HomeUncategorizedಆತ್ಮನಿರ್ಭರ ಭಾರತ ಯೋಜನೆ: ಎರಡನೇ ಹಂತದ ವಿವರಣೆಯ ಮುಖ್ಯಾಂಶಗಳು

ಆತ್ಮನಿರ್ಭರ ಭಾರತ ಯೋಜನೆ: ಎರಡನೇ ಹಂತದ ವಿವರಣೆಯ ಮುಖ್ಯಾಂಶಗಳು

ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು, ಸ್ವಯಂ ಉದ್ಯೋಗಿ ಮತ್ತು ಸಣ್ಣ ರೈತರ ಮೇಲೆ ಇಂದಿನ ಉಪಕ್ರಮಗಳು ಕೇಂದ್ರೀಕರಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

- Advertisement -
- Advertisement -

ಪ್ರಧಾನಿ ಮೋದಿ ಘೋಷಿಸಿದ್ದ ಕೊರೊನಾ ವಿಶೇಷ ಪ್ಯಾಕೇಜ್ ಇದರ ಇನ್ನಷ್ಟು ವಿವರಗಳನ್ನು ಕೇಂದ್ರ ಹಣಕಾಸು ಮಂತ್ರಿ ನಿರ್ಮಲ ಸೀತಾರಾಮನ್ ನೀಡಿದ್ದಾರೆ. ಅವರು ನಿನ್ನೆಯಷ್ಟೇ ವಿವಿಧ ವಿಭಾಗಗಳಿಗೆ ಎಷ್ಟು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದರಾದರೂ, ಮುಂದಿನ ದಿನಗಳಲ್ಲೂ ಇದರ ಬಗೆಗಿನ ಮಾಹಿತಿಯನ್ನು ನೀಡಲು ನಮ್ಮ ತಂಡ ಪತ್ರಿಕಾಗೋಷ್ಠಿ ನಡೆಸಲಿದೆ ಎಂದು ಹೇಳಿದ್ದರು.

ಪತ್ರಿಕಾಗೋಷ್ಟಿಯ ಆರಂಭದಲ್ಲಿಯೆ ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು, ಸ್ವಯಂ ಉದ್ಯೋಗಿ ಮತ್ತು ಸಣ್ಣ ರೈತರ ಮೇಲೆ ಇಂದಿನ ಉಪಕ್ರಮಗಳು ಕೇಂದ್ರೀಕರಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಭಾಷಣದ ಮುಖ್ಯಾಂಶಗಳು:

ಬೆಲೆಯ ಮೇಲಿನ ಸಾಲದ ಬಡ್ಡಿ ಪಾವತಿ ಹಾಗೂ ತ್ವರಿತ ಮರುಪಾವತಿಯನ್ನು ಮೇ 31 ಕ್ಕೆ ವಿಸ್ತರಣೆ.

ವಲಸಿಗ ಕಾರ್ಮಿಕರಿಗೆ ಆಶ್ರಯ ಕಲ್ಪಿಸಲು ಹಾಗೂ ಅವರಿಗೆ ಆಹಾರ ಮತ್ತು ನೀರು ಇತ್ಯಾದಿಗಳನ್ನು ಒದಗಿಸಲು ’ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ’ ಬಳಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಅನುಮತಿ.

ಕೊರೊನಾ ಅವಧಿಯಲ್ಲಿ 12,000 ಸ್ವ-ಸಹಾಯ ಗುಂಪುಗಳು 3 ಕೋಟಿಗೂ ಹೆಚ್ಚು ಮಾಸ್ಕ್‌ಗಳನ್ನು ಮತ್ತು 1.2 ಲಕ್ಷ ಲೀಟರ್ ಸ್ಯಾನಿಟೈಜರ್‌ಗಳನ್ನು ಉತ್ಪಾದಿಸಿವೆ. ಕಳೆದ ಎರಡು ತಿಂಗಳಲ್ಲಿ ನಗರ ಬಡವರಿಗಾಗಿ 7,200 ಹೊಸ ಸ್ವಸಹಾಯ ಸಂಘಗಳನ್ನು ರಚನೆ.

ಮುಂದಿನ 2 ತಿಂಗಳವರೆಗೆ ಎಲ್ಲಾ ವಲಸಿಗರಿಗೆ ಉಚಿತ ಆಹಾರ ಧಾನ್ಯಗಳು ಸರಬರಾಜು. ಇದರ ಉಪಯೋಗ ಕಾರ್ಡ್ ರಹಿತರಿಗೂ ಸಿಗಲಿದ್ದು, ಒಬ್ಬ ವ್ಯಕ್ತಿಗೆ 5 ಕೆಜಿ ಗೋಧಿ / ಅಕ್ಕಿ ಮತ್ತು ಕುಟುಂಬಕ್ಕೆ 1 ಕೆಜಿ ಬೇಳೆಯನ್ನು 2 ತಿಂಗಳವರೆಗೆ ನೀಡಲಾಗುತ್ತದೆ. ಇದಕ್ಕಾಗಿ 3500 ಕೋಟಿ ರೂ. ಖರ್ಚು ಆಗಲಿದ್ದು, ಇದರಿಂದ 8 ಕೋಟಿ ವಲಸಿಗರಿಗೆ ಲಾಭ.

ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಗೆ ಬರಲಿದ್ದು, 23 ರಾಜ್ಯಗಳಲ್ಲಿ 67 ಕೋಟಿ ಫಲಾನುಭವಿಗಳು ಸಾರ್ವಜನಿಕ ವಿತರಣಾ ವ್ಯವಸ್ಥೆಯ 83% ಜನಸಂಖ್ಯೆಯಷ್ಟನ್ನು ಒಳಗೊಂಡಿದೆ. ಇದು ಆಗಸ್ಟ್ 2020 ರ ವೇಳೆಗೆ ಜಾರಿಯಾಗಲಿದೆ.

ನಗರಗಳಲ್ಲಿ ಸರಕಾರದ ಅನುದಾನಿತ ವಸತಿಗಳನ್ನು ರಿಯಾಯಿತಿ ದರದಲ್ಲಿ ಕೈಗೆಟುಕುವ ಬಾಡಿಗೆ ವಸತಿ ಸಂಕೀರ್ಣಗಳಾಗಿ ಪರಿವರ್ತನೆ. ಈ ಮೂಲಕ ವಲಸೆ ಕಾರ್ಮಿಕರು ಹಾಗೂ ನಗರ ಬಡವರಿಗೆ ಕೈಗೆಟುಕುವ ಬಾಡಿಗೆ ದರದಲ್ಲಿ ವಸತಿ ಯೋಜನೆ ಪ್ರಾರಂಭ.

ಮುದ್ರಾ-ಶಿಶು ಯೋಜನೆಯ ಸಾಲ ಪಾವತಿಸುವವರಿಗೆ 12 ತಿಂಗಳ ಅವಧಿಗೆ 2% ಬಡ್ಡಿ ಸಬ್ವೆನ್ಷನ್. ಇದಕ್ಕಾಗಿ 1500 ಕೋಟಿ ರೂ.

50 ಲಕ್ಷ ಬೀದಿಬದಿ ವ್ಯಾಪಾರಿಗಳಿಗೆ ವಿಶೇಷ ಸಾಲ ಸೌಲಭ್ಯ, ಇದಕ್ಕಾಗಿ 5000 ಕೋಟಿ ರೂ.

ವಾರ್ಷಿಕ 6-18 ಲಕ್ಷ ರೂ ಆದಾಯ ಗಳಿಸುವ ಮಧ್ಯಮ ಆದಾಯದ ಗುಂಪುಗಳಿಗೆ ಕ್ರೆಡಿಟ್ ಲಿಂಕ್ಡ್ ಸಬ್ಸಿಡಿ ಸ್ಕೀಮನ್ನು ಮಾರ್ಚ್ 2021 ರವರೆಗೆ ವಿಸ್ತರಣೆ. ಇದರಿಂದ 2020-21ರ ಅವಧಿಯಲ್ಲಿ 2.5 ಲಕ್ಷ ಮಧ್ಯಮ ಆದಾಯದ ಕುಟುಂಬಗಳಿಗೆ ಲಾಭ.

ಗ್ರಾಮೀಣ ಸಹಕಾರ ಬ್ಯಾಂಕುಗಳು ಮತ್ತು ಆರ್‌ಆರ್‌ಬಿಗಳ ಬೆಳೆ ಸಾಲದ ಅವಶ್ಯಕತೆಗಾಗಿ ನಬಾರ್ಡ್‌ನಿಂದ 30,000 ಕೋಟಿ ರೂ.ಗಳ ಹೆಚ್ಚುವರಿ ಮರು ಹಣಕಾಸು ಬೆಂಬಲ.

ನಬಾರ್ಡ್ ಮೂಲಕ 30,000 ಕೋಟಿ ರೂ. ಹೆಚ್ಚುವರಿ ತುರ್ತು ಕಾರ್ಯ ಬಂಡವಾಳ ನಿಧಿ. ಇದರಿಂದಾಗಿ 3 ಕೋಟಿ ರೈತರಿಗೆ ಲಾಭ.

ಕಾಂಪೆನ್ಸೇಟರಿ ಅರಣ್ಯೀಕರಣ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ನಿಧಿಯಡಿ ಬುಡಕಟ್ಟು ಹಾಗೂ ಆದಿವಾಸಿಗಳಿಗೆ 6000 ಕೋಟಿ ರೂ.ಗಳ ಮೌಲ್ಯದ ಉದ್ಯೋಗಾವಕಾಶ.

ಕಿಸಾನ್ ಕ್ರೆಡಿಟ್ ಕಾರ್ಡ್‌ಗಳ ಮೂಲಕ 2.5 ಕೋಟಿ ರೈತರಿಗೆ 2 ಲಕ್ಷ ಕೋಟಿ ರೂ.ಗಳ ರಿಯಾಯಿತಿ ಸಾಲ ಹೆಚ್ಚಳ.


ಓದಿ: ಪ್ರಧಾನಿಯ 20 ಲಕ್ಷ ಕೋಟಿ ಪ್ಯಾಕೇಜ್: ಮೊದಲ ಕಂತಲ್ಲಿ ಕೊಡ್ತಿರೋದು ಕೇವಲ 2500 ಕೋಟಿ ಅಷ್ಟೆ!


ಬಿಜೆಪಿಯೇನೋ ದ್ರೋಹ ಮಾಡಿತು; ಆದರೆ ಕಾಂಗ್ರೆಸ್ಸೇಕೆ ಕೈ ಬಿಟ್ಟಿತು? ಸದ್ದು…. ಈ ಸುದ್ದಿಗಳೇನಾದವು? – 09 ನೇ ಸಂಚಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...