HomeUncategorizedಸಾಣೆಹಳ್ಳಿ ಶ್ರೀ ಗುರಿಯಾಗಿಸಿ ಬಸವ ತತ್ವದ ಮೇಲೆ ದಾಳಿ: ಪ್ರಜ್ಞಾವಂತರ ವೇದಿಕೆ

ಸಾಣೆಹಳ್ಳಿ ಶ್ರೀ ಗುರಿಯಾಗಿಸಿ ಬಸವ ತತ್ವದ ಮೇಲೆ ದಾಳಿ: ಪ್ರಜ್ಞಾವಂತರ ವೇದಿಕೆ

- Advertisement -
- Advertisement -

ಸಾಣೆಹಳ್ಳಿ ಶ್ರೀ ಸೇರಿದಂತೆ ರಾಜ್ಯದ ಧಾರ್ಮಿಕ ಗುರುಗಳು, ಚಿಂತಕರು, ಸಾಹಿತಿಗಳು ಮತ್ತು ಹೋರಾಟಗಾರರ ಮೇಲೆ ನಡೆಯುತ್ತಿರುವ ಸೈದ್ಧಾಂತಿಕ ದಾಳಿಯು ಬಸವತತ್ವದ ಮೇಲಾದ ದಾಳಿಯ ಮುಂದುವರಿಕೆ ಎಂದು ಕರ್ನಾಟಕ ಪ್ರಜ್ಞಾವಂತರ ವೇದಿಕೆ ಹೇಳಿತು.

ಗಣೇಶನ ಕುರಿತ ಹೇಳಿಕೆ ಮುಂದಿಟ್ಟುಕೊಂಡು ಸಾಣೆಹಳ್ಳಿ ಶ್ರೀ ಮೇಲೆ ನಡೆಯುತ್ತಿರುವ ಸೈದ್ಧಾಂತಿಕ ದಾಳಿಯನ್ನು ಖಂಡಿಸಿ ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು (ನ.22) ಪ್ರಗತಿಪರರು ಮತ್ತು ಹೋರಾಟಗಾರರಿಂದ ಕರ್ನಾಟಕ ಪ್ರಜ್ಞಾವಂತರ ಅನುಭವ ಮಂಟಪ ಎಂಬ ಹೆಸರಿನಲ್ಲಿ ಖಂಡನಾ ಸಭೆ ನಡೆಯಿತು. ಸಾಣೆಹಳ್ಳಿ ಶ್ರೀ, ಬಸವ ಪ್ರಕಾಶ ಸ್ವಾಮೀಜಿ ಬೆಳಗಾವಿ, ಶಿವಯೋಗಿ ಸ್ವಾಮೀಜಿ ಬೆಂಗಳೂರು ಸೇರಿದಂತೆ ಪ್ರಮುಖರು ಹಾಜರಿದ್ದರು.

ಅನುಭವ ಮಂಟಪ ಸಭೆ ಬಳಿಕ ಪ್ರಜ್ಞಾವಂತರ ವೇದಿಕೆಯ ಪ್ರಮುಖರು ಸುದ್ದಿಗೋಷ್ಠಿ ನಡೆಸಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಮತ್ತು ಬಸವತ್ವವನ್ನು ಪಸರಿಸಲು ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಗತಿಪರ ಚಿಂತಕ ಡಾ. ಸಿದ್ದನಗೌಡ ಪಾಟೀಲ, ವೈದಿಕ ಚಿಂತನೆಯ ಪ್ರತಿಪಾದಕರು ನಾಡಿನ ಪ್ರಗತಿಪರರು, ಬಸವತ್ವ ಪ್ರತಿಪಾದಕರ ಮೇಲೆ ಬಹಳ ವ್ಯವಸ್ಥಿತವಾಗಿ ದಾಳಿ ನಡೆಸುತ್ತಿದ್ದಾರೆ. ಇದೇ ವೈದಿಕ, ಸನಾತನ ಚಿಂತನೆ ಗೌರಿ, ಕಲಬುರಗಿಯನ್ನು ಹತ್ಯೆ ಮಾಡಿದೆ. ಹಾಗಂತ, ನಾವು ಸರ್ಕಾರದ ಕಡೆಯಿಂದ ಯಾವುದೇ ರಕ್ಷಣೆ ಕೇಳುತ್ತಿಲ್ಲ. ನಮ್ಮ ಉದ್ದೇಶ ಬಸವಾದಿ ಶರಣರ ಚಿಂತನೆಯ ಕ್ರಾಂತಿ ಎಂದರು.

ದೇಶದಲ್ಲಿ ಮತ ಧಾರ್ಮಿಕ ರಾಜಕಾರಣ ನಡೆಯುತ್ತಿದೆ. ಗೋಲ್ವಾಲ್ಕರ್‌ ‘ಒಂದು’ ಎಂಬ ಕಲ್ಪನೆ ತಂದರು. ಪ್ರಸ್ತುತ ಮೋದಿ ಸರ್ಕಾರ ಕೂಡ ಒಂದು ದೇಶ- ಒಂದು ಚುನಾವಣೆ, ಒಂದು ಕಾರ್ಡ್ ಇತ್ಯಾದಿಗಳ ಮೂಲಕ ಬಹುತ್ವದ ಮೇಲೆ ದಾಳಿ ಮಾಡುತ್ತಿದೆ. ದೇವಾಲಯವನ್ನು ಖಾಸಗೀಕರಿಸಿ ಅನ್ನವನ್ನು ಸಾಮಾಜಿಕವಾಗಿ ಮಾಡಿದ ಕಾಲವಿತ್ತು. ಆದರೆ, ಕಾರ್ಪೋರೇಟ್ ಜಗತ್ತು ಅನ್ನವನ್ನು ಖಾಸಗೀಕರಿಸಿ ದೇವಾಲಯವನ್ನು ಸಾಮಾಜಿಕ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರೊ. ಎಸ್‌.ಜಿ ಸಿದ್ದರಾಮಯ್ಯ ಮಾತನಾಡಿ, ಅನುಭವ ಮಂಟಪ ಕನ್ನಡ ನೆಲದಲ್ಲಿ ಹುಟ್ಟಿದ ಸಂಘಟನಾ ಶಕ್ತಿಯ ಅಡಿಪಾಯ. ಕನ್ನಡದ ಧರ್ಮ ಶರಣ ಧರ್ಮ. ಶರಣ ಚಿಂತನೆ ಅಪಾಯದಲ್ಲಿದೆ. ಈ ನೆಲದ ಬೆವರಿನ ಬೆಲೆಯ ಶೂದ್ರ ವರ್ಗದ ಮೇಲೆ ಆಶೂದ್ರ ವರ್ಗ ದಾಳಿ ಮಾಡುತ್ತಿದೆ. ದೇಶದ ಸಾಂಸ್ಕೃತಿಕ ಲೋಕ ಪಾರತಂತ್ರ್ಯದ ಒಳಗೆ ನರಳುತ್ತಿದೆ ಎಂದರು.

ಬಸವತತ್ವದ ಮೇಲೆ ಮುಂದುವರಿದ ದಾಳಿಯನ್ನು ವಿರೋಧಿಸಿ ಅನುಭವ ಮಂಟಪ ಸಭೆ ನಡೆಸಲಾಗಿದೆ. ಅನುಭವ ಮಂಟಪ ಯಾವತ್ತೂ ಸ್ಥಾವರವಲ್ಲ ಜಂಗಮ ಎಂದು ಹೇಳಿದರು.

ಸಂಸ್ಕತಿ ಚಿಂತಕ ಡಾ. ಜಯಪ್ರಕಾಶ್ ಬಂಜಗೆರೆ ಮಾತನಾಡಿ, ಚಾತುರ್ವರ್ಣ ವ್ಯವಸ್ಥೆ ಜಾತಿ ವ್ಯವಸ್ಥೆಯನ್ನು ಪ್ರತಿಪಾದಿಸಿ ಮಹಿಳೆಯರು ಮತ್ತು ವೈಚಾರಿಕ ಚಿಂತನೆಯನ್ನು ವಿರೋಧಿಸುತ್ತಿದೆ. ಬಸವ ಪ್ರಜ್ಞೆಯ ಧಮನದ ವಿರುದ್ಧ ಕಾರ್ಯಕ್ರಮ ರೂಪಿಸಲು ನಾವು ನಿರ್ಣಯಿಸಿದ್ದೇವೆ. ಅದಕ್ಕಾಗಿ ಸಮಿತಿ ರಚನೆ ಮಾಡಲಿದ್ದೇವೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.

ದಲಿತ ಹೋರಾಟಗಾರ ಮಾವಳ್ಳಿ ಶಂಕರ್ ಮಾತನಾಡಿ ಸಾಣೆಹಳ್ಳಿ ಶ್ರೀ ಮೇಲಿನ ಸೈದ್ದಾಂತಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದರು. ವಿದ್ಯಾವಂತರು ವೈಚಾರಿಕ ಚಿಂತನೆಯನ್ನು ವಿರೋಧಿಗಳಾಗುತ್ತಿದ್ದಾರೆ. ಪಠ್ಯ ಪುಸ್ತಕಗಳಲ್ಲಿ ಸುಳ್ಳು, ಮೌಢ್ಯವನ್ನು ತುಂಬಲಾಗ್ತಿದೆ. ಚರಿತ್ರೆಗಳನ್ನು ತಿರುಚುವ ಪ್ರಯತ್ನ ನಡೆಯುತ್ತಿದೆ. ಬಾಯಲ್ಲಿ ಮಾತ್ರ ಬಸವಣ್ಣನ ಜಪ ಮಾಡಿ ಅದಕ್ಕೆ ತದ್ವಿರುದ್ದವಾಗಿ ನಡೆಯುತ್ತಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು.

ಮಾನವ ಬಂದುತ್ವ ವೇದಿಕೆಯ ಲೀಲಾ ಮಾತನಾಡಿ, ಸಾಣೆಹಳ್ಳಿ ಶ್ರೀ ಕೇವಲ ಸಾಂಕೇತಿಕ. ಕೋಮುವಾದಿ, ಸನಾತನವಾದಿಗಳು ಮುಖ್ಯವಾಗಿ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದಾರೆ. ಹೆಣ್ಣು ಮಕ್ಕಳ ಹೆರಿಗೆ, ಮುಟ್ಟು, ಬಟ್ಟೆ ಇತ್ಯಾದಿಗಳನ್ನು ಮುಂದಿಟ್ಟುಕೊಂಡು ಗುರಿಯಾಗಿಸುತ್ತಿದ್ದಾರೆ ಎಂದರು.

ಸಿರಿಗೆರೆ ಮೂಲ ಮಠ, ಸಾಣೆಹಳ್ಳಿ ಅದರ ಶಾಖಾ ಮಠ, ಸಿರಿಗೆರೆ ಸ್ವಾಮೀಜಿ ಮತ್ತು ಸಾಣೆಹಳ್ಳಿ ಸ್ವಾಮೀಜಿ ಗಣೇಶನ ಕುರಿತು ತದ್ವಿರುದ್ದ ಹೇಳಿಕೆ ನೀಡಿದ್ದಾರಲ್ಲ ಎಂದು ಪತ್ರಕರ್ತರು ಕೇಳಿದಕ್ಕೆ, ಆ ಕುರಿತು ಸಿರಿಗೆರೆ ಸ್ವಾಮೀಜಿಯನ್ನೇ ಕೇಳಿ. ಸಾಣೆಹಳ್ಳಿ ಶ್ರೀಗಳ ಮೇಲಿನ ದಾಳಿ ಸಂಬಂಧ ನಾವು ಯಾವುದೇ ಕಾನೂನು ಹೋರಾಟ ಮಾಡುವುದಿಲ್ಲ. ಬಸವತ್ವದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿದ್ದವರು ತಿಳಿಸಿದರು.

ಇದನ್ನೂ ಓದಿ : ಬೆಂಗಳೂರು: ಯತೀಂಖಾನಾ ವಿರುದ್ಧ ಎಫ್‌ಐಆರ್‌ಗೆ NCPCR ಸೂಚನೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...