HomeUncategorizedಆತ್ಮನಿರ್ಭರ ಭಾರತ ಯೋಜನೆ: ಎರಡನೇ ಹಂತದ ವಿವರಣೆಯ ಮುಖ್ಯಾಂಶಗಳು

ಆತ್ಮನಿರ್ಭರ ಭಾರತ ಯೋಜನೆ: ಎರಡನೇ ಹಂತದ ವಿವರಣೆಯ ಮುಖ್ಯಾಂಶಗಳು

ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು, ಸ್ವಯಂ ಉದ್ಯೋಗಿ ಮತ್ತು ಸಣ್ಣ ರೈತರ ಮೇಲೆ ಇಂದಿನ ಉಪಕ್ರಮಗಳು ಕೇಂದ್ರೀಕರಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

- Advertisement -
- Advertisement -

ಪ್ರಧಾನಿ ಮೋದಿ ಘೋಷಿಸಿದ್ದ ಕೊರೊನಾ ವಿಶೇಷ ಪ್ಯಾಕೇಜ್ ಇದರ ಇನ್ನಷ್ಟು ವಿವರಗಳನ್ನು ಕೇಂದ್ರ ಹಣಕಾಸು ಮಂತ್ರಿ ನಿರ್ಮಲ ಸೀತಾರಾಮನ್ ನೀಡಿದ್ದಾರೆ. ಅವರು ನಿನ್ನೆಯಷ್ಟೇ ವಿವಿಧ ವಿಭಾಗಗಳಿಗೆ ಎಷ್ಟು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದರಾದರೂ, ಮುಂದಿನ ದಿನಗಳಲ್ಲೂ ಇದರ ಬಗೆಗಿನ ಮಾಹಿತಿಯನ್ನು ನೀಡಲು ನಮ್ಮ ತಂಡ ಪತ್ರಿಕಾಗೋಷ್ಠಿ ನಡೆಸಲಿದೆ ಎಂದು ಹೇಳಿದ್ದರು.

ಪತ್ರಿಕಾಗೋಷ್ಟಿಯ ಆರಂಭದಲ್ಲಿಯೆ ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು, ಸ್ವಯಂ ಉದ್ಯೋಗಿ ಮತ್ತು ಸಣ್ಣ ರೈತರ ಮೇಲೆ ಇಂದಿನ ಉಪಕ್ರಮಗಳು ಕೇಂದ್ರೀಕರಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಭಾಷಣದ ಮುಖ್ಯಾಂಶಗಳು:

ಬೆಲೆಯ ಮೇಲಿನ ಸಾಲದ ಬಡ್ಡಿ ಪಾವತಿ ಹಾಗೂ ತ್ವರಿತ ಮರುಪಾವತಿಯನ್ನು ಮೇ 31 ಕ್ಕೆ ವಿಸ್ತರಣೆ.

ವಲಸಿಗ ಕಾರ್ಮಿಕರಿಗೆ ಆಶ್ರಯ ಕಲ್ಪಿಸಲು ಹಾಗೂ ಅವರಿಗೆ ಆಹಾರ ಮತ್ತು ನೀರು ಇತ್ಯಾದಿಗಳನ್ನು ಒದಗಿಸಲು ’ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ’ ಬಳಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಅನುಮತಿ.

ಕೊರೊನಾ ಅವಧಿಯಲ್ಲಿ 12,000 ಸ್ವ-ಸಹಾಯ ಗುಂಪುಗಳು 3 ಕೋಟಿಗೂ ಹೆಚ್ಚು ಮಾಸ್ಕ್‌ಗಳನ್ನು ಮತ್ತು 1.2 ಲಕ್ಷ ಲೀಟರ್ ಸ್ಯಾನಿಟೈಜರ್‌ಗಳನ್ನು ಉತ್ಪಾದಿಸಿವೆ. ಕಳೆದ ಎರಡು ತಿಂಗಳಲ್ಲಿ ನಗರ ಬಡವರಿಗಾಗಿ 7,200 ಹೊಸ ಸ್ವಸಹಾಯ ಸಂಘಗಳನ್ನು ರಚನೆ.

ಮುಂದಿನ 2 ತಿಂಗಳವರೆಗೆ ಎಲ್ಲಾ ವಲಸಿಗರಿಗೆ ಉಚಿತ ಆಹಾರ ಧಾನ್ಯಗಳು ಸರಬರಾಜು. ಇದರ ಉಪಯೋಗ ಕಾರ್ಡ್ ರಹಿತರಿಗೂ ಸಿಗಲಿದ್ದು, ಒಬ್ಬ ವ್ಯಕ್ತಿಗೆ 5 ಕೆಜಿ ಗೋಧಿ / ಅಕ್ಕಿ ಮತ್ತು ಕುಟುಂಬಕ್ಕೆ 1 ಕೆಜಿ ಬೇಳೆಯನ್ನು 2 ತಿಂಗಳವರೆಗೆ ನೀಡಲಾಗುತ್ತದೆ. ಇದಕ್ಕಾಗಿ 3500 ಕೋಟಿ ರೂ. ಖರ್ಚು ಆಗಲಿದ್ದು, ಇದರಿಂದ 8 ಕೋಟಿ ವಲಸಿಗರಿಗೆ ಲಾಭ.

ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಗೆ ಬರಲಿದ್ದು, 23 ರಾಜ್ಯಗಳಲ್ಲಿ 67 ಕೋಟಿ ಫಲಾನುಭವಿಗಳು ಸಾರ್ವಜನಿಕ ವಿತರಣಾ ವ್ಯವಸ್ಥೆಯ 83% ಜನಸಂಖ್ಯೆಯಷ್ಟನ್ನು ಒಳಗೊಂಡಿದೆ. ಇದು ಆಗಸ್ಟ್ 2020 ರ ವೇಳೆಗೆ ಜಾರಿಯಾಗಲಿದೆ.

ನಗರಗಳಲ್ಲಿ ಸರಕಾರದ ಅನುದಾನಿತ ವಸತಿಗಳನ್ನು ರಿಯಾಯಿತಿ ದರದಲ್ಲಿ ಕೈಗೆಟುಕುವ ಬಾಡಿಗೆ ವಸತಿ ಸಂಕೀರ್ಣಗಳಾಗಿ ಪರಿವರ್ತನೆ. ಈ ಮೂಲಕ ವಲಸೆ ಕಾರ್ಮಿಕರು ಹಾಗೂ ನಗರ ಬಡವರಿಗೆ ಕೈಗೆಟುಕುವ ಬಾಡಿಗೆ ದರದಲ್ಲಿ ವಸತಿ ಯೋಜನೆ ಪ್ರಾರಂಭ.

ಮುದ್ರಾ-ಶಿಶು ಯೋಜನೆಯ ಸಾಲ ಪಾವತಿಸುವವರಿಗೆ 12 ತಿಂಗಳ ಅವಧಿಗೆ 2% ಬಡ್ಡಿ ಸಬ್ವೆನ್ಷನ್. ಇದಕ್ಕಾಗಿ 1500 ಕೋಟಿ ರೂ.

50 ಲಕ್ಷ ಬೀದಿಬದಿ ವ್ಯಾಪಾರಿಗಳಿಗೆ ವಿಶೇಷ ಸಾಲ ಸೌಲಭ್ಯ, ಇದಕ್ಕಾಗಿ 5000 ಕೋಟಿ ರೂ.

ವಾರ್ಷಿಕ 6-18 ಲಕ್ಷ ರೂ ಆದಾಯ ಗಳಿಸುವ ಮಧ್ಯಮ ಆದಾಯದ ಗುಂಪುಗಳಿಗೆ ಕ್ರೆಡಿಟ್ ಲಿಂಕ್ಡ್ ಸಬ್ಸಿಡಿ ಸ್ಕೀಮನ್ನು ಮಾರ್ಚ್ 2021 ರವರೆಗೆ ವಿಸ್ತರಣೆ. ಇದರಿಂದ 2020-21ರ ಅವಧಿಯಲ್ಲಿ 2.5 ಲಕ್ಷ ಮಧ್ಯಮ ಆದಾಯದ ಕುಟುಂಬಗಳಿಗೆ ಲಾಭ.

ಗ್ರಾಮೀಣ ಸಹಕಾರ ಬ್ಯಾಂಕುಗಳು ಮತ್ತು ಆರ್‌ಆರ್‌ಬಿಗಳ ಬೆಳೆ ಸಾಲದ ಅವಶ್ಯಕತೆಗಾಗಿ ನಬಾರ್ಡ್‌ನಿಂದ 30,000 ಕೋಟಿ ರೂ.ಗಳ ಹೆಚ್ಚುವರಿ ಮರು ಹಣಕಾಸು ಬೆಂಬಲ.

ನಬಾರ್ಡ್ ಮೂಲಕ 30,000 ಕೋಟಿ ರೂ. ಹೆಚ್ಚುವರಿ ತುರ್ತು ಕಾರ್ಯ ಬಂಡವಾಳ ನಿಧಿ. ಇದರಿಂದಾಗಿ 3 ಕೋಟಿ ರೈತರಿಗೆ ಲಾಭ.

ಕಾಂಪೆನ್ಸೇಟರಿ ಅರಣ್ಯೀಕರಣ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ನಿಧಿಯಡಿ ಬುಡಕಟ್ಟು ಹಾಗೂ ಆದಿವಾಸಿಗಳಿಗೆ 6000 ಕೋಟಿ ರೂ.ಗಳ ಮೌಲ್ಯದ ಉದ್ಯೋಗಾವಕಾಶ.

ಕಿಸಾನ್ ಕ್ರೆಡಿಟ್ ಕಾರ್ಡ್‌ಗಳ ಮೂಲಕ 2.5 ಕೋಟಿ ರೈತರಿಗೆ 2 ಲಕ್ಷ ಕೋಟಿ ರೂ.ಗಳ ರಿಯಾಯಿತಿ ಸಾಲ ಹೆಚ್ಚಳ.


ಓದಿ: ಪ್ರಧಾನಿಯ 20 ಲಕ್ಷ ಕೋಟಿ ಪ್ಯಾಕೇಜ್: ಮೊದಲ ಕಂತಲ್ಲಿ ಕೊಡ್ತಿರೋದು ಕೇವಲ 2500 ಕೋಟಿ ಅಷ್ಟೆ!


ಬಿಜೆಪಿಯೇನೋ ದ್ರೋಹ ಮಾಡಿತು; ಆದರೆ ಕಾಂಗ್ರೆಸ್ಸೇಕೆ ಕೈ ಬಿಟ್ಟಿತು? ಸದ್ದು…. ಈ ಸುದ್ದಿಗಳೇನಾದವು? – 09 ನೇ ಸಂಚಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...