HomeUncategorizedಸಾಣೆಹಳ್ಳಿ ಶ್ರೀ ಗುರಿಯಾಗಿಸಿ ಬಸವ ತತ್ವದ ಮೇಲೆ ದಾಳಿ: ಪ್ರಜ್ಞಾವಂತರ ವೇದಿಕೆ

ಸಾಣೆಹಳ್ಳಿ ಶ್ರೀ ಗುರಿಯಾಗಿಸಿ ಬಸವ ತತ್ವದ ಮೇಲೆ ದಾಳಿ: ಪ್ರಜ್ಞಾವಂತರ ವೇದಿಕೆ

- Advertisement -
- Advertisement -

ಸಾಣೆಹಳ್ಳಿ ಶ್ರೀ ಸೇರಿದಂತೆ ರಾಜ್ಯದ ಧಾರ್ಮಿಕ ಗುರುಗಳು, ಚಿಂತಕರು, ಸಾಹಿತಿಗಳು ಮತ್ತು ಹೋರಾಟಗಾರರ ಮೇಲೆ ನಡೆಯುತ್ತಿರುವ ಸೈದ್ಧಾಂತಿಕ ದಾಳಿಯು ಬಸವತತ್ವದ ಮೇಲಾದ ದಾಳಿಯ ಮುಂದುವರಿಕೆ ಎಂದು ಕರ್ನಾಟಕ ಪ್ರಜ್ಞಾವಂತರ ವೇದಿಕೆ ಹೇಳಿತು.

ಗಣೇಶನ ಕುರಿತ ಹೇಳಿಕೆ ಮುಂದಿಟ್ಟುಕೊಂಡು ಸಾಣೆಹಳ್ಳಿ ಶ್ರೀ ಮೇಲೆ ನಡೆಯುತ್ತಿರುವ ಸೈದ್ಧಾಂತಿಕ ದಾಳಿಯನ್ನು ಖಂಡಿಸಿ ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು (ನ.22) ಪ್ರಗತಿಪರರು ಮತ್ತು ಹೋರಾಟಗಾರರಿಂದ ಕರ್ನಾಟಕ ಪ್ರಜ್ಞಾವಂತರ ಅನುಭವ ಮಂಟಪ ಎಂಬ ಹೆಸರಿನಲ್ಲಿ ಖಂಡನಾ ಸಭೆ ನಡೆಯಿತು. ಸಾಣೆಹಳ್ಳಿ ಶ್ರೀ, ಬಸವ ಪ್ರಕಾಶ ಸ್ವಾಮೀಜಿ ಬೆಳಗಾವಿ, ಶಿವಯೋಗಿ ಸ್ವಾಮೀಜಿ ಬೆಂಗಳೂರು ಸೇರಿದಂತೆ ಪ್ರಮುಖರು ಹಾಜರಿದ್ದರು.

ಅನುಭವ ಮಂಟಪ ಸಭೆ ಬಳಿಕ ಪ್ರಜ್ಞಾವಂತರ ವೇದಿಕೆಯ ಪ್ರಮುಖರು ಸುದ್ದಿಗೋಷ್ಠಿ ನಡೆಸಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಮತ್ತು ಬಸವತ್ವವನ್ನು ಪಸರಿಸಲು ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಗತಿಪರ ಚಿಂತಕ ಡಾ. ಸಿದ್ದನಗೌಡ ಪಾಟೀಲ, ವೈದಿಕ ಚಿಂತನೆಯ ಪ್ರತಿಪಾದಕರು ನಾಡಿನ ಪ್ರಗತಿಪರರು, ಬಸವತ್ವ ಪ್ರತಿಪಾದಕರ ಮೇಲೆ ಬಹಳ ವ್ಯವಸ್ಥಿತವಾಗಿ ದಾಳಿ ನಡೆಸುತ್ತಿದ್ದಾರೆ. ಇದೇ ವೈದಿಕ, ಸನಾತನ ಚಿಂತನೆ ಗೌರಿ, ಕಲಬುರಗಿಯನ್ನು ಹತ್ಯೆ ಮಾಡಿದೆ. ಹಾಗಂತ, ನಾವು ಸರ್ಕಾರದ ಕಡೆಯಿಂದ ಯಾವುದೇ ರಕ್ಷಣೆ ಕೇಳುತ್ತಿಲ್ಲ. ನಮ್ಮ ಉದ್ದೇಶ ಬಸವಾದಿ ಶರಣರ ಚಿಂತನೆಯ ಕ್ರಾಂತಿ ಎಂದರು.

ದೇಶದಲ್ಲಿ ಮತ ಧಾರ್ಮಿಕ ರಾಜಕಾರಣ ನಡೆಯುತ್ತಿದೆ. ಗೋಲ್ವಾಲ್ಕರ್‌ ‘ಒಂದು’ ಎಂಬ ಕಲ್ಪನೆ ತಂದರು. ಪ್ರಸ್ತುತ ಮೋದಿ ಸರ್ಕಾರ ಕೂಡ ಒಂದು ದೇಶ- ಒಂದು ಚುನಾವಣೆ, ಒಂದು ಕಾರ್ಡ್ ಇತ್ಯಾದಿಗಳ ಮೂಲಕ ಬಹುತ್ವದ ಮೇಲೆ ದಾಳಿ ಮಾಡುತ್ತಿದೆ. ದೇವಾಲಯವನ್ನು ಖಾಸಗೀಕರಿಸಿ ಅನ್ನವನ್ನು ಸಾಮಾಜಿಕವಾಗಿ ಮಾಡಿದ ಕಾಲವಿತ್ತು. ಆದರೆ, ಕಾರ್ಪೋರೇಟ್ ಜಗತ್ತು ಅನ್ನವನ್ನು ಖಾಸಗೀಕರಿಸಿ ದೇವಾಲಯವನ್ನು ಸಾಮಾಜಿಕ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರೊ. ಎಸ್‌.ಜಿ ಸಿದ್ದರಾಮಯ್ಯ ಮಾತನಾಡಿ, ಅನುಭವ ಮಂಟಪ ಕನ್ನಡ ನೆಲದಲ್ಲಿ ಹುಟ್ಟಿದ ಸಂಘಟನಾ ಶಕ್ತಿಯ ಅಡಿಪಾಯ. ಕನ್ನಡದ ಧರ್ಮ ಶರಣ ಧರ್ಮ. ಶರಣ ಚಿಂತನೆ ಅಪಾಯದಲ್ಲಿದೆ. ಈ ನೆಲದ ಬೆವರಿನ ಬೆಲೆಯ ಶೂದ್ರ ವರ್ಗದ ಮೇಲೆ ಆಶೂದ್ರ ವರ್ಗ ದಾಳಿ ಮಾಡುತ್ತಿದೆ. ದೇಶದ ಸಾಂಸ್ಕೃತಿಕ ಲೋಕ ಪಾರತಂತ್ರ್ಯದ ಒಳಗೆ ನರಳುತ್ತಿದೆ ಎಂದರು.

ಬಸವತತ್ವದ ಮೇಲೆ ಮುಂದುವರಿದ ದಾಳಿಯನ್ನು ವಿರೋಧಿಸಿ ಅನುಭವ ಮಂಟಪ ಸಭೆ ನಡೆಸಲಾಗಿದೆ. ಅನುಭವ ಮಂಟಪ ಯಾವತ್ತೂ ಸ್ಥಾವರವಲ್ಲ ಜಂಗಮ ಎಂದು ಹೇಳಿದರು.

ಸಂಸ್ಕತಿ ಚಿಂತಕ ಡಾ. ಜಯಪ್ರಕಾಶ್ ಬಂಜಗೆರೆ ಮಾತನಾಡಿ, ಚಾತುರ್ವರ್ಣ ವ್ಯವಸ್ಥೆ ಜಾತಿ ವ್ಯವಸ್ಥೆಯನ್ನು ಪ್ರತಿಪಾದಿಸಿ ಮಹಿಳೆಯರು ಮತ್ತು ವೈಚಾರಿಕ ಚಿಂತನೆಯನ್ನು ವಿರೋಧಿಸುತ್ತಿದೆ. ಬಸವ ಪ್ರಜ್ಞೆಯ ಧಮನದ ವಿರುದ್ಧ ಕಾರ್ಯಕ್ರಮ ರೂಪಿಸಲು ನಾವು ನಿರ್ಣಯಿಸಿದ್ದೇವೆ. ಅದಕ್ಕಾಗಿ ಸಮಿತಿ ರಚನೆ ಮಾಡಲಿದ್ದೇವೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.

ದಲಿತ ಹೋರಾಟಗಾರ ಮಾವಳ್ಳಿ ಶಂಕರ್ ಮಾತನಾಡಿ ಸಾಣೆಹಳ್ಳಿ ಶ್ರೀ ಮೇಲಿನ ಸೈದ್ದಾಂತಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದರು. ವಿದ್ಯಾವಂತರು ವೈಚಾರಿಕ ಚಿಂತನೆಯನ್ನು ವಿರೋಧಿಗಳಾಗುತ್ತಿದ್ದಾರೆ. ಪಠ್ಯ ಪುಸ್ತಕಗಳಲ್ಲಿ ಸುಳ್ಳು, ಮೌಢ್ಯವನ್ನು ತುಂಬಲಾಗ್ತಿದೆ. ಚರಿತ್ರೆಗಳನ್ನು ತಿರುಚುವ ಪ್ರಯತ್ನ ನಡೆಯುತ್ತಿದೆ. ಬಾಯಲ್ಲಿ ಮಾತ್ರ ಬಸವಣ್ಣನ ಜಪ ಮಾಡಿ ಅದಕ್ಕೆ ತದ್ವಿರುದ್ದವಾಗಿ ನಡೆಯುತ್ತಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು.

ಮಾನವ ಬಂದುತ್ವ ವೇದಿಕೆಯ ಲೀಲಾ ಮಾತನಾಡಿ, ಸಾಣೆಹಳ್ಳಿ ಶ್ರೀ ಕೇವಲ ಸಾಂಕೇತಿಕ. ಕೋಮುವಾದಿ, ಸನಾತನವಾದಿಗಳು ಮುಖ್ಯವಾಗಿ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದಾರೆ. ಹೆಣ್ಣು ಮಕ್ಕಳ ಹೆರಿಗೆ, ಮುಟ್ಟು, ಬಟ್ಟೆ ಇತ್ಯಾದಿಗಳನ್ನು ಮುಂದಿಟ್ಟುಕೊಂಡು ಗುರಿಯಾಗಿಸುತ್ತಿದ್ದಾರೆ ಎಂದರು.

ಸಿರಿಗೆರೆ ಮೂಲ ಮಠ, ಸಾಣೆಹಳ್ಳಿ ಅದರ ಶಾಖಾ ಮಠ, ಸಿರಿಗೆರೆ ಸ್ವಾಮೀಜಿ ಮತ್ತು ಸಾಣೆಹಳ್ಳಿ ಸ್ವಾಮೀಜಿ ಗಣೇಶನ ಕುರಿತು ತದ್ವಿರುದ್ದ ಹೇಳಿಕೆ ನೀಡಿದ್ದಾರಲ್ಲ ಎಂದು ಪತ್ರಕರ್ತರು ಕೇಳಿದಕ್ಕೆ, ಆ ಕುರಿತು ಸಿರಿಗೆರೆ ಸ್ವಾಮೀಜಿಯನ್ನೇ ಕೇಳಿ. ಸಾಣೆಹಳ್ಳಿ ಶ್ರೀಗಳ ಮೇಲಿನ ದಾಳಿ ಸಂಬಂಧ ನಾವು ಯಾವುದೇ ಕಾನೂನು ಹೋರಾಟ ಮಾಡುವುದಿಲ್ಲ. ಬಸವತ್ವದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿದ್ದವರು ತಿಳಿಸಿದರು.

ಇದನ್ನೂ ಓದಿ : ಬೆಂಗಳೂರು: ಯತೀಂಖಾನಾ ವಿರುದ್ಧ ಎಫ್‌ಐಆರ್‌ಗೆ NCPCR ಸೂಚನೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...