Homeಕರ್ನಾಟಕಎಸ್‌ಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಕುಟುಂಬ; ಸಚಿವ ಆನಂದ್‌ ಸಿಂಗ್ ವಿರುದ್ಧ ಅಟ್ರಾಸಿಟಿ...

ಎಸ್‌ಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಕುಟುಂಬ; ಸಚಿವ ಆನಂದ್‌ ಸಿಂಗ್ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

ಸಚಿವ ಆನಂದ್‌ ಸಿಂಗ್‌ ಹಾಗೂ ಇತರರು ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

- Advertisement -
- Advertisement -

ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹಾಗೂ ಇತರರು ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ಆನಂದ್ ಸಿಂಗ್ ಹಾಗೂ ಇತರ ಮೂವರ ಮೇಲೆ ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಆನಂದ್‌ ಸಿಂಗ್‌ ಸೇರಿ 4 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹಾಗೂ ಇತರೆ ಮೂವರ ವಿರುದ್ಧ ವಿಜಯನಗರ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಸಾಮಾಜಿಕ ಕಾರ್ಯಕರ್ತ ಡಿ. ಪೋಲಪ್ಪ ಎಂಬವರು ಕೊಟ್ಟ ದೂರಿನ ಮೇರೆಗೆ ಐ.ಪಿ.ಸಿ. ಸೆಕ್ಷೆನ್‌ 504, 506ರ ಅಡಿ ಎಸ್ಸಿ/ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಆನಂದ್‌ ಸಿಂಗ್‌, ಮರಿಯಪ್ಪ, ಹನುಮಂತಪ್ಪ ಹಾಗೂ ಹುಲುಗಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ ತಿಳಿಸಿದ್ದಾರೆ.

‘ಪೆಟ್ರೋಲ್‌ ಹಾಕಿ ಸುಟ್ಟು ಹಾಕುತ್ತೇನೆ’ ಎಂದು ಸಚಿವ ಆನಂದ್‌ ಸಿಂಗ್‌ ಅವರು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪೋಲಪ್ಪ ಅವರು, ಅವರ ಕುಟುಂಬದ ಒಂಬತ್ತು ಜನ ಸದಸ್ಯರೊಂದಿಗೆ ಮಂಗಳವಾರ ಸಂಜೆ ನಗರದ ಎಸ್ಪಿ ಕಚೇರಿ ಎದುರು ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಅವರನ್ನು ತಡೆದು, ಆಸ್ಪತ್ರೆಗೆ ಕಳುಹಿಸಿದ್ದಾರೆ.

ಹೊಸಪೇಟೆ ನಗರದ ಹಂಪಿ ರಸ್ತೆಯಲ್ಲಿರುವ 6ನೇ ವಾರ್ಡಿನಲ್ಲಿರುವ ಸುಣ್ಣದ ಬಟ್ಟೆ ಪ್ರದೇಶದಲ್ಲಿ ಪೊಲಯ್ಯ ಅವರ ಕುಟುಂಬ ಹಲವು ವರ್ಷಗಳಿಂದ ವಾಸವಿದೆ. ಆದರೆ ಇತ್ತೀಚೆಗೆ ಅಲ್ಲಿಗೆ ಭೇಟಿ ನೀಡಿದ ಸಚಿವರು, ನೀವು ಕಟ್ಟಿರುವ ಮನೆ ಅಕ್ರಮವಾಗಿದೆ. ಇದು ಸರ್ಕಾರಿ ಜಾಗ. ಈ ಜಾಗವನ್ನು ನಗರಸಭೆ ವಶಕ್ಕೆ ಪಡೆಯುತ್ತಿದ್ದು, ಈ ಕೂಡಲೇ ಮನೆ ಖಾಲಿ ಮಾಡುವಂತೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಸಾಮಾಜಿಕ ಕಾರ್ಯಕರ್ತ ಪೋಲಯ್ಯ, “ಈ ಜಾಗ ಸರ್ಕಾರದ್ದಲ್ಲ. ವಿರಕ್ತ ಮಠದ ಮಲ್ಲಿಕಾರ್ಜುನ ಸ್ವಾಮೀಜಿಯವರದ್ದು. ಸುಮಾರು ಎಂಬತ್ತು ವರ್ಷಗಳ ಕೆಳಗೆ ವಿಲ್ ಮೂಲಕ ನನ್ನ ಹೆಂಡತಿಯ ತಾತನಾದ ಗುರುನಾಥಪ್ಪ ಅವರಿಗೆ ಬರೆದುಕೊಟ್ಟಿದ್ದಾರೆ. ನಾಲ್ಕು ತಲೆಮಾರಿನಿಂದ ಈ ಆಸ್ತಿಯನ್ನು ನಿರ್ವವಣೆ ಮಾಡಲಾಗುತ್ತಿದೆ. ನೋಂದಣಿಯಾದ ವಿಲ್‌ ಪ್ರಕಾರ ನಮ್ಮ ಒಡೆತನದಲ್ಲಿ ಜಾಗವಿದೆ. ಸರ್ಕಾರಕ್ಕಾಗಲೀ, ಆನಂದ್‌ಸಿಂಗ್‌ಗಾಗಲೀ ಯಾವುದೇ ರೀತಿಯ ಸಂಬಂಧವಿಲ್ಲ” ಎಂದಿದ್ದಾರೆ.

ಆನಂದ್‌ ಸಿಂಗ್‌ ಅವರ ವೈಷಮ್ಯಕ್ಕೆ ಕಾರಣವನ್ನು ತಿಳಿಸಿದ ಅವರು, “ಆನಂದ್ ಸಿಂಗ್ ಅವರ ಮನೆ ಸರ್ಕಾರಿ ಜಾಗದಲ್ಲಿದೆ ಎಂದು ಆರು ತಿಂಗಳ ಹಿಂದೆ ನಾವು ಆರೋಪ ಮಾಡಿದ್ದೆವು. ಅದಕ್ಕೆ ಸಂಬಂಧಪಟ್ಟ ದಾಖಲಾತಿಗಳನ್ನು, ದೂರುಗಳನ್ನು ಬಿಡುಗಡೆ ಮಾಡಿದ್ದೆವು. ದೂರು ನೀಡಿದ ಬಳಿಕ ನನ್ನ ಮೇಲೆ ದ್ವೇಷ ಸಾಧಿಸುತ್ತಿರುವ ಆನಂದ್‌ ಸಿಂಗ್ ನಿರಂತರ ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ದೂರು ನೀಡಿದ ಎರಡು ದಿನಗಳ ಬಳಿಕ ಆನಂದ್ ಸಿಂಗ್ ಹಾಗೂ ಹನುಮಂತಪ್ಪ ಅನ್ನುವವರು ನಮ್ಮ ಮನೆಗೆ ಬಂದಿದ್ದರು. ನನ್ನ ವಿರುದ್ಧವೇ ದೂರು ನೀಡುವಷ್ಟು ದೊಡ್ಡವನಿದ್ದೀಯಾ? ವಾಪಸ್ ತೆಗೆದುಕೋ, ಇಲ್ಲವಾದರೆ ಪರಿಣಾಮ ಗಂಭೀರವಾಗಿರುತ್ತದೆ ಎಂದು ಆನಂದ್ ಸಿಂಗ್‌ ಬೆದರಿಕೆ ಹಾಕಿದರು” ಎಂದು ತಿಳಿಸಿದ್ದಾರೆ.

“ಇದರಲ್ಲಿ ಸ್ವಾರ್ಥವೇನೂ ಇಲ್ಲ. ಸರ್ಕಾರಿ ಆಸ್ತಿ ಕಬಳಿಸಿದ್ದೀರಿ. ಅದನ್ನು ಸರ್ಕಾರಕ್ಕೆ ಮರಳಿಸಿದರೆ ನಮ್ಮದೇನೂ ತಕರಾರು ಇರುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದೆ. ಇಷ್ಟೆಲ್ಲ ಮಾತನಾಡುವಷ್ಟು ದೊಡ್ಡವನಾಗಿದ್ದೀಯ. ನಿನಗೆ ಮಾಡಬೇಕಾದದ್ದು ಬೇರೆಯೇ ಇದೆ ಎಂದರು. ಸಾಮಾಜಿಕ ಹೋರಾಟಗಾರರಿಗೆ ಇದೆಲ್ಲ ಸಾಮಾನ್ಯ ಎಂದು ಸುಮ್ಮನೇ ಇದ್ದೆ” ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿರಿ: ಮುರುಘಾ ಶರಣರ ಪರ ಮಾತನಾಡುವ ಮಾದಾರ ಚೆನ್ನಯ್ಯ ಸ್ವಾಮೀಜಿಗೆ ಬಹಿರಂಗ ಪತ್ರ

“ಮತ್ತೆ ಮೂರು ತಿಂಗಳ ಬಳಿಕ ಸಚಿವರು ಹಾಗೂ ಹನುಮಂತಪ್ಪ ನಮ್ಮ ಮನೆಗೆ ಬಂದರು. ದೂರು ವಾಪಸ್ ಪಡೆದು, ನಾನು ಮಾಡಿದ ಆರೋಪ ಸುಳ್ಳು ಎಂದು ಪ್ರೆಸ್ ಮೀಟ್ ಮಾಡು ಎಂದು ಸೂಚಿಸಿದರು. ನಾನು ಪಟ್ಟು ಬದಲಿಸಲಿಲ್ಲ. ನೀವು ಹಗರಣ ಮಾಡಿರುವುದು ನಿಜವಿದೆ. ಈ ಆಸ್ತಿ ನಿಮ್ಮದೇ ಅನ್ನಲು ದಾಖಲಾತಿ ಇದ್ದರೆ ಸರ್ಕಾರಕ್ಕೆ ಕೊಡಿ. ಸಂಬಂಧಪಟ್ಟ ಇಲಾಖೆಗೆ ಸಲ್ಲಿಸಿ ಎಂದೆ. ನಿನಗೆ ಒಳ್ಳೆಯ ಮಾತಿನಲ್ಲಿ ಹೇಳಿದರೆ ಗೊತ್ತಾಗಲ್ಲ. ಮುಂದೆ ಐತೆ ಎಂದು ಬೆದರಿಕೆ ಹಾಕಿದರು” ಎಂದು ಪೋಲಯ್ಯ ಆರೋಪಿಸಿದ್ದಾರೆ.

“ನಿನ್ನೆ ಮಧ್ಯಾಹ್ನ ಸಚಿವ ಆನಂದ್ ಸಿಂಗ್ ಹಾಗೂ ಅವರ ಸಹಚರರು ಬಂದು ನಮ್ಮನ್ನು ಮನೆಯಿಂದ ಹೊರಗೆ ಕರೆದರು. ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದರು” ಎಂದು ಪೋಲಯ್ಯ ದೂರಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಆನಂದ್ ಸಿಂಗ್‌, “ಜಾತಿ ನಿಂದನೆ ಮಾಡಿಲ್ಲ. ಜಾಗದ ವಿಚಾರದಲ್ಲಿ ಮಡಿವಾಳ ಸಮಾಜ ಹಾಗೂ ಪೋಲಪ್ಪ ಕುಟುಂಬದ ಮಧ್ಯೆ ಕಾನೂನು ಹೋರಾಟ ನಡೆಯುತ್ತಿದ್ದು, ಮಡಿವಾಳ ಸಮಾಜದ ಎಲ್ಲ ಹಿರಿಯರು ಬಂದು ನನ್ನನ್ನು ಭೇಟಿ ಆಗಿದ್ದರು. ಮಡಿವಾಳ ಸಮಾಜ ನಮ್ಮ ಜಾಗ ಅಂತಿದ್ದಾರೆ. ಪೋಲಪ್ಪ ಅವರು ನಮ್ಮದು ಅಂತಿದ್ದಾರೆ. ಈ ವಿಚಾರವಾಗಿ ನಾಲ್ಕು ತಿಂಗಳ ಹಿಂದೆ ಕರೆದು ಸಂಧಾನ ಮಾಡಿದ್ದೆ” ಎದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜನಸಾಮಾನ್ಯರ ತೆರಿಗೆಯಿಂದ ಬದುಕುವ ಸಚಿವರುಗಳು ಪಾಪದ ಬಡಪಾಯಿಗಳ ಮೇಲೆ ಸವಾರಿ ಮಾಡುವುದು ಎಷ್ಟು ಸರಿ….? ಈ ಸರಕಾರದಲ್ಲಿ ದಲಿತರು ಹಿಂದುಳಿದ ವರ್ಗದವರಿಗೆ ರಕ್ಷಣೆಯೇ ಇಲ್ಲದಂತಾಗಿದೆಯಲ್ಲ…ಕೇಸು ದಾಖಲಾದರೂ ಈ ಕುಟುಂಬಗಳಿಗೆ ಭದ್ರತೆ ಇದೆನ್ನಲಾಗುವುದೇ….?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...