HomeUncategorizedಆತ್ಮನಿರ್ಭರ ಭಾರತ ಯೋಜನೆ: ಎರಡನೇ ಹಂತದ ವಿವರಣೆಯ ಮುಖ್ಯಾಂಶಗಳು

ಆತ್ಮನಿರ್ಭರ ಭಾರತ ಯೋಜನೆ: ಎರಡನೇ ಹಂತದ ವಿವರಣೆಯ ಮುಖ್ಯಾಂಶಗಳು

ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು, ಸ್ವಯಂ ಉದ್ಯೋಗಿ ಮತ್ತು ಸಣ್ಣ ರೈತರ ಮೇಲೆ ಇಂದಿನ ಉಪಕ್ರಮಗಳು ಕೇಂದ್ರೀಕರಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

- Advertisement -
- Advertisement -

ಪ್ರಧಾನಿ ಮೋದಿ ಘೋಷಿಸಿದ್ದ ಕೊರೊನಾ ವಿಶೇಷ ಪ್ಯಾಕೇಜ್ ಇದರ ಇನ್ನಷ್ಟು ವಿವರಗಳನ್ನು ಕೇಂದ್ರ ಹಣಕಾಸು ಮಂತ್ರಿ ನಿರ್ಮಲ ಸೀತಾರಾಮನ್ ನೀಡಿದ್ದಾರೆ. ಅವರು ನಿನ್ನೆಯಷ್ಟೇ ವಿವಿಧ ವಿಭಾಗಗಳಿಗೆ ಎಷ್ಟು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದರಾದರೂ, ಮುಂದಿನ ದಿನಗಳಲ್ಲೂ ಇದರ ಬಗೆಗಿನ ಮಾಹಿತಿಯನ್ನು ನೀಡಲು ನಮ್ಮ ತಂಡ ಪತ್ರಿಕಾಗೋಷ್ಠಿ ನಡೆಸಲಿದೆ ಎಂದು ಹೇಳಿದ್ದರು.

ಪತ್ರಿಕಾಗೋಷ್ಟಿಯ ಆರಂಭದಲ್ಲಿಯೆ ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು, ಸ್ವಯಂ ಉದ್ಯೋಗಿ ಮತ್ತು ಸಣ್ಣ ರೈತರ ಮೇಲೆ ಇಂದಿನ ಉಪಕ್ರಮಗಳು ಕೇಂದ್ರೀಕರಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಭಾಷಣದ ಮುಖ್ಯಾಂಶಗಳು:

ಬೆಲೆಯ ಮೇಲಿನ ಸಾಲದ ಬಡ್ಡಿ ಪಾವತಿ ಹಾಗೂ ತ್ವರಿತ ಮರುಪಾವತಿಯನ್ನು ಮೇ 31 ಕ್ಕೆ ವಿಸ್ತರಣೆ.

ವಲಸಿಗ ಕಾರ್ಮಿಕರಿಗೆ ಆಶ್ರಯ ಕಲ್ಪಿಸಲು ಹಾಗೂ ಅವರಿಗೆ ಆಹಾರ ಮತ್ತು ನೀರು ಇತ್ಯಾದಿಗಳನ್ನು ಒದಗಿಸಲು ’ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ’ ಬಳಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಅನುಮತಿ.

ಕೊರೊನಾ ಅವಧಿಯಲ್ಲಿ 12,000 ಸ್ವ-ಸಹಾಯ ಗುಂಪುಗಳು 3 ಕೋಟಿಗೂ ಹೆಚ್ಚು ಮಾಸ್ಕ್‌ಗಳನ್ನು ಮತ್ತು 1.2 ಲಕ್ಷ ಲೀಟರ್ ಸ್ಯಾನಿಟೈಜರ್‌ಗಳನ್ನು ಉತ್ಪಾದಿಸಿವೆ. ಕಳೆದ ಎರಡು ತಿಂಗಳಲ್ಲಿ ನಗರ ಬಡವರಿಗಾಗಿ 7,200 ಹೊಸ ಸ್ವಸಹಾಯ ಸಂಘಗಳನ್ನು ರಚನೆ.

ಮುಂದಿನ 2 ತಿಂಗಳವರೆಗೆ ಎಲ್ಲಾ ವಲಸಿಗರಿಗೆ ಉಚಿತ ಆಹಾರ ಧಾನ್ಯಗಳು ಸರಬರಾಜು. ಇದರ ಉಪಯೋಗ ಕಾರ್ಡ್ ರಹಿತರಿಗೂ ಸಿಗಲಿದ್ದು, ಒಬ್ಬ ವ್ಯಕ್ತಿಗೆ 5 ಕೆಜಿ ಗೋಧಿ / ಅಕ್ಕಿ ಮತ್ತು ಕುಟುಂಬಕ್ಕೆ 1 ಕೆಜಿ ಬೇಳೆಯನ್ನು 2 ತಿಂಗಳವರೆಗೆ ನೀಡಲಾಗುತ್ತದೆ. ಇದಕ್ಕಾಗಿ 3500 ಕೋಟಿ ರೂ. ಖರ್ಚು ಆಗಲಿದ್ದು, ಇದರಿಂದ 8 ಕೋಟಿ ವಲಸಿಗರಿಗೆ ಲಾಭ.

ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಗೆ ಬರಲಿದ್ದು, 23 ರಾಜ್ಯಗಳಲ್ಲಿ 67 ಕೋಟಿ ಫಲಾನುಭವಿಗಳು ಸಾರ್ವಜನಿಕ ವಿತರಣಾ ವ್ಯವಸ್ಥೆಯ 83% ಜನಸಂಖ್ಯೆಯಷ್ಟನ್ನು ಒಳಗೊಂಡಿದೆ. ಇದು ಆಗಸ್ಟ್ 2020 ರ ವೇಳೆಗೆ ಜಾರಿಯಾಗಲಿದೆ.

ನಗರಗಳಲ್ಲಿ ಸರಕಾರದ ಅನುದಾನಿತ ವಸತಿಗಳನ್ನು ರಿಯಾಯಿತಿ ದರದಲ್ಲಿ ಕೈಗೆಟುಕುವ ಬಾಡಿಗೆ ವಸತಿ ಸಂಕೀರ್ಣಗಳಾಗಿ ಪರಿವರ್ತನೆ. ಈ ಮೂಲಕ ವಲಸೆ ಕಾರ್ಮಿಕರು ಹಾಗೂ ನಗರ ಬಡವರಿಗೆ ಕೈಗೆಟುಕುವ ಬಾಡಿಗೆ ದರದಲ್ಲಿ ವಸತಿ ಯೋಜನೆ ಪ್ರಾರಂಭ.

ಮುದ್ರಾ-ಶಿಶು ಯೋಜನೆಯ ಸಾಲ ಪಾವತಿಸುವವರಿಗೆ 12 ತಿಂಗಳ ಅವಧಿಗೆ 2% ಬಡ್ಡಿ ಸಬ್ವೆನ್ಷನ್. ಇದಕ್ಕಾಗಿ 1500 ಕೋಟಿ ರೂ.

50 ಲಕ್ಷ ಬೀದಿಬದಿ ವ್ಯಾಪಾರಿಗಳಿಗೆ ವಿಶೇಷ ಸಾಲ ಸೌಲಭ್ಯ, ಇದಕ್ಕಾಗಿ 5000 ಕೋಟಿ ರೂ.

ವಾರ್ಷಿಕ 6-18 ಲಕ್ಷ ರೂ ಆದಾಯ ಗಳಿಸುವ ಮಧ್ಯಮ ಆದಾಯದ ಗುಂಪುಗಳಿಗೆ ಕ್ರೆಡಿಟ್ ಲಿಂಕ್ಡ್ ಸಬ್ಸಿಡಿ ಸ್ಕೀಮನ್ನು ಮಾರ್ಚ್ 2021 ರವರೆಗೆ ವಿಸ್ತರಣೆ. ಇದರಿಂದ 2020-21ರ ಅವಧಿಯಲ್ಲಿ 2.5 ಲಕ್ಷ ಮಧ್ಯಮ ಆದಾಯದ ಕುಟುಂಬಗಳಿಗೆ ಲಾಭ.

ಗ್ರಾಮೀಣ ಸಹಕಾರ ಬ್ಯಾಂಕುಗಳು ಮತ್ತು ಆರ್‌ಆರ್‌ಬಿಗಳ ಬೆಳೆ ಸಾಲದ ಅವಶ್ಯಕತೆಗಾಗಿ ನಬಾರ್ಡ್‌ನಿಂದ 30,000 ಕೋಟಿ ರೂ.ಗಳ ಹೆಚ್ಚುವರಿ ಮರು ಹಣಕಾಸು ಬೆಂಬಲ.

ನಬಾರ್ಡ್ ಮೂಲಕ 30,000 ಕೋಟಿ ರೂ. ಹೆಚ್ಚುವರಿ ತುರ್ತು ಕಾರ್ಯ ಬಂಡವಾಳ ನಿಧಿ. ಇದರಿಂದಾಗಿ 3 ಕೋಟಿ ರೈತರಿಗೆ ಲಾಭ.

ಕಾಂಪೆನ್ಸೇಟರಿ ಅರಣ್ಯೀಕರಣ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ನಿಧಿಯಡಿ ಬುಡಕಟ್ಟು ಹಾಗೂ ಆದಿವಾಸಿಗಳಿಗೆ 6000 ಕೋಟಿ ರೂ.ಗಳ ಮೌಲ್ಯದ ಉದ್ಯೋಗಾವಕಾಶ.

ಕಿಸಾನ್ ಕ್ರೆಡಿಟ್ ಕಾರ್ಡ್‌ಗಳ ಮೂಲಕ 2.5 ಕೋಟಿ ರೈತರಿಗೆ 2 ಲಕ್ಷ ಕೋಟಿ ರೂ.ಗಳ ರಿಯಾಯಿತಿ ಸಾಲ ಹೆಚ್ಚಳ.


ಓದಿ: ಪ್ರಧಾನಿಯ 20 ಲಕ್ಷ ಕೋಟಿ ಪ್ಯಾಕೇಜ್: ಮೊದಲ ಕಂತಲ್ಲಿ ಕೊಡ್ತಿರೋದು ಕೇವಲ 2500 ಕೋಟಿ ಅಷ್ಟೆ!


ಬಿಜೆಪಿಯೇನೋ ದ್ರೋಹ ಮಾಡಿತು; ಆದರೆ ಕಾಂಗ್ರೆಸ್ಸೇಕೆ ಕೈ ಬಿಟ್ಟಿತು? ಸದ್ದು…. ಈ ಸುದ್ದಿಗಳೇನಾದವು? – 09 ನೇ ಸಂಚಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...