. ಇಂಥ ಕೆಲಸಗಳನ್ನು ಯಾರು ಮಾಡುತ್ತಾರೆ ಎಂದು ನಾನೇನೂ ಹೇಳಬೇಕಾಗಿಲ್ಲವಲ್ಲ! ಅವಳ ಇದಿರಾಳಿ ಕ್ರಿಕೆಟಿಗ ಗೌತಮ್ ಗಂಭೀರ್ ಇಂಥ ಲುಚ್ಛ ಕೆಲಸ ಮಾಡಿರಲಾರ, ಆದರೆ ಕರಪತ್ರವನ್ನು ಖಂಡಿಸುವ ಘನತೆಯನ್ನೂ ಆತ ತೋರಿಲ್ಲ.

ದೆಹಲಿಯಲ್ಲಿ ನನ್ನ ಕಣ್ಣೆದುರೇ ಬೆಳೆದವರು ಇಬ್ಬರು- ಒಬ್ಬ ಕನ್ನಯ್ಯ ಕುಮಾರ್ ಮತ್ತು ಇನ್ನೊಬ್ಬರು ಆತಿಶಿ. ಅವರು ಎಷ್ಟು ಒಳ್ಳೆಯವರು, ಸಾಮಾಜಿಕ ಕಳಕಳಿಯುಳ್ಳವರು ಮತ್ತು ಪ್ರತಿಭಾವಂತರೆಂಬುದೆಂಬುದನ್ನು ನಾನು ಹತ್ತಿರದಿಂದ ಬಲ್ಲೆ. ಈ ಪ್ರತಿಭೆಗಳನ್ನು ಎಳವೆಯಲ್ಲಿಯೇ ಮಟ್ಟ ಹಾಕಲು ಎಷ್ಟೊಂದು ಶಕ್ತಿಗಳು, ಎಷ್ಟೊಂದು ಬಗೆಯಲ್ಲಿ ಕೆಲಸ ಮಾಡುತ್ತಿವೆ ಎಂಬುದನ್ನು ನೋಡಿದಾಗ ನಿಜಕ್ಕೂ ದಿಗ್ಭ್ರಮೆಯಾಗುತ್ತದೆ.
ನಮ್ಮ ದೇಶಕ್ಕೆ ನಿಜಕ್ಕೂ ಏನು ಬೇಕಾಗಿದೆ ಎಂದೇ ತಿಳಿಯುತ್ತಿಲ್ಲ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...