HomeUncategorizedಸಾಣೆಹಳ್ಳಿ ಶ್ರೀ ಗುರಿಯಾಗಿಸಿ ಬಸವ ತತ್ವದ ಮೇಲೆ ದಾಳಿ: ಪ್ರಜ್ಞಾವಂತರ ವೇದಿಕೆ

ಸಾಣೆಹಳ್ಳಿ ಶ್ರೀ ಗುರಿಯಾಗಿಸಿ ಬಸವ ತತ್ವದ ಮೇಲೆ ದಾಳಿ: ಪ್ರಜ್ಞಾವಂತರ ವೇದಿಕೆ

- Advertisement -
- Advertisement -

ಸಾಣೆಹಳ್ಳಿ ಶ್ರೀ ಸೇರಿದಂತೆ ರಾಜ್ಯದ ಧಾರ್ಮಿಕ ಗುರುಗಳು, ಚಿಂತಕರು, ಸಾಹಿತಿಗಳು ಮತ್ತು ಹೋರಾಟಗಾರರ ಮೇಲೆ ನಡೆಯುತ್ತಿರುವ ಸೈದ್ಧಾಂತಿಕ ದಾಳಿಯು ಬಸವತತ್ವದ ಮೇಲಾದ ದಾಳಿಯ ಮುಂದುವರಿಕೆ ಎಂದು ಕರ್ನಾಟಕ ಪ್ರಜ್ಞಾವಂತರ ವೇದಿಕೆ ಹೇಳಿತು.

ಗಣೇಶನ ಕುರಿತ ಹೇಳಿಕೆ ಮುಂದಿಟ್ಟುಕೊಂಡು ಸಾಣೆಹಳ್ಳಿ ಶ್ರೀ ಮೇಲೆ ನಡೆಯುತ್ತಿರುವ ಸೈದ್ಧಾಂತಿಕ ದಾಳಿಯನ್ನು ಖಂಡಿಸಿ ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು (ನ.22) ಪ್ರಗತಿಪರರು ಮತ್ತು ಹೋರಾಟಗಾರರಿಂದ ಕರ್ನಾಟಕ ಪ್ರಜ್ಞಾವಂತರ ಅನುಭವ ಮಂಟಪ ಎಂಬ ಹೆಸರಿನಲ್ಲಿ ಖಂಡನಾ ಸಭೆ ನಡೆಯಿತು. ಸಾಣೆಹಳ್ಳಿ ಶ್ರೀ, ಬಸವ ಪ್ರಕಾಶ ಸ್ವಾಮೀಜಿ ಬೆಳಗಾವಿ, ಶಿವಯೋಗಿ ಸ್ವಾಮೀಜಿ ಬೆಂಗಳೂರು ಸೇರಿದಂತೆ ಪ್ರಮುಖರು ಹಾಜರಿದ್ದರು.

ಅನುಭವ ಮಂಟಪ ಸಭೆ ಬಳಿಕ ಪ್ರಜ್ಞಾವಂತರ ವೇದಿಕೆಯ ಪ್ರಮುಖರು ಸುದ್ದಿಗೋಷ್ಠಿ ನಡೆಸಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಮತ್ತು ಬಸವತ್ವವನ್ನು ಪಸರಿಸಲು ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಗತಿಪರ ಚಿಂತಕ ಡಾ. ಸಿದ್ದನಗೌಡ ಪಾಟೀಲ, ವೈದಿಕ ಚಿಂತನೆಯ ಪ್ರತಿಪಾದಕರು ನಾಡಿನ ಪ್ರಗತಿಪರರು, ಬಸವತ್ವ ಪ್ರತಿಪಾದಕರ ಮೇಲೆ ಬಹಳ ವ್ಯವಸ್ಥಿತವಾಗಿ ದಾಳಿ ನಡೆಸುತ್ತಿದ್ದಾರೆ. ಇದೇ ವೈದಿಕ, ಸನಾತನ ಚಿಂತನೆ ಗೌರಿ, ಕಲಬುರಗಿಯನ್ನು ಹತ್ಯೆ ಮಾಡಿದೆ. ಹಾಗಂತ, ನಾವು ಸರ್ಕಾರದ ಕಡೆಯಿಂದ ಯಾವುದೇ ರಕ್ಷಣೆ ಕೇಳುತ್ತಿಲ್ಲ. ನಮ್ಮ ಉದ್ದೇಶ ಬಸವಾದಿ ಶರಣರ ಚಿಂತನೆಯ ಕ್ರಾಂತಿ ಎಂದರು.

ದೇಶದಲ್ಲಿ ಮತ ಧಾರ್ಮಿಕ ರಾಜಕಾರಣ ನಡೆಯುತ್ತಿದೆ. ಗೋಲ್ವಾಲ್ಕರ್‌ ‘ಒಂದು’ ಎಂಬ ಕಲ್ಪನೆ ತಂದರು. ಪ್ರಸ್ತುತ ಮೋದಿ ಸರ್ಕಾರ ಕೂಡ ಒಂದು ದೇಶ- ಒಂದು ಚುನಾವಣೆ, ಒಂದು ಕಾರ್ಡ್ ಇತ್ಯಾದಿಗಳ ಮೂಲಕ ಬಹುತ್ವದ ಮೇಲೆ ದಾಳಿ ಮಾಡುತ್ತಿದೆ. ದೇವಾಲಯವನ್ನು ಖಾಸಗೀಕರಿಸಿ ಅನ್ನವನ್ನು ಸಾಮಾಜಿಕವಾಗಿ ಮಾಡಿದ ಕಾಲವಿತ್ತು. ಆದರೆ, ಕಾರ್ಪೋರೇಟ್ ಜಗತ್ತು ಅನ್ನವನ್ನು ಖಾಸಗೀಕರಿಸಿ ದೇವಾಲಯವನ್ನು ಸಾಮಾಜಿಕ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರೊ. ಎಸ್‌.ಜಿ ಸಿದ್ದರಾಮಯ್ಯ ಮಾತನಾಡಿ, ಅನುಭವ ಮಂಟಪ ಕನ್ನಡ ನೆಲದಲ್ಲಿ ಹುಟ್ಟಿದ ಸಂಘಟನಾ ಶಕ್ತಿಯ ಅಡಿಪಾಯ. ಕನ್ನಡದ ಧರ್ಮ ಶರಣ ಧರ್ಮ. ಶರಣ ಚಿಂತನೆ ಅಪಾಯದಲ್ಲಿದೆ. ಈ ನೆಲದ ಬೆವರಿನ ಬೆಲೆಯ ಶೂದ್ರ ವರ್ಗದ ಮೇಲೆ ಆಶೂದ್ರ ವರ್ಗ ದಾಳಿ ಮಾಡುತ್ತಿದೆ. ದೇಶದ ಸಾಂಸ್ಕೃತಿಕ ಲೋಕ ಪಾರತಂತ್ರ್ಯದ ಒಳಗೆ ನರಳುತ್ತಿದೆ ಎಂದರು.

ಬಸವತತ್ವದ ಮೇಲೆ ಮುಂದುವರಿದ ದಾಳಿಯನ್ನು ವಿರೋಧಿಸಿ ಅನುಭವ ಮಂಟಪ ಸಭೆ ನಡೆಸಲಾಗಿದೆ. ಅನುಭವ ಮಂಟಪ ಯಾವತ್ತೂ ಸ್ಥಾವರವಲ್ಲ ಜಂಗಮ ಎಂದು ಹೇಳಿದರು.

ಸಂಸ್ಕತಿ ಚಿಂತಕ ಡಾ. ಜಯಪ್ರಕಾಶ್ ಬಂಜಗೆರೆ ಮಾತನಾಡಿ, ಚಾತುರ್ವರ್ಣ ವ್ಯವಸ್ಥೆ ಜಾತಿ ವ್ಯವಸ್ಥೆಯನ್ನು ಪ್ರತಿಪಾದಿಸಿ ಮಹಿಳೆಯರು ಮತ್ತು ವೈಚಾರಿಕ ಚಿಂತನೆಯನ್ನು ವಿರೋಧಿಸುತ್ತಿದೆ. ಬಸವ ಪ್ರಜ್ಞೆಯ ಧಮನದ ವಿರುದ್ಧ ಕಾರ್ಯಕ್ರಮ ರೂಪಿಸಲು ನಾವು ನಿರ್ಣಯಿಸಿದ್ದೇವೆ. ಅದಕ್ಕಾಗಿ ಸಮಿತಿ ರಚನೆ ಮಾಡಲಿದ್ದೇವೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.

ದಲಿತ ಹೋರಾಟಗಾರ ಮಾವಳ್ಳಿ ಶಂಕರ್ ಮಾತನಾಡಿ ಸಾಣೆಹಳ್ಳಿ ಶ್ರೀ ಮೇಲಿನ ಸೈದ್ದಾಂತಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದರು. ವಿದ್ಯಾವಂತರು ವೈಚಾರಿಕ ಚಿಂತನೆಯನ್ನು ವಿರೋಧಿಗಳಾಗುತ್ತಿದ್ದಾರೆ. ಪಠ್ಯ ಪುಸ್ತಕಗಳಲ್ಲಿ ಸುಳ್ಳು, ಮೌಢ್ಯವನ್ನು ತುಂಬಲಾಗ್ತಿದೆ. ಚರಿತ್ರೆಗಳನ್ನು ತಿರುಚುವ ಪ್ರಯತ್ನ ನಡೆಯುತ್ತಿದೆ. ಬಾಯಲ್ಲಿ ಮಾತ್ರ ಬಸವಣ್ಣನ ಜಪ ಮಾಡಿ ಅದಕ್ಕೆ ತದ್ವಿರುದ್ದವಾಗಿ ನಡೆಯುತ್ತಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು.

ಮಾನವ ಬಂದುತ್ವ ವೇದಿಕೆಯ ಲೀಲಾ ಮಾತನಾಡಿ, ಸಾಣೆಹಳ್ಳಿ ಶ್ರೀ ಕೇವಲ ಸಾಂಕೇತಿಕ. ಕೋಮುವಾದಿ, ಸನಾತನವಾದಿಗಳು ಮುಖ್ಯವಾಗಿ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದಾರೆ. ಹೆಣ್ಣು ಮಕ್ಕಳ ಹೆರಿಗೆ, ಮುಟ್ಟು, ಬಟ್ಟೆ ಇತ್ಯಾದಿಗಳನ್ನು ಮುಂದಿಟ್ಟುಕೊಂಡು ಗುರಿಯಾಗಿಸುತ್ತಿದ್ದಾರೆ ಎಂದರು.

ಸಿರಿಗೆರೆ ಮೂಲ ಮಠ, ಸಾಣೆಹಳ್ಳಿ ಅದರ ಶಾಖಾ ಮಠ, ಸಿರಿಗೆರೆ ಸ್ವಾಮೀಜಿ ಮತ್ತು ಸಾಣೆಹಳ್ಳಿ ಸ್ವಾಮೀಜಿ ಗಣೇಶನ ಕುರಿತು ತದ್ವಿರುದ್ದ ಹೇಳಿಕೆ ನೀಡಿದ್ದಾರಲ್ಲ ಎಂದು ಪತ್ರಕರ್ತರು ಕೇಳಿದಕ್ಕೆ, ಆ ಕುರಿತು ಸಿರಿಗೆರೆ ಸ್ವಾಮೀಜಿಯನ್ನೇ ಕೇಳಿ. ಸಾಣೆಹಳ್ಳಿ ಶ್ರೀಗಳ ಮೇಲಿನ ದಾಳಿ ಸಂಬಂಧ ನಾವು ಯಾವುದೇ ಕಾನೂನು ಹೋರಾಟ ಮಾಡುವುದಿಲ್ಲ. ಬಸವತ್ವದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿದ್ದವರು ತಿಳಿಸಿದರು.

ಇದನ್ನೂ ಓದಿ : ಬೆಂಗಳೂರು: ಯತೀಂಖಾನಾ ವಿರುದ್ಧ ಎಫ್‌ಐಆರ್‌ಗೆ NCPCR ಸೂಚನೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...