Homeಮುಖಪುಟಪ್ರಾರ್ಥನಾ ಸ್ಥಳದ ಮೇಲೆ ಭಜರಂಗದಳ ಸದಸ್ಯರಿಂದ ದಾಳಿ; ಪೊಲೀಸರೆದುರೇ ಕ್ರಿಶ್ಚಿಯನ್ ಮುಖಂಡರ ಮೇಲೆ ಹಲ್ಲೆ: ಆರೋಪ

ಪ್ರಾರ್ಥನಾ ಸ್ಥಳದ ಮೇಲೆ ಭಜರಂಗದಳ ಸದಸ್ಯರಿಂದ ದಾಳಿ; ಪೊಲೀಸರೆದುರೇ ಕ್ರಿಶ್ಚಿಯನ್ ಮುಖಂಡರ ಮೇಲೆ ಹಲ್ಲೆ: ಆರೋಪ

- Advertisement -
- Advertisement -

ಕ್ರಿಶ್ಚಿಯನ್ ಪ್ರಾರ್ಥನಾ ಸ್ಥಳದ ಮೇಲೆ ಹಿಂದೂತ್ವ ಗುಂಪಿನ ಸುಮಾರು 30 ರಿಂದ 40 ಸದಸ್ಯರು ದಾಳಿ ನಡೆಸಿರುವ ಘಟನೆ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಕ್ರಿಶ್ಚಿಯನ್‌ರ ಪ್ರಾರ್ಥನೆಗೆ ಅಡ್ಡಿಪಡಿಸಿ, ಆ ಸ್ಥಳವನ್ನು ಧ್ವಂಸಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಪಟಾನ್ ವಿಧಾನಸಭಾ ಕ್ಷೇತ್ರದ ಅಮಲೇಶ್ವರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಈ ಬಗ್ಗೆ ಮಾತನಾಡಿದ ಛತ್ತೀಸ್‌ಗಢ ಕ್ರಿಶ್ಚಿಯನ್ ಫೋರಂನ ಅಧ್ಯಕ್ಷ ಅರುಣ್ ಪನ್ನಾಲಾಲ್ ಅವರು, ”ಪ್ರಾರ್ಥನೆ ಸೇವೆಗೆ ಅಡ್ಡಿಪಡಿಸಿದವರು ಬಜರಂಗದಳದ ಸದಸ್ಯರೆಂದು ಆರೋಪಿಸಿರುವುದಾಗಿ ಎಂದು ಟೆಲಿಗ್ರಾಫ್ ವರದಿ ಮಾಡಿದೆ.

ಈ ಪ್ರರ್ಥನಾ ಸಭೆಯ ಸದಸ್ಯರಾದ ಲಾಲ್‌ಚಂದ್ ಸಾಹು ಅವರು ಘಟನೆ ಕುರಿತು ಸ್ಕ್ರಾಲ್‌ಗೆ ಮಾಹಿತಿ ನೀಡಿದ್ದು, ”ಹಿಂದುತ್ವ ಗುಂಪಿನ ಸದಸ್ಯರು “ಜೈ ಶ್ರೀ ರಾಮ್” ಎಂದು ಘೋಷಣೆಗಳನ್ನು ಕೂಗುತ್ತಾ ಪ್ರಾರ್ಥನಾ ಸೇವೆ ಮಾಡುತ್ತಿದ್ದ ಮನೆಯ ಕಡೆಗೆ ನುಗ್ಗಲು ಯತ್ನಿಸಿದರು. ಆದರೆ ಆ ಗುಂಪು ಒಳಗೆ ಪ್ರವೇಶಿಸುವುದನ್ನು ತಡೆಯಲು ಸಭೆಯ ಸದಸ್ಯರು ಬಾಗಿಲು ಮುಚ್ಚಿದರು” ಎಂದು ಅವರು ಹೇಳಿದರು.

ಆ ಬಳಿಕ ಆ ಗುಂಪು ಬಾಗಿಲುಗಳಿಗೆ ಕೋಲುಗಳಿಂದ ಹೊಡೆಯಲು ಪ್ರಾರಂಭಿಸಿತು. ಅಷ್ಟೇ ಅಲ್ಲದೇ ಮನೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿದ್ದು, ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ” ಎಂದು ಸಾಹು ತಿಳಿಸಿದ್ದಾರೆ.

”ಅರ್ಧ ಗಂಟೆಯ ಬಳಿಕ ಸ್ಥಳಕ್ಕೆ ಪೊಲೀಸರು ಬಂದರು. ಆ ನಂತರವಷ್ಟೇ ನಾವು ಮನೆಯ ಗೇಟ್‌ನ್ನು ತೆರೆದಿದ್ದೇವೆ. ಪೊಲೀಸರು ಒಳಗೆ ಬಂದಾಗ, ಅವರು ಏನಾಗುತ್ತಿದೆ ಎಂದು ನಮ್ಮನ್ನು ಕೇಳಿದರು ಮತ್ತು ನೋಂದಣಿ ಪತ್ರಗಳನ್ನು ಹುಡುಕಿದರು. ಆದರೆ ಪೊಲೀಸರು ಆ ಗುಂಪಿನ ವಿರುದ್ಧ ಏನೂ ಕ್ರಮ ತೆಗೆದುಕೊಳ್ಳಲಿಲ್ಲ” ಎಂದು ಹೇಳಿದರು.

ಪೊಲೀಸರು ಕ್ರಿಶ್ಚಿಯನ್ ಮುಖಂಡರನ್ನು ಬಂಧಿಸಿ ಠಾಣೆಗೆ ಕರೆದೊಯ್ದರು. ಈ ವೇಳೆ ಆ ಗುಂಪಿನ ಸದಸ್ಯರು ಅವಹೇಳನಕಾರಿಯಾಗಿ ಮಾತನಾಡುತ್ತ ಕ್ರಿಶ್ಚಿಯನ್ ಮುಖಂಡನ ಮೇಲೆ ದಾಳಿ ಮಾಡಲು ಮುಂದಾದರು. ಅಷ್ಟೇ ಅಲ್ಲದೇ ಈ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಲಾಯಿತು ಎಂದು ಸಾಹು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ರಾಮನವಮಿ ಹಿಂಸಾಚಾರದ ಮಾಸ್ಟರ್ ಮೈಂಡ್, ಬಜರಂಗದಳ ಸಂಚಾಲಕ ಪೊಲೀಸರಿಗೆ ಶರಣು

”ಪ್ರಾರ್ಥನೆಯನ್ನು ವಿರೋಧಿಸಿದ ಹಿಂದುತ್ವವಾದಿಗಳ ಗುಂಪಿನ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಿಲ್ಲ ಆದರೆ ಕ್ರಿಶ್ಚಿಯನ್ ಮುಖಂಡರನ್ನು ಐಪಿಸಿ ಸೆಕ್ಷನ್ 151 (ಅದು ಚದುರಿಸಲು ಆದೇಶಿಸಿದ ನಂತರ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳ ಸಭೆಗೆ ಸೇರುವುದು ಅಥವಾ ಮುಂದುವರೆಯುವುದು) ಅಡಿಯಲ್ಲಿ ಬಂಧಿಸಿದ್ದಾರೆ” ಎಂದು ಅವರು ಹೇಳಿದರು.

ಇನ್ನು ವಿನಯ್ ಸಾಹು ಎನ್ನುವವರು ಮಾತನಾಡಿ, ಹಿಂದುತ್ವವಾದಿಗಳ ಗುಂಪು ಕ್ರಿಶ್ಚಿಯನ್‌ರ ಮೇಲೆ ದಾಳಿ ನಡೆಸಿದ ವೇಳೆ ಐವರಿಗೆ ಮೂಗೇಟಾಗಿದೆ ಎಂದು ಹೇಳಿದ್ದಾರೆ.

”ಬಜರಂಗದಳದ ಸದಸ್ಯರು ನಮ್ಮ ಸದಸ್ಯರ ಮೇಲೆ ಹಲ್ಲೆ ನಡೆಸುತ್ತಿದ್ದರು ಪೊಲೀಸರು ಮೂಕ ಪ್ರೇಕ್ಷಕರಾಗಿ ನಿಂತಿದ್ದು ನಮಗೆ ಆಶ್ಚರ್ಯ ತಂದಿದೆ” ಎಂದು ಅವರು ಆರೋಪಿಸಿದ್ದಾರೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಪೊಲೀಸರು ಈ ಹಲ್ಲೆ ಮತ್ತು ವಿಧ್ವಂಸಕ ಆರೋಪಗಳನ್ನು ತಳ್ಳಿಹಾಕಿದ್ದಾರೆ.

ಅಮಲೇಶ್ವರ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಅಧಿಕಾರಿ ಜಗದೀಶ್ ಪ್ರಸಾದ್ ಅವರು ಸ್ಕ್ರೋಲ್‌ಗೆ ತಿಳಿಸಿದ್ದು, ”ನಾವು ಯಾರ ವಿರುದ್ಧವೂ ಎಫ್‌ಐಆರ್‌ ದಾಖಲಿಸಿಲ್ಲ. ಪ್ರಾರ್ಥನಾ ಸಭೆ ನಡೆಯುತ್ತಿದೆ ಎಂದು ಅವರು ಹೇಳಿದರು. ಆ ನಂತರ, ನಾವು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ನಾವು ಯಾವುದೇ ಎಫ್‌ಐಆರ್ ದಾಖಲಿಸಿಲ್ಲ” ಎಂದು ಹೇಳಿದ್ದಾರೆ.

ಛತ್ತೀಸ್‌ಗಢದಲ್ಲಿ ಕ್ರೈಸ್ತರ ಮೇಲೆ ಹಲ್ಲೆ ನಡೆದಿರುವುದು ಇದೇ ಮೊದಲಲ್ಲ. ಈ ಹಿಂದೆ ಎಪ್ರಿಲ್‌ನಲ್ಲಿ ಛತ್ತೀಸ್‌ಗಢದ ಜಗದಲ್‌ಪುರದಲ್ಲಿ ಬಿಜೆಪಿ ಮತ್ತು ಹಿಂದುತ್ವ ಗುಂಪು ವಿಶ್ವ ಹಿಂದೂ ಪರಿಷತ್ ಸದಸ್ಯರು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಆರ್ಥಿಕ ಬಹಿಷ್ಕಾರದ ಪ್ರತಿಜ್ಞೆ ಮಾಡಿದ್ದರು. ಜನವರಿಯಲ್ಲಿ ನಾರಾಯಣಪುರ ಜಿಲ್ಲೆಯಲ್ಲಿ ಗುಂಪೊಂದು ಚರ್ಚ್ ಅನ್ನು ಧ್ವಂಸಗೊಳಿಸಿತ್ತು ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...