Homeಕರ್ನಾಟಕಎಸ್‌ಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಕುಟುಂಬ; ಸಚಿವ ಆನಂದ್‌ ಸಿಂಗ್ ವಿರುದ್ಧ ಅಟ್ರಾಸಿಟಿ...

ಎಸ್‌ಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಕುಟುಂಬ; ಸಚಿವ ಆನಂದ್‌ ಸಿಂಗ್ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

ಸಚಿವ ಆನಂದ್‌ ಸಿಂಗ್‌ ಹಾಗೂ ಇತರರು ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

- Advertisement -
- Advertisement -

ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹಾಗೂ ಇತರರು ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ಆನಂದ್ ಸಿಂಗ್ ಹಾಗೂ ಇತರ ಮೂವರ ಮೇಲೆ ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಆನಂದ್‌ ಸಿಂಗ್‌ ಸೇರಿ 4 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹಾಗೂ ಇತರೆ ಮೂವರ ವಿರುದ್ಧ ವಿಜಯನಗರ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಸಾಮಾಜಿಕ ಕಾರ್ಯಕರ್ತ ಡಿ. ಪೋಲಪ್ಪ ಎಂಬವರು ಕೊಟ್ಟ ದೂರಿನ ಮೇರೆಗೆ ಐ.ಪಿ.ಸಿ. ಸೆಕ್ಷೆನ್‌ 504, 506ರ ಅಡಿ ಎಸ್ಸಿ/ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಆನಂದ್‌ ಸಿಂಗ್‌, ಮರಿಯಪ್ಪ, ಹನುಮಂತಪ್ಪ ಹಾಗೂ ಹುಲುಗಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ ತಿಳಿಸಿದ್ದಾರೆ.

‘ಪೆಟ್ರೋಲ್‌ ಹಾಕಿ ಸುಟ್ಟು ಹಾಕುತ್ತೇನೆ’ ಎಂದು ಸಚಿವ ಆನಂದ್‌ ಸಿಂಗ್‌ ಅವರು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪೋಲಪ್ಪ ಅವರು, ಅವರ ಕುಟುಂಬದ ಒಂಬತ್ತು ಜನ ಸದಸ್ಯರೊಂದಿಗೆ ಮಂಗಳವಾರ ಸಂಜೆ ನಗರದ ಎಸ್ಪಿ ಕಚೇರಿ ಎದುರು ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಅವರನ್ನು ತಡೆದು, ಆಸ್ಪತ್ರೆಗೆ ಕಳುಹಿಸಿದ್ದಾರೆ.

ಹೊಸಪೇಟೆ ನಗರದ ಹಂಪಿ ರಸ್ತೆಯಲ್ಲಿರುವ 6ನೇ ವಾರ್ಡಿನಲ್ಲಿರುವ ಸುಣ್ಣದ ಬಟ್ಟೆ ಪ್ರದೇಶದಲ್ಲಿ ಪೊಲಯ್ಯ ಅವರ ಕುಟುಂಬ ಹಲವು ವರ್ಷಗಳಿಂದ ವಾಸವಿದೆ. ಆದರೆ ಇತ್ತೀಚೆಗೆ ಅಲ್ಲಿಗೆ ಭೇಟಿ ನೀಡಿದ ಸಚಿವರು, ನೀವು ಕಟ್ಟಿರುವ ಮನೆ ಅಕ್ರಮವಾಗಿದೆ. ಇದು ಸರ್ಕಾರಿ ಜಾಗ. ಈ ಜಾಗವನ್ನು ನಗರಸಭೆ ವಶಕ್ಕೆ ಪಡೆಯುತ್ತಿದ್ದು, ಈ ಕೂಡಲೇ ಮನೆ ಖಾಲಿ ಮಾಡುವಂತೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಸಾಮಾಜಿಕ ಕಾರ್ಯಕರ್ತ ಪೋಲಯ್ಯ, “ಈ ಜಾಗ ಸರ್ಕಾರದ್ದಲ್ಲ. ವಿರಕ್ತ ಮಠದ ಮಲ್ಲಿಕಾರ್ಜುನ ಸ್ವಾಮೀಜಿಯವರದ್ದು. ಸುಮಾರು ಎಂಬತ್ತು ವರ್ಷಗಳ ಕೆಳಗೆ ವಿಲ್ ಮೂಲಕ ನನ್ನ ಹೆಂಡತಿಯ ತಾತನಾದ ಗುರುನಾಥಪ್ಪ ಅವರಿಗೆ ಬರೆದುಕೊಟ್ಟಿದ್ದಾರೆ. ನಾಲ್ಕು ತಲೆಮಾರಿನಿಂದ ಈ ಆಸ್ತಿಯನ್ನು ನಿರ್ವವಣೆ ಮಾಡಲಾಗುತ್ತಿದೆ. ನೋಂದಣಿಯಾದ ವಿಲ್‌ ಪ್ರಕಾರ ನಮ್ಮ ಒಡೆತನದಲ್ಲಿ ಜಾಗವಿದೆ. ಸರ್ಕಾರಕ್ಕಾಗಲೀ, ಆನಂದ್‌ಸಿಂಗ್‌ಗಾಗಲೀ ಯಾವುದೇ ರೀತಿಯ ಸಂಬಂಧವಿಲ್ಲ” ಎಂದಿದ್ದಾರೆ.

ಆನಂದ್‌ ಸಿಂಗ್‌ ಅವರ ವೈಷಮ್ಯಕ್ಕೆ ಕಾರಣವನ್ನು ತಿಳಿಸಿದ ಅವರು, “ಆನಂದ್ ಸಿಂಗ್ ಅವರ ಮನೆ ಸರ್ಕಾರಿ ಜಾಗದಲ್ಲಿದೆ ಎಂದು ಆರು ತಿಂಗಳ ಹಿಂದೆ ನಾವು ಆರೋಪ ಮಾಡಿದ್ದೆವು. ಅದಕ್ಕೆ ಸಂಬಂಧಪಟ್ಟ ದಾಖಲಾತಿಗಳನ್ನು, ದೂರುಗಳನ್ನು ಬಿಡುಗಡೆ ಮಾಡಿದ್ದೆವು. ದೂರು ನೀಡಿದ ಬಳಿಕ ನನ್ನ ಮೇಲೆ ದ್ವೇಷ ಸಾಧಿಸುತ್ತಿರುವ ಆನಂದ್‌ ಸಿಂಗ್ ನಿರಂತರ ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ದೂರು ನೀಡಿದ ಎರಡು ದಿನಗಳ ಬಳಿಕ ಆನಂದ್ ಸಿಂಗ್ ಹಾಗೂ ಹನುಮಂತಪ್ಪ ಅನ್ನುವವರು ನಮ್ಮ ಮನೆಗೆ ಬಂದಿದ್ದರು. ನನ್ನ ವಿರುದ್ಧವೇ ದೂರು ನೀಡುವಷ್ಟು ದೊಡ್ಡವನಿದ್ದೀಯಾ? ವಾಪಸ್ ತೆಗೆದುಕೋ, ಇಲ್ಲವಾದರೆ ಪರಿಣಾಮ ಗಂಭೀರವಾಗಿರುತ್ತದೆ ಎಂದು ಆನಂದ್ ಸಿಂಗ್‌ ಬೆದರಿಕೆ ಹಾಕಿದರು” ಎಂದು ತಿಳಿಸಿದ್ದಾರೆ.

“ಇದರಲ್ಲಿ ಸ್ವಾರ್ಥವೇನೂ ಇಲ್ಲ. ಸರ್ಕಾರಿ ಆಸ್ತಿ ಕಬಳಿಸಿದ್ದೀರಿ. ಅದನ್ನು ಸರ್ಕಾರಕ್ಕೆ ಮರಳಿಸಿದರೆ ನಮ್ಮದೇನೂ ತಕರಾರು ಇರುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದೆ. ಇಷ್ಟೆಲ್ಲ ಮಾತನಾಡುವಷ್ಟು ದೊಡ್ಡವನಾಗಿದ್ದೀಯ. ನಿನಗೆ ಮಾಡಬೇಕಾದದ್ದು ಬೇರೆಯೇ ಇದೆ ಎಂದರು. ಸಾಮಾಜಿಕ ಹೋರಾಟಗಾರರಿಗೆ ಇದೆಲ್ಲ ಸಾಮಾನ್ಯ ಎಂದು ಸುಮ್ಮನೇ ಇದ್ದೆ” ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿರಿ: ಮುರುಘಾ ಶರಣರ ಪರ ಮಾತನಾಡುವ ಮಾದಾರ ಚೆನ್ನಯ್ಯ ಸ್ವಾಮೀಜಿಗೆ ಬಹಿರಂಗ ಪತ್ರ

“ಮತ್ತೆ ಮೂರು ತಿಂಗಳ ಬಳಿಕ ಸಚಿವರು ಹಾಗೂ ಹನುಮಂತಪ್ಪ ನಮ್ಮ ಮನೆಗೆ ಬಂದರು. ದೂರು ವಾಪಸ್ ಪಡೆದು, ನಾನು ಮಾಡಿದ ಆರೋಪ ಸುಳ್ಳು ಎಂದು ಪ್ರೆಸ್ ಮೀಟ್ ಮಾಡು ಎಂದು ಸೂಚಿಸಿದರು. ನಾನು ಪಟ್ಟು ಬದಲಿಸಲಿಲ್ಲ. ನೀವು ಹಗರಣ ಮಾಡಿರುವುದು ನಿಜವಿದೆ. ಈ ಆಸ್ತಿ ನಿಮ್ಮದೇ ಅನ್ನಲು ದಾಖಲಾತಿ ಇದ್ದರೆ ಸರ್ಕಾರಕ್ಕೆ ಕೊಡಿ. ಸಂಬಂಧಪಟ್ಟ ಇಲಾಖೆಗೆ ಸಲ್ಲಿಸಿ ಎಂದೆ. ನಿನಗೆ ಒಳ್ಳೆಯ ಮಾತಿನಲ್ಲಿ ಹೇಳಿದರೆ ಗೊತ್ತಾಗಲ್ಲ. ಮುಂದೆ ಐತೆ ಎಂದು ಬೆದರಿಕೆ ಹಾಕಿದರು” ಎಂದು ಪೋಲಯ್ಯ ಆರೋಪಿಸಿದ್ದಾರೆ.

“ನಿನ್ನೆ ಮಧ್ಯಾಹ್ನ ಸಚಿವ ಆನಂದ್ ಸಿಂಗ್ ಹಾಗೂ ಅವರ ಸಹಚರರು ಬಂದು ನಮ್ಮನ್ನು ಮನೆಯಿಂದ ಹೊರಗೆ ಕರೆದರು. ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದರು” ಎಂದು ಪೋಲಯ್ಯ ದೂರಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಆನಂದ್ ಸಿಂಗ್‌, “ಜಾತಿ ನಿಂದನೆ ಮಾಡಿಲ್ಲ. ಜಾಗದ ವಿಚಾರದಲ್ಲಿ ಮಡಿವಾಳ ಸಮಾಜ ಹಾಗೂ ಪೋಲಪ್ಪ ಕುಟುಂಬದ ಮಧ್ಯೆ ಕಾನೂನು ಹೋರಾಟ ನಡೆಯುತ್ತಿದ್ದು, ಮಡಿವಾಳ ಸಮಾಜದ ಎಲ್ಲ ಹಿರಿಯರು ಬಂದು ನನ್ನನ್ನು ಭೇಟಿ ಆಗಿದ್ದರು. ಮಡಿವಾಳ ಸಮಾಜ ನಮ್ಮ ಜಾಗ ಅಂತಿದ್ದಾರೆ. ಪೋಲಪ್ಪ ಅವರು ನಮ್ಮದು ಅಂತಿದ್ದಾರೆ. ಈ ವಿಚಾರವಾಗಿ ನಾಲ್ಕು ತಿಂಗಳ ಹಿಂದೆ ಕರೆದು ಸಂಧಾನ ಮಾಡಿದ್ದೆ” ಎದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜನಸಾಮಾನ್ಯರ ತೆರಿಗೆಯಿಂದ ಬದುಕುವ ಸಚಿವರುಗಳು ಪಾಪದ ಬಡಪಾಯಿಗಳ ಮೇಲೆ ಸವಾರಿ ಮಾಡುವುದು ಎಷ್ಟು ಸರಿ….? ಈ ಸರಕಾರದಲ್ಲಿ ದಲಿತರು ಹಿಂದುಳಿದ ವರ್ಗದವರಿಗೆ ರಕ್ಷಣೆಯೇ ಇಲ್ಲದಂತಾಗಿದೆಯಲ್ಲ…ಕೇಸು ದಾಖಲಾದರೂ ಈ ಕುಟುಂಬಗಳಿಗೆ ಭದ್ರತೆ ಇದೆನ್ನಲಾಗುವುದೇ….?

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...