HomeUncategorizedಸಾಣೆಹಳ್ಳಿ ಶ್ರೀ ಗುರಿಯಾಗಿಸಿ ಬಸವ ತತ್ವದ ಮೇಲೆ ದಾಳಿ: ಪ್ರಜ್ಞಾವಂತರ ವೇದಿಕೆ

ಸಾಣೆಹಳ್ಳಿ ಶ್ರೀ ಗುರಿಯಾಗಿಸಿ ಬಸವ ತತ್ವದ ಮೇಲೆ ದಾಳಿ: ಪ್ರಜ್ಞಾವಂತರ ವೇದಿಕೆ

- Advertisement -
- Advertisement -

ಸಾಣೆಹಳ್ಳಿ ಶ್ರೀ ಸೇರಿದಂತೆ ರಾಜ್ಯದ ಧಾರ್ಮಿಕ ಗುರುಗಳು, ಚಿಂತಕರು, ಸಾಹಿತಿಗಳು ಮತ್ತು ಹೋರಾಟಗಾರರ ಮೇಲೆ ನಡೆಯುತ್ತಿರುವ ಸೈದ್ಧಾಂತಿಕ ದಾಳಿಯು ಬಸವತತ್ವದ ಮೇಲಾದ ದಾಳಿಯ ಮುಂದುವರಿಕೆ ಎಂದು ಕರ್ನಾಟಕ ಪ್ರಜ್ಞಾವಂತರ ವೇದಿಕೆ ಹೇಳಿತು.

ಗಣೇಶನ ಕುರಿತ ಹೇಳಿಕೆ ಮುಂದಿಟ್ಟುಕೊಂಡು ಸಾಣೆಹಳ್ಳಿ ಶ್ರೀ ಮೇಲೆ ನಡೆಯುತ್ತಿರುವ ಸೈದ್ಧಾಂತಿಕ ದಾಳಿಯನ್ನು ಖಂಡಿಸಿ ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು (ನ.22) ಪ್ರಗತಿಪರರು ಮತ್ತು ಹೋರಾಟಗಾರರಿಂದ ಕರ್ನಾಟಕ ಪ್ರಜ್ಞಾವಂತರ ಅನುಭವ ಮಂಟಪ ಎಂಬ ಹೆಸರಿನಲ್ಲಿ ಖಂಡನಾ ಸಭೆ ನಡೆಯಿತು. ಸಾಣೆಹಳ್ಳಿ ಶ್ರೀ, ಬಸವ ಪ್ರಕಾಶ ಸ್ವಾಮೀಜಿ ಬೆಳಗಾವಿ, ಶಿವಯೋಗಿ ಸ್ವಾಮೀಜಿ ಬೆಂಗಳೂರು ಸೇರಿದಂತೆ ಪ್ರಮುಖರು ಹಾಜರಿದ್ದರು.

ಅನುಭವ ಮಂಟಪ ಸಭೆ ಬಳಿಕ ಪ್ರಜ್ಞಾವಂತರ ವೇದಿಕೆಯ ಪ್ರಮುಖರು ಸುದ್ದಿಗೋಷ್ಠಿ ನಡೆಸಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಮತ್ತು ಬಸವತ್ವವನ್ನು ಪಸರಿಸಲು ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಗತಿಪರ ಚಿಂತಕ ಡಾ. ಸಿದ್ದನಗೌಡ ಪಾಟೀಲ, ವೈದಿಕ ಚಿಂತನೆಯ ಪ್ರತಿಪಾದಕರು ನಾಡಿನ ಪ್ರಗತಿಪರರು, ಬಸವತ್ವ ಪ್ರತಿಪಾದಕರ ಮೇಲೆ ಬಹಳ ವ್ಯವಸ್ಥಿತವಾಗಿ ದಾಳಿ ನಡೆಸುತ್ತಿದ್ದಾರೆ. ಇದೇ ವೈದಿಕ, ಸನಾತನ ಚಿಂತನೆ ಗೌರಿ, ಕಲಬುರಗಿಯನ್ನು ಹತ್ಯೆ ಮಾಡಿದೆ. ಹಾಗಂತ, ನಾವು ಸರ್ಕಾರದ ಕಡೆಯಿಂದ ಯಾವುದೇ ರಕ್ಷಣೆ ಕೇಳುತ್ತಿಲ್ಲ. ನಮ್ಮ ಉದ್ದೇಶ ಬಸವಾದಿ ಶರಣರ ಚಿಂತನೆಯ ಕ್ರಾಂತಿ ಎಂದರು.

ದೇಶದಲ್ಲಿ ಮತ ಧಾರ್ಮಿಕ ರಾಜಕಾರಣ ನಡೆಯುತ್ತಿದೆ. ಗೋಲ್ವಾಲ್ಕರ್‌ ‘ಒಂದು’ ಎಂಬ ಕಲ್ಪನೆ ತಂದರು. ಪ್ರಸ್ತುತ ಮೋದಿ ಸರ್ಕಾರ ಕೂಡ ಒಂದು ದೇಶ- ಒಂದು ಚುನಾವಣೆ, ಒಂದು ಕಾರ್ಡ್ ಇತ್ಯಾದಿಗಳ ಮೂಲಕ ಬಹುತ್ವದ ಮೇಲೆ ದಾಳಿ ಮಾಡುತ್ತಿದೆ. ದೇವಾಲಯವನ್ನು ಖಾಸಗೀಕರಿಸಿ ಅನ್ನವನ್ನು ಸಾಮಾಜಿಕವಾಗಿ ಮಾಡಿದ ಕಾಲವಿತ್ತು. ಆದರೆ, ಕಾರ್ಪೋರೇಟ್ ಜಗತ್ತು ಅನ್ನವನ್ನು ಖಾಸಗೀಕರಿಸಿ ದೇವಾಲಯವನ್ನು ಸಾಮಾಜಿಕ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರೊ. ಎಸ್‌.ಜಿ ಸಿದ್ದರಾಮಯ್ಯ ಮಾತನಾಡಿ, ಅನುಭವ ಮಂಟಪ ಕನ್ನಡ ನೆಲದಲ್ಲಿ ಹುಟ್ಟಿದ ಸಂಘಟನಾ ಶಕ್ತಿಯ ಅಡಿಪಾಯ. ಕನ್ನಡದ ಧರ್ಮ ಶರಣ ಧರ್ಮ. ಶರಣ ಚಿಂತನೆ ಅಪಾಯದಲ್ಲಿದೆ. ಈ ನೆಲದ ಬೆವರಿನ ಬೆಲೆಯ ಶೂದ್ರ ವರ್ಗದ ಮೇಲೆ ಆಶೂದ್ರ ವರ್ಗ ದಾಳಿ ಮಾಡುತ್ತಿದೆ. ದೇಶದ ಸಾಂಸ್ಕೃತಿಕ ಲೋಕ ಪಾರತಂತ್ರ್ಯದ ಒಳಗೆ ನರಳುತ್ತಿದೆ ಎಂದರು.

ಬಸವತತ್ವದ ಮೇಲೆ ಮುಂದುವರಿದ ದಾಳಿಯನ್ನು ವಿರೋಧಿಸಿ ಅನುಭವ ಮಂಟಪ ಸಭೆ ನಡೆಸಲಾಗಿದೆ. ಅನುಭವ ಮಂಟಪ ಯಾವತ್ತೂ ಸ್ಥಾವರವಲ್ಲ ಜಂಗಮ ಎಂದು ಹೇಳಿದರು.

ಸಂಸ್ಕತಿ ಚಿಂತಕ ಡಾ. ಜಯಪ್ರಕಾಶ್ ಬಂಜಗೆರೆ ಮಾತನಾಡಿ, ಚಾತುರ್ವರ್ಣ ವ್ಯವಸ್ಥೆ ಜಾತಿ ವ್ಯವಸ್ಥೆಯನ್ನು ಪ್ರತಿಪಾದಿಸಿ ಮಹಿಳೆಯರು ಮತ್ತು ವೈಚಾರಿಕ ಚಿಂತನೆಯನ್ನು ವಿರೋಧಿಸುತ್ತಿದೆ. ಬಸವ ಪ್ರಜ್ಞೆಯ ಧಮನದ ವಿರುದ್ಧ ಕಾರ್ಯಕ್ರಮ ರೂಪಿಸಲು ನಾವು ನಿರ್ಣಯಿಸಿದ್ದೇವೆ. ಅದಕ್ಕಾಗಿ ಸಮಿತಿ ರಚನೆ ಮಾಡಲಿದ್ದೇವೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.

ದಲಿತ ಹೋರಾಟಗಾರ ಮಾವಳ್ಳಿ ಶಂಕರ್ ಮಾತನಾಡಿ ಸಾಣೆಹಳ್ಳಿ ಶ್ರೀ ಮೇಲಿನ ಸೈದ್ದಾಂತಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದರು. ವಿದ್ಯಾವಂತರು ವೈಚಾರಿಕ ಚಿಂತನೆಯನ್ನು ವಿರೋಧಿಗಳಾಗುತ್ತಿದ್ದಾರೆ. ಪಠ್ಯ ಪುಸ್ತಕಗಳಲ್ಲಿ ಸುಳ್ಳು, ಮೌಢ್ಯವನ್ನು ತುಂಬಲಾಗ್ತಿದೆ. ಚರಿತ್ರೆಗಳನ್ನು ತಿರುಚುವ ಪ್ರಯತ್ನ ನಡೆಯುತ್ತಿದೆ. ಬಾಯಲ್ಲಿ ಮಾತ್ರ ಬಸವಣ್ಣನ ಜಪ ಮಾಡಿ ಅದಕ್ಕೆ ತದ್ವಿರುದ್ದವಾಗಿ ನಡೆಯುತ್ತಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು.

ಮಾನವ ಬಂದುತ್ವ ವೇದಿಕೆಯ ಲೀಲಾ ಮಾತನಾಡಿ, ಸಾಣೆಹಳ್ಳಿ ಶ್ರೀ ಕೇವಲ ಸಾಂಕೇತಿಕ. ಕೋಮುವಾದಿ, ಸನಾತನವಾದಿಗಳು ಮುಖ್ಯವಾಗಿ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದಾರೆ. ಹೆಣ್ಣು ಮಕ್ಕಳ ಹೆರಿಗೆ, ಮುಟ್ಟು, ಬಟ್ಟೆ ಇತ್ಯಾದಿಗಳನ್ನು ಮುಂದಿಟ್ಟುಕೊಂಡು ಗುರಿಯಾಗಿಸುತ್ತಿದ್ದಾರೆ ಎಂದರು.

ಸಿರಿಗೆರೆ ಮೂಲ ಮಠ, ಸಾಣೆಹಳ್ಳಿ ಅದರ ಶಾಖಾ ಮಠ, ಸಿರಿಗೆರೆ ಸ್ವಾಮೀಜಿ ಮತ್ತು ಸಾಣೆಹಳ್ಳಿ ಸ್ವಾಮೀಜಿ ಗಣೇಶನ ಕುರಿತು ತದ್ವಿರುದ್ದ ಹೇಳಿಕೆ ನೀಡಿದ್ದಾರಲ್ಲ ಎಂದು ಪತ್ರಕರ್ತರು ಕೇಳಿದಕ್ಕೆ, ಆ ಕುರಿತು ಸಿರಿಗೆರೆ ಸ್ವಾಮೀಜಿಯನ್ನೇ ಕೇಳಿ. ಸಾಣೆಹಳ್ಳಿ ಶ್ರೀಗಳ ಮೇಲಿನ ದಾಳಿ ಸಂಬಂಧ ನಾವು ಯಾವುದೇ ಕಾನೂನು ಹೋರಾಟ ಮಾಡುವುದಿಲ್ಲ. ಬಸವತ್ವದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿದ್ದವರು ತಿಳಿಸಿದರು.

ಇದನ್ನೂ ಓದಿ : ಬೆಂಗಳೂರು: ಯತೀಂಖಾನಾ ವಿರುದ್ಧ ಎಫ್‌ಐಆರ್‌ಗೆ NCPCR ಸೂಚನೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...