Homeಕರ್ನಾಟಕಎಸ್‌ಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಕುಟುಂಬ; ಸಚಿವ ಆನಂದ್‌ ಸಿಂಗ್ ವಿರುದ್ಧ ಅಟ್ರಾಸಿಟಿ...

ಎಸ್‌ಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಕುಟುಂಬ; ಸಚಿವ ಆನಂದ್‌ ಸಿಂಗ್ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

ಸಚಿವ ಆನಂದ್‌ ಸಿಂಗ್‌ ಹಾಗೂ ಇತರರು ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

- Advertisement -
- Advertisement -

ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹಾಗೂ ಇತರರು ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ಆನಂದ್ ಸಿಂಗ್ ಹಾಗೂ ಇತರ ಮೂವರ ಮೇಲೆ ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಆನಂದ್‌ ಸಿಂಗ್‌ ಸೇರಿ 4 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹಾಗೂ ಇತರೆ ಮೂವರ ವಿರುದ್ಧ ವಿಜಯನಗರ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಸಾಮಾಜಿಕ ಕಾರ್ಯಕರ್ತ ಡಿ. ಪೋಲಪ್ಪ ಎಂಬವರು ಕೊಟ್ಟ ದೂರಿನ ಮೇರೆಗೆ ಐ.ಪಿ.ಸಿ. ಸೆಕ್ಷೆನ್‌ 504, 506ರ ಅಡಿ ಎಸ್ಸಿ/ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಆನಂದ್‌ ಸಿಂಗ್‌, ಮರಿಯಪ್ಪ, ಹನುಮಂತಪ್ಪ ಹಾಗೂ ಹುಲುಗಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ ತಿಳಿಸಿದ್ದಾರೆ.

‘ಪೆಟ್ರೋಲ್‌ ಹಾಕಿ ಸುಟ್ಟು ಹಾಕುತ್ತೇನೆ’ ಎಂದು ಸಚಿವ ಆನಂದ್‌ ಸಿಂಗ್‌ ಅವರು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪೋಲಪ್ಪ ಅವರು, ಅವರ ಕುಟುಂಬದ ಒಂಬತ್ತು ಜನ ಸದಸ್ಯರೊಂದಿಗೆ ಮಂಗಳವಾರ ಸಂಜೆ ನಗರದ ಎಸ್ಪಿ ಕಚೇರಿ ಎದುರು ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಅವರನ್ನು ತಡೆದು, ಆಸ್ಪತ್ರೆಗೆ ಕಳುಹಿಸಿದ್ದಾರೆ.

ಹೊಸಪೇಟೆ ನಗರದ ಹಂಪಿ ರಸ್ತೆಯಲ್ಲಿರುವ 6ನೇ ವಾರ್ಡಿನಲ್ಲಿರುವ ಸುಣ್ಣದ ಬಟ್ಟೆ ಪ್ರದೇಶದಲ್ಲಿ ಪೊಲಯ್ಯ ಅವರ ಕುಟುಂಬ ಹಲವು ವರ್ಷಗಳಿಂದ ವಾಸವಿದೆ. ಆದರೆ ಇತ್ತೀಚೆಗೆ ಅಲ್ಲಿಗೆ ಭೇಟಿ ನೀಡಿದ ಸಚಿವರು, ನೀವು ಕಟ್ಟಿರುವ ಮನೆ ಅಕ್ರಮವಾಗಿದೆ. ಇದು ಸರ್ಕಾರಿ ಜಾಗ. ಈ ಜಾಗವನ್ನು ನಗರಸಭೆ ವಶಕ್ಕೆ ಪಡೆಯುತ್ತಿದ್ದು, ಈ ಕೂಡಲೇ ಮನೆ ಖಾಲಿ ಮಾಡುವಂತೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಸಾಮಾಜಿಕ ಕಾರ್ಯಕರ್ತ ಪೋಲಯ್ಯ, “ಈ ಜಾಗ ಸರ್ಕಾರದ್ದಲ್ಲ. ವಿರಕ್ತ ಮಠದ ಮಲ್ಲಿಕಾರ್ಜುನ ಸ್ವಾಮೀಜಿಯವರದ್ದು. ಸುಮಾರು ಎಂಬತ್ತು ವರ್ಷಗಳ ಕೆಳಗೆ ವಿಲ್ ಮೂಲಕ ನನ್ನ ಹೆಂಡತಿಯ ತಾತನಾದ ಗುರುನಾಥಪ್ಪ ಅವರಿಗೆ ಬರೆದುಕೊಟ್ಟಿದ್ದಾರೆ. ನಾಲ್ಕು ತಲೆಮಾರಿನಿಂದ ಈ ಆಸ್ತಿಯನ್ನು ನಿರ್ವವಣೆ ಮಾಡಲಾಗುತ್ತಿದೆ. ನೋಂದಣಿಯಾದ ವಿಲ್‌ ಪ್ರಕಾರ ನಮ್ಮ ಒಡೆತನದಲ್ಲಿ ಜಾಗವಿದೆ. ಸರ್ಕಾರಕ್ಕಾಗಲೀ, ಆನಂದ್‌ಸಿಂಗ್‌ಗಾಗಲೀ ಯಾವುದೇ ರೀತಿಯ ಸಂಬಂಧವಿಲ್ಲ” ಎಂದಿದ್ದಾರೆ.

ಆನಂದ್‌ ಸಿಂಗ್‌ ಅವರ ವೈಷಮ್ಯಕ್ಕೆ ಕಾರಣವನ್ನು ತಿಳಿಸಿದ ಅವರು, “ಆನಂದ್ ಸಿಂಗ್ ಅವರ ಮನೆ ಸರ್ಕಾರಿ ಜಾಗದಲ್ಲಿದೆ ಎಂದು ಆರು ತಿಂಗಳ ಹಿಂದೆ ನಾವು ಆರೋಪ ಮಾಡಿದ್ದೆವು. ಅದಕ್ಕೆ ಸಂಬಂಧಪಟ್ಟ ದಾಖಲಾತಿಗಳನ್ನು, ದೂರುಗಳನ್ನು ಬಿಡುಗಡೆ ಮಾಡಿದ್ದೆವು. ದೂರು ನೀಡಿದ ಬಳಿಕ ನನ್ನ ಮೇಲೆ ದ್ವೇಷ ಸಾಧಿಸುತ್ತಿರುವ ಆನಂದ್‌ ಸಿಂಗ್ ನಿರಂತರ ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ದೂರು ನೀಡಿದ ಎರಡು ದಿನಗಳ ಬಳಿಕ ಆನಂದ್ ಸಿಂಗ್ ಹಾಗೂ ಹನುಮಂತಪ್ಪ ಅನ್ನುವವರು ನಮ್ಮ ಮನೆಗೆ ಬಂದಿದ್ದರು. ನನ್ನ ವಿರುದ್ಧವೇ ದೂರು ನೀಡುವಷ್ಟು ದೊಡ್ಡವನಿದ್ದೀಯಾ? ವಾಪಸ್ ತೆಗೆದುಕೋ, ಇಲ್ಲವಾದರೆ ಪರಿಣಾಮ ಗಂಭೀರವಾಗಿರುತ್ತದೆ ಎಂದು ಆನಂದ್ ಸಿಂಗ್‌ ಬೆದರಿಕೆ ಹಾಕಿದರು” ಎಂದು ತಿಳಿಸಿದ್ದಾರೆ.

“ಇದರಲ್ಲಿ ಸ್ವಾರ್ಥವೇನೂ ಇಲ್ಲ. ಸರ್ಕಾರಿ ಆಸ್ತಿ ಕಬಳಿಸಿದ್ದೀರಿ. ಅದನ್ನು ಸರ್ಕಾರಕ್ಕೆ ಮರಳಿಸಿದರೆ ನಮ್ಮದೇನೂ ತಕರಾರು ಇರುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದೆ. ಇಷ್ಟೆಲ್ಲ ಮಾತನಾಡುವಷ್ಟು ದೊಡ್ಡವನಾಗಿದ್ದೀಯ. ನಿನಗೆ ಮಾಡಬೇಕಾದದ್ದು ಬೇರೆಯೇ ಇದೆ ಎಂದರು. ಸಾಮಾಜಿಕ ಹೋರಾಟಗಾರರಿಗೆ ಇದೆಲ್ಲ ಸಾಮಾನ್ಯ ಎಂದು ಸುಮ್ಮನೇ ಇದ್ದೆ” ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿರಿ: ಮುರುಘಾ ಶರಣರ ಪರ ಮಾತನಾಡುವ ಮಾದಾರ ಚೆನ್ನಯ್ಯ ಸ್ವಾಮೀಜಿಗೆ ಬಹಿರಂಗ ಪತ್ರ

“ಮತ್ತೆ ಮೂರು ತಿಂಗಳ ಬಳಿಕ ಸಚಿವರು ಹಾಗೂ ಹನುಮಂತಪ್ಪ ನಮ್ಮ ಮನೆಗೆ ಬಂದರು. ದೂರು ವಾಪಸ್ ಪಡೆದು, ನಾನು ಮಾಡಿದ ಆರೋಪ ಸುಳ್ಳು ಎಂದು ಪ್ರೆಸ್ ಮೀಟ್ ಮಾಡು ಎಂದು ಸೂಚಿಸಿದರು. ನಾನು ಪಟ್ಟು ಬದಲಿಸಲಿಲ್ಲ. ನೀವು ಹಗರಣ ಮಾಡಿರುವುದು ನಿಜವಿದೆ. ಈ ಆಸ್ತಿ ನಿಮ್ಮದೇ ಅನ್ನಲು ದಾಖಲಾತಿ ಇದ್ದರೆ ಸರ್ಕಾರಕ್ಕೆ ಕೊಡಿ. ಸಂಬಂಧಪಟ್ಟ ಇಲಾಖೆಗೆ ಸಲ್ಲಿಸಿ ಎಂದೆ. ನಿನಗೆ ಒಳ್ಳೆಯ ಮಾತಿನಲ್ಲಿ ಹೇಳಿದರೆ ಗೊತ್ತಾಗಲ್ಲ. ಮುಂದೆ ಐತೆ ಎಂದು ಬೆದರಿಕೆ ಹಾಕಿದರು” ಎಂದು ಪೋಲಯ್ಯ ಆರೋಪಿಸಿದ್ದಾರೆ.

“ನಿನ್ನೆ ಮಧ್ಯಾಹ್ನ ಸಚಿವ ಆನಂದ್ ಸಿಂಗ್ ಹಾಗೂ ಅವರ ಸಹಚರರು ಬಂದು ನಮ್ಮನ್ನು ಮನೆಯಿಂದ ಹೊರಗೆ ಕರೆದರು. ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದರು” ಎಂದು ಪೋಲಯ್ಯ ದೂರಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಆನಂದ್ ಸಿಂಗ್‌, “ಜಾತಿ ನಿಂದನೆ ಮಾಡಿಲ್ಲ. ಜಾಗದ ವಿಚಾರದಲ್ಲಿ ಮಡಿವಾಳ ಸಮಾಜ ಹಾಗೂ ಪೋಲಪ್ಪ ಕುಟುಂಬದ ಮಧ್ಯೆ ಕಾನೂನು ಹೋರಾಟ ನಡೆಯುತ್ತಿದ್ದು, ಮಡಿವಾಳ ಸಮಾಜದ ಎಲ್ಲ ಹಿರಿಯರು ಬಂದು ನನ್ನನ್ನು ಭೇಟಿ ಆಗಿದ್ದರು. ಮಡಿವಾಳ ಸಮಾಜ ನಮ್ಮ ಜಾಗ ಅಂತಿದ್ದಾರೆ. ಪೋಲಪ್ಪ ಅವರು ನಮ್ಮದು ಅಂತಿದ್ದಾರೆ. ಈ ವಿಚಾರವಾಗಿ ನಾಲ್ಕು ತಿಂಗಳ ಹಿಂದೆ ಕರೆದು ಸಂಧಾನ ಮಾಡಿದ್ದೆ” ಎದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜನಸಾಮಾನ್ಯರ ತೆರಿಗೆಯಿಂದ ಬದುಕುವ ಸಚಿವರುಗಳು ಪಾಪದ ಬಡಪಾಯಿಗಳ ಮೇಲೆ ಸವಾರಿ ಮಾಡುವುದು ಎಷ್ಟು ಸರಿ….? ಈ ಸರಕಾರದಲ್ಲಿ ದಲಿತರು ಹಿಂದುಳಿದ ವರ್ಗದವರಿಗೆ ರಕ್ಷಣೆಯೇ ಇಲ್ಲದಂತಾಗಿದೆಯಲ್ಲ…ಕೇಸು ದಾಖಲಾದರೂ ಈ ಕುಟುಂಬಗಳಿಗೆ ಭದ್ರತೆ ಇದೆನ್ನಲಾಗುವುದೇ….?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...