Homeಕರ್ನಾಟಕಎಸ್‌ಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಕುಟುಂಬ; ಸಚಿವ ಆನಂದ್‌ ಸಿಂಗ್ ವಿರುದ್ಧ ಅಟ್ರಾಸಿಟಿ...

ಎಸ್‌ಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಕುಟುಂಬ; ಸಚಿವ ಆನಂದ್‌ ಸಿಂಗ್ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

ಸಚಿವ ಆನಂದ್‌ ಸಿಂಗ್‌ ಹಾಗೂ ಇತರರು ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

- Advertisement -
- Advertisement -

ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹಾಗೂ ಇತರರು ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ಆನಂದ್ ಸಿಂಗ್ ಹಾಗೂ ಇತರ ಮೂವರ ಮೇಲೆ ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಆನಂದ್‌ ಸಿಂಗ್‌ ಸೇರಿ 4 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹಾಗೂ ಇತರೆ ಮೂವರ ವಿರುದ್ಧ ವಿಜಯನಗರ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಸಾಮಾಜಿಕ ಕಾರ್ಯಕರ್ತ ಡಿ. ಪೋಲಪ್ಪ ಎಂಬವರು ಕೊಟ್ಟ ದೂರಿನ ಮೇರೆಗೆ ಐ.ಪಿ.ಸಿ. ಸೆಕ್ಷೆನ್‌ 504, 506ರ ಅಡಿ ಎಸ್ಸಿ/ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಆನಂದ್‌ ಸಿಂಗ್‌, ಮರಿಯಪ್ಪ, ಹನುಮಂತಪ್ಪ ಹಾಗೂ ಹುಲುಗಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ ತಿಳಿಸಿದ್ದಾರೆ.

‘ಪೆಟ್ರೋಲ್‌ ಹಾಕಿ ಸುಟ್ಟು ಹಾಕುತ್ತೇನೆ’ ಎಂದು ಸಚಿವ ಆನಂದ್‌ ಸಿಂಗ್‌ ಅವರು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪೋಲಪ್ಪ ಅವರು, ಅವರ ಕುಟುಂಬದ ಒಂಬತ್ತು ಜನ ಸದಸ್ಯರೊಂದಿಗೆ ಮಂಗಳವಾರ ಸಂಜೆ ನಗರದ ಎಸ್ಪಿ ಕಚೇರಿ ಎದುರು ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಅವರನ್ನು ತಡೆದು, ಆಸ್ಪತ್ರೆಗೆ ಕಳುಹಿಸಿದ್ದಾರೆ.

ಹೊಸಪೇಟೆ ನಗರದ ಹಂಪಿ ರಸ್ತೆಯಲ್ಲಿರುವ 6ನೇ ವಾರ್ಡಿನಲ್ಲಿರುವ ಸುಣ್ಣದ ಬಟ್ಟೆ ಪ್ರದೇಶದಲ್ಲಿ ಪೊಲಯ್ಯ ಅವರ ಕುಟುಂಬ ಹಲವು ವರ್ಷಗಳಿಂದ ವಾಸವಿದೆ. ಆದರೆ ಇತ್ತೀಚೆಗೆ ಅಲ್ಲಿಗೆ ಭೇಟಿ ನೀಡಿದ ಸಚಿವರು, ನೀವು ಕಟ್ಟಿರುವ ಮನೆ ಅಕ್ರಮವಾಗಿದೆ. ಇದು ಸರ್ಕಾರಿ ಜಾಗ. ಈ ಜಾಗವನ್ನು ನಗರಸಭೆ ವಶಕ್ಕೆ ಪಡೆಯುತ್ತಿದ್ದು, ಈ ಕೂಡಲೇ ಮನೆ ಖಾಲಿ ಮಾಡುವಂತೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಸಾಮಾಜಿಕ ಕಾರ್ಯಕರ್ತ ಪೋಲಯ್ಯ, “ಈ ಜಾಗ ಸರ್ಕಾರದ್ದಲ್ಲ. ವಿರಕ್ತ ಮಠದ ಮಲ್ಲಿಕಾರ್ಜುನ ಸ್ವಾಮೀಜಿಯವರದ್ದು. ಸುಮಾರು ಎಂಬತ್ತು ವರ್ಷಗಳ ಕೆಳಗೆ ವಿಲ್ ಮೂಲಕ ನನ್ನ ಹೆಂಡತಿಯ ತಾತನಾದ ಗುರುನಾಥಪ್ಪ ಅವರಿಗೆ ಬರೆದುಕೊಟ್ಟಿದ್ದಾರೆ. ನಾಲ್ಕು ತಲೆಮಾರಿನಿಂದ ಈ ಆಸ್ತಿಯನ್ನು ನಿರ್ವವಣೆ ಮಾಡಲಾಗುತ್ತಿದೆ. ನೋಂದಣಿಯಾದ ವಿಲ್‌ ಪ್ರಕಾರ ನಮ್ಮ ಒಡೆತನದಲ್ಲಿ ಜಾಗವಿದೆ. ಸರ್ಕಾರಕ್ಕಾಗಲೀ, ಆನಂದ್‌ಸಿಂಗ್‌ಗಾಗಲೀ ಯಾವುದೇ ರೀತಿಯ ಸಂಬಂಧವಿಲ್ಲ” ಎಂದಿದ್ದಾರೆ.

ಆನಂದ್‌ ಸಿಂಗ್‌ ಅವರ ವೈಷಮ್ಯಕ್ಕೆ ಕಾರಣವನ್ನು ತಿಳಿಸಿದ ಅವರು, “ಆನಂದ್ ಸಿಂಗ್ ಅವರ ಮನೆ ಸರ್ಕಾರಿ ಜಾಗದಲ್ಲಿದೆ ಎಂದು ಆರು ತಿಂಗಳ ಹಿಂದೆ ನಾವು ಆರೋಪ ಮಾಡಿದ್ದೆವು. ಅದಕ್ಕೆ ಸಂಬಂಧಪಟ್ಟ ದಾಖಲಾತಿಗಳನ್ನು, ದೂರುಗಳನ್ನು ಬಿಡುಗಡೆ ಮಾಡಿದ್ದೆವು. ದೂರು ನೀಡಿದ ಬಳಿಕ ನನ್ನ ಮೇಲೆ ದ್ವೇಷ ಸಾಧಿಸುತ್ತಿರುವ ಆನಂದ್‌ ಸಿಂಗ್ ನಿರಂತರ ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ದೂರು ನೀಡಿದ ಎರಡು ದಿನಗಳ ಬಳಿಕ ಆನಂದ್ ಸಿಂಗ್ ಹಾಗೂ ಹನುಮಂತಪ್ಪ ಅನ್ನುವವರು ನಮ್ಮ ಮನೆಗೆ ಬಂದಿದ್ದರು. ನನ್ನ ವಿರುದ್ಧವೇ ದೂರು ನೀಡುವಷ್ಟು ದೊಡ್ಡವನಿದ್ದೀಯಾ? ವಾಪಸ್ ತೆಗೆದುಕೋ, ಇಲ್ಲವಾದರೆ ಪರಿಣಾಮ ಗಂಭೀರವಾಗಿರುತ್ತದೆ ಎಂದು ಆನಂದ್ ಸಿಂಗ್‌ ಬೆದರಿಕೆ ಹಾಕಿದರು” ಎಂದು ತಿಳಿಸಿದ್ದಾರೆ.

“ಇದರಲ್ಲಿ ಸ್ವಾರ್ಥವೇನೂ ಇಲ್ಲ. ಸರ್ಕಾರಿ ಆಸ್ತಿ ಕಬಳಿಸಿದ್ದೀರಿ. ಅದನ್ನು ಸರ್ಕಾರಕ್ಕೆ ಮರಳಿಸಿದರೆ ನಮ್ಮದೇನೂ ತಕರಾರು ಇರುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದೆ. ಇಷ್ಟೆಲ್ಲ ಮಾತನಾಡುವಷ್ಟು ದೊಡ್ಡವನಾಗಿದ್ದೀಯ. ನಿನಗೆ ಮಾಡಬೇಕಾದದ್ದು ಬೇರೆಯೇ ಇದೆ ಎಂದರು. ಸಾಮಾಜಿಕ ಹೋರಾಟಗಾರರಿಗೆ ಇದೆಲ್ಲ ಸಾಮಾನ್ಯ ಎಂದು ಸುಮ್ಮನೇ ಇದ್ದೆ” ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿರಿ: ಮುರುಘಾ ಶರಣರ ಪರ ಮಾತನಾಡುವ ಮಾದಾರ ಚೆನ್ನಯ್ಯ ಸ್ವಾಮೀಜಿಗೆ ಬಹಿರಂಗ ಪತ್ರ

“ಮತ್ತೆ ಮೂರು ತಿಂಗಳ ಬಳಿಕ ಸಚಿವರು ಹಾಗೂ ಹನುಮಂತಪ್ಪ ನಮ್ಮ ಮನೆಗೆ ಬಂದರು. ದೂರು ವಾಪಸ್ ಪಡೆದು, ನಾನು ಮಾಡಿದ ಆರೋಪ ಸುಳ್ಳು ಎಂದು ಪ್ರೆಸ್ ಮೀಟ್ ಮಾಡು ಎಂದು ಸೂಚಿಸಿದರು. ನಾನು ಪಟ್ಟು ಬದಲಿಸಲಿಲ್ಲ. ನೀವು ಹಗರಣ ಮಾಡಿರುವುದು ನಿಜವಿದೆ. ಈ ಆಸ್ತಿ ನಿಮ್ಮದೇ ಅನ್ನಲು ದಾಖಲಾತಿ ಇದ್ದರೆ ಸರ್ಕಾರಕ್ಕೆ ಕೊಡಿ. ಸಂಬಂಧಪಟ್ಟ ಇಲಾಖೆಗೆ ಸಲ್ಲಿಸಿ ಎಂದೆ. ನಿನಗೆ ಒಳ್ಳೆಯ ಮಾತಿನಲ್ಲಿ ಹೇಳಿದರೆ ಗೊತ್ತಾಗಲ್ಲ. ಮುಂದೆ ಐತೆ ಎಂದು ಬೆದರಿಕೆ ಹಾಕಿದರು” ಎಂದು ಪೋಲಯ್ಯ ಆರೋಪಿಸಿದ್ದಾರೆ.

“ನಿನ್ನೆ ಮಧ್ಯಾಹ್ನ ಸಚಿವ ಆನಂದ್ ಸಿಂಗ್ ಹಾಗೂ ಅವರ ಸಹಚರರು ಬಂದು ನಮ್ಮನ್ನು ಮನೆಯಿಂದ ಹೊರಗೆ ಕರೆದರು. ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದರು” ಎಂದು ಪೋಲಯ್ಯ ದೂರಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಆನಂದ್ ಸಿಂಗ್‌, “ಜಾತಿ ನಿಂದನೆ ಮಾಡಿಲ್ಲ. ಜಾಗದ ವಿಚಾರದಲ್ಲಿ ಮಡಿವಾಳ ಸಮಾಜ ಹಾಗೂ ಪೋಲಪ್ಪ ಕುಟುಂಬದ ಮಧ್ಯೆ ಕಾನೂನು ಹೋರಾಟ ನಡೆಯುತ್ತಿದ್ದು, ಮಡಿವಾಳ ಸಮಾಜದ ಎಲ್ಲ ಹಿರಿಯರು ಬಂದು ನನ್ನನ್ನು ಭೇಟಿ ಆಗಿದ್ದರು. ಮಡಿವಾಳ ಸಮಾಜ ನಮ್ಮ ಜಾಗ ಅಂತಿದ್ದಾರೆ. ಪೋಲಪ್ಪ ಅವರು ನಮ್ಮದು ಅಂತಿದ್ದಾರೆ. ಈ ವಿಚಾರವಾಗಿ ನಾಲ್ಕು ತಿಂಗಳ ಹಿಂದೆ ಕರೆದು ಸಂಧಾನ ಮಾಡಿದ್ದೆ” ಎದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜನಸಾಮಾನ್ಯರ ತೆರಿಗೆಯಿಂದ ಬದುಕುವ ಸಚಿವರುಗಳು ಪಾಪದ ಬಡಪಾಯಿಗಳ ಮೇಲೆ ಸವಾರಿ ಮಾಡುವುದು ಎಷ್ಟು ಸರಿ….? ಈ ಸರಕಾರದಲ್ಲಿ ದಲಿತರು ಹಿಂದುಳಿದ ವರ್ಗದವರಿಗೆ ರಕ್ಷಣೆಯೇ ಇಲ್ಲದಂತಾಗಿದೆಯಲ್ಲ…ಕೇಸು ದಾಖಲಾದರೂ ಈ ಕುಟುಂಬಗಳಿಗೆ ಭದ್ರತೆ ಇದೆನ್ನಲಾಗುವುದೇ….?

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...