HomeUncategorizedಆತ್ಮನಿರ್ಭರ ಭಾರತ ಯೋಜನೆ: ಎರಡನೇ ಹಂತದ ವಿವರಣೆಯ ಮುಖ್ಯಾಂಶಗಳು

ಆತ್ಮನಿರ್ಭರ ಭಾರತ ಯೋಜನೆ: ಎರಡನೇ ಹಂತದ ವಿವರಣೆಯ ಮುಖ್ಯಾಂಶಗಳು

ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು, ಸ್ವಯಂ ಉದ್ಯೋಗಿ ಮತ್ತು ಸಣ್ಣ ರೈತರ ಮೇಲೆ ಇಂದಿನ ಉಪಕ್ರಮಗಳು ಕೇಂದ್ರೀಕರಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

- Advertisement -
- Advertisement -

ಪ್ರಧಾನಿ ಮೋದಿ ಘೋಷಿಸಿದ್ದ ಕೊರೊನಾ ವಿಶೇಷ ಪ್ಯಾಕೇಜ್ ಇದರ ಇನ್ನಷ್ಟು ವಿವರಗಳನ್ನು ಕೇಂದ್ರ ಹಣಕಾಸು ಮಂತ್ರಿ ನಿರ್ಮಲ ಸೀತಾರಾಮನ್ ನೀಡಿದ್ದಾರೆ. ಅವರು ನಿನ್ನೆಯಷ್ಟೇ ವಿವಿಧ ವಿಭಾಗಗಳಿಗೆ ಎಷ್ಟು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದರಾದರೂ, ಮುಂದಿನ ದಿನಗಳಲ್ಲೂ ಇದರ ಬಗೆಗಿನ ಮಾಹಿತಿಯನ್ನು ನೀಡಲು ನಮ್ಮ ತಂಡ ಪತ್ರಿಕಾಗೋಷ್ಠಿ ನಡೆಸಲಿದೆ ಎಂದು ಹೇಳಿದ್ದರು.

ಪತ್ರಿಕಾಗೋಷ್ಟಿಯ ಆರಂಭದಲ್ಲಿಯೆ ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು, ಸ್ವಯಂ ಉದ್ಯೋಗಿ ಮತ್ತು ಸಣ್ಣ ರೈತರ ಮೇಲೆ ಇಂದಿನ ಉಪಕ್ರಮಗಳು ಕೇಂದ್ರೀಕರಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಭಾಷಣದ ಮುಖ್ಯಾಂಶಗಳು:

ಬೆಲೆಯ ಮೇಲಿನ ಸಾಲದ ಬಡ್ಡಿ ಪಾವತಿ ಹಾಗೂ ತ್ವರಿತ ಮರುಪಾವತಿಯನ್ನು ಮೇ 31 ಕ್ಕೆ ವಿಸ್ತರಣೆ.

ವಲಸಿಗ ಕಾರ್ಮಿಕರಿಗೆ ಆಶ್ರಯ ಕಲ್ಪಿಸಲು ಹಾಗೂ ಅವರಿಗೆ ಆಹಾರ ಮತ್ತು ನೀರು ಇತ್ಯಾದಿಗಳನ್ನು ಒದಗಿಸಲು ’ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ’ ಬಳಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಅನುಮತಿ.

ಕೊರೊನಾ ಅವಧಿಯಲ್ಲಿ 12,000 ಸ್ವ-ಸಹಾಯ ಗುಂಪುಗಳು 3 ಕೋಟಿಗೂ ಹೆಚ್ಚು ಮಾಸ್ಕ್‌ಗಳನ್ನು ಮತ್ತು 1.2 ಲಕ್ಷ ಲೀಟರ್ ಸ್ಯಾನಿಟೈಜರ್‌ಗಳನ್ನು ಉತ್ಪಾದಿಸಿವೆ. ಕಳೆದ ಎರಡು ತಿಂಗಳಲ್ಲಿ ನಗರ ಬಡವರಿಗಾಗಿ 7,200 ಹೊಸ ಸ್ವಸಹಾಯ ಸಂಘಗಳನ್ನು ರಚನೆ.

ಮುಂದಿನ 2 ತಿಂಗಳವರೆಗೆ ಎಲ್ಲಾ ವಲಸಿಗರಿಗೆ ಉಚಿತ ಆಹಾರ ಧಾನ್ಯಗಳು ಸರಬರಾಜು. ಇದರ ಉಪಯೋಗ ಕಾರ್ಡ್ ರಹಿತರಿಗೂ ಸಿಗಲಿದ್ದು, ಒಬ್ಬ ವ್ಯಕ್ತಿಗೆ 5 ಕೆಜಿ ಗೋಧಿ / ಅಕ್ಕಿ ಮತ್ತು ಕುಟುಂಬಕ್ಕೆ 1 ಕೆಜಿ ಬೇಳೆಯನ್ನು 2 ತಿಂಗಳವರೆಗೆ ನೀಡಲಾಗುತ್ತದೆ. ಇದಕ್ಕಾಗಿ 3500 ಕೋಟಿ ರೂ. ಖರ್ಚು ಆಗಲಿದ್ದು, ಇದರಿಂದ 8 ಕೋಟಿ ವಲಸಿಗರಿಗೆ ಲಾಭ.

ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಗೆ ಬರಲಿದ್ದು, 23 ರಾಜ್ಯಗಳಲ್ಲಿ 67 ಕೋಟಿ ಫಲಾನುಭವಿಗಳು ಸಾರ್ವಜನಿಕ ವಿತರಣಾ ವ್ಯವಸ್ಥೆಯ 83% ಜನಸಂಖ್ಯೆಯಷ್ಟನ್ನು ಒಳಗೊಂಡಿದೆ. ಇದು ಆಗಸ್ಟ್ 2020 ರ ವೇಳೆಗೆ ಜಾರಿಯಾಗಲಿದೆ.

ನಗರಗಳಲ್ಲಿ ಸರಕಾರದ ಅನುದಾನಿತ ವಸತಿಗಳನ್ನು ರಿಯಾಯಿತಿ ದರದಲ್ಲಿ ಕೈಗೆಟುಕುವ ಬಾಡಿಗೆ ವಸತಿ ಸಂಕೀರ್ಣಗಳಾಗಿ ಪರಿವರ್ತನೆ. ಈ ಮೂಲಕ ವಲಸೆ ಕಾರ್ಮಿಕರು ಹಾಗೂ ನಗರ ಬಡವರಿಗೆ ಕೈಗೆಟುಕುವ ಬಾಡಿಗೆ ದರದಲ್ಲಿ ವಸತಿ ಯೋಜನೆ ಪ್ರಾರಂಭ.

ಮುದ್ರಾ-ಶಿಶು ಯೋಜನೆಯ ಸಾಲ ಪಾವತಿಸುವವರಿಗೆ 12 ತಿಂಗಳ ಅವಧಿಗೆ 2% ಬಡ್ಡಿ ಸಬ್ವೆನ್ಷನ್. ಇದಕ್ಕಾಗಿ 1500 ಕೋಟಿ ರೂ.

50 ಲಕ್ಷ ಬೀದಿಬದಿ ವ್ಯಾಪಾರಿಗಳಿಗೆ ವಿಶೇಷ ಸಾಲ ಸೌಲಭ್ಯ, ಇದಕ್ಕಾಗಿ 5000 ಕೋಟಿ ರೂ.

ವಾರ್ಷಿಕ 6-18 ಲಕ್ಷ ರೂ ಆದಾಯ ಗಳಿಸುವ ಮಧ್ಯಮ ಆದಾಯದ ಗುಂಪುಗಳಿಗೆ ಕ್ರೆಡಿಟ್ ಲಿಂಕ್ಡ್ ಸಬ್ಸಿಡಿ ಸ್ಕೀಮನ್ನು ಮಾರ್ಚ್ 2021 ರವರೆಗೆ ವಿಸ್ತರಣೆ. ಇದರಿಂದ 2020-21ರ ಅವಧಿಯಲ್ಲಿ 2.5 ಲಕ್ಷ ಮಧ್ಯಮ ಆದಾಯದ ಕುಟುಂಬಗಳಿಗೆ ಲಾಭ.

ಗ್ರಾಮೀಣ ಸಹಕಾರ ಬ್ಯಾಂಕುಗಳು ಮತ್ತು ಆರ್‌ಆರ್‌ಬಿಗಳ ಬೆಳೆ ಸಾಲದ ಅವಶ್ಯಕತೆಗಾಗಿ ನಬಾರ್ಡ್‌ನಿಂದ 30,000 ಕೋಟಿ ರೂ.ಗಳ ಹೆಚ್ಚುವರಿ ಮರು ಹಣಕಾಸು ಬೆಂಬಲ.

ನಬಾರ್ಡ್ ಮೂಲಕ 30,000 ಕೋಟಿ ರೂ. ಹೆಚ್ಚುವರಿ ತುರ್ತು ಕಾರ್ಯ ಬಂಡವಾಳ ನಿಧಿ. ಇದರಿಂದಾಗಿ 3 ಕೋಟಿ ರೈತರಿಗೆ ಲಾಭ.

ಕಾಂಪೆನ್ಸೇಟರಿ ಅರಣ್ಯೀಕರಣ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ನಿಧಿಯಡಿ ಬುಡಕಟ್ಟು ಹಾಗೂ ಆದಿವಾಸಿಗಳಿಗೆ 6000 ಕೋಟಿ ರೂ.ಗಳ ಮೌಲ್ಯದ ಉದ್ಯೋಗಾವಕಾಶ.

ಕಿಸಾನ್ ಕ್ರೆಡಿಟ್ ಕಾರ್ಡ್‌ಗಳ ಮೂಲಕ 2.5 ಕೋಟಿ ರೈತರಿಗೆ 2 ಲಕ್ಷ ಕೋಟಿ ರೂ.ಗಳ ರಿಯಾಯಿತಿ ಸಾಲ ಹೆಚ್ಚಳ.


ಓದಿ: ಪ್ರಧಾನಿಯ 20 ಲಕ್ಷ ಕೋಟಿ ಪ್ಯಾಕೇಜ್: ಮೊದಲ ಕಂತಲ್ಲಿ ಕೊಡ್ತಿರೋದು ಕೇವಲ 2500 ಕೋಟಿ ಅಷ್ಟೆ!


ಬಿಜೆಪಿಯೇನೋ ದ್ರೋಹ ಮಾಡಿತು; ಆದರೆ ಕಾಂಗ್ರೆಸ್ಸೇಕೆ ಕೈ ಬಿಟ್ಟಿತು? ಸದ್ದು…. ಈ ಸುದ್ದಿಗಳೇನಾದವು? – 09 ನೇ ಸಂಚಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...