Homeಅಂಕಣಗಳುಯಜ್ಞ ನಿರ್ವಿಜ್ಞ ಟೆಂಗ್.. ಟೆಂಗ್... ಟೆಂಗ್.....!!

ಯಜ್ಞ ನಿರ್ವಿಜ್ಞ ಟೆಂಗ್.. ಟೆಂಗ್… ಟೆಂಗ್…..!!

- Advertisement -
- Advertisement -

ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ಅಟ್ಯಾಕ್ ಹನ್ಮಂತ.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಲಬೆರಕೆ ಸರ್ಕಾರವು ಎಲ್ಲಾ ಬಗೆಯಲ್ಲೂ ಕರ್ನಾಟಕ ರಾಜ್ಯವನ್ನು ಮೌಡ್ಯಗಳ ಕೊಂಪೆಯನ್ನಾಗಿ ಮಾಡೇ ಮಾಡುತ್ತೇವೆಂದು ಗುಪ್ತ ಪ್ರತಿಜ್ಞೆ ಮಾಡಿರುವ ಸಂಗತಿ ಇದೀಗ ಹೊರಬಿದ್ದಿದೆ. ಸಿಎಂ ಕುಮಾರಣ್ಣನವರು ರಾಜ್ಯದ ಸರ್ವ ಗುಡಿಗುಂಡಾರಗಳಿಗೂ ದೌಡಾಯಿಸಿ, ಉರುಳುಸೇವೆ ಮಾಡಿ ಬಂದ ನಂತರ, ಡೆಪ್ಯೂಟಿ ಸಿಎಂ ಪರಂ ಸಾಹೇಬ್ರು ತಮ್ಮ ವಿಧಾನಸೌಧದದ ಚೇಂಬರಿನೊಳಗೇ ವಾಸ್ತುಪ್ರಕಾರ ಬೆಂಕಿ ಹಾಕಿ, ಹೋಮ ನೆರವೇರಿಸಿ ತೀರ್ಥ ಕುಡಿದು ನೆತ್ತಿಗೆ ಸವರಿಕೊಂಡಿರುವುದನ್ನು ತಿಳಿದು, ಕರ್ನಾಟಕ ರಾಜ್ಯ ಇನ್ನು ಎಂತೆಂಥ ಮೌಡ್ಯಗಳಿಗೆ ತಲೆ ಕೊಡಬೇಕಾಗುತ್ತದೋ ಎಂದು ತಲೆಯಲ್ಲಿ ಮಿದುಳಿರುವ ಮಂದಿ ಆತಂಕಕ್ಕೆ ಒಳಗಾಗಿದ್ದಾರೆಂದು ವರದಿಯಾಗಿದೆ. ತಮ್ಮ ಕಛೇರಿಯ ಸೋಫಾ ಮೇಲೆ ಯಜ್ಞಕುಂಡವಿಟ್ಟು ‘ಪೊರ್ಕಿ ಹುಚ್ಚ ವೆಂಕಟ್’ ಚಿತ್ರದ ಸೂಪರ್‍ಹಿಟ್ ಹಾಡು ಹಾಡುತ್ತ ನರ್ತಿಸುತ್ತಿದ್ದ ಪರಂ ಸಾಹೇಬರ ಪಂಚೆಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದರೂ, ಅದರ ಪರಿವೆಯಿಲ್ಲದೆ ಟೆಂಗ್ ಟೆಂಗ್ ಟೆಂಗ್ ಎಂದು ಕುಣಿದಾಡುತ್ತ ಪರಂ ಯಜ್ಞವನ್ನು ಪೂರ್ಣಗೊಳಿಸಿದರು ಎಂದು ತಿಳಿದು ಬಂದಿದೆ.

****

ಮಣ್ಣಿನ ಮಕ್ಕಳು, ಮೊಮ್ಮಕ್ಕಳು, ಮತ್ತು ಮರಿಮಕ್ಕಳ ಪಕ್ಷವಾದ ಕೇಡಿಎಸ್ ಪಕ್ಷದ ಪಿಲ್ಲರ್‍ಗಳಾದ ದೊಡ್ಡಗೌಡರ ಮಕ್ಕಳಿಗೆ ಇತ್ತೀಚೆಗೆ ಮಣ್ಣಿನ ಮೇಲೆ ಜಿಗುಪ್ಸೆ ಹುಟ್ಟಿದೆ ಎಂಬ ಅನುಮಾನಗಳು ವ್ಯಕ್ತವಾಗುತ್ತಿದೆ. ಮಸಾಲಾ ಮಿಕ್ಸ್ ಸರ್ಕಾರದ ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ತಮ್ಮ ಟ್ರೇಡ್‍ಮಾರ್ಕ್ ‘ಮಣ್ಣನ್ನು’ ಪ್ರತಿನಿಧಿಸುವ ಕೃಷಿ ಇಲಾಖೆ, ಪಶು ಸಂಗೋಪನ ಇಲಾಖೆ, ನೀರಾವರಿ ಇಲಾಖೆ, ತೋಟಗಾರಿಕಾ ಇಲಾಖೆ – ಇವೆಲ್ಲದಕ್ಕೂ ಎಳ್ಳುನೀರು ಬಿಟ್ಟಿರುವ ದೊಡ್ಡಗೌಡರ ಮೊದ್ದುಮಣಿ ಮೇವಣ್ಣ ತನಗೆ ಇಂಧನ ಮತ್ತು ಪಿಡಬ್ಲ್ಯುಡಿ ಇಲಾಖೆಯಂಥಹ ಹುಲ್ಲುಗಾವಲುಗಳೇ ಬೇಕು, ಕೊಟ್ರೆ ಇವನ್ನ ಕೊಡಿ, ಇಲ್ಲಾಂದ್ರೆ ಮಂತ್ರಿಸಿದ 8 ನಿಂಬೆಹಣ್ಣನ್ನು ಸಿಪ್ಪೆ ಸಮೇತ ನುಂಗಿ, ನಾಲಿಗೆ ಈಚೆ ಹಾಕ್ಕೊಂಡು ಆತ್ಮಹತ್ಯೆ ಮಾಡಿಕೊಳ್ತೇನೆ ಎಂದು ದೊಡ್ಡಗೌಡರನ್ನು ಬೆದರಿಸಿದ್ದಾರೆ ಎಂಬ ಖಚಿತಸುದ್ದಿ ಆಘಾತವಾಣಿಗೆ ಸದ್ಯ ಲಭ್ಯವಾಗಿಲ್ಲ.

****

ಹೆಂಡ ಕುಡಿದ ಮಂಗಗಳ ಕೈಗೆ ತಲೆಕೊಟ್ಟು ಕರಾವಳಿಯಾದ್ಯಂತ ಹಾಫ್‍ಮೆಂಟ್ಲುಗಳಾದ ಶ್ರಮಿಕವರ್ಗದ ಹುಡುಗರು, ದನಸಾಗಾಟ ಗೋಭಕ್ತಿ ಹೆಸರಿನಲ್ಲಿ ಕಂಡ ಕಂಡವರನ್ನು ಹಿಡಿದು ಬಡಿಯುವುದು, ಇವರ ಜೊತೆ ಪೈಪೋಟಿಗಿಳಿದ ದೊಗಳೆಚೆಡ್ಡಿ ಪೊಲೀಸರು ಈ ಹಾಫ್‍ಮೆಂಟ್ಲು ಹುಡುಗರ ಜೊತೆ ಸೇರಿ ಅಮಾಯಕರ ಮೇಲೆ ಹಲ್ಲೆ ನಡೆಸುವುದು, ಲಾಕಪ್ಪಿಗೆ ತಂದು ರುಬ್ಬುವ ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಾ ಹೇಶವ ಕೃಪದ ಮೆಚ್ಚುಗೆಗೆ ಪಾತ್ರರಾಗಿದ್ದಾರೆಂದು ವರದಿಯಾಗಿದೆ. ತಮ್ಮ ಸಾಧನೆಯ ಬಗ್ಗೆ ಹೇಶವ ಕೃಪಾದ ಮೆಚ್ಚುಗೆ ಕೇಳಿ ಉತ್ತೇಜಿತರಾಗಿರುವ ಕರಾವಳಿ ಪೊಲೀಸರು ಭಜಲಂಗಿ, ಶ್ರೀರ್ಯಾಮ್ ಸೇನೆ ಹುಡುಗರನ್ನೂ ನಾಚಿಸುವಂತೆ ಬಡ ಮುಸ್ಲಿಮರನ್ನು ಹೊಡೆದು ಬಡಿದು ಕೊಲ್ಲಲು ಶುರು ಹಚ್ಚಿಕೊಂಡಿದ್ದಾರೆ. ಪೊಲೀಸ್ ಜೀಪುಗಳನ್ನೇ ಶವ ಸಾಗಿಸುವ ವಾಹನಗಳನ್ನಾಗಿ ಮಾಡಿ ಆ-ರೀಸೆಸ್ ಸಂಘದಿಂದ ‘ವೀರಕೇಸರಿ’ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಈ ನಡುವೆ ಕಾನೂನು ಪುಸ್ತಕದ ಕನಿಷ್ಟ ಅರಿವಿರುವ ಪೊಲೀಸ್ ವರಿಷ್ಟಾಧಿಕಾರಿ ನಿಂಬರ್ಗಿ, ಹುಸೇನಬ್ಬ ಎಂಬ ಅಮಾಯಕ ವೃದ್ಧನನ್ನು ಕೊಂದ ತಮ್ಮ ಕೈ ಕೆಳಗಿನ ಈ ‘ವೀರಕೇಸರಿ’ ಪೊಲೀಸರನ್ನು ಒದ್ದು ಅರೆಸ್ಟ್ ಮಾಡಿ ಜೈಲಿಗೆಸೆದಿದ್ದಾರೆ. ಹೀಗೆ ಡೆಡ್‍ಬಾಡಿ ಮ್ಯಾಟರ್ ಹೊರಬರುತ್ತಿದ್ದಂತೆ ಡೆಡ್‍ಬಾಡಿ ತಜ್ಞೆ ಸೋಪಕ್ಕ ಎಂಟ್ರಿ ಕೊಟ್ಟಿದ್ದಾರೆ. ನಿಂಬರ್ಗಿ ಕಚೇರಿಯಲ್ಲಿ ಹಲ್ಲುಗಿಂಜಿ ಪೋಸು ಕೊಟ್ಟು ಹೊರಬದು ಮಾಧ್ಯಮದೆದುರು ‘ತಮ್ಮ ಭಜಲಂಗಿ ಲಫಂಗರು ಭಾಳಾ ಸಾಬಸ್ಥರು, ಅವರ ಬಾಯೊಳಗೆ ಬಲಗಾಲಿಟ್ರೂ ಅವರಿಗೆ ಕಚ್ಚೋಕೆ ಬರೋದಿಲ್ಲ, ಅವ್ರನ್ನ ಕೂಡಲೇ ಬೇಷರತ್ ಬಿಡುಗಡೆ ಮಾಡಬೇಕು’ ಎಂದು ತಲೆತಲೆ ಚಚ್ಚಿಕೊಂಡು ಗೋಳಾಡುತ್ತಿದ್ದಾರೆಂಬ ಸುದ್ದಿ ಬಂದಿದೆ.

****

ಇಲ್ಲಿಯವರೆಗೂ ದೇಶದಲ್ಲಿರೋ ಪಕ್ಷಗಳ ಶಾಸಕರನ್ನು ಕೇಜಿಲೆಕ್ಕದಲ್ಲಿ ಖರೀದಿ ಮಾಡುತ್ತ ಹಾಯಾಗಿ ಓಡಾಡಿಕೊಂಡಿದ್ದ ಗುಜರಾತ್ ಕೇಡಿ ಹಮೀದ್‍ಶಾ ಪ್ಲಾನುಗಳೆಲ್ಲ ವಾಪಸ್ ತಿರುಗಿ ಬಂದು ತನ್ನ ಬೋಳುತಲೆಯ ಮೇಲೇ ದಬ್ಬಾಕಿಕೊಂಡ ಮೇಲೆ, ಅವರಿಗೆ ರಾಜಕೀಯ ಭಯ ಶುರು ವಾಗಿದೆಯಂತೆ. ಕರ್ನಾಟಕದಲ್ಲಿ ಎಡಬಿಡಂಗಿ ಯಾಗಿರುವ ಹಮೀದ್‍ಶಾ ಸದ್ಯಕ್ಕೆ ತನ್ನ ಶತ್ರುಗಳ ಕಾಲ್ಬೆರಳಲ್ಲಿ ನೆಟಿಕೆ ತೆಗೆದು ಮಸಾಜು ಮಾಡಿ ತಮ್ಮ ಕಡೆಗೆ ಸೆಳೆಯುವ ಪ್ರಯತ್ನದಲ್ಲಿದ್ದಾರೆಂದು ತಿಳಿದುಬಂದಿದೆ. 4 ವರ್ಷ ಸತತವಾಗಿ ದೇಶದ ಜನರ ಬದುಕಿನ ಜೊತೆಗೆ ಚೆಲ್ಲಾಟವಾಡುತ್ತಾ, ಪ್ರಾಬ್ಲಂಗಳು ಬಂದ್ರೆ ಸಾಕು, ವಿದೇಶಕ್ಕೆ ಓಡಿ ಹೋಗುವುದನ್ನೇ ಒಂದು ಚಾಳಿ ಮಾಡಿಕೊಂಡಿದ್ದ ನಾಲಾಯಕ್ ಪಕೋಡೇಂದ್ರನ ಆಟಾಟೋಪಗಳಿಗೆ ಪಕ್ಷದ ಮಾನ ಮರ್ಯಾದೆ ಹಡಾಲೆದ್ದು ಹೋದ ಮೇಲೆ ಈ ಬೋಳುತಲೆ ಕ್ರಿಮಿನಲ್ ಮತ್ತು ಪಕೋಡೇಂದ್ರನ ಕಣ್ಕಟ್ ಕಸುಬಿನ ಅಂಗಡಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ದಬ್ಬಾಕಿಕೊಳ್ಳುವುದು ನಿಶ್ಚಯ ಎಂಬ ವರದಿಗಳು ಎಲ್ಲೆಡೆಯಿಂದ ಬರುತ್ತಿವೆ.

****

ತಮ್ಮ ಪಾಡಿಗೆ ತಾವು ‘ಮಂದಿರ್ ವಹೀ ಬನಾಯೇಂಗೆ, ಸಂಡಾಸ್ ಯಹೀ ಬನಾಯೇಂಗೆ’ ಎಂದು ಕೀರಲುಧ್ವನಿಯಲ್ಲಿ ಕಿರುಚಾಡುತ್ತ ತಿರುಗುತ್ತಿದ್ದ ಸನ್ಮಾನ್ಯ ‘ತೇಜಾವರ ಸ್ವಾಮಿ’ಗಳ ತಲೆಯೊಳಗೆ ಇದ್ದಕ್ಕಿದ್ದಂತೆ 100 ಕ್ಯಾಂಡಲ್ ಬಲ್ಪೊಂದು ಠಣಾರನೆ ಫಳಫಳಿಸಿದೆ ಎಂದು ಗೊತ್ತಾಗಿದೆ. ಈ ಪಕೋಡೇಂದ್ರ ಒಬ್ಬ ನಾಲಾಯಕ್, ಸುಳ್ಳುಪುರುಕ.. ಇವನಿಂದ ಮೂರುಪೈಸೆಯ ಉಪಯೋಗ ಆಗಿಲ್ಲ, ಕಪ್ಪುಹಣವನ್ನ ಗಂಟುಕಟ್ಟಿಕೊಂಡು ತಲೆಮೇಲೆ ಹೊತ್ಕೊಂಡ್ ತರ್ತೀನಿ ಅಂದಿದ್ದ ಈತ, ಸ್ವಿಸ್ ಬ್ಯಾಂಕಿಂದ ಒಂದು ಸೊಳ್ಳೆಯನ್ನೂ ಹಿಡಿದು ತಂದಿಲ್ಲ. ಗಂಗಾನದಿ ಸ್ವಚ್ಛ ಮಾಡ್ತೀನಿ ಅಂದೋನು ದೇಶದೇಶಗಳ ಪ್ಲೇನು ಹತ್ತಿ ಅಪಾಪೋಲಿ ಥರ ಓಡಾಡ್ಕೊಂಡವ್ನೆ ಎಂದು ತಮ್ಮ ಅಸಮಾಧಾನ ಹೊರಗೆಡವಿದ್ದಾರೆ. ತೇಜಾವರ ಶ್ರೀಗಳ ಈ ಅಬ್ಬರ-ಬೊಬ್ಬರವನ್ನು ಕೇಳುತ್ತಿದ್ದಂತೆ ತೊಡೆಸಂದಿಗೆ ಓತಿಕ್ಯಾತ ಹೊಕ್ಕಂತಾದ ಈಶು ಅಂಕಲ್.. ‘ಪಾಪ ಶ್ರೀಗಳಿಗೆ ವಯಸ್ಸಾಗಿ, ಅರುಳು-ಮರುಳು ಆಡಿದಂಗೆ ಆಡ್ತಾವ್ರೆ.. ಅವ್ರನ್ನ ನಾನೇ ಕೈ ಹಿಡಿದು ದರದರ ಎಳ್ಕೊಂಡು ಹೋಗಿ ಹೆಣ ಮುಳುಗಿಸೋ ಗಂಗಾನದಿಯೊಳಗೆ 3 ಸಲ ಮುಳುಗಿಸಿ ವಾಪಸ್ ಕರ್ಕೊಂಡ್ ಬರ್ತೀನಿ’ ಎಂದಿದ್ದಾರೆ. ಇದಕ್ಕೆ ಪ್ರತಿಕ್ರ್ರಿಯಿಸಿರೋ ತೇಜಾವರ ಶ್ರೀಗಳು.. ಈ ಈಶು ನನ್ ಮೇಲೆ ಯಾವ್ದೋ ಹಳೇ ಸೇಡನ್ನ ತೀರಿಸಿಕೊಳ್ಳೋಕೆ ಪ್ಲಾನ್ ಮಾಡಿದ್ದಾನೆ.. ನಾನು ಯಾವ ಕಾರಣಕ್ಕೂ ಅವನ ಜೊತೆ ಹೋಗೋದಿಲ್ಲ ಎಂದು ಹೇಳಿದ ಸುದ್ದಿ ಇನ್ನೂ ವರದಿಯಾಗಿಲ್ಲ.

****

ಮಾತಿಗೆ ಮೂರು ಸಲ ಸೈನಿಕರನ್ನು ಎಳೆತಂದು ದೇಶಭಕ್ತಿ ಅಂದ್ರೆ ಸೈನಿಕರನ್ನು ತೋರಿಸಿ ಪ್ರಶ್ನೆಗಳಿಂದ ತಲೆ ತಪ್ಪಿಸಿಕೊಂಡು ಓಡಿಹೋಗುತ್ತಿದ್ದ ಕಮಲ ಪಕ್ಷದದವರು ಈಗ ಭಯಂಕರ ಕೆಸರಿನ ಹೊಂಡಕ್ಕೆ ತಲೆಯಿಟ್ಟು ಸಿಗೆÉಬಿದ್ದಿದ್ದಾರೆ. ಸೈನಿಕರ ಹೆಣವಿಡುವ ಪೆಟ್ಟಿಗೆಯಲ್ಲೂ ಹಣ ತಿಂದÀ ಈ ಎಂಜಲು ಹೇತ್ಲಾಂಡಿಗಳು ಸೈನಿಕರ ಯೂನಿಫಾರ್ಮಿಗೂ ಹಣ ಕೊಡದೆ ಕೈ ಎತ್ತಿರುವುದು ಬಯಲಾಗಿದೆ. ತನ್ನ ಕಿಸಲಗೇಡಿ ಮುಸುಡಿಯನ್ನು ಪತ್ರಿಕೆಗಳಲ್ಲಿ ಪ್ರಿಂಟು ಹಾಕಿಸಿಕೊಳ್ಳಲು ನಾಲ್ಕೂವರೆ ಸಾವಿರ ಕೋಟಿ ಜನರ ದುಡ್ಡನ್ನು ಬಳಸಿದ ಪಕೋಡೇಂದ್ರನಿಗೆ ಸೈನಿಕರ ಯೂನಿಫಾರ್ಮಿಗೆ ಕೊಡುವಷ್ಟೂ ಹಣವಿಲ್ಲವೇ ಎಂದು ಜನರು ಜರ್ದಾಬೀಡ ಜಗಿದು ಉಗಿಯುತ್ತಿದ್ದಾರೆ. ಇಷ್ಟಾದರೂ ನಾಚಿಕೆಯಿಲ್ಲದ ಪಕೋಡೇಂದ್ರನು ಬೀಡಾ ಬಿದ್ದ ಮುಖವನ್ನು ಒರೆಸಿಕೊಂಡು ಮೀಸೆ ಮೇಲೆ ಮಾತ್ರ ಬಿದ್ದಿಲ್ಲ ಎಂದು ತನ್ನ 56 ಇಂಚಿನ ಪೃಷ್ಠವನ್ನು ತಟ್ಟಿಕೊಳ್ಳುತ್ತಿದ್ದಾನೆಂದು ರಾಜಧಾನಿಯಿಂದ ವರದಿಯಾಗಿದೆ.

ಇಲ್ಲಿಗೆ ಅಟ್ಯಾಕ್ ಹನ್ಮಂತ ಪ್ರಸ್ತುತಪಡಿಸುವ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮುಂದಿನವಾರ ಮತ್ತೆ ಸಿಗೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...