Homeಅಂಕಣಗಳುಯಜ್ಞ ನಿರ್ವಿಜ್ಞ ಟೆಂಗ್.. ಟೆಂಗ್... ಟೆಂಗ್.....!!

ಯಜ್ಞ ನಿರ್ವಿಜ್ಞ ಟೆಂಗ್.. ಟೆಂಗ್… ಟೆಂಗ್…..!!

- Advertisement -
- Advertisement -

ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ಅಟ್ಯಾಕ್ ಹನ್ಮಂತ.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಲಬೆರಕೆ ಸರ್ಕಾರವು ಎಲ್ಲಾ ಬಗೆಯಲ್ಲೂ ಕರ್ನಾಟಕ ರಾಜ್ಯವನ್ನು ಮೌಡ್ಯಗಳ ಕೊಂಪೆಯನ್ನಾಗಿ ಮಾಡೇ ಮಾಡುತ್ತೇವೆಂದು ಗುಪ್ತ ಪ್ರತಿಜ್ಞೆ ಮಾಡಿರುವ ಸಂಗತಿ ಇದೀಗ ಹೊರಬಿದ್ದಿದೆ. ಸಿಎಂ ಕುಮಾರಣ್ಣನವರು ರಾಜ್ಯದ ಸರ್ವ ಗುಡಿಗುಂಡಾರಗಳಿಗೂ ದೌಡಾಯಿಸಿ, ಉರುಳುಸೇವೆ ಮಾಡಿ ಬಂದ ನಂತರ, ಡೆಪ್ಯೂಟಿ ಸಿಎಂ ಪರಂ ಸಾಹೇಬ್ರು ತಮ್ಮ ವಿಧಾನಸೌಧದದ ಚೇಂಬರಿನೊಳಗೇ ವಾಸ್ತುಪ್ರಕಾರ ಬೆಂಕಿ ಹಾಕಿ, ಹೋಮ ನೆರವೇರಿಸಿ ತೀರ್ಥ ಕುಡಿದು ನೆತ್ತಿಗೆ ಸವರಿಕೊಂಡಿರುವುದನ್ನು ತಿಳಿದು, ಕರ್ನಾಟಕ ರಾಜ್ಯ ಇನ್ನು ಎಂತೆಂಥ ಮೌಡ್ಯಗಳಿಗೆ ತಲೆ ಕೊಡಬೇಕಾಗುತ್ತದೋ ಎಂದು ತಲೆಯಲ್ಲಿ ಮಿದುಳಿರುವ ಮಂದಿ ಆತಂಕಕ್ಕೆ ಒಳಗಾಗಿದ್ದಾರೆಂದು ವರದಿಯಾಗಿದೆ. ತಮ್ಮ ಕಛೇರಿಯ ಸೋಫಾ ಮೇಲೆ ಯಜ್ಞಕುಂಡವಿಟ್ಟು ‘ಪೊರ್ಕಿ ಹುಚ್ಚ ವೆಂಕಟ್’ ಚಿತ್ರದ ಸೂಪರ್‍ಹಿಟ್ ಹಾಡು ಹಾಡುತ್ತ ನರ್ತಿಸುತ್ತಿದ್ದ ಪರಂ ಸಾಹೇಬರ ಪಂಚೆಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದರೂ, ಅದರ ಪರಿವೆಯಿಲ್ಲದೆ ಟೆಂಗ್ ಟೆಂಗ್ ಟೆಂಗ್ ಎಂದು ಕುಣಿದಾಡುತ್ತ ಪರಂ ಯಜ್ಞವನ್ನು ಪೂರ್ಣಗೊಳಿಸಿದರು ಎಂದು ತಿಳಿದು ಬಂದಿದೆ.

****

ಮಣ್ಣಿನ ಮಕ್ಕಳು, ಮೊಮ್ಮಕ್ಕಳು, ಮತ್ತು ಮರಿಮಕ್ಕಳ ಪಕ್ಷವಾದ ಕೇಡಿಎಸ್ ಪಕ್ಷದ ಪಿಲ್ಲರ್‍ಗಳಾದ ದೊಡ್ಡಗೌಡರ ಮಕ್ಕಳಿಗೆ ಇತ್ತೀಚೆಗೆ ಮಣ್ಣಿನ ಮೇಲೆ ಜಿಗುಪ್ಸೆ ಹುಟ್ಟಿದೆ ಎಂಬ ಅನುಮಾನಗಳು ವ್ಯಕ್ತವಾಗುತ್ತಿದೆ. ಮಸಾಲಾ ಮಿಕ್ಸ್ ಸರ್ಕಾರದ ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ತಮ್ಮ ಟ್ರೇಡ್‍ಮಾರ್ಕ್ ‘ಮಣ್ಣನ್ನು’ ಪ್ರತಿನಿಧಿಸುವ ಕೃಷಿ ಇಲಾಖೆ, ಪಶು ಸಂಗೋಪನ ಇಲಾಖೆ, ನೀರಾವರಿ ಇಲಾಖೆ, ತೋಟಗಾರಿಕಾ ಇಲಾಖೆ – ಇವೆಲ್ಲದಕ್ಕೂ ಎಳ್ಳುನೀರು ಬಿಟ್ಟಿರುವ ದೊಡ್ಡಗೌಡರ ಮೊದ್ದುಮಣಿ ಮೇವಣ್ಣ ತನಗೆ ಇಂಧನ ಮತ್ತು ಪಿಡಬ್ಲ್ಯುಡಿ ಇಲಾಖೆಯಂಥಹ ಹುಲ್ಲುಗಾವಲುಗಳೇ ಬೇಕು, ಕೊಟ್ರೆ ಇವನ್ನ ಕೊಡಿ, ಇಲ್ಲಾಂದ್ರೆ ಮಂತ್ರಿಸಿದ 8 ನಿಂಬೆಹಣ್ಣನ್ನು ಸಿಪ್ಪೆ ಸಮೇತ ನುಂಗಿ, ನಾಲಿಗೆ ಈಚೆ ಹಾಕ್ಕೊಂಡು ಆತ್ಮಹತ್ಯೆ ಮಾಡಿಕೊಳ್ತೇನೆ ಎಂದು ದೊಡ್ಡಗೌಡರನ್ನು ಬೆದರಿಸಿದ್ದಾರೆ ಎಂಬ ಖಚಿತಸುದ್ದಿ ಆಘಾತವಾಣಿಗೆ ಸದ್ಯ ಲಭ್ಯವಾಗಿಲ್ಲ.

****

ಹೆಂಡ ಕುಡಿದ ಮಂಗಗಳ ಕೈಗೆ ತಲೆಕೊಟ್ಟು ಕರಾವಳಿಯಾದ್ಯಂತ ಹಾಫ್‍ಮೆಂಟ್ಲುಗಳಾದ ಶ್ರಮಿಕವರ್ಗದ ಹುಡುಗರು, ದನಸಾಗಾಟ ಗೋಭಕ್ತಿ ಹೆಸರಿನಲ್ಲಿ ಕಂಡ ಕಂಡವರನ್ನು ಹಿಡಿದು ಬಡಿಯುವುದು, ಇವರ ಜೊತೆ ಪೈಪೋಟಿಗಿಳಿದ ದೊಗಳೆಚೆಡ್ಡಿ ಪೊಲೀಸರು ಈ ಹಾಫ್‍ಮೆಂಟ್ಲು ಹುಡುಗರ ಜೊತೆ ಸೇರಿ ಅಮಾಯಕರ ಮೇಲೆ ಹಲ್ಲೆ ನಡೆಸುವುದು, ಲಾಕಪ್ಪಿಗೆ ತಂದು ರುಬ್ಬುವ ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಾ ಹೇಶವ ಕೃಪದ ಮೆಚ್ಚುಗೆಗೆ ಪಾತ್ರರಾಗಿದ್ದಾರೆಂದು ವರದಿಯಾಗಿದೆ. ತಮ್ಮ ಸಾಧನೆಯ ಬಗ್ಗೆ ಹೇಶವ ಕೃಪಾದ ಮೆಚ್ಚುಗೆ ಕೇಳಿ ಉತ್ತೇಜಿತರಾಗಿರುವ ಕರಾವಳಿ ಪೊಲೀಸರು ಭಜಲಂಗಿ, ಶ್ರೀರ್ಯಾಮ್ ಸೇನೆ ಹುಡುಗರನ್ನೂ ನಾಚಿಸುವಂತೆ ಬಡ ಮುಸ್ಲಿಮರನ್ನು ಹೊಡೆದು ಬಡಿದು ಕೊಲ್ಲಲು ಶುರು ಹಚ್ಚಿಕೊಂಡಿದ್ದಾರೆ. ಪೊಲೀಸ್ ಜೀಪುಗಳನ್ನೇ ಶವ ಸಾಗಿಸುವ ವಾಹನಗಳನ್ನಾಗಿ ಮಾಡಿ ಆ-ರೀಸೆಸ್ ಸಂಘದಿಂದ ‘ವೀರಕೇಸರಿ’ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಈ ನಡುವೆ ಕಾನೂನು ಪುಸ್ತಕದ ಕನಿಷ್ಟ ಅರಿವಿರುವ ಪೊಲೀಸ್ ವರಿಷ್ಟಾಧಿಕಾರಿ ನಿಂಬರ್ಗಿ, ಹುಸೇನಬ್ಬ ಎಂಬ ಅಮಾಯಕ ವೃದ್ಧನನ್ನು ಕೊಂದ ತಮ್ಮ ಕೈ ಕೆಳಗಿನ ಈ ‘ವೀರಕೇಸರಿ’ ಪೊಲೀಸರನ್ನು ಒದ್ದು ಅರೆಸ್ಟ್ ಮಾಡಿ ಜೈಲಿಗೆಸೆದಿದ್ದಾರೆ. ಹೀಗೆ ಡೆಡ್‍ಬಾಡಿ ಮ್ಯಾಟರ್ ಹೊರಬರುತ್ತಿದ್ದಂತೆ ಡೆಡ್‍ಬಾಡಿ ತಜ್ಞೆ ಸೋಪಕ್ಕ ಎಂಟ್ರಿ ಕೊಟ್ಟಿದ್ದಾರೆ. ನಿಂಬರ್ಗಿ ಕಚೇರಿಯಲ್ಲಿ ಹಲ್ಲುಗಿಂಜಿ ಪೋಸು ಕೊಟ್ಟು ಹೊರಬದು ಮಾಧ್ಯಮದೆದುರು ‘ತಮ್ಮ ಭಜಲಂಗಿ ಲಫಂಗರು ಭಾಳಾ ಸಾಬಸ್ಥರು, ಅವರ ಬಾಯೊಳಗೆ ಬಲಗಾಲಿಟ್ರೂ ಅವರಿಗೆ ಕಚ್ಚೋಕೆ ಬರೋದಿಲ್ಲ, ಅವ್ರನ್ನ ಕೂಡಲೇ ಬೇಷರತ್ ಬಿಡುಗಡೆ ಮಾಡಬೇಕು’ ಎಂದು ತಲೆತಲೆ ಚಚ್ಚಿಕೊಂಡು ಗೋಳಾಡುತ್ತಿದ್ದಾರೆಂಬ ಸುದ್ದಿ ಬಂದಿದೆ.

****

ಇಲ್ಲಿಯವರೆಗೂ ದೇಶದಲ್ಲಿರೋ ಪಕ್ಷಗಳ ಶಾಸಕರನ್ನು ಕೇಜಿಲೆಕ್ಕದಲ್ಲಿ ಖರೀದಿ ಮಾಡುತ್ತ ಹಾಯಾಗಿ ಓಡಾಡಿಕೊಂಡಿದ್ದ ಗುಜರಾತ್ ಕೇಡಿ ಹಮೀದ್‍ಶಾ ಪ್ಲಾನುಗಳೆಲ್ಲ ವಾಪಸ್ ತಿರುಗಿ ಬಂದು ತನ್ನ ಬೋಳುತಲೆಯ ಮೇಲೇ ದಬ್ಬಾಕಿಕೊಂಡ ಮೇಲೆ, ಅವರಿಗೆ ರಾಜಕೀಯ ಭಯ ಶುರು ವಾಗಿದೆಯಂತೆ. ಕರ್ನಾಟಕದಲ್ಲಿ ಎಡಬಿಡಂಗಿ ಯಾಗಿರುವ ಹಮೀದ್‍ಶಾ ಸದ್ಯಕ್ಕೆ ತನ್ನ ಶತ್ರುಗಳ ಕಾಲ್ಬೆರಳಲ್ಲಿ ನೆಟಿಕೆ ತೆಗೆದು ಮಸಾಜು ಮಾಡಿ ತಮ್ಮ ಕಡೆಗೆ ಸೆಳೆಯುವ ಪ್ರಯತ್ನದಲ್ಲಿದ್ದಾರೆಂದು ತಿಳಿದುಬಂದಿದೆ. 4 ವರ್ಷ ಸತತವಾಗಿ ದೇಶದ ಜನರ ಬದುಕಿನ ಜೊತೆಗೆ ಚೆಲ್ಲಾಟವಾಡುತ್ತಾ, ಪ್ರಾಬ್ಲಂಗಳು ಬಂದ್ರೆ ಸಾಕು, ವಿದೇಶಕ್ಕೆ ಓಡಿ ಹೋಗುವುದನ್ನೇ ಒಂದು ಚಾಳಿ ಮಾಡಿಕೊಂಡಿದ್ದ ನಾಲಾಯಕ್ ಪಕೋಡೇಂದ್ರನ ಆಟಾಟೋಪಗಳಿಗೆ ಪಕ್ಷದ ಮಾನ ಮರ್ಯಾದೆ ಹಡಾಲೆದ್ದು ಹೋದ ಮೇಲೆ ಈ ಬೋಳುತಲೆ ಕ್ರಿಮಿನಲ್ ಮತ್ತು ಪಕೋಡೇಂದ್ರನ ಕಣ್ಕಟ್ ಕಸುಬಿನ ಅಂಗಡಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ದಬ್ಬಾಕಿಕೊಳ್ಳುವುದು ನಿಶ್ಚಯ ಎಂಬ ವರದಿಗಳು ಎಲ್ಲೆಡೆಯಿಂದ ಬರುತ್ತಿವೆ.

****

ತಮ್ಮ ಪಾಡಿಗೆ ತಾವು ‘ಮಂದಿರ್ ವಹೀ ಬನಾಯೇಂಗೆ, ಸಂಡಾಸ್ ಯಹೀ ಬನಾಯೇಂಗೆ’ ಎಂದು ಕೀರಲುಧ್ವನಿಯಲ್ಲಿ ಕಿರುಚಾಡುತ್ತ ತಿರುಗುತ್ತಿದ್ದ ಸನ್ಮಾನ್ಯ ‘ತೇಜಾವರ ಸ್ವಾಮಿ’ಗಳ ತಲೆಯೊಳಗೆ ಇದ್ದಕ್ಕಿದ್ದಂತೆ 100 ಕ್ಯಾಂಡಲ್ ಬಲ್ಪೊಂದು ಠಣಾರನೆ ಫಳಫಳಿಸಿದೆ ಎಂದು ಗೊತ್ತಾಗಿದೆ. ಈ ಪಕೋಡೇಂದ್ರ ಒಬ್ಬ ನಾಲಾಯಕ್, ಸುಳ್ಳುಪುರುಕ.. ಇವನಿಂದ ಮೂರುಪೈಸೆಯ ಉಪಯೋಗ ಆಗಿಲ್ಲ, ಕಪ್ಪುಹಣವನ್ನ ಗಂಟುಕಟ್ಟಿಕೊಂಡು ತಲೆಮೇಲೆ ಹೊತ್ಕೊಂಡ್ ತರ್ತೀನಿ ಅಂದಿದ್ದ ಈತ, ಸ್ವಿಸ್ ಬ್ಯಾಂಕಿಂದ ಒಂದು ಸೊಳ್ಳೆಯನ್ನೂ ಹಿಡಿದು ತಂದಿಲ್ಲ. ಗಂಗಾನದಿ ಸ್ವಚ್ಛ ಮಾಡ್ತೀನಿ ಅಂದೋನು ದೇಶದೇಶಗಳ ಪ್ಲೇನು ಹತ್ತಿ ಅಪಾಪೋಲಿ ಥರ ಓಡಾಡ್ಕೊಂಡವ್ನೆ ಎಂದು ತಮ್ಮ ಅಸಮಾಧಾನ ಹೊರಗೆಡವಿದ್ದಾರೆ. ತೇಜಾವರ ಶ್ರೀಗಳ ಈ ಅಬ್ಬರ-ಬೊಬ್ಬರವನ್ನು ಕೇಳುತ್ತಿದ್ದಂತೆ ತೊಡೆಸಂದಿಗೆ ಓತಿಕ್ಯಾತ ಹೊಕ್ಕಂತಾದ ಈಶು ಅಂಕಲ್.. ‘ಪಾಪ ಶ್ರೀಗಳಿಗೆ ವಯಸ್ಸಾಗಿ, ಅರುಳು-ಮರುಳು ಆಡಿದಂಗೆ ಆಡ್ತಾವ್ರೆ.. ಅವ್ರನ್ನ ನಾನೇ ಕೈ ಹಿಡಿದು ದರದರ ಎಳ್ಕೊಂಡು ಹೋಗಿ ಹೆಣ ಮುಳುಗಿಸೋ ಗಂಗಾನದಿಯೊಳಗೆ 3 ಸಲ ಮುಳುಗಿಸಿ ವಾಪಸ್ ಕರ್ಕೊಂಡ್ ಬರ್ತೀನಿ’ ಎಂದಿದ್ದಾರೆ. ಇದಕ್ಕೆ ಪ್ರತಿಕ್ರ್ರಿಯಿಸಿರೋ ತೇಜಾವರ ಶ್ರೀಗಳು.. ಈ ಈಶು ನನ್ ಮೇಲೆ ಯಾವ್ದೋ ಹಳೇ ಸೇಡನ್ನ ತೀರಿಸಿಕೊಳ್ಳೋಕೆ ಪ್ಲಾನ್ ಮಾಡಿದ್ದಾನೆ.. ನಾನು ಯಾವ ಕಾರಣಕ್ಕೂ ಅವನ ಜೊತೆ ಹೋಗೋದಿಲ್ಲ ಎಂದು ಹೇಳಿದ ಸುದ್ದಿ ಇನ್ನೂ ವರದಿಯಾಗಿಲ್ಲ.

****

ಮಾತಿಗೆ ಮೂರು ಸಲ ಸೈನಿಕರನ್ನು ಎಳೆತಂದು ದೇಶಭಕ್ತಿ ಅಂದ್ರೆ ಸೈನಿಕರನ್ನು ತೋರಿಸಿ ಪ್ರಶ್ನೆಗಳಿಂದ ತಲೆ ತಪ್ಪಿಸಿಕೊಂಡು ಓಡಿಹೋಗುತ್ತಿದ್ದ ಕಮಲ ಪಕ್ಷದದವರು ಈಗ ಭಯಂಕರ ಕೆಸರಿನ ಹೊಂಡಕ್ಕೆ ತಲೆಯಿಟ್ಟು ಸಿಗೆÉಬಿದ್ದಿದ್ದಾರೆ. ಸೈನಿಕರ ಹೆಣವಿಡುವ ಪೆಟ್ಟಿಗೆಯಲ್ಲೂ ಹಣ ತಿಂದÀ ಈ ಎಂಜಲು ಹೇತ್ಲಾಂಡಿಗಳು ಸೈನಿಕರ ಯೂನಿಫಾರ್ಮಿಗೂ ಹಣ ಕೊಡದೆ ಕೈ ಎತ್ತಿರುವುದು ಬಯಲಾಗಿದೆ. ತನ್ನ ಕಿಸಲಗೇಡಿ ಮುಸುಡಿಯನ್ನು ಪತ್ರಿಕೆಗಳಲ್ಲಿ ಪ್ರಿಂಟು ಹಾಕಿಸಿಕೊಳ್ಳಲು ನಾಲ್ಕೂವರೆ ಸಾವಿರ ಕೋಟಿ ಜನರ ದುಡ್ಡನ್ನು ಬಳಸಿದ ಪಕೋಡೇಂದ್ರನಿಗೆ ಸೈನಿಕರ ಯೂನಿಫಾರ್ಮಿಗೆ ಕೊಡುವಷ್ಟೂ ಹಣವಿಲ್ಲವೇ ಎಂದು ಜನರು ಜರ್ದಾಬೀಡ ಜಗಿದು ಉಗಿಯುತ್ತಿದ್ದಾರೆ. ಇಷ್ಟಾದರೂ ನಾಚಿಕೆಯಿಲ್ಲದ ಪಕೋಡೇಂದ್ರನು ಬೀಡಾ ಬಿದ್ದ ಮುಖವನ್ನು ಒರೆಸಿಕೊಂಡು ಮೀಸೆ ಮೇಲೆ ಮಾತ್ರ ಬಿದ್ದಿಲ್ಲ ಎಂದು ತನ್ನ 56 ಇಂಚಿನ ಪೃಷ್ಠವನ್ನು ತಟ್ಟಿಕೊಳ್ಳುತ್ತಿದ್ದಾನೆಂದು ರಾಜಧಾನಿಯಿಂದ ವರದಿಯಾಗಿದೆ.

ಇಲ್ಲಿಗೆ ಅಟ್ಯಾಕ್ ಹನ್ಮಂತ ಪ್ರಸ್ತುತಪಡಿಸುವ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮುಂದಿನವಾರ ಮತ್ತೆ ಸಿಗೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....