Homeದಲಿತ್ ಫೈಲ್ಸ್ಕೋಲಾರದ ದಲಿತ ಯುವಕನ ಮೇಲಿನ ದೌರ್ಜನ್ಯ: ನಿರ್ದಾಕ್ಷಿಣ್ಯ ಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ

ಕೋಲಾರದ ದಲಿತ ಯುವಕನ ಮೇಲಿನ ದೌರ್ಜನ್ಯ: ನಿರ್ದಾಕ್ಷಿಣ್ಯ ಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ

- Advertisement -
- Advertisement -

ಕೋಲಾರ ಜಿಲ್ಲೆಯ ಪೆತ್ತಾಂಡ್ಲಹಳ್ಳಿಯಲ್ಲಿ ನಡೆದ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕೆಂದು ಕೋಲಾರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ದೌರ್ಜನ್ಯ ಪೀಡಿತ ಯುವಕನ ಆತ್ಮಹತ್ಯೆಗೆ ಪ್ರಚೋದನೆ ನೀಡಿದವರು ಮತ್ತು ದೌರ್ಜನ್ಯಕ್ಕೆ ಕಾರಣರಾದ ವ್ಯಕ್ತಿಗಳನ್ನು ಕೂಲಂಕುಷ ತನಿಖೆಗೊಳಪಡಿಸಬೇಕು. ಇನ್ನೆಂದು ಇಂತಹ ಪ್ರಕರಣಗಳು ಜರುಗದಂತೆ ಕೋಲಾರ ಜಿಲ್ಲಾಡಳಿತಕ್ಕೆ ದೂರವಾಣಿ ಕರೆ ಮೂಲಕ ಆದೇಶ ನೀಡಲಾಗಿದೆ” ಎಂದಿದ್ದಾರೆ.

ಈ ಪ್ರಕರಣವನ್ನು ಗೃಹಮಂತ್ರಿ ಆರಗ ಜ್ಞಾನೇಂದ್ರರವರ ಗಮನಕ್ಕೆ ತಂದಿದ್ದೇವೆ. ಯಾವ ಕಾರಣಕ್ಕೂ ದಲಿತರ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ನವೆಂಬರ್ 30ರಂದು ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕ ಉದಯ್ ಕಿರಣ್‌ರವರ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಸವರ್ಣೀಯರು ಮರಕ್ಕೆ ಕಟ್ಟಿ ಥಳಿಸಿದ್ದರು. ಮೂರು ಬಾರಿ ಹಲ್ಲೆ ಮಾಡಿದ್ದರು. ಆ ಅವಮಾನ ತಾಳಲಾರದೆ ಉದಯ್ ಕಿರಣ್ ಆತ್ಮಹತ್ಯೆ ಮಾಡಿಕೊಂಡಿರುವ ಜಾತಿ ದೌರ್ಜನ್ಯದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿ ಗ್ರಾಮದಲ್ಲಿ ಜರುಗಿತ್ತು.

ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗಕ್ಕೆ ಸೇರಿದ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಎಂಬುವವರೆ ದೌರ್ಜನ್ಯ ನಡೆಸಿರುವ ಆರೋಪಿಗಳಾಗಿದ್ದು ಸದ್ಯಕ್ಕೆ ತಲೆ ಮರೆಸಿಕೊಂಡಿದ್ದಾರೆ. ಇವರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 341, 34, 504, 306 ಮತ್ತು 323ರ ಅಡಿಯಲ್ಇ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

ನಿನ್ನೆ ಗ್ರಾಮಕ್ಕೆ ಭೇಟಿ ನೀಡಿ ದಲಿತ ಮತ್ತು ಪ್ರಗತಿಪರ ಸಂಘಟನೆಯ ಮುಖಂಡರು ಸಭೆ ಸೇರಿ ಪೆತ್ತಾಂಡ್ಲಹಳ್ಳಿ ಬೈಕ್ ಜಾಥಾ ನಡೆಸಲು ತೀರ್ಮಾನಿಸಿದ್ದಾರೆ.

ಪೊಲೀಸರು 24 ಗಂಟೆಗಳ ಒಳಗಾಗಿ ಆರೋಪಿಗಳನ್ನು ಬಂಧಿಸಬೇಕು. ಈ ರೀತಿಯ ಘಟನೆಗಳು ನಡೆಯದಂತೆ ತಡೆಯಬೇಕು. ಸಂತ್ರಸ್ತ ಕುಟುಂಬಕ್ಕೆ 25 ಲಕ್ಷ ಪರಿಹಾರ, ಮನೆ ಮತ್ತು ಸರ್ಕಾರಿ ಉದ್ಯೋಗ ನೀಡಬೇಕು. ಈ ಬೇಡಿಕೆಗಳ ಈಡೇರಿಕೆಗಾಗಿ ಮುಳಬಾಗಿಲಿನಿಂದ ಪೆತ್ತಾಂಡ್ಲಹಳ್ಳಿಗೆ ಬೈಕ್ ಜಾಥ ನಡೆಸಲಾಗುವುದು. ಆರೋಪಿಗಳ ಮನೆ ಎದುರೆ ಸ್ವಾಭಿಮಾನಿ ಸಮಾವೇಶ ನಡೆಸಲಾಗುವುದು. ಪೆತ್ತಾಂಡ್ಲಹಳ್ಳಿ ಜಾಥಾದ ದಿನಾಂಕವನ್ನು ಡಿಸೆಂಬರ್ 6 ರ ಅಂಬೇಡ್ಕರ್ ಪರಿನಿರ್ವಾಣ ದಿನದಂದು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

“ಇದು ಆತ್ಮಹತ್ಯೆ ಎನ್ನುವುದಕ್ಕಿಂತ ಕೊಲೆ ಎಂದು ಕರೆಯಬೇಕಾಗಿದೆ. ಈ ಪ್ರಕರಣದಲ್ಲಿ ಮೇಲ್ನೋಟಕ್ಕೆ ಪೊಲೀಸ್ ವೈಫಲ್ಯ ಎದ್ದು ಕಾಣುತ್ತಿದೆ. ಘಟನೆ ನಡೆದು ಎರಡು ದಿನಗಳಾದರೂ ಆರೋಪಿಗಳ ಬಂಧನವಾಗಿಲ್ಲ. ಕೋಲಾರ ಜಿಲ್ಲೆಯಲ್ಲಿನ ಜನಪ್ರತಿನಿಧಿಗಳು ಪ್ರಕರಣವನ್ನು ಖಂಡಿಸಿಲ್ಲ. ಮೂರು ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕರು, ಜಿಲ್ಲೆಯ ದಲಿತ ಸಂಸದರು ಬಾಯಿ ಮುಚ್ಚಿ ಕುಳಿತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಕೋಲಾರದ ದಲಿತ ಯುವಕನ ಮೇಲಿನ ಹಲ್ಲೆ ಖಂಡಿಸಿ ಪೆತ್ತಾಂಡ್ಲಹಳ್ಳಿ ಚಲೋಗೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...