Homeಮುಖಪುಟಪ್ರಾರ್ಥನಾ ಸ್ಥಳದ ಮೇಲೆ ಭಜರಂಗದಳ ಸದಸ್ಯರಿಂದ ದಾಳಿ; ಪೊಲೀಸರೆದುರೇ ಕ್ರಿಶ್ಚಿಯನ್ ಮುಖಂಡರ ಮೇಲೆ ಹಲ್ಲೆ: ಆರೋಪ

ಪ್ರಾರ್ಥನಾ ಸ್ಥಳದ ಮೇಲೆ ಭಜರಂಗದಳ ಸದಸ್ಯರಿಂದ ದಾಳಿ; ಪೊಲೀಸರೆದುರೇ ಕ್ರಿಶ್ಚಿಯನ್ ಮುಖಂಡರ ಮೇಲೆ ಹಲ್ಲೆ: ಆರೋಪ

- Advertisement -
- Advertisement -

ಕ್ರಿಶ್ಚಿಯನ್ ಪ್ರಾರ್ಥನಾ ಸ್ಥಳದ ಮೇಲೆ ಹಿಂದೂತ್ವ ಗುಂಪಿನ ಸುಮಾರು 30 ರಿಂದ 40 ಸದಸ್ಯರು ದಾಳಿ ನಡೆಸಿರುವ ಘಟನೆ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಕ್ರಿಶ್ಚಿಯನ್‌ರ ಪ್ರಾರ್ಥನೆಗೆ ಅಡ್ಡಿಪಡಿಸಿ, ಆ ಸ್ಥಳವನ್ನು ಧ್ವಂಸಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಪಟಾನ್ ವಿಧಾನಸಭಾ ಕ್ಷೇತ್ರದ ಅಮಲೇಶ್ವರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಈ ಬಗ್ಗೆ ಮಾತನಾಡಿದ ಛತ್ತೀಸ್‌ಗಢ ಕ್ರಿಶ್ಚಿಯನ್ ಫೋರಂನ ಅಧ್ಯಕ್ಷ ಅರುಣ್ ಪನ್ನಾಲಾಲ್ ಅವರು, ”ಪ್ರಾರ್ಥನೆ ಸೇವೆಗೆ ಅಡ್ಡಿಪಡಿಸಿದವರು ಬಜರಂಗದಳದ ಸದಸ್ಯರೆಂದು ಆರೋಪಿಸಿರುವುದಾಗಿ ಎಂದು ಟೆಲಿಗ್ರಾಫ್ ವರದಿ ಮಾಡಿದೆ.

ಈ ಪ್ರರ್ಥನಾ ಸಭೆಯ ಸದಸ್ಯರಾದ ಲಾಲ್‌ಚಂದ್ ಸಾಹು ಅವರು ಘಟನೆ ಕುರಿತು ಸ್ಕ್ರಾಲ್‌ಗೆ ಮಾಹಿತಿ ನೀಡಿದ್ದು, ”ಹಿಂದುತ್ವ ಗುಂಪಿನ ಸದಸ್ಯರು “ಜೈ ಶ್ರೀ ರಾಮ್” ಎಂದು ಘೋಷಣೆಗಳನ್ನು ಕೂಗುತ್ತಾ ಪ್ರಾರ್ಥನಾ ಸೇವೆ ಮಾಡುತ್ತಿದ್ದ ಮನೆಯ ಕಡೆಗೆ ನುಗ್ಗಲು ಯತ್ನಿಸಿದರು. ಆದರೆ ಆ ಗುಂಪು ಒಳಗೆ ಪ್ರವೇಶಿಸುವುದನ್ನು ತಡೆಯಲು ಸಭೆಯ ಸದಸ್ಯರು ಬಾಗಿಲು ಮುಚ್ಚಿದರು” ಎಂದು ಅವರು ಹೇಳಿದರು.

ಆ ಬಳಿಕ ಆ ಗುಂಪು ಬಾಗಿಲುಗಳಿಗೆ ಕೋಲುಗಳಿಂದ ಹೊಡೆಯಲು ಪ್ರಾರಂಭಿಸಿತು. ಅಷ್ಟೇ ಅಲ್ಲದೇ ಮನೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿದ್ದು, ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ” ಎಂದು ಸಾಹು ತಿಳಿಸಿದ್ದಾರೆ.

”ಅರ್ಧ ಗಂಟೆಯ ಬಳಿಕ ಸ್ಥಳಕ್ಕೆ ಪೊಲೀಸರು ಬಂದರು. ಆ ನಂತರವಷ್ಟೇ ನಾವು ಮನೆಯ ಗೇಟ್‌ನ್ನು ತೆರೆದಿದ್ದೇವೆ. ಪೊಲೀಸರು ಒಳಗೆ ಬಂದಾಗ, ಅವರು ಏನಾಗುತ್ತಿದೆ ಎಂದು ನಮ್ಮನ್ನು ಕೇಳಿದರು ಮತ್ತು ನೋಂದಣಿ ಪತ್ರಗಳನ್ನು ಹುಡುಕಿದರು. ಆದರೆ ಪೊಲೀಸರು ಆ ಗುಂಪಿನ ವಿರುದ್ಧ ಏನೂ ಕ್ರಮ ತೆಗೆದುಕೊಳ್ಳಲಿಲ್ಲ” ಎಂದು ಹೇಳಿದರು.

ಪೊಲೀಸರು ಕ್ರಿಶ್ಚಿಯನ್ ಮುಖಂಡರನ್ನು ಬಂಧಿಸಿ ಠಾಣೆಗೆ ಕರೆದೊಯ್ದರು. ಈ ವೇಳೆ ಆ ಗುಂಪಿನ ಸದಸ್ಯರು ಅವಹೇಳನಕಾರಿಯಾಗಿ ಮಾತನಾಡುತ್ತ ಕ್ರಿಶ್ಚಿಯನ್ ಮುಖಂಡನ ಮೇಲೆ ದಾಳಿ ಮಾಡಲು ಮುಂದಾದರು. ಅಷ್ಟೇ ಅಲ್ಲದೇ ಈ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಲಾಯಿತು ಎಂದು ಸಾಹು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ರಾಮನವಮಿ ಹಿಂಸಾಚಾರದ ಮಾಸ್ಟರ್ ಮೈಂಡ್, ಬಜರಂಗದಳ ಸಂಚಾಲಕ ಪೊಲೀಸರಿಗೆ ಶರಣು

”ಪ್ರಾರ್ಥನೆಯನ್ನು ವಿರೋಧಿಸಿದ ಹಿಂದುತ್ವವಾದಿಗಳ ಗುಂಪಿನ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಿಲ್ಲ ಆದರೆ ಕ್ರಿಶ್ಚಿಯನ್ ಮುಖಂಡರನ್ನು ಐಪಿಸಿ ಸೆಕ್ಷನ್ 151 (ಅದು ಚದುರಿಸಲು ಆದೇಶಿಸಿದ ನಂತರ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳ ಸಭೆಗೆ ಸೇರುವುದು ಅಥವಾ ಮುಂದುವರೆಯುವುದು) ಅಡಿಯಲ್ಲಿ ಬಂಧಿಸಿದ್ದಾರೆ” ಎಂದು ಅವರು ಹೇಳಿದರು.

ಇನ್ನು ವಿನಯ್ ಸಾಹು ಎನ್ನುವವರು ಮಾತನಾಡಿ, ಹಿಂದುತ್ವವಾದಿಗಳ ಗುಂಪು ಕ್ರಿಶ್ಚಿಯನ್‌ರ ಮೇಲೆ ದಾಳಿ ನಡೆಸಿದ ವೇಳೆ ಐವರಿಗೆ ಮೂಗೇಟಾಗಿದೆ ಎಂದು ಹೇಳಿದ್ದಾರೆ.

”ಬಜರಂಗದಳದ ಸದಸ್ಯರು ನಮ್ಮ ಸದಸ್ಯರ ಮೇಲೆ ಹಲ್ಲೆ ನಡೆಸುತ್ತಿದ್ದರು ಪೊಲೀಸರು ಮೂಕ ಪ್ರೇಕ್ಷಕರಾಗಿ ನಿಂತಿದ್ದು ನಮಗೆ ಆಶ್ಚರ್ಯ ತಂದಿದೆ” ಎಂದು ಅವರು ಆರೋಪಿಸಿದ್ದಾರೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಪೊಲೀಸರು ಈ ಹಲ್ಲೆ ಮತ್ತು ವಿಧ್ವಂಸಕ ಆರೋಪಗಳನ್ನು ತಳ್ಳಿಹಾಕಿದ್ದಾರೆ.

ಅಮಲೇಶ್ವರ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಅಧಿಕಾರಿ ಜಗದೀಶ್ ಪ್ರಸಾದ್ ಅವರು ಸ್ಕ್ರೋಲ್‌ಗೆ ತಿಳಿಸಿದ್ದು, ”ನಾವು ಯಾರ ವಿರುದ್ಧವೂ ಎಫ್‌ಐಆರ್‌ ದಾಖಲಿಸಿಲ್ಲ. ಪ್ರಾರ್ಥನಾ ಸಭೆ ನಡೆಯುತ್ತಿದೆ ಎಂದು ಅವರು ಹೇಳಿದರು. ಆ ನಂತರ, ನಾವು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ನಾವು ಯಾವುದೇ ಎಫ್‌ಐಆರ್ ದಾಖಲಿಸಿಲ್ಲ” ಎಂದು ಹೇಳಿದ್ದಾರೆ.

ಛತ್ತೀಸ್‌ಗಢದಲ್ಲಿ ಕ್ರೈಸ್ತರ ಮೇಲೆ ಹಲ್ಲೆ ನಡೆದಿರುವುದು ಇದೇ ಮೊದಲಲ್ಲ. ಈ ಹಿಂದೆ ಎಪ್ರಿಲ್‌ನಲ್ಲಿ ಛತ್ತೀಸ್‌ಗಢದ ಜಗದಲ್‌ಪುರದಲ್ಲಿ ಬಿಜೆಪಿ ಮತ್ತು ಹಿಂದುತ್ವ ಗುಂಪು ವಿಶ್ವ ಹಿಂದೂ ಪರಿಷತ್ ಸದಸ್ಯರು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಆರ್ಥಿಕ ಬಹಿಷ್ಕಾರದ ಪ್ರತಿಜ್ಞೆ ಮಾಡಿದ್ದರು. ಜನವರಿಯಲ್ಲಿ ನಾರಾಯಣಪುರ ಜಿಲ್ಲೆಯಲ್ಲಿ ಗುಂಪೊಂದು ಚರ್ಚ್ ಅನ್ನು ಧ್ವಂಸಗೊಳಿಸಿತ್ತು ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...