Homeಅಂತರಾಷ್ಟ್ರೀಯBBC ಮೇಲೆ ಐಟಿ ದಾಳಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ವರ್ಚಸ್ಸಿಗೆ ಧಕ್ಕೆ

BBC ಮೇಲೆ ಐಟಿ ದಾಳಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ವರ್ಚಸ್ಸಿಗೆ ಧಕ್ಕೆ

ನ್ಯಾಯಾಂಗ ಮತ್ತು ಮಾಧ್ಯಮಗಳಂತ ಪ್ರಜಾಪ್ರಭುತ್ವ ಸಂಸ್ಥೆಗಳ ಕುಸಿತವು ಮೋದಿ ಆಡಳಿತದ ಪರಿಣಾಮ ಎಂದೇ ಎಲ್ಲಾ ಜಾಗತಿಕ ಮಾಧ್ಯಮ ವೇದಿಕೆಗಳು ಹೇಳುತ್ತಿವೆ.

- Advertisement -
- Advertisement -

ಐಟಿ ಇಲಾಖೆ ಅಧಿಕಾರಿಗಳು ಸಮೀಕ್ಷೆಯ ಹೆಸರಿನಲ್ಲಿ ದೆಹಲಿ ಮತ್ತು ಮುಂಬೈನಲ್ಲಿರುವ BBC ಕಚೇರಿಗಳ ಮೇಲೆ ದಾಳಿ ನಡೆಸಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಇದ್ದ ಇಮೇಜ್‌ಗೆ ಧಕ್ಕೆಯಾಗಿದೆ. ಏಕೆಂದರೆ ಈ ದಾಳಿಯನ್ನು ಹಲವು ರಾಷ್ಟ್ರಗಳು ಖಂಡಿಸಿವೆ. ಗುಜರಾತ್ ಹತ್ಯಾಕಾಂಡ ಮತ್ತು ಅದರಲ್ಲಿ ಮೋದಿ ಪಾತ್ರದ ಕುರಿತಾದ ವಿಚಾರವನ್ನು BBC ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ. ಹಾಗಾಗಿ ಇದು ಪ್ರತಿಕಾರದ ದಾಳಿ ಎಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

ಇಂಗ್ಲೆಂಡ್‌ನ ವಿದೇಶಾಂಗ ಕಚೇರಿಯ ವರದಿಯನ್ನು ಉಲ್ಲೇಖಿಸಿರುವ BBCಯ ಸಾಕ್ಷ್ಯಚಿತ್ರವು, 2002ರಲ್ಲಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಮುಸ್ಲಿಮರ ಮೇಲೆ ನಡೆದ ಹತ್ಯಾಕಾಂಡಕ್ಕೆ ಅವರೇ ಹೊಣೆಗಾರರು ಎಂಬುದಾಗಿ ತೋರಿಸಲಾಗಿದೆ. ಈ ಸಾಕ್ಷ್ಯಚಿತ್ರವನ್ನು ಕಳೆದ ತಿಂಗಳು ಮೋದಿ ನೇತೃತ್ವದ ಸರ್ಕಾರವು ಭಾರತ ದೇಶದಲ್ಲಿ ನಿರ್ಬಂಧಿಸಿತ್ತು. ಈ ವಿವಾದ ತಾರಕಕ್ಕೇರುತ್ತಿರುವಾಗಲೇ ಸರ್ಕಾರ ಐಟಿ ಇಲಾಖೆಯ ಮೂಲಕ ಬಿಬಿಸಿ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಈ ರೀತಿ ಮಾಧ್ಯಮ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿರುವುದು ಮೊದಲೇನಲ್ಲ, 2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾದಾಗಿನಿಂದ ಸರ್ಕಾರದ ಕ್ರಮಗಳನ್ನು ಟೀಕಿಸಿದ ಅನೇಕ ಭಾರತೀಯ ಮಾಧ್ಯಮ ಸಂಸ್ಥೆಗಳ ಮೇಲೆ ಇದೇ ರೀತಿ ದಾಳಿ ಮಾಡಲಾಗಿದೆ. ಅಷ್ಟೇ ಅಲ್ಲದೇ ವಿವಿಧ ರೀತಿಯಲ್ಲಿ ಬೆದರಿಕೆಗಳನ್ನು ಹಾಕಲಾಗಿದೆ. ‘ಐಟಿ ಸಮೀಕ್ಷೆಗಳಿಂದ’ 2019ರಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಮತ್ತು 2022 ರಲ್ಲಿ ಆಕ್ಸ್‌ಫ್ಯಾಮ್ ಇಂಡಿಯಾದಂತಹ ಅಂತರಾಷ್ಟ್ರೀಯ ಸಂಸ್ಥೆಗಳನ್ನು ಸಹ ಉಳಿಸಲಾಗಿಲ್ಲ. ಟ್ವಿಟರ್ ಸಂಸ್ಥೆಯು ಮೇ 2021ರಲ್ಲಿ  ಬಿಜೆಪಿ ವಕ್ತಾರರ ಟ್ವೀಟ್‌ಗಳಿಗೆ ‘ತಿರುಚಿದ ಸುದ್ದಿ’ (manipulated media) ಎಂಬ ಟ್ಯಾಗ್ ಹಾಕಿ ಅದು ತಪ್ಪು ಮಾಹಿತಿ ಎಂಬ ಅಡಿಟಿಪ್ಪಣಿ ಹಾಕಿತ್ತು. ನಂತರ  ದೆಹಲಿ ಮತ್ತು ಗುರ್ಗಾಂವ್‌ನಲ್ಲಿನ ಟ್ವಿಟರ್ ಕಚೇರಿಗಳ ಮೇಲೆಯೇ ಪೋಲೀಸ್ ದಾಳಿಗಳು ನಡೆದಿವೆ. ಆದ್ದರಿಂದ BBC ಮೇಲಿನ ಈ ‘ಐ-ಟಿ ಸಮೀಕ್ಷೆ’ (ದಾಳಿ) ಸ್ವತಂತ್ರ ಮಾಧ್ಯಮಗಳ ಮೇಲಿನ ಮೊದಲ ದಾಳಿಯಲ್ಲ.

IT ಇಲಾಖೆಯ ಕ್ರಮವನ್ನು ಭಾರತದ ವಿರೋಧ ಪಕ್ಷಗಳು ”ವಿಮರ್ಶಾತ್ಮಕ ಧ್ವನಿಗಳ ಕತ್ತು ಹಿಸುಕುವ ಲಜ್ಜೆಗೆಟ್ಟ ಮತ್ತು ಕ್ಷಮೆಯಿಲ್ಲದ ಪ್ರತೀಕಾರ”, ”ಅಘೋಷಿತ ತುರ್ತುಸ್ಥಿತಿ”, ”ಟೆಲಿವಿಷನ್ ಚಾನೆಲ್‌ನ್ನು ಬೆದರಿಸುವ ಮತ್ತು ಕಿರುಕುಳ ನೀಡುವ ಪ್ರಯತ್ನ” ಎಂದು ವಾಗ್ದಾಳಿ ನಡೆಸಿವೆ. ಅಷ್ಟೇ ಅಲ್ಲದೇ, ಪ್ರೇಮಿಗಳ ದಿನದ ‘ಸಮೀಕ್ಷೆಗಳು’ ಎಂದು ಕೂಡ ವಿರೋಧ ಪಕ್ಷಗಳು ವ್ಯಂಗ್ಯವಾಗಿ ಟೀಕಿಸಿವೆ.

ಮೋದಿ ಸರ್ಕಾರ ಇಂತಹ ಪ್ರತಿಕಾರದ ಕ್ರಮಕ್ಕೆ ಕೈಹಾಕಿದ್ದು ಏಕೆ? ಅಥವಾ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ದೇಶೀಯ ಮತ್ತು ಅಂತರಾಷ್ಟ್ರೀಯ ಮಾಧ್ಯಮಗಳು ಆಡಳಿತ ಪಕ್ಷದ ವಿರುದ್ಧ ಸುದ್ದಿ ಅಥವಾ ವಿಶ್ಲೇಷಣೆ ಮಾಡಬಾರದೇ? ಬಿಜೆಪಿಯ ಕೋಮುವಾದಿ ಸಿದ್ಧಾಂತ ಮತ್ತು 2002ರ ಗುಜರಾತ್ ಗಲಭೆಯಲ್ಲಿ ಮೋದಿ ಪಾತ್ರದ ಬಗ್ಗೆ BBC ಸಾಕ್ಷ್ಯಚಿತ್ರದ ಟೀಕೆಯು, ಚುನಾವಣಾ ಪ್ರಚಾರದ ಸಮಯದಲ್ಲಿ ಮೋದಿ ಹಾಗೂ ಬಿಜೆಪಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿದೆ. ಈ ಸಂದರ್ಭದಲ್ಲಿ ಪ್ರತಿಪಕ್ಷಗಳು ಬಿಬಿಸಿಯ ಬೆನ್ನಿಗೆ ನಿಂತಿದ್ದಕ್ಕೆ, ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಬಿಬಿಸಿಯನ್ನು ಬಿಜೆಪಿ ”ಅತ್ಯಂತ ಭ್ರಷ್ಟ ಸಂಸ್ಥೆ” ಎಂದಿದೆ. ಅಷ್ಟೇ ಅಲ್ಲದೇ, ಬಿಬಿಸಿ ”ಪತ್ರಿಕೋದ್ಯಮದ ಸೋಗಿನಲ್ಲಿ ದುರುದ್ದೇಶದಿಂದ ಪ್ರಚಾರ ಮಾಡುತ್ತಿದೆ” ಎಂದು ಆರೋಪಿಸಿದೆ.

ರಾಜಕೀಯ ಎನ್ನುವುದು ಗ್ರಹಿಕೆಗೆ ಸಂಬಂಧಿಸಿದ್ದು ಎಂಬುದು ಮೋದಿಗಿಂತ ಚೆನ್ನಾಗಿ ಯಾರಿಗೂ ತಿಳಿದಿಲ್ಲ. ಬಹುಶಃ ಅವರು ಬಿಬಿಸಿಗೆ ‘ನನ್ನನ್ನು ಹೆದರಿಸಲು ಸಾಧ್ಯವಿಲ್ಲ’ ಎಂಬುದನ್ನು ತೋರಿಸಲು ದಾಳಿ ನಡೆಸಿದ್ದಾರೆ. ಇದು ಅವರ ಪೌರುಷದ ಇಮೇಜ್‌ಅನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದು ಅವರು ಭಾವಿಸಿರಬಹುದು.

ಆದರೆ ಇವರ ಈ ಪೌರುಷದ ನಡೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಯುವುದಿಲ್ಲ. 2002ರ ಗಲಭೆಯ ನಂತರ ಹಲವಾರು ಪಾಶ್ಚಿಮಾತ್ಯ ದೇಶಗಳು ಅವರ ಮೇಲೆ ಹೇರಿದ್ದ ವೀಸಾ ನಿಷೇಧಗಳನ್ನು ಅವರು ಮರೆಯಬಾರದು. ಅದನ್ನೀಗ ಅವರು ಬಗೆಹರಿಸಿಕೊಂಡಿದ್ದಾರೆ ಆದರೆ ಪ್ರಧಾನಿಯಾಗಿ ಮೋದಿಯವರು ಮೊದಲ ವಿಶ್ವ ನಾಯಕ ಎಂದು ಕರೆಸಿಕೊಳ್ಳುವ ಹಂಬಲದಲ್ಲಿದ್ದಾರೆ. ಆದರೆ, ಜವಾಹರಲಾಲ್ ನೆಹರು, ಇಂದಿರಾಗಾಂಧಿ, ರಾಜೀವ್ ಗಾಂಧಿ, ಪಿ ವಿ ನರಸಿಂಹ ರಾವ್ ಮತ್ತು ಅಟಲ್ ಬಿಹಾರಿ ವಾಜಪೇಯಿ, ಮನಮೋಹನ್ ಸಿಂಗ್ ಅವರು ತಮ್ಮ ಪಾಂಡಿತ್ಯದ ಕಾರಣದಿಂದಾಗಿ ಸುಲಭವಾಗಿ ವಿಶ್ವ ಮಟ್ಟದಲ್ಲಿ ಗೌರವ ಸಂಪಾದಿಸಿದ್ದರು. ಆದೇ ರೀತಿ ನರೇಂದ್ರ ಮೋದಿ ಅವರು 2014ರಿಂದ ವಿಶ್ವಮಟ್ಟದಲ್ಲಿ ತಾವು ಕೂಡ ವಿಶ್ವನಾಯಕ ಎನ್ನುವ ಗೌರವ ಪಡೆಯಬೇಕು ಎಂದು ಹವಣಿಸುತ್ತಿದ್ದಾರೆ. ಅವರು ಜಿ20ಯ ಅಧ್ಯಕ್ಷತೆಯ ಮೂಲಕ ಆ ಮಹತ್ವಾಕಾಂಕ್ಷೆಯನ್ನು ಸಾಧಿಸುವ ಅಂಚಿನಲ್ಲಿದ್ದರು, ಆದರೆ ಈ ದಾಳಿ ನಡೆಸುವ ಮೂಲಕ ಮತ್ತೆ ತಮ್ಮ ಇಮೇಜ್‌ಗೆ ತಾವೇ ಡ್ಯಾಮೇಜ್ ಮಾಡಿಕೊಂಡಿದ್ದಾರೆ.

ಮೊದಲು BBC ಸಾಕ್ಷ್ಯಚಿತ್ರ, ನಂತರ ಇದೀಗ ಅದಾನಿ ಗ್ರೂಪ್‌ನ ಹಿಂಡೆನ್‌ಬರ್ಗ್ ಸಂಶೋಧನಾ ವರದಿಯು ಮೋದಿ ಆಡಳಿತದ ಆಶ್ರಯದಲ್ಲಿ ಕ್ರೋನಿ ಬಂಡವಾಳಶಾಹಿಗಳು ಪ್ರವರ್ಧಮಾನಕ್ಕೆ ಬಂದವು ಎಂದು ಸೂಚಿಸುತ್ತವೆ. ಇವು ಮೋದಿ ಅವರು ಜಿ20ಯ ಅಧ್ಯಕ್ಷತೆಯ ಮೂಲಕ ವಿಶ್ವ ನಾಯಕರಾಗಿ ಏರುವ ಸಾಧ್ಯತೆಯನ್ನು ಅಪಾಯಕ್ಕೆ ಸಿಲುಕಿಸಿವೆ. ಮಾಧ್ಯಮಗಳ ಅಬ್ಬರದ ಪ್ರಚಾರ ಮತ್ತು ವಿಶ್ವದ ಇತರ ನಾಯಕರೊಂದಿಗಿನ ಬಾಂಧವ್ಯವು ಭಾರತೀಯ ಮತದಾರರಿಗೆ ಸಂದೇಶವನ್ನು ಕಳುಹಿಸುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಜಗತ್ತು ಮೋದಿಯನ್ನು ನಾಯಕ ಎಂದು ಒಪ್ಪಿಕೊಂಡರೆ, 2024ರಲ್ಲಿ ಮೂರನೇ ಅವಧಿಗೆ ಪ್ರಧಾನಿ ಪಟ್ಟವನ್ನು ಏರಬಹುದಿತ್ತು. ಆದರೆ ಇದೀಗ ವಿಶ್ವಮಟ್ಟದಲ್ಲೇ ತಮ್ಮ ಇಮೇಜ್‌ ಅನ್ನು ಮೋದಿ ಹಾಳುಮಾಡಿಕೊಂಡಿದ್ದಾರೆ.

ಮುಂಬರುವ ದಿನಗಳಲ್ಲಿ ಮೋದಿಯವರ ಜಾಗತಿಕ ಸಂಕಷ್ಟಗಳು ಹೆಚ್ಚಾಗಬಹುದು. ಸಂಸತ್ತು, ನ್ಯಾಯಾಂಗ ಮತ್ತು ಮಾಧ್ಯಮಗಳಂತ ಪ್ರಜಾಪ್ರಭುತ್ವ ಸಂಸ್ಥೆಗಳ ಕುಸಿತವು ಅವರ ಆಡಳಿತದ ಪರಿಣಾಮ ಎಂದೇ ಎಲ್ಲಾ ಜಾಗತಿಕ ಮಾಧ್ಯಮ ವೇದಿಕೆಗಳು ಹೇಳುತ್ತಿವೆ. ಭಾರತವು BBC ಸಾಕ್ಷ್ಯಚಿತ್ರವನ್ನು ನಿರ್ಬಂಧಸಿದ ನಂತರ ನ್ಯೂಯಾರ್ಕ್ ಟೈಮ್ಸ್ ಸಂಪಾದಕೀಯ ಮಂಡಳಿಯು ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. “ಸ್ವತಂತ್ರ ಸುದ್ದಿ ಮಾಧ್ಯಮವನ್ನು ಬೆದರಿಸಲು, ಸೆನ್ಸಾರ್ ಮಾಡಲು, ಮೌನಗೊಳಿಸಲು ಅಥವಾ ಶಿಕ್ಷಿಸಲು ಅವರ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಜನಪ್ರಿಯ ಮತ್ತು ನಿರಂಕುಶ ನಾಯಕರ ಆತಂಕಕಾರಿ ಲಕ್ಷಣವಾಗಿದೆ” ಮತ್ತು “ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ರೀತಿ ಮಾಧ್ಯಮ ಸ್ವಾತಂತ್ರದ ಹರಣ ಮಾಡುತ್ತಿದ್ದಾರೆ” ಎಂದು ಅದು ಹೇಳಿದೆ. ಭಾರತವು ಅಂತರರಾಷ್ಟ್ರೀಯ ಮಟ್ಟದಲ್ಲಿ ಶಕ್ತಿಯುವಾದ ದೇಶ ಮತ್ತು ನಿರ್ಣಾಯಕ ಪಾತ್ರವಹಿಸುವ ದೇಶವಾಗಿದೆ ಎಂದು ಒಪ್ಪಿಕೊಳ್ಳುವ ಸಂದರ್ಭದಲ್ಲಿ, ಮೋದಿಯವರು, ಪತ್ರಿಕಾ ಮಾಧ್ಯಮಗಳ ಸ್ವಾತಂತ್ರವನ್ನು ಕಿತ್ತುಕೊಳ್ಳುವ ಕೆಲಸ ಮಾಡಬಾರದು ಎಂದು ಟೈಮ್ಸ್ ಸಂಪಾದಕೀಯ ಮಂಡಳಿಯು ಎಚ್ಚರಿಸಿದೆ.

ಮೂಲ: ಭರತ್ ಭೂಷಣ್

ಕೃಪೆ: ಡೆಕ್ಕನ್ ಹೆರಾಲ್ಡ್

ಇದನ್ನೂ ಓದಿ: ಫಾರ್ಬಿಡನ್‌ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ಸರಣಿಗೆ ಗೌರಿ ಲಂಕೇಶ್‌ ಸ್ಫೂರ್ತಿ; ಗಾರ್ಡಿಯನ್‌ ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...