Homeಮುಖಪುಟಪ್ರಾರ್ಥನಾ ಸ್ಥಳದ ಮೇಲೆ ಭಜರಂಗದಳ ಸದಸ್ಯರಿಂದ ದಾಳಿ; ಪೊಲೀಸರೆದುರೇ ಕ್ರಿಶ್ಚಿಯನ್ ಮುಖಂಡರ ಮೇಲೆ ಹಲ್ಲೆ: ಆರೋಪ

ಪ್ರಾರ್ಥನಾ ಸ್ಥಳದ ಮೇಲೆ ಭಜರಂಗದಳ ಸದಸ್ಯರಿಂದ ದಾಳಿ; ಪೊಲೀಸರೆದುರೇ ಕ್ರಿಶ್ಚಿಯನ್ ಮುಖಂಡರ ಮೇಲೆ ಹಲ್ಲೆ: ಆರೋಪ

- Advertisement -
- Advertisement -

ಕ್ರಿಶ್ಚಿಯನ್ ಪ್ರಾರ್ಥನಾ ಸ್ಥಳದ ಮೇಲೆ ಹಿಂದೂತ್ವ ಗುಂಪಿನ ಸುಮಾರು 30 ರಿಂದ 40 ಸದಸ್ಯರು ದಾಳಿ ನಡೆಸಿರುವ ಘಟನೆ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಕ್ರಿಶ್ಚಿಯನ್‌ರ ಪ್ರಾರ್ಥನೆಗೆ ಅಡ್ಡಿಪಡಿಸಿ, ಆ ಸ್ಥಳವನ್ನು ಧ್ವಂಸಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಪಟಾನ್ ವಿಧಾನಸಭಾ ಕ್ಷೇತ್ರದ ಅಮಲೇಶ್ವರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಈ ಬಗ್ಗೆ ಮಾತನಾಡಿದ ಛತ್ತೀಸ್‌ಗಢ ಕ್ರಿಶ್ಚಿಯನ್ ಫೋರಂನ ಅಧ್ಯಕ್ಷ ಅರುಣ್ ಪನ್ನಾಲಾಲ್ ಅವರು, ”ಪ್ರಾರ್ಥನೆ ಸೇವೆಗೆ ಅಡ್ಡಿಪಡಿಸಿದವರು ಬಜರಂಗದಳದ ಸದಸ್ಯರೆಂದು ಆರೋಪಿಸಿರುವುದಾಗಿ ಎಂದು ಟೆಲಿಗ್ರಾಫ್ ವರದಿ ಮಾಡಿದೆ.

ಈ ಪ್ರರ್ಥನಾ ಸಭೆಯ ಸದಸ್ಯರಾದ ಲಾಲ್‌ಚಂದ್ ಸಾಹು ಅವರು ಘಟನೆ ಕುರಿತು ಸ್ಕ್ರಾಲ್‌ಗೆ ಮಾಹಿತಿ ನೀಡಿದ್ದು, ”ಹಿಂದುತ್ವ ಗುಂಪಿನ ಸದಸ್ಯರು “ಜೈ ಶ್ರೀ ರಾಮ್” ಎಂದು ಘೋಷಣೆಗಳನ್ನು ಕೂಗುತ್ತಾ ಪ್ರಾರ್ಥನಾ ಸೇವೆ ಮಾಡುತ್ತಿದ್ದ ಮನೆಯ ಕಡೆಗೆ ನುಗ್ಗಲು ಯತ್ನಿಸಿದರು. ಆದರೆ ಆ ಗುಂಪು ಒಳಗೆ ಪ್ರವೇಶಿಸುವುದನ್ನು ತಡೆಯಲು ಸಭೆಯ ಸದಸ್ಯರು ಬಾಗಿಲು ಮುಚ್ಚಿದರು” ಎಂದು ಅವರು ಹೇಳಿದರು.

ಆ ಬಳಿಕ ಆ ಗುಂಪು ಬಾಗಿಲುಗಳಿಗೆ ಕೋಲುಗಳಿಂದ ಹೊಡೆಯಲು ಪ್ರಾರಂಭಿಸಿತು. ಅಷ್ಟೇ ಅಲ್ಲದೇ ಮನೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿದ್ದು, ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ” ಎಂದು ಸಾಹು ತಿಳಿಸಿದ್ದಾರೆ.

”ಅರ್ಧ ಗಂಟೆಯ ಬಳಿಕ ಸ್ಥಳಕ್ಕೆ ಪೊಲೀಸರು ಬಂದರು. ಆ ನಂತರವಷ್ಟೇ ನಾವು ಮನೆಯ ಗೇಟ್‌ನ್ನು ತೆರೆದಿದ್ದೇವೆ. ಪೊಲೀಸರು ಒಳಗೆ ಬಂದಾಗ, ಅವರು ಏನಾಗುತ್ತಿದೆ ಎಂದು ನಮ್ಮನ್ನು ಕೇಳಿದರು ಮತ್ತು ನೋಂದಣಿ ಪತ್ರಗಳನ್ನು ಹುಡುಕಿದರು. ಆದರೆ ಪೊಲೀಸರು ಆ ಗುಂಪಿನ ವಿರುದ್ಧ ಏನೂ ಕ್ರಮ ತೆಗೆದುಕೊಳ್ಳಲಿಲ್ಲ” ಎಂದು ಹೇಳಿದರು.

ಪೊಲೀಸರು ಕ್ರಿಶ್ಚಿಯನ್ ಮುಖಂಡರನ್ನು ಬಂಧಿಸಿ ಠಾಣೆಗೆ ಕರೆದೊಯ್ದರು. ಈ ವೇಳೆ ಆ ಗುಂಪಿನ ಸದಸ್ಯರು ಅವಹೇಳನಕಾರಿಯಾಗಿ ಮಾತನಾಡುತ್ತ ಕ್ರಿಶ್ಚಿಯನ್ ಮುಖಂಡನ ಮೇಲೆ ದಾಳಿ ಮಾಡಲು ಮುಂದಾದರು. ಅಷ್ಟೇ ಅಲ್ಲದೇ ಈ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಲಾಯಿತು ಎಂದು ಸಾಹು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ರಾಮನವಮಿ ಹಿಂಸಾಚಾರದ ಮಾಸ್ಟರ್ ಮೈಂಡ್, ಬಜರಂಗದಳ ಸಂಚಾಲಕ ಪೊಲೀಸರಿಗೆ ಶರಣು

”ಪ್ರಾರ್ಥನೆಯನ್ನು ವಿರೋಧಿಸಿದ ಹಿಂದುತ್ವವಾದಿಗಳ ಗುಂಪಿನ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಿಲ್ಲ ಆದರೆ ಕ್ರಿಶ್ಚಿಯನ್ ಮುಖಂಡರನ್ನು ಐಪಿಸಿ ಸೆಕ್ಷನ್ 151 (ಅದು ಚದುರಿಸಲು ಆದೇಶಿಸಿದ ನಂತರ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳ ಸಭೆಗೆ ಸೇರುವುದು ಅಥವಾ ಮುಂದುವರೆಯುವುದು) ಅಡಿಯಲ್ಲಿ ಬಂಧಿಸಿದ್ದಾರೆ” ಎಂದು ಅವರು ಹೇಳಿದರು.

ಇನ್ನು ವಿನಯ್ ಸಾಹು ಎನ್ನುವವರು ಮಾತನಾಡಿ, ಹಿಂದುತ್ವವಾದಿಗಳ ಗುಂಪು ಕ್ರಿಶ್ಚಿಯನ್‌ರ ಮೇಲೆ ದಾಳಿ ನಡೆಸಿದ ವೇಳೆ ಐವರಿಗೆ ಮೂಗೇಟಾಗಿದೆ ಎಂದು ಹೇಳಿದ್ದಾರೆ.

”ಬಜರಂಗದಳದ ಸದಸ್ಯರು ನಮ್ಮ ಸದಸ್ಯರ ಮೇಲೆ ಹಲ್ಲೆ ನಡೆಸುತ್ತಿದ್ದರು ಪೊಲೀಸರು ಮೂಕ ಪ್ರೇಕ್ಷಕರಾಗಿ ನಿಂತಿದ್ದು ನಮಗೆ ಆಶ್ಚರ್ಯ ತಂದಿದೆ” ಎಂದು ಅವರು ಆರೋಪಿಸಿದ್ದಾರೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಪೊಲೀಸರು ಈ ಹಲ್ಲೆ ಮತ್ತು ವಿಧ್ವಂಸಕ ಆರೋಪಗಳನ್ನು ತಳ್ಳಿಹಾಕಿದ್ದಾರೆ.

ಅಮಲೇಶ್ವರ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಅಧಿಕಾರಿ ಜಗದೀಶ್ ಪ್ರಸಾದ್ ಅವರು ಸ್ಕ್ರೋಲ್‌ಗೆ ತಿಳಿಸಿದ್ದು, ”ನಾವು ಯಾರ ವಿರುದ್ಧವೂ ಎಫ್‌ಐಆರ್‌ ದಾಖಲಿಸಿಲ್ಲ. ಪ್ರಾರ್ಥನಾ ಸಭೆ ನಡೆಯುತ್ತಿದೆ ಎಂದು ಅವರು ಹೇಳಿದರು. ಆ ನಂತರ, ನಾವು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ನಾವು ಯಾವುದೇ ಎಫ್‌ಐಆರ್ ದಾಖಲಿಸಿಲ್ಲ” ಎಂದು ಹೇಳಿದ್ದಾರೆ.

ಛತ್ತೀಸ್‌ಗಢದಲ್ಲಿ ಕ್ರೈಸ್ತರ ಮೇಲೆ ಹಲ್ಲೆ ನಡೆದಿರುವುದು ಇದೇ ಮೊದಲಲ್ಲ. ಈ ಹಿಂದೆ ಎಪ್ರಿಲ್‌ನಲ್ಲಿ ಛತ್ತೀಸ್‌ಗಢದ ಜಗದಲ್‌ಪುರದಲ್ಲಿ ಬಿಜೆಪಿ ಮತ್ತು ಹಿಂದುತ್ವ ಗುಂಪು ವಿಶ್ವ ಹಿಂದೂ ಪರಿಷತ್ ಸದಸ್ಯರು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಆರ್ಥಿಕ ಬಹಿಷ್ಕಾರದ ಪ್ರತಿಜ್ಞೆ ಮಾಡಿದ್ದರು. ಜನವರಿಯಲ್ಲಿ ನಾರಾಯಣಪುರ ಜಿಲ್ಲೆಯಲ್ಲಿ ಗುಂಪೊಂದು ಚರ್ಚ್ ಅನ್ನು ಧ್ವಂಸಗೊಳಿಸಿತ್ತು ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...