HomeUncategorizedಸಾಣೆಹಳ್ಳಿ ಶ್ರೀ ಗುರಿಯಾಗಿಸಿ ಬಸವ ತತ್ವದ ಮೇಲೆ ದಾಳಿ: ಪ್ರಜ್ಞಾವಂತರ ವೇದಿಕೆ

ಸಾಣೆಹಳ್ಳಿ ಶ್ರೀ ಗುರಿಯಾಗಿಸಿ ಬಸವ ತತ್ವದ ಮೇಲೆ ದಾಳಿ: ಪ್ರಜ್ಞಾವಂತರ ವೇದಿಕೆ

- Advertisement -
- Advertisement -

ಸಾಣೆಹಳ್ಳಿ ಶ್ರೀ ಸೇರಿದಂತೆ ರಾಜ್ಯದ ಧಾರ್ಮಿಕ ಗುರುಗಳು, ಚಿಂತಕರು, ಸಾಹಿತಿಗಳು ಮತ್ತು ಹೋರಾಟಗಾರರ ಮೇಲೆ ನಡೆಯುತ್ತಿರುವ ಸೈದ್ಧಾಂತಿಕ ದಾಳಿಯು ಬಸವತತ್ವದ ಮೇಲಾದ ದಾಳಿಯ ಮುಂದುವರಿಕೆ ಎಂದು ಕರ್ನಾಟಕ ಪ್ರಜ್ಞಾವಂತರ ವೇದಿಕೆ ಹೇಳಿತು.

ಗಣೇಶನ ಕುರಿತ ಹೇಳಿಕೆ ಮುಂದಿಟ್ಟುಕೊಂಡು ಸಾಣೆಹಳ್ಳಿ ಶ್ರೀ ಮೇಲೆ ನಡೆಯುತ್ತಿರುವ ಸೈದ್ಧಾಂತಿಕ ದಾಳಿಯನ್ನು ಖಂಡಿಸಿ ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು (ನ.22) ಪ್ರಗತಿಪರರು ಮತ್ತು ಹೋರಾಟಗಾರರಿಂದ ಕರ್ನಾಟಕ ಪ್ರಜ್ಞಾವಂತರ ಅನುಭವ ಮಂಟಪ ಎಂಬ ಹೆಸರಿನಲ್ಲಿ ಖಂಡನಾ ಸಭೆ ನಡೆಯಿತು. ಸಾಣೆಹಳ್ಳಿ ಶ್ರೀ, ಬಸವ ಪ್ರಕಾಶ ಸ್ವಾಮೀಜಿ ಬೆಳಗಾವಿ, ಶಿವಯೋಗಿ ಸ್ವಾಮೀಜಿ ಬೆಂಗಳೂರು ಸೇರಿದಂತೆ ಪ್ರಮುಖರು ಹಾಜರಿದ್ದರು.

ಅನುಭವ ಮಂಟಪ ಸಭೆ ಬಳಿಕ ಪ್ರಜ್ಞಾವಂತರ ವೇದಿಕೆಯ ಪ್ರಮುಖರು ಸುದ್ದಿಗೋಷ್ಠಿ ನಡೆಸಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಮತ್ತು ಬಸವತ್ವವನ್ನು ಪಸರಿಸಲು ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಗತಿಪರ ಚಿಂತಕ ಡಾ. ಸಿದ್ದನಗೌಡ ಪಾಟೀಲ, ವೈದಿಕ ಚಿಂತನೆಯ ಪ್ರತಿಪಾದಕರು ನಾಡಿನ ಪ್ರಗತಿಪರರು, ಬಸವತ್ವ ಪ್ರತಿಪಾದಕರ ಮೇಲೆ ಬಹಳ ವ್ಯವಸ್ಥಿತವಾಗಿ ದಾಳಿ ನಡೆಸುತ್ತಿದ್ದಾರೆ. ಇದೇ ವೈದಿಕ, ಸನಾತನ ಚಿಂತನೆ ಗೌರಿ, ಕಲಬುರಗಿಯನ್ನು ಹತ್ಯೆ ಮಾಡಿದೆ. ಹಾಗಂತ, ನಾವು ಸರ್ಕಾರದ ಕಡೆಯಿಂದ ಯಾವುದೇ ರಕ್ಷಣೆ ಕೇಳುತ್ತಿಲ್ಲ. ನಮ್ಮ ಉದ್ದೇಶ ಬಸವಾದಿ ಶರಣರ ಚಿಂತನೆಯ ಕ್ರಾಂತಿ ಎಂದರು.

ದೇಶದಲ್ಲಿ ಮತ ಧಾರ್ಮಿಕ ರಾಜಕಾರಣ ನಡೆಯುತ್ತಿದೆ. ಗೋಲ್ವಾಲ್ಕರ್‌ ‘ಒಂದು’ ಎಂಬ ಕಲ್ಪನೆ ತಂದರು. ಪ್ರಸ್ತುತ ಮೋದಿ ಸರ್ಕಾರ ಕೂಡ ಒಂದು ದೇಶ- ಒಂದು ಚುನಾವಣೆ, ಒಂದು ಕಾರ್ಡ್ ಇತ್ಯಾದಿಗಳ ಮೂಲಕ ಬಹುತ್ವದ ಮೇಲೆ ದಾಳಿ ಮಾಡುತ್ತಿದೆ. ದೇವಾಲಯವನ್ನು ಖಾಸಗೀಕರಿಸಿ ಅನ್ನವನ್ನು ಸಾಮಾಜಿಕವಾಗಿ ಮಾಡಿದ ಕಾಲವಿತ್ತು. ಆದರೆ, ಕಾರ್ಪೋರೇಟ್ ಜಗತ್ತು ಅನ್ನವನ್ನು ಖಾಸಗೀಕರಿಸಿ ದೇವಾಲಯವನ್ನು ಸಾಮಾಜಿಕ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರೊ. ಎಸ್‌.ಜಿ ಸಿದ್ದರಾಮಯ್ಯ ಮಾತನಾಡಿ, ಅನುಭವ ಮಂಟಪ ಕನ್ನಡ ನೆಲದಲ್ಲಿ ಹುಟ್ಟಿದ ಸಂಘಟನಾ ಶಕ್ತಿಯ ಅಡಿಪಾಯ. ಕನ್ನಡದ ಧರ್ಮ ಶರಣ ಧರ್ಮ. ಶರಣ ಚಿಂತನೆ ಅಪಾಯದಲ್ಲಿದೆ. ಈ ನೆಲದ ಬೆವರಿನ ಬೆಲೆಯ ಶೂದ್ರ ವರ್ಗದ ಮೇಲೆ ಆಶೂದ್ರ ವರ್ಗ ದಾಳಿ ಮಾಡುತ್ತಿದೆ. ದೇಶದ ಸಾಂಸ್ಕೃತಿಕ ಲೋಕ ಪಾರತಂತ್ರ್ಯದ ಒಳಗೆ ನರಳುತ್ತಿದೆ ಎಂದರು.

ಬಸವತತ್ವದ ಮೇಲೆ ಮುಂದುವರಿದ ದಾಳಿಯನ್ನು ವಿರೋಧಿಸಿ ಅನುಭವ ಮಂಟಪ ಸಭೆ ನಡೆಸಲಾಗಿದೆ. ಅನುಭವ ಮಂಟಪ ಯಾವತ್ತೂ ಸ್ಥಾವರವಲ್ಲ ಜಂಗಮ ಎಂದು ಹೇಳಿದರು.

ಸಂಸ್ಕತಿ ಚಿಂತಕ ಡಾ. ಜಯಪ್ರಕಾಶ್ ಬಂಜಗೆರೆ ಮಾತನಾಡಿ, ಚಾತುರ್ವರ್ಣ ವ್ಯವಸ್ಥೆ ಜಾತಿ ವ್ಯವಸ್ಥೆಯನ್ನು ಪ್ರತಿಪಾದಿಸಿ ಮಹಿಳೆಯರು ಮತ್ತು ವೈಚಾರಿಕ ಚಿಂತನೆಯನ್ನು ವಿರೋಧಿಸುತ್ತಿದೆ. ಬಸವ ಪ್ರಜ್ಞೆಯ ಧಮನದ ವಿರುದ್ಧ ಕಾರ್ಯಕ್ರಮ ರೂಪಿಸಲು ನಾವು ನಿರ್ಣಯಿಸಿದ್ದೇವೆ. ಅದಕ್ಕಾಗಿ ಸಮಿತಿ ರಚನೆ ಮಾಡಲಿದ್ದೇವೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.

ದಲಿತ ಹೋರಾಟಗಾರ ಮಾವಳ್ಳಿ ಶಂಕರ್ ಮಾತನಾಡಿ ಸಾಣೆಹಳ್ಳಿ ಶ್ರೀ ಮೇಲಿನ ಸೈದ್ದಾಂತಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದರು. ವಿದ್ಯಾವಂತರು ವೈಚಾರಿಕ ಚಿಂತನೆಯನ್ನು ವಿರೋಧಿಗಳಾಗುತ್ತಿದ್ದಾರೆ. ಪಠ್ಯ ಪುಸ್ತಕಗಳಲ್ಲಿ ಸುಳ್ಳು, ಮೌಢ್ಯವನ್ನು ತುಂಬಲಾಗ್ತಿದೆ. ಚರಿತ್ರೆಗಳನ್ನು ತಿರುಚುವ ಪ್ರಯತ್ನ ನಡೆಯುತ್ತಿದೆ. ಬಾಯಲ್ಲಿ ಮಾತ್ರ ಬಸವಣ್ಣನ ಜಪ ಮಾಡಿ ಅದಕ್ಕೆ ತದ್ವಿರುದ್ದವಾಗಿ ನಡೆಯುತ್ತಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು.

ಮಾನವ ಬಂದುತ್ವ ವೇದಿಕೆಯ ಲೀಲಾ ಮಾತನಾಡಿ, ಸಾಣೆಹಳ್ಳಿ ಶ್ರೀ ಕೇವಲ ಸಾಂಕೇತಿಕ. ಕೋಮುವಾದಿ, ಸನಾತನವಾದಿಗಳು ಮುಖ್ಯವಾಗಿ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದಾರೆ. ಹೆಣ್ಣು ಮಕ್ಕಳ ಹೆರಿಗೆ, ಮುಟ್ಟು, ಬಟ್ಟೆ ಇತ್ಯಾದಿಗಳನ್ನು ಮುಂದಿಟ್ಟುಕೊಂಡು ಗುರಿಯಾಗಿಸುತ್ತಿದ್ದಾರೆ ಎಂದರು.

ಸಿರಿಗೆರೆ ಮೂಲ ಮಠ, ಸಾಣೆಹಳ್ಳಿ ಅದರ ಶಾಖಾ ಮಠ, ಸಿರಿಗೆರೆ ಸ್ವಾಮೀಜಿ ಮತ್ತು ಸಾಣೆಹಳ್ಳಿ ಸ್ವಾಮೀಜಿ ಗಣೇಶನ ಕುರಿತು ತದ್ವಿರುದ್ದ ಹೇಳಿಕೆ ನೀಡಿದ್ದಾರಲ್ಲ ಎಂದು ಪತ್ರಕರ್ತರು ಕೇಳಿದಕ್ಕೆ, ಆ ಕುರಿತು ಸಿರಿಗೆರೆ ಸ್ವಾಮೀಜಿಯನ್ನೇ ಕೇಳಿ. ಸಾಣೆಹಳ್ಳಿ ಶ್ರೀಗಳ ಮೇಲಿನ ದಾಳಿ ಸಂಬಂಧ ನಾವು ಯಾವುದೇ ಕಾನೂನು ಹೋರಾಟ ಮಾಡುವುದಿಲ್ಲ. ಬಸವತ್ವದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿದ್ದವರು ತಿಳಿಸಿದರು.

ಇದನ್ನೂ ಓದಿ : ಬೆಂಗಳೂರು: ಯತೀಂಖಾನಾ ವಿರುದ್ಧ ಎಫ್‌ಐಆರ್‌ಗೆ NCPCR ಸೂಚನೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...