Homeಮುಖಪುಟಕೇಜ್ರಿವಾಲ್ ಬಂಧನ ಸಾಧ್ಯತೆ, ಜೈಲಿಗೆ ಹೋಗಲು ನಾವು ಹೆದರಲ್ಲ ಎಂದ ಅತಿಶಿ

ಕೇಜ್ರಿವಾಲ್ ಬಂಧನ ಸಾಧ್ಯತೆ, ಜೈಲಿಗೆ ಹೋಗಲು ನಾವು ಹೆದರಲ್ಲ ಎಂದ ಅತಿಶಿ

- Advertisement -
- Advertisement -

ದೆಹಲಿಯ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ.2ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜಿವಾಲ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಆ ದಿನವೇ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಅಮ್ ಅದ್ಮ ಪಕ್ಷದ (ಎಎಪಿ) ಮೂಲಗಳ ತಿಳಿಸಿವೆ.

ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ.2ರಂದು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯವು ಅರವಿಂದ ಕೇಜಿವಾಲ್ ಅವರಿಗೆ ಸೋಮವಾರ ಸಮನ್ಸ್ ಜಾರಿ ಮಾಡಿತ್ತು.

ಕೇಜಿವಾಲ್ ಅವರಿಗೆ ಪಿಎಂಎಲ್‌ಎ ಕಾಯ್ದೆಯಡಿ ಸಮನ್ಸ್ ನೀಡಲಾಗಿದೆ. ತನಿಖಾ ಸಂಸ್ಥೆಯು ಅಂದು ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಿದೆ ಎಂದು ಮೂಲಗಳು ತಿಳಿಸಿದ್ದವು.

ಈ ಬಗ್ಗೆ ಮಾತನಾಡಿರುವ ದೆಹಲಿ ಸಚಿವ ಅತಿಶಿ, ”ನಮ್ಮ ಪಕ್ಷದ ಅಧ್ಯಕ್ಷರನ್ನು (ಕೇಜಿವಾಲ್) ಬಂಧಿಸುವ ಮೂಲಕ ಅವರನ್ನು ಮುಗಿಸಲು ಬಿಜೆಪಿಗರು ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

”ಚುನಾವಣೆಯಲ್ಲಿ ಕೇಜಿವಾಲ್ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ತಿಳಿದಿರುವ ಕಾರಣ ಎಎಪಿಯನ್ನು ಗುರಿಯಾಗಿಸಲು ಬಿಜೆಪಿ ಈ ತಂತ್ರಗಳನ್ನು ಬಳಸುತ್ತಿದೆ” ಎಂದಿದ್ದಾರೆ.

”ನ. 2ರಂದು ಕೇಜಿವಾಲ್ ಅವರನ್ನು ಬಂಧಿಸುವ ಸಾಧ್ಯತೆ ಕುರಿತು ವರದಿಗಳಿವೆ. ಒಂದು ವೇಳೆ ಅವರನ್ನು ಬಂಧಿಸಿದರೆ, ಅದು ಭ್ರಷ್ಟಾಚಾರದ ಕಾರಣಕ್ಕಲ್ಲ. ಹೊರತುಪಡಿಸಿ ಕೇಜಿವಾಲ್ ಅವರು ಬಿಜೆಪಿ ವಿರುದ್ಧ ಮಾತನಾಡಿದ್ದಾರೆ ಎಂಬುದೇ ಬಂಧನಕ್ಕೆ ಮುಖ್ಯ ಕಾರಣ” ಎಂದು ಅತಿಶಿ ವಾಗ್ದಾಳಿ ನಡೆಸಿದ್ದಾರೆ.

”ಪ್ರಧಾನಿ ನರೇಂದ್ರ ಮೋದಿ ಅವರು ಅರವಿಂದ್ ಕೇಜಿವಾಲ್‌ಗೆ ಹೆದರುತ್ತಾರೆ. ಚುನಾವಣೆಯಲ್ಲಿ ಎಎಪಿಯನ್ನು ಸೋಲಿಸಲು ಸಾಧ್ಯವಿಲ್ಲ ಎಂಬುದು ಬಿಜೆಪಿಗೆ ತಿಳಿದಿದೆ, ಹಾಗಾಗಿ ಈ ಕುತಂತ್ರ ನಡೆಸಿದ್ದಾರೆ” ಎಂದು ಅತಿಶಿ ಕಿಡಿಕಾರಿದ್ದಾರೆ.

ಈಗಾಗಲೇ ಎಎಪಿಯ ಹಿರಿಯ ನಾಯಕರಾದ ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಮತ್ತು ಸತ್ಯೇಂದ್ರ ಜೈನ್ ಸೇರಿದಂತೆ ಎಎಪಿಯ ಪ್ರಮುಖ ನಾಯಕರ ಬಂಧನವನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ಅತಿಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಇದೀಗ ಕೇಜಿವಾಲ್‌ರನ್ನು ಬಂಧಿಸುತ್ತಾರೆ. ಆ ಬಳಿಕ ಬಿಜೆಪಿಯವರು ಸಿಬಿಐ ಮತ್ತು ಇ.ಡಿ ಬಳಸಿಕೊಂಡು ‘INDIA’ ಮೈತ್ರಿಕೂಟದ ಇತರ ನಾಯಕರು ಮತ್ತು ಅದರ ಮುಖ್ಯಮಂತ್ರಿಗಳನ್ನು ಗುರಿಯಾಗಿಸಿ ದಾಳಿ ನಡೆಸಲಿದ್ದಾರೆ” ಎಂದು ಅತಿಶಿ ಹೇಳಿದ್ದಾರೆ.

”ಎಎಪಿ ನಾಯಕರು ಜೈಲಿಗೆ ಹೋಗಲು ಹೆದರುವುದಿಲ್ಲ, ತಮ್ಮ ಕೊನೆಯ ಉಸಿರು ಇರುವವರೆಗೂ ಸಂವಿಧಾನವನ್ನು ಉಳಿಸಲು ಹೋರಾಡುತ್ತಲೇ ಇರುತ್ತೇವೆ” ಎಂದು ಅತಿಶಿ ಗುಡುಗಿದ್ದಾರೆ.

ಇದನ್ನೂ ಓದಿ: ಅಬಕಾರಿ ನೀತಿ ಪ್ರಕರಣ: ಸಿಎಂ ಕೇಜ್ರಿವಾಲ್‌ಗೆ ಇಡಿ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...