Homeಕರ್ನಾಟಕಎಸ್‌ಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಕುಟುಂಬ; ಸಚಿವ ಆನಂದ್‌ ಸಿಂಗ್ ವಿರುದ್ಧ ಅಟ್ರಾಸಿಟಿ...

ಎಸ್‌ಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಕುಟುಂಬ; ಸಚಿವ ಆನಂದ್‌ ಸಿಂಗ್ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

ಸಚಿವ ಆನಂದ್‌ ಸಿಂಗ್‌ ಹಾಗೂ ಇತರರು ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

- Advertisement -
- Advertisement -

ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹಾಗೂ ಇತರರು ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ಆನಂದ್ ಸಿಂಗ್ ಹಾಗೂ ಇತರ ಮೂವರ ಮೇಲೆ ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಆನಂದ್‌ ಸಿಂಗ್‌ ಸೇರಿ 4 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹಾಗೂ ಇತರೆ ಮೂವರ ವಿರುದ್ಧ ವಿಜಯನಗರ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಸಾಮಾಜಿಕ ಕಾರ್ಯಕರ್ತ ಡಿ. ಪೋಲಪ್ಪ ಎಂಬವರು ಕೊಟ್ಟ ದೂರಿನ ಮೇರೆಗೆ ಐ.ಪಿ.ಸಿ. ಸೆಕ್ಷೆನ್‌ 504, 506ರ ಅಡಿ ಎಸ್ಸಿ/ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಆನಂದ್‌ ಸಿಂಗ್‌, ಮರಿಯಪ್ಪ, ಹನುಮಂತಪ್ಪ ಹಾಗೂ ಹುಲುಗಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ ತಿಳಿಸಿದ್ದಾರೆ.

‘ಪೆಟ್ರೋಲ್‌ ಹಾಕಿ ಸುಟ್ಟು ಹಾಕುತ್ತೇನೆ’ ಎಂದು ಸಚಿವ ಆನಂದ್‌ ಸಿಂಗ್‌ ಅವರು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪೋಲಪ್ಪ ಅವರು, ಅವರ ಕುಟುಂಬದ ಒಂಬತ್ತು ಜನ ಸದಸ್ಯರೊಂದಿಗೆ ಮಂಗಳವಾರ ಸಂಜೆ ನಗರದ ಎಸ್ಪಿ ಕಚೇರಿ ಎದುರು ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಅವರನ್ನು ತಡೆದು, ಆಸ್ಪತ್ರೆಗೆ ಕಳುಹಿಸಿದ್ದಾರೆ.

ಹೊಸಪೇಟೆ ನಗರದ ಹಂಪಿ ರಸ್ತೆಯಲ್ಲಿರುವ 6ನೇ ವಾರ್ಡಿನಲ್ಲಿರುವ ಸುಣ್ಣದ ಬಟ್ಟೆ ಪ್ರದೇಶದಲ್ಲಿ ಪೊಲಯ್ಯ ಅವರ ಕುಟುಂಬ ಹಲವು ವರ್ಷಗಳಿಂದ ವಾಸವಿದೆ. ಆದರೆ ಇತ್ತೀಚೆಗೆ ಅಲ್ಲಿಗೆ ಭೇಟಿ ನೀಡಿದ ಸಚಿವರು, ನೀವು ಕಟ್ಟಿರುವ ಮನೆ ಅಕ್ರಮವಾಗಿದೆ. ಇದು ಸರ್ಕಾರಿ ಜಾಗ. ಈ ಜಾಗವನ್ನು ನಗರಸಭೆ ವಶಕ್ಕೆ ಪಡೆಯುತ್ತಿದ್ದು, ಈ ಕೂಡಲೇ ಮನೆ ಖಾಲಿ ಮಾಡುವಂತೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಸಾಮಾಜಿಕ ಕಾರ್ಯಕರ್ತ ಪೋಲಯ್ಯ, “ಈ ಜಾಗ ಸರ್ಕಾರದ್ದಲ್ಲ. ವಿರಕ್ತ ಮಠದ ಮಲ್ಲಿಕಾರ್ಜುನ ಸ್ವಾಮೀಜಿಯವರದ್ದು. ಸುಮಾರು ಎಂಬತ್ತು ವರ್ಷಗಳ ಕೆಳಗೆ ವಿಲ್ ಮೂಲಕ ನನ್ನ ಹೆಂಡತಿಯ ತಾತನಾದ ಗುರುನಾಥಪ್ಪ ಅವರಿಗೆ ಬರೆದುಕೊಟ್ಟಿದ್ದಾರೆ. ನಾಲ್ಕು ತಲೆಮಾರಿನಿಂದ ಈ ಆಸ್ತಿಯನ್ನು ನಿರ್ವವಣೆ ಮಾಡಲಾಗುತ್ತಿದೆ. ನೋಂದಣಿಯಾದ ವಿಲ್‌ ಪ್ರಕಾರ ನಮ್ಮ ಒಡೆತನದಲ್ಲಿ ಜಾಗವಿದೆ. ಸರ್ಕಾರಕ್ಕಾಗಲೀ, ಆನಂದ್‌ಸಿಂಗ್‌ಗಾಗಲೀ ಯಾವುದೇ ರೀತಿಯ ಸಂಬಂಧವಿಲ್ಲ” ಎಂದಿದ್ದಾರೆ.

ಆನಂದ್‌ ಸಿಂಗ್‌ ಅವರ ವೈಷಮ್ಯಕ್ಕೆ ಕಾರಣವನ್ನು ತಿಳಿಸಿದ ಅವರು, “ಆನಂದ್ ಸಿಂಗ್ ಅವರ ಮನೆ ಸರ್ಕಾರಿ ಜಾಗದಲ್ಲಿದೆ ಎಂದು ಆರು ತಿಂಗಳ ಹಿಂದೆ ನಾವು ಆರೋಪ ಮಾಡಿದ್ದೆವು. ಅದಕ್ಕೆ ಸಂಬಂಧಪಟ್ಟ ದಾಖಲಾತಿಗಳನ್ನು, ದೂರುಗಳನ್ನು ಬಿಡುಗಡೆ ಮಾಡಿದ್ದೆವು. ದೂರು ನೀಡಿದ ಬಳಿಕ ನನ್ನ ಮೇಲೆ ದ್ವೇಷ ಸಾಧಿಸುತ್ತಿರುವ ಆನಂದ್‌ ಸಿಂಗ್ ನಿರಂತರ ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ದೂರು ನೀಡಿದ ಎರಡು ದಿನಗಳ ಬಳಿಕ ಆನಂದ್ ಸಿಂಗ್ ಹಾಗೂ ಹನುಮಂತಪ್ಪ ಅನ್ನುವವರು ನಮ್ಮ ಮನೆಗೆ ಬಂದಿದ್ದರು. ನನ್ನ ವಿರುದ್ಧವೇ ದೂರು ನೀಡುವಷ್ಟು ದೊಡ್ಡವನಿದ್ದೀಯಾ? ವಾಪಸ್ ತೆಗೆದುಕೋ, ಇಲ್ಲವಾದರೆ ಪರಿಣಾಮ ಗಂಭೀರವಾಗಿರುತ್ತದೆ ಎಂದು ಆನಂದ್ ಸಿಂಗ್‌ ಬೆದರಿಕೆ ಹಾಕಿದರು” ಎಂದು ತಿಳಿಸಿದ್ದಾರೆ.

“ಇದರಲ್ಲಿ ಸ್ವಾರ್ಥವೇನೂ ಇಲ್ಲ. ಸರ್ಕಾರಿ ಆಸ್ತಿ ಕಬಳಿಸಿದ್ದೀರಿ. ಅದನ್ನು ಸರ್ಕಾರಕ್ಕೆ ಮರಳಿಸಿದರೆ ನಮ್ಮದೇನೂ ತಕರಾರು ಇರುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದೆ. ಇಷ್ಟೆಲ್ಲ ಮಾತನಾಡುವಷ್ಟು ದೊಡ್ಡವನಾಗಿದ್ದೀಯ. ನಿನಗೆ ಮಾಡಬೇಕಾದದ್ದು ಬೇರೆಯೇ ಇದೆ ಎಂದರು. ಸಾಮಾಜಿಕ ಹೋರಾಟಗಾರರಿಗೆ ಇದೆಲ್ಲ ಸಾಮಾನ್ಯ ಎಂದು ಸುಮ್ಮನೇ ಇದ್ದೆ” ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿರಿ: ಮುರುಘಾ ಶರಣರ ಪರ ಮಾತನಾಡುವ ಮಾದಾರ ಚೆನ್ನಯ್ಯ ಸ್ವಾಮೀಜಿಗೆ ಬಹಿರಂಗ ಪತ್ರ

“ಮತ್ತೆ ಮೂರು ತಿಂಗಳ ಬಳಿಕ ಸಚಿವರು ಹಾಗೂ ಹನುಮಂತಪ್ಪ ನಮ್ಮ ಮನೆಗೆ ಬಂದರು. ದೂರು ವಾಪಸ್ ಪಡೆದು, ನಾನು ಮಾಡಿದ ಆರೋಪ ಸುಳ್ಳು ಎಂದು ಪ್ರೆಸ್ ಮೀಟ್ ಮಾಡು ಎಂದು ಸೂಚಿಸಿದರು. ನಾನು ಪಟ್ಟು ಬದಲಿಸಲಿಲ್ಲ. ನೀವು ಹಗರಣ ಮಾಡಿರುವುದು ನಿಜವಿದೆ. ಈ ಆಸ್ತಿ ನಿಮ್ಮದೇ ಅನ್ನಲು ದಾಖಲಾತಿ ಇದ್ದರೆ ಸರ್ಕಾರಕ್ಕೆ ಕೊಡಿ. ಸಂಬಂಧಪಟ್ಟ ಇಲಾಖೆಗೆ ಸಲ್ಲಿಸಿ ಎಂದೆ. ನಿನಗೆ ಒಳ್ಳೆಯ ಮಾತಿನಲ್ಲಿ ಹೇಳಿದರೆ ಗೊತ್ತಾಗಲ್ಲ. ಮುಂದೆ ಐತೆ ಎಂದು ಬೆದರಿಕೆ ಹಾಕಿದರು” ಎಂದು ಪೋಲಯ್ಯ ಆರೋಪಿಸಿದ್ದಾರೆ.

“ನಿನ್ನೆ ಮಧ್ಯಾಹ್ನ ಸಚಿವ ಆನಂದ್ ಸಿಂಗ್ ಹಾಗೂ ಅವರ ಸಹಚರರು ಬಂದು ನಮ್ಮನ್ನು ಮನೆಯಿಂದ ಹೊರಗೆ ಕರೆದರು. ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದರು” ಎಂದು ಪೋಲಯ್ಯ ದೂರಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಆನಂದ್ ಸಿಂಗ್‌, “ಜಾತಿ ನಿಂದನೆ ಮಾಡಿಲ್ಲ. ಜಾಗದ ವಿಚಾರದಲ್ಲಿ ಮಡಿವಾಳ ಸಮಾಜ ಹಾಗೂ ಪೋಲಪ್ಪ ಕುಟುಂಬದ ಮಧ್ಯೆ ಕಾನೂನು ಹೋರಾಟ ನಡೆಯುತ್ತಿದ್ದು, ಮಡಿವಾಳ ಸಮಾಜದ ಎಲ್ಲ ಹಿರಿಯರು ಬಂದು ನನ್ನನ್ನು ಭೇಟಿ ಆಗಿದ್ದರು. ಮಡಿವಾಳ ಸಮಾಜ ನಮ್ಮ ಜಾಗ ಅಂತಿದ್ದಾರೆ. ಪೋಲಪ್ಪ ಅವರು ನಮ್ಮದು ಅಂತಿದ್ದಾರೆ. ಈ ವಿಚಾರವಾಗಿ ನಾಲ್ಕು ತಿಂಗಳ ಹಿಂದೆ ಕರೆದು ಸಂಧಾನ ಮಾಡಿದ್ದೆ” ಎದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜನಸಾಮಾನ್ಯರ ತೆರಿಗೆಯಿಂದ ಬದುಕುವ ಸಚಿವರುಗಳು ಪಾಪದ ಬಡಪಾಯಿಗಳ ಮೇಲೆ ಸವಾರಿ ಮಾಡುವುದು ಎಷ್ಟು ಸರಿ….? ಈ ಸರಕಾರದಲ್ಲಿ ದಲಿತರು ಹಿಂದುಳಿದ ವರ್ಗದವರಿಗೆ ರಕ್ಷಣೆಯೇ ಇಲ್ಲದಂತಾಗಿದೆಯಲ್ಲ…ಕೇಸು ದಾಖಲಾದರೂ ಈ ಕುಟುಂಬಗಳಿಗೆ ಭದ್ರತೆ ಇದೆನ್ನಲಾಗುವುದೇ….?

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...