HomeUncategorizedಆತ್ಮನಿರ್ಭರ ಭಾರತ ಯೋಜನೆ: ಎರಡನೇ ಹಂತದ ವಿವರಣೆಯ ಮುಖ್ಯಾಂಶಗಳು

ಆತ್ಮನಿರ್ಭರ ಭಾರತ ಯೋಜನೆ: ಎರಡನೇ ಹಂತದ ವಿವರಣೆಯ ಮುಖ್ಯಾಂಶಗಳು

ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು, ಸ್ವಯಂ ಉದ್ಯೋಗಿ ಮತ್ತು ಸಣ್ಣ ರೈತರ ಮೇಲೆ ಇಂದಿನ ಉಪಕ್ರಮಗಳು ಕೇಂದ್ರೀಕರಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

- Advertisement -
- Advertisement -

ಪ್ರಧಾನಿ ಮೋದಿ ಘೋಷಿಸಿದ್ದ ಕೊರೊನಾ ವಿಶೇಷ ಪ್ಯಾಕೇಜ್ ಇದರ ಇನ್ನಷ್ಟು ವಿವರಗಳನ್ನು ಕೇಂದ್ರ ಹಣಕಾಸು ಮಂತ್ರಿ ನಿರ್ಮಲ ಸೀತಾರಾಮನ್ ನೀಡಿದ್ದಾರೆ. ಅವರು ನಿನ್ನೆಯಷ್ಟೇ ವಿವಿಧ ವಿಭಾಗಗಳಿಗೆ ಎಷ್ಟು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದರಾದರೂ, ಮುಂದಿನ ದಿನಗಳಲ್ಲೂ ಇದರ ಬಗೆಗಿನ ಮಾಹಿತಿಯನ್ನು ನೀಡಲು ನಮ್ಮ ತಂಡ ಪತ್ರಿಕಾಗೋಷ್ಠಿ ನಡೆಸಲಿದೆ ಎಂದು ಹೇಳಿದ್ದರು.

ಪತ್ರಿಕಾಗೋಷ್ಟಿಯ ಆರಂಭದಲ್ಲಿಯೆ ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು, ಸ್ವಯಂ ಉದ್ಯೋಗಿ ಮತ್ತು ಸಣ್ಣ ರೈತರ ಮೇಲೆ ಇಂದಿನ ಉಪಕ್ರಮಗಳು ಕೇಂದ್ರೀಕರಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಭಾಷಣದ ಮುಖ್ಯಾಂಶಗಳು:

ಬೆಲೆಯ ಮೇಲಿನ ಸಾಲದ ಬಡ್ಡಿ ಪಾವತಿ ಹಾಗೂ ತ್ವರಿತ ಮರುಪಾವತಿಯನ್ನು ಮೇ 31 ಕ್ಕೆ ವಿಸ್ತರಣೆ.

ವಲಸಿಗ ಕಾರ್ಮಿಕರಿಗೆ ಆಶ್ರಯ ಕಲ್ಪಿಸಲು ಹಾಗೂ ಅವರಿಗೆ ಆಹಾರ ಮತ್ತು ನೀರು ಇತ್ಯಾದಿಗಳನ್ನು ಒದಗಿಸಲು ’ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ’ ಬಳಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಅನುಮತಿ.

ಕೊರೊನಾ ಅವಧಿಯಲ್ಲಿ 12,000 ಸ್ವ-ಸಹಾಯ ಗುಂಪುಗಳು 3 ಕೋಟಿಗೂ ಹೆಚ್ಚು ಮಾಸ್ಕ್‌ಗಳನ್ನು ಮತ್ತು 1.2 ಲಕ್ಷ ಲೀಟರ್ ಸ್ಯಾನಿಟೈಜರ್‌ಗಳನ್ನು ಉತ್ಪಾದಿಸಿವೆ. ಕಳೆದ ಎರಡು ತಿಂಗಳಲ್ಲಿ ನಗರ ಬಡವರಿಗಾಗಿ 7,200 ಹೊಸ ಸ್ವಸಹಾಯ ಸಂಘಗಳನ್ನು ರಚನೆ.

ಮುಂದಿನ 2 ತಿಂಗಳವರೆಗೆ ಎಲ್ಲಾ ವಲಸಿಗರಿಗೆ ಉಚಿತ ಆಹಾರ ಧಾನ್ಯಗಳು ಸರಬರಾಜು. ಇದರ ಉಪಯೋಗ ಕಾರ್ಡ್ ರಹಿತರಿಗೂ ಸಿಗಲಿದ್ದು, ಒಬ್ಬ ವ್ಯಕ್ತಿಗೆ 5 ಕೆಜಿ ಗೋಧಿ / ಅಕ್ಕಿ ಮತ್ತು ಕುಟುಂಬಕ್ಕೆ 1 ಕೆಜಿ ಬೇಳೆಯನ್ನು 2 ತಿಂಗಳವರೆಗೆ ನೀಡಲಾಗುತ್ತದೆ. ಇದಕ್ಕಾಗಿ 3500 ಕೋಟಿ ರೂ. ಖರ್ಚು ಆಗಲಿದ್ದು, ಇದರಿಂದ 8 ಕೋಟಿ ವಲಸಿಗರಿಗೆ ಲಾಭ.

ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಗೆ ಬರಲಿದ್ದು, 23 ರಾಜ್ಯಗಳಲ್ಲಿ 67 ಕೋಟಿ ಫಲಾನುಭವಿಗಳು ಸಾರ್ವಜನಿಕ ವಿತರಣಾ ವ್ಯವಸ್ಥೆಯ 83% ಜನಸಂಖ್ಯೆಯಷ್ಟನ್ನು ಒಳಗೊಂಡಿದೆ. ಇದು ಆಗಸ್ಟ್ 2020 ರ ವೇಳೆಗೆ ಜಾರಿಯಾಗಲಿದೆ.

ನಗರಗಳಲ್ಲಿ ಸರಕಾರದ ಅನುದಾನಿತ ವಸತಿಗಳನ್ನು ರಿಯಾಯಿತಿ ದರದಲ್ಲಿ ಕೈಗೆಟುಕುವ ಬಾಡಿಗೆ ವಸತಿ ಸಂಕೀರ್ಣಗಳಾಗಿ ಪರಿವರ್ತನೆ. ಈ ಮೂಲಕ ವಲಸೆ ಕಾರ್ಮಿಕರು ಹಾಗೂ ನಗರ ಬಡವರಿಗೆ ಕೈಗೆಟುಕುವ ಬಾಡಿಗೆ ದರದಲ್ಲಿ ವಸತಿ ಯೋಜನೆ ಪ್ರಾರಂಭ.

ಮುದ್ರಾ-ಶಿಶು ಯೋಜನೆಯ ಸಾಲ ಪಾವತಿಸುವವರಿಗೆ 12 ತಿಂಗಳ ಅವಧಿಗೆ 2% ಬಡ್ಡಿ ಸಬ್ವೆನ್ಷನ್. ಇದಕ್ಕಾಗಿ 1500 ಕೋಟಿ ರೂ.

50 ಲಕ್ಷ ಬೀದಿಬದಿ ವ್ಯಾಪಾರಿಗಳಿಗೆ ವಿಶೇಷ ಸಾಲ ಸೌಲಭ್ಯ, ಇದಕ್ಕಾಗಿ 5000 ಕೋಟಿ ರೂ.

ವಾರ್ಷಿಕ 6-18 ಲಕ್ಷ ರೂ ಆದಾಯ ಗಳಿಸುವ ಮಧ್ಯಮ ಆದಾಯದ ಗುಂಪುಗಳಿಗೆ ಕ್ರೆಡಿಟ್ ಲಿಂಕ್ಡ್ ಸಬ್ಸಿಡಿ ಸ್ಕೀಮನ್ನು ಮಾರ್ಚ್ 2021 ರವರೆಗೆ ವಿಸ್ತರಣೆ. ಇದರಿಂದ 2020-21ರ ಅವಧಿಯಲ್ಲಿ 2.5 ಲಕ್ಷ ಮಧ್ಯಮ ಆದಾಯದ ಕುಟುಂಬಗಳಿಗೆ ಲಾಭ.

ಗ್ರಾಮೀಣ ಸಹಕಾರ ಬ್ಯಾಂಕುಗಳು ಮತ್ತು ಆರ್‌ಆರ್‌ಬಿಗಳ ಬೆಳೆ ಸಾಲದ ಅವಶ್ಯಕತೆಗಾಗಿ ನಬಾರ್ಡ್‌ನಿಂದ 30,000 ಕೋಟಿ ರೂ.ಗಳ ಹೆಚ್ಚುವರಿ ಮರು ಹಣಕಾಸು ಬೆಂಬಲ.

ನಬಾರ್ಡ್ ಮೂಲಕ 30,000 ಕೋಟಿ ರೂ. ಹೆಚ್ಚುವರಿ ತುರ್ತು ಕಾರ್ಯ ಬಂಡವಾಳ ನಿಧಿ. ಇದರಿಂದಾಗಿ 3 ಕೋಟಿ ರೈತರಿಗೆ ಲಾಭ.

ಕಾಂಪೆನ್ಸೇಟರಿ ಅರಣ್ಯೀಕರಣ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ನಿಧಿಯಡಿ ಬುಡಕಟ್ಟು ಹಾಗೂ ಆದಿವಾಸಿಗಳಿಗೆ 6000 ಕೋಟಿ ರೂ.ಗಳ ಮೌಲ್ಯದ ಉದ್ಯೋಗಾವಕಾಶ.

ಕಿಸಾನ್ ಕ್ರೆಡಿಟ್ ಕಾರ್ಡ್‌ಗಳ ಮೂಲಕ 2.5 ಕೋಟಿ ರೈತರಿಗೆ 2 ಲಕ್ಷ ಕೋಟಿ ರೂ.ಗಳ ರಿಯಾಯಿತಿ ಸಾಲ ಹೆಚ್ಚಳ.


ಓದಿ: ಪ್ರಧಾನಿಯ 20 ಲಕ್ಷ ಕೋಟಿ ಪ್ಯಾಕೇಜ್: ಮೊದಲ ಕಂತಲ್ಲಿ ಕೊಡ್ತಿರೋದು ಕೇವಲ 2500 ಕೋಟಿ ಅಷ್ಟೆ!


ಬಿಜೆಪಿಯೇನೋ ದ್ರೋಹ ಮಾಡಿತು; ಆದರೆ ಕಾಂಗ್ರೆಸ್ಸೇಕೆ ಕೈ ಬಿಟ್ಟಿತು? ಸದ್ದು…. ಈ ಸುದ್ದಿಗಳೇನಾದವು? – 09 ನೇ ಸಂಚಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...