Homeಮುಖಪುಟಪ್ರಾರ್ಥನಾ ಸ್ಥಳದ ಮೇಲೆ ಭಜರಂಗದಳ ಸದಸ್ಯರಿಂದ ದಾಳಿ; ಪೊಲೀಸರೆದುರೇ ಕ್ರಿಶ್ಚಿಯನ್ ಮುಖಂಡರ ಮೇಲೆ ಹಲ್ಲೆ: ಆರೋಪ

ಪ್ರಾರ್ಥನಾ ಸ್ಥಳದ ಮೇಲೆ ಭಜರಂಗದಳ ಸದಸ್ಯರಿಂದ ದಾಳಿ; ಪೊಲೀಸರೆದುರೇ ಕ್ರಿಶ್ಚಿಯನ್ ಮುಖಂಡರ ಮೇಲೆ ಹಲ್ಲೆ: ಆರೋಪ

- Advertisement -
- Advertisement -

ಕ್ರಿಶ್ಚಿಯನ್ ಪ್ರಾರ್ಥನಾ ಸ್ಥಳದ ಮೇಲೆ ಹಿಂದೂತ್ವ ಗುಂಪಿನ ಸುಮಾರು 30 ರಿಂದ 40 ಸದಸ್ಯರು ದಾಳಿ ನಡೆಸಿರುವ ಘಟನೆ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಕ್ರಿಶ್ಚಿಯನ್‌ರ ಪ್ರಾರ್ಥನೆಗೆ ಅಡ್ಡಿಪಡಿಸಿ, ಆ ಸ್ಥಳವನ್ನು ಧ್ವಂಸಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಪಟಾನ್ ವಿಧಾನಸಭಾ ಕ್ಷೇತ್ರದ ಅಮಲೇಶ್ವರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಈ ಬಗ್ಗೆ ಮಾತನಾಡಿದ ಛತ್ತೀಸ್‌ಗಢ ಕ್ರಿಶ್ಚಿಯನ್ ಫೋರಂನ ಅಧ್ಯಕ್ಷ ಅರುಣ್ ಪನ್ನಾಲಾಲ್ ಅವರು, ”ಪ್ರಾರ್ಥನೆ ಸೇವೆಗೆ ಅಡ್ಡಿಪಡಿಸಿದವರು ಬಜರಂಗದಳದ ಸದಸ್ಯರೆಂದು ಆರೋಪಿಸಿರುವುದಾಗಿ ಎಂದು ಟೆಲಿಗ್ರಾಫ್ ವರದಿ ಮಾಡಿದೆ.

ಈ ಪ್ರರ್ಥನಾ ಸಭೆಯ ಸದಸ್ಯರಾದ ಲಾಲ್‌ಚಂದ್ ಸಾಹು ಅವರು ಘಟನೆ ಕುರಿತು ಸ್ಕ್ರಾಲ್‌ಗೆ ಮಾಹಿತಿ ನೀಡಿದ್ದು, ”ಹಿಂದುತ್ವ ಗುಂಪಿನ ಸದಸ್ಯರು “ಜೈ ಶ್ರೀ ರಾಮ್” ಎಂದು ಘೋಷಣೆಗಳನ್ನು ಕೂಗುತ್ತಾ ಪ್ರಾರ್ಥನಾ ಸೇವೆ ಮಾಡುತ್ತಿದ್ದ ಮನೆಯ ಕಡೆಗೆ ನುಗ್ಗಲು ಯತ್ನಿಸಿದರು. ಆದರೆ ಆ ಗುಂಪು ಒಳಗೆ ಪ್ರವೇಶಿಸುವುದನ್ನು ತಡೆಯಲು ಸಭೆಯ ಸದಸ್ಯರು ಬಾಗಿಲು ಮುಚ್ಚಿದರು” ಎಂದು ಅವರು ಹೇಳಿದರು.

ಆ ಬಳಿಕ ಆ ಗುಂಪು ಬಾಗಿಲುಗಳಿಗೆ ಕೋಲುಗಳಿಂದ ಹೊಡೆಯಲು ಪ್ರಾರಂಭಿಸಿತು. ಅಷ್ಟೇ ಅಲ್ಲದೇ ಮನೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿದ್ದು, ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ” ಎಂದು ಸಾಹು ತಿಳಿಸಿದ್ದಾರೆ.

”ಅರ್ಧ ಗಂಟೆಯ ಬಳಿಕ ಸ್ಥಳಕ್ಕೆ ಪೊಲೀಸರು ಬಂದರು. ಆ ನಂತರವಷ್ಟೇ ನಾವು ಮನೆಯ ಗೇಟ್‌ನ್ನು ತೆರೆದಿದ್ದೇವೆ. ಪೊಲೀಸರು ಒಳಗೆ ಬಂದಾಗ, ಅವರು ಏನಾಗುತ್ತಿದೆ ಎಂದು ನಮ್ಮನ್ನು ಕೇಳಿದರು ಮತ್ತು ನೋಂದಣಿ ಪತ್ರಗಳನ್ನು ಹುಡುಕಿದರು. ಆದರೆ ಪೊಲೀಸರು ಆ ಗುಂಪಿನ ವಿರುದ್ಧ ಏನೂ ಕ್ರಮ ತೆಗೆದುಕೊಳ್ಳಲಿಲ್ಲ” ಎಂದು ಹೇಳಿದರು.

ಪೊಲೀಸರು ಕ್ರಿಶ್ಚಿಯನ್ ಮುಖಂಡರನ್ನು ಬಂಧಿಸಿ ಠಾಣೆಗೆ ಕರೆದೊಯ್ದರು. ಈ ವೇಳೆ ಆ ಗುಂಪಿನ ಸದಸ್ಯರು ಅವಹೇಳನಕಾರಿಯಾಗಿ ಮಾತನಾಡುತ್ತ ಕ್ರಿಶ್ಚಿಯನ್ ಮುಖಂಡನ ಮೇಲೆ ದಾಳಿ ಮಾಡಲು ಮುಂದಾದರು. ಅಷ್ಟೇ ಅಲ್ಲದೇ ಈ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಲಾಯಿತು ಎಂದು ಸಾಹು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ರಾಮನವಮಿ ಹಿಂಸಾಚಾರದ ಮಾಸ್ಟರ್ ಮೈಂಡ್, ಬಜರಂಗದಳ ಸಂಚಾಲಕ ಪೊಲೀಸರಿಗೆ ಶರಣು

”ಪ್ರಾರ್ಥನೆಯನ್ನು ವಿರೋಧಿಸಿದ ಹಿಂದುತ್ವವಾದಿಗಳ ಗುಂಪಿನ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಿಲ್ಲ ಆದರೆ ಕ್ರಿಶ್ಚಿಯನ್ ಮುಖಂಡರನ್ನು ಐಪಿಸಿ ಸೆಕ್ಷನ್ 151 (ಅದು ಚದುರಿಸಲು ಆದೇಶಿಸಿದ ನಂತರ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳ ಸಭೆಗೆ ಸೇರುವುದು ಅಥವಾ ಮುಂದುವರೆಯುವುದು) ಅಡಿಯಲ್ಲಿ ಬಂಧಿಸಿದ್ದಾರೆ” ಎಂದು ಅವರು ಹೇಳಿದರು.

ಇನ್ನು ವಿನಯ್ ಸಾಹು ಎನ್ನುವವರು ಮಾತನಾಡಿ, ಹಿಂದುತ್ವವಾದಿಗಳ ಗುಂಪು ಕ್ರಿಶ್ಚಿಯನ್‌ರ ಮೇಲೆ ದಾಳಿ ನಡೆಸಿದ ವೇಳೆ ಐವರಿಗೆ ಮೂಗೇಟಾಗಿದೆ ಎಂದು ಹೇಳಿದ್ದಾರೆ.

”ಬಜರಂಗದಳದ ಸದಸ್ಯರು ನಮ್ಮ ಸದಸ್ಯರ ಮೇಲೆ ಹಲ್ಲೆ ನಡೆಸುತ್ತಿದ್ದರು ಪೊಲೀಸರು ಮೂಕ ಪ್ರೇಕ್ಷಕರಾಗಿ ನಿಂತಿದ್ದು ನಮಗೆ ಆಶ್ಚರ್ಯ ತಂದಿದೆ” ಎಂದು ಅವರು ಆರೋಪಿಸಿದ್ದಾರೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಪೊಲೀಸರು ಈ ಹಲ್ಲೆ ಮತ್ತು ವಿಧ್ವಂಸಕ ಆರೋಪಗಳನ್ನು ತಳ್ಳಿಹಾಕಿದ್ದಾರೆ.

ಅಮಲೇಶ್ವರ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಅಧಿಕಾರಿ ಜಗದೀಶ್ ಪ್ರಸಾದ್ ಅವರು ಸ್ಕ್ರೋಲ್‌ಗೆ ತಿಳಿಸಿದ್ದು, ”ನಾವು ಯಾರ ವಿರುದ್ಧವೂ ಎಫ್‌ಐಆರ್‌ ದಾಖಲಿಸಿಲ್ಲ. ಪ್ರಾರ್ಥನಾ ಸಭೆ ನಡೆಯುತ್ತಿದೆ ಎಂದು ಅವರು ಹೇಳಿದರು. ಆ ನಂತರ, ನಾವು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ನಾವು ಯಾವುದೇ ಎಫ್‌ಐಆರ್ ದಾಖಲಿಸಿಲ್ಲ” ಎಂದು ಹೇಳಿದ್ದಾರೆ.

ಛತ್ತೀಸ್‌ಗಢದಲ್ಲಿ ಕ್ರೈಸ್ತರ ಮೇಲೆ ಹಲ್ಲೆ ನಡೆದಿರುವುದು ಇದೇ ಮೊದಲಲ್ಲ. ಈ ಹಿಂದೆ ಎಪ್ರಿಲ್‌ನಲ್ಲಿ ಛತ್ತೀಸ್‌ಗಢದ ಜಗದಲ್‌ಪುರದಲ್ಲಿ ಬಿಜೆಪಿ ಮತ್ತು ಹಿಂದುತ್ವ ಗುಂಪು ವಿಶ್ವ ಹಿಂದೂ ಪರಿಷತ್ ಸದಸ್ಯರು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಆರ್ಥಿಕ ಬಹಿಷ್ಕಾರದ ಪ್ರತಿಜ್ಞೆ ಮಾಡಿದ್ದರು. ಜನವರಿಯಲ್ಲಿ ನಾರಾಯಣಪುರ ಜಿಲ್ಲೆಯಲ್ಲಿ ಗುಂಪೊಂದು ಚರ್ಚ್ ಅನ್ನು ಧ್ವಂಸಗೊಳಿಸಿತ್ತು ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...