HomeUncategorizedಸಾಣೆಹಳ್ಳಿ ಶ್ರೀ ಗುರಿಯಾಗಿಸಿ ಬಸವ ತತ್ವದ ಮೇಲೆ ದಾಳಿ: ಪ್ರಜ್ಞಾವಂತರ ವೇದಿಕೆ

ಸಾಣೆಹಳ್ಳಿ ಶ್ರೀ ಗುರಿಯಾಗಿಸಿ ಬಸವ ತತ್ವದ ಮೇಲೆ ದಾಳಿ: ಪ್ರಜ್ಞಾವಂತರ ವೇದಿಕೆ

- Advertisement -
- Advertisement -

ಸಾಣೆಹಳ್ಳಿ ಶ್ರೀ ಸೇರಿದಂತೆ ರಾಜ್ಯದ ಧಾರ್ಮಿಕ ಗುರುಗಳು, ಚಿಂತಕರು, ಸಾಹಿತಿಗಳು ಮತ್ತು ಹೋರಾಟಗಾರರ ಮೇಲೆ ನಡೆಯುತ್ತಿರುವ ಸೈದ್ಧಾಂತಿಕ ದಾಳಿಯು ಬಸವತತ್ವದ ಮೇಲಾದ ದಾಳಿಯ ಮುಂದುವರಿಕೆ ಎಂದು ಕರ್ನಾಟಕ ಪ್ರಜ್ಞಾವಂತರ ವೇದಿಕೆ ಹೇಳಿತು.

ಗಣೇಶನ ಕುರಿತ ಹೇಳಿಕೆ ಮುಂದಿಟ್ಟುಕೊಂಡು ಸಾಣೆಹಳ್ಳಿ ಶ್ರೀ ಮೇಲೆ ನಡೆಯುತ್ತಿರುವ ಸೈದ್ಧಾಂತಿಕ ದಾಳಿಯನ್ನು ಖಂಡಿಸಿ ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು (ನ.22) ಪ್ರಗತಿಪರರು ಮತ್ತು ಹೋರಾಟಗಾರರಿಂದ ಕರ್ನಾಟಕ ಪ್ರಜ್ಞಾವಂತರ ಅನುಭವ ಮಂಟಪ ಎಂಬ ಹೆಸರಿನಲ್ಲಿ ಖಂಡನಾ ಸಭೆ ನಡೆಯಿತು. ಸಾಣೆಹಳ್ಳಿ ಶ್ರೀ, ಬಸವ ಪ್ರಕಾಶ ಸ್ವಾಮೀಜಿ ಬೆಳಗಾವಿ, ಶಿವಯೋಗಿ ಸ್ವಾಮೀಜಿ ಬೆಂಗಳೂರು ಸೇರಿದಂತೆ ಪ್ರಮುಖರು ಹಾಜರಿದ್ದರು.

ಅನುಭವ ಮಂಟಪ ಸಭೆ ಬಳಿಕ ಪ್ರಜ್ಞಾವಂತರ ವೇದಿಕೆಯ ಪ್ರಮುಖರು ಸುದ್ದಿಗೋಷ್ಠಿ ನಡೆಸಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಮತ್ತು ಬಸವತ್ವವನ್ನು ಪಸರಿಸಲು ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಗತಿಪರ ಚಿಂತಕ ಡಾ. ಸಿದ್ದನಗೌಡ ಪಾಟೀಲ, ವೈದಿಕ ಚಿಂತನೆಯ ಪ್ರತಿಪಾದಕರು ನಾಡಿನ ಪ್ರಗತಿಪರರು, ಬಸವತ್ವ ಪ್ರತಿಪಾದಕರ ಮೇಲೆ ಬಹಳ ವ್ಯವಸ್ಥಿತವಾಗಿ ದಾಳಿ ನಡೆಸುತ್ತಿದ್ದಾರೆ. ಇದೇ ವೈದಿಕ, ಸನಾತನ ಚಿಂತನೆ ಗೌರಿ, ಕಲಬುರಗಿಯನ್ನು ಹತ್ಯೆ ಮಾಡಿದೆ. ಹಾಗಂತ, ನಾವು ಸರ್ಕಾರದ ಕಡೆಯಿಂದ ಯಾವುದೇ ರಕ್ಷಣೆ ಕೇಳುತ್ತಿಲ್ಲ. ನಮ್ಮ ಉದ್ದೇಶ ಬಸವಾದಿ ಶರಣರ ಚಿಂತನೆಯ ಕ್ರಾಂತಿ ಎಂದರು.

ದೇಶದಲ್ಲಿ ಮತ ಧಾರ್ಮಿಕ ರಾಜಕಾರಣ ನಡೆಯುತ್ತಿದೆ. ಗೋಲ್ವಾಲ್ಕರ್‌ ‘ಒಂದು’ ಎಂಬ ಕಲ್ಪನೆ ತಂದರು. ಪ್ರಸ್ತುತ ಮೋದಿ ಸರ್ಕಾರ ಕೂಡ ಒಂದು ದೇಶ- ಒಂದು ಚುನಾವಣೆ, ಒಂದು ಕಾರ್ಡ್ ಇತ್ಯಾದಿಗಳ ಮೂಲಕ ಬಹುತ್ವದ ಮೇಲೆ ದಾಳಿ ಮಾಡುತ್ತಿದೆ. ದೇವಾಲಯವನ್ನು ಖಾಸಗೀಕರಿಸಿ ಅನ್ನವನ್ನು ಸಾಮಾಜಿಕವಾಗಿ ಮಾಡಿದ ಕಾಲವಿತ್ತು. ಆದರೆ, ಕಾರ್ಪೋರೇಟ್ ಜಗತ್ತು ಅನ್ನವನ್ನು ಖಾಸಗೀಕರಿಸಿ ದೇವಾಲಯವನ್ನು ಸಾಮಾಜಿಕ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರೊ. ಎಸ್‌.ಜಿ ಸಿದ್ದರಾಮಯ್ಯ ಮಾತನಾಡಿ, ಅನುಭವ ಮಂಟಪ ಕನ್ನಡ ನೆಲದಲ್ಲಿ ಹುಟ್ಟಿದ ಸಂಘಟನಾ ಶಕ್ತಿಯ ಅಡಿಪಾಯ. ಕನ್ನಡದ ಧರ್ಮ ಶರಣ ಧರ್ಮ. ಶರಣ ಚಿಂತನೆ ಅಪಾಯದಲ್ಲಿದೆ. ಈ ನೆಲದ ಬೆವರಿನ ಬೆಲೆಯ ಶೂದ್ರ ವರ್ಗದ ಮೇಲೆ ಆಶೂದ್ರ ವರ್ಗ ದಾಳಿ ಮಾಡುತ್ತಿದೆ. ದೇಶದ ಸಾಂಸ್ಕೃತಿಕ ಲೋಕ ಪಾರತಂತ್ರ್ಯದ ಒಳಗೆ ನರಳುತ್ತಿದೆ ಎಂದರು.

ಬಸವತತ್ವದ ಮೇಲೆ ಮುಂದುವರಿದ ದಾಳಿಯನ್ನು ವಿರೋಧಿಸಿ ಅನುಭವ ಮಂಟಪ ಸಭೆ ನಡೆಸಲಾಗಿದೆ. ಅನುಭವ ಮಂಟಪ ಯಾವತ್ತೂ ಸ್ಥಾವರವಲ್ಲ ಜಂಗಮ ಎಂದು ಹೇಳಿದರು.

ಸಂಸ್ಕತಿ ಚಿಂತಕ ಡಾ. ಜಯಪ್ರಕಾಶ್ ಬಂಜಗೆರೆ ಮಾತನಾಡಿ, ಚಾತುರ್ವರ್ಣ ವ್ಯವಸ್ಥೆ ಜಾತಿ ವ್ಯವಸ್ಥೆಯನ್ನು ಪ್ರತಿಪಾದಿಸಿ ಮಹಿಳೆಯರು ಮತ್ತು ವೈಚಾರಿಕ ಚಿಂತನೆಯನ್ನು ವಿರೋಧಿಸುತ್ತಿದೆ. ಬಸವ ಪ್ರಜ್ಞೆಯ ಧಮನದ ವಿರುದ್ಧ ಕಾರ್ಯಕ್ರಮ ರೂಪಿಸಲು ನಾವು ನಿರ್ಣಯಿಸಿದ್ದೇವೆ. ಅದಕ್ಕಾಗಿ ಸಮಿತಿ ರಚನೆ ಮಾಡಲಿದ್ದೇವೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.

ದಲಿತ ಹೋರಾಟಗಾರ ಮಾವಳ್ಳಿ ಶಂಕರ್ ಮಾತನಾಡಿ ಸಾಣೆಹಳ್ಳಿ ಶ್ರೀ ಮೇಲಿನ ಸೈದ್ದಾಂತಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದರು. ವಿದ್ಯಾವಂತರು ವೈಚಾರಿಕ ಚಿಂತನೆಯನ್ನು ವಿರೋಧಿಗಳಾಗುತ್ತಿದ್ದಾರೆ. ಪಠ್ಯ ಪುಸ್ತಕಗಳಲ್ಲಿ ಸುಳ್ಳು, ಮೌಢ್ಯವನ್ನು ತುಂಬಲಾಗ್ತಿದೆ. ಚರಿತ್ರೆಗಳನ್ನು ತಿರುಚುವ ಪ್ರಯತ್ನ ನಡೆಯುತ್ತಿದೆ. ಬಾಯಲ್ಲಿ ಮಾತ್ರ ಬಸವಣ್ಣನ ಜಪ ಮಾಡಿ ಅದಕ್ಕೆ ತದ್ವಿರುದ್ದವಾಗಿ ನಡೆಯುತ್ತಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು.

ಮಾನವ ಬಂದುತ್ವ ವೇದಿಕೆಯ ಲೀಲಾ ಮಾತನಾಡಿ, ಸಾಣೆಹಳ್ಳಿ ಶ್ರೀ ಕೇವಲ ಸಾಂಕೇತಿಕ. ಕೋಮುವಾದಿ, ಸನಾತನವಾದಿಗಳು ಮುಖ್ಯವಾಗಿ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದಾರೆ. ಹೆಣ್ಣು ಮಕ್ಕಳ ಹೆರಿಗೆ, ಮುಟ್ಟು, ಬಟ್ಟೆ ಇತ್ಯಾದಿಗಳನ್ನು ಮುಂದಿಟ್ಟುಕೊಂಡು ಗುರಿಯಾಗಿಸುತ್ತಿದ್ದಾರೆ ಎಂದರು.

ಸಿರಿಗೆರೆ ಮೂಲ ಮಠ, ಸಾಣೆಹಳ್ಳಿ ಅದರ ಶಾಖಾ ಮಠ, ಸಿರಿಗೆರೆ ಸ್ವಾಮೀಜಿ ಮತ್ತು ಸಾಣೆಹಳ್ಳಿ ಸ್ವಾಮೀಜಿ ಗಣೇಶನ ಕುರಿತು ತದ್ವಿರುದ್ದ ಹೇಳಿಕೆ ನೀಡಿದ್ದಾರಲ್ಲ ಎಂದು ಪತ್ರಕರ್ತರು ಕೇಳಿದಕ್ಕೆ, ಆ ಕುರಿತು ಸಿರಿಗೆರೆ ಸ್ವಾಮೀಜಿಯನ್ನೇ ಕೇಳಿ. ಸಾಣೆಹಳ್ಳಿ ಶ್ರೀಗಳ ಮೇಲಿನ ದಾಳಿ ಸಂಬಂಧ ನಾವು ಯಾವುದೇ ಕಾನೂನು ಹೋರಾಟ ಮಾಡುವುದಿಲ್ಲ. ಬಸವತ್ವದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿದ್ದವರು ತಿಳಿಸಿದರು.

ಇದನ್ನೂ ಓದಿ : ಬೆಂಗಳೂರು: ಯತೀಂಖಾನಾ ವಿರುದ್ಧ ಎಫ್‌ಐಆರ್‌ಗೆ NCPCR ಸೂಚನೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ...

ಶಿವಮೊಗ್ಗ: 40 ಸಾವಿರ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿ ಸೇರಿ ಇಬ್ಬರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು 

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್...

ಕಲಬುರಗಿ| ಅನುಮತಿ ಇಲ್ಲದೆ ಪುರಾತತ್ವ ಇಲಾಖೆ ಕೋಟೆ ಪ್ರವೇಶಕ್ಕೆ ಯತ್ನಿಸಿದ ಪಿಎಸ್‌ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ತಂಡ

ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮಾಜಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನೇತೃತ್ವದ ಗುಂಪೊಂದು ಭಾನುವಾರ ಕಲಬುರಗಿ ಕೋಟೆಗೆ ಮಹಾಶಿವರಾತ್ರಿ ಪೂಜೆ ಮಾಡಲು ಅನುಮತಿಯಿಲ್ಲದೆ ಪ್ರವೇಶಿಸಲು ಯತ್ನಿಸಿದ...

‘ಆರೆಸ್ಸೆಸ್ ಭೂತ, ಬಿಜೆಪಿ ಅದರ ನೆರಳು’: ಆರ್‌ಎಸ್‌ಎಸ್ ನೋಂದಣಿ ಆಗೇ ಆಗುತ್ತೆ, ನಾವು ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆ 

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಆರ್‌ಎಸ್‌ಎಸ್ ಮತ್ತು ಅದರ ಸೈದ್ಧಾಂತಿಕ ಸಂತತಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಆರ್‌ಎಸ್‌ಎಸ್ ಇಲ್ಲದೆ ಬಿಜೆಪಿ "ಜೆಡಿ (ಎಸ್) ಗಿಂತ ದುರ್ಬಲವಾಗಿದೆ"...

ರಾಜಸ್ಥಾನ| ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಏಳು ಮಂದಿ ಸಾವು – ಹಲವರು ಸಿಲುಕಿರುವ ಶಂಕೆ

ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪಟ್ಟಣದಲ್ಲಿ ಸೋಮವಾರ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಮಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಇದು...

ಶಬರಿಮಲೆಗೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಸಂವಿಧಾನ ಪೀಠ

ಏಪ್ರಿಲ್ 7 ರಿಂದ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು 9 ನ್ಯಾಯಾಧೀಶರ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಫೆಬ್ರವರಿ 16, ಸೋಮವಾರದಂದು ಘೋಷಿಸಿರುವುದಾಗಿ ಲೈವ್ ಲಾ...

ಬಾಂಗ್ಲಾ ಪ್ರಧಾನಿ ಪದಗ್ರಹಣ : ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಫೆಬ್ರವರಿ 17ರಂದು ನಡೆಯಲಿರುವ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಖ್ ರೆಹಮಾನ್ ಅವರ ಪದಗ್ರಹಣದ ಸಮಾರಂಭದಲ್ಲಿ ಭಾರತದಿಂದ ಅಧಿಕೃತ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು...