Homeಅಂತರಾಷ್ಟ್ರೀಯBBC ಮೇಲೆ ಐಟಿ ದಾಳಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ವರ್ಚಸ್ಸಿಗೆ ಧಕ್ಕೆ

BBC ಮೇಲೆ ಐಟಿ ದಾಳಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ವರ್ಚಸ್ಸಿಗೆ ಧಕ್ಕೆ

ನ್ಯಾಯಾಂಗ ಮತ್ತು ಮಾಧ್ಯಮಗಳಂತ ಪ್ರಜಾಪ್ರಭುತ್ವ ಸಂಸ್ಥೆಗಳ ಕುಸಿತವು ಮೋದಿ ಆಡಳಿತದ ಪರಿಣಾಮ ಎಂದೇ ಎಲ್ಲಾ ಜಾಗತಿಕ ಮಾಧ್ಯಮ ವೇದಿಕೆಗಳು ಹೇಳುತ್ತಿವೆ.

- Advertisement -
- Advertisement -

ಐಟಿ ಇಲಾಖೆ ಅಧಿಕಾರಿಗಳು ಸಮೀಕ್ಷೆಯ ಹೆಸರಿನಲ್ಲಿ ದೆಹಲಿ ಮತ್ತು ಮುಂಬೈನಲ್ಲಿರುವ BBC ಕಚೇರಿಗಳ ಮೇಲೆ ದಾಳಿ ನಡೆಸಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಇದ್ದ ಇಮೇಜ್‌ಗೆ ಧಕ್ಕೆಯಾಗಿದೆ. ಏಕೆಂದರೆ ಈ ದಾಳಿಯನ್ನು ಹಲವು ರಾಷ್ಟ್ರಗಳು ಖಂಡಿಸಿವೆ. ಗುಜರಾತ್ ಹತ್ಯಾಕಾಂಡ ಮತ್ತು ಅದರಲ್ಲಿ ಮೋದಿ ಪಾತ್ರದ ಕುರಿತಾದ ವಿಚಾರವನ್ನು BBC ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ. ಹಾಗಾಗಿ ಇದು ಪ್ರತಿಕಾರದ ದಾಳಿ ಎಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

ಇಂಗ್ಲೆಂಡ್‌ನ ವಿದೇಶಾಂಗ ಕಚೇರಿಯ ವರದಿಯನ್ನು ಉಲ್ಲೇಖಿಸಿರುವ BBCಯ ಸಾಕ್ಷ್ಯಚಿತ್ರವು, 2002ರಲ್ಲಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಮುಸ್ಲಿಮರ ಮೇಲೆ ನಡೆದ ಹತ್ಯಾಕಾಂಡಕ್ಕೆ ಅವರೇ ಹೊಣೆಗಾರರು ಎಂಬುದಾಗಿ ತೋರಿಸಲಾಗಿದೆ. ಈ ಸಾಕ್ಷ್ಯಚಿತ್ರವನ್ನು ಕಳೆದ ತಿಂಗಳು ಮೋದಿ ನೇತೃತ್ವದ ಸರ್ಕಾರವು ಭಾರತ ದೇಶದಲ್ಲಿ ನಿರ್ಬಂಧಿಸಿತ್ತು. ಈ ವಿವಾದ ತಾರಕಕ್ಕೇರುತ್ತಿರುವಾಗಲೇ ಸರ್ಕಾರ ಐಟಿ ಇಲಾಖೆಯ ಮೂಲಕ ಬಿಬಿಸಿ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಈ ರೀತಿ ಮಾಧ್ಯಮ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿರುವುದು ಮೊದಲೇನಲ್ಲ, 2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾದಾಗಿನಿಂದ ಸರ್ಕಾರದ ಕ್ರಮಗಳನ್ನು ಟೀಕಿಸಿದ ಅನೇಕ ಭಾರತೀಯ ಮಾಧ್ಯಮ ಸಂಸ್ಥೆಗಳ ಮೇಲೆ ಇದೇ ರೀತಿ ದಾಳಿ ಮಾಡಲಾಗಿದೆ. ಅಷ್ಟೇ ಅಲ್ಲದೇ ವಿವಿಧ ರೀತಿಯಲ್ಲಿ ಬೆದರಿಕೆಗಳನ್ನು ಹಾಕಲಾಗಿದೆ. ‘ಐಟಿ ಸಮೀಕ್ಷೆಗಳಿಂದ’ 2019ರಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಮತ್ತು 2022 ರಲ್ಲಿ ಆಕ್ಸ್‌ಫ್ಯಾಮ್ ಇಂಡಿಯಾದಂತಹ ಅಂತರಾಷ್ಟ್ರೀಯ ಸಂಸ್ಥೆಗಳನ್ನು ಸಹ ಉಳಿಸಲಾಗಿಲ್ಲ. ಟ್ವಿಟರ್ ಸಂಸ್ಥೆಯು ಮೇ 2021ರಲ್ಲಿ  ಬಿಜೆಪಿ ವಕ್ತಾರರ ಟ್ವೀಟ್‌ಗಳಿಗೆ ‘ತಿರುಚಿದ ಸುದ್ದಿ’ (manipulated media) ಎಂಬ ಟ್ಯಾಗ್ ಹಾಕಿ ಅದು ತಪ್ಪು ಮಾಹಿತಿ ಎಂಬ ಅಡಿಟಿಪ್ಪಣಿ ಹಾಕಿತ್ತು. ನಂತರ  ದೆಹಲಿ ಮತ್ತು ಗುರ್ಗಾಂವ್‌ನಲ್ಲಿನ ಟ್ವಿಟರ್ ಕಚೇರಿಗಳ ಮೇಲೆಯೇ ಪೋಲೀಸ್ ದಾಳಿಗಳು ನಡೆದಿವೆ. ಆದ್ದರಿಂದ BBC ಮೇಲಿನ ಈ ‘ಐ-ಟಿ ಸಮೀಕ್ಷೆ’ (ದಾಳಿ) ಸ್ವತಂತ್ರ ಮಾಧ್ಯಮಗಳ ಮೇಲಿನ ಮೊದಲ ದಾಳಿಯಲ್ಲ.

IT ಇಲಾಖೆಯ ಕ್ರಮವನ್ನು ಭಾರತದ ವಿರೋಧ ಪಕ್ಷಗಳು ”ವಿಮರ್ಶಾತ್ಮಕ ಧ್ವನಿಗಳ ಕತ್ತು ಹಿಸುಕುವ ಲಜ್ಜೆಗೆಟ್ಟ ಮತ್ತು ಕ್ಷಮೆಯಿಲ್ಲದ ಪ್ರತೀಕಾರ”, ”ಅಘೋಷಿತ ತುರ್ತುಸ್ಥಿತಿ”, ”ಟೆಲಿವಿಷನ್ ಚಾನೆಲ್‌ನ್ನು ಬೆದರಿಸುವ ಮತ್ತು ಕಿರುಕುಳ ನೀಡುವ ಪ್ರಯತ್ನ” ಎಂದು ವಾಗ್ದಾಳಿ ನಡೆಸಿವೆ. ಅಷ್ಟೇ ಅಲ್ಲದೇ, ಪ್ರೇಮಿಗಳ ದಿನದ ‘ಸಮೀಕ್ಷೆಗಳು’ ಎಂದು ಕೂಡ ವಿರೋಧ ಪಕ್ಷಗಳು ವ್ಯಂಗ್ಯವಾಗಿ ಟೀಕಿಸಿವೆ.

ಮೋದಿ ಸರ್ಕಾರ ಇಂತಹ ಪ್ರತಿಕಾರದ ಕ್ರಮಕ್ಕೆ ಕೈಹಾಕಿದ್ದು ಏಕೆ? ಅಥವಾ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ದೇಶೀಯ ಮತ್ತು ಅಂತರಾಷ್ಟ್ರೀಯ ಮಾಧ್ಯಮಗಳು ಆಡಳಿತ ಪಕ್ಷದ ವಿರುದ್ಧ ಸುದ್ದಿ ಅಥವಾ ವಿಶ್ಲೇಷಣೆ ಮಾಡಬಾರದೇ? ಬಿಜೆಪಿಯ ಕೋಮುವಾದಿ ಸಿದ್ಧಾಂತ ಮತ್ತು 2002ರ ಗುಜರಾತ್ ಗಲಭೆಯಲ್ಲಿ ಮೋದಿ ಪಾತ್ರದ ಬಗ್ಗೆ BBC ಸಾಕ್ಷ್ಯಚಿತ್ರದ ಟೀಕೆಯು, ಚುನಾವಣಾ ಪ್ರಚಾರದ ಸಮಯದಲ್ಲಿ ಮೋದಿ ಹಾಗೂ ಬಿಜೆಪಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿದೆ. ಈ ಸಂದರ್ಭದಲ್ಲಿ ಪ್ರತಿಪಕ್ಷಗಳು ಬಿಬಿಸಿಯ ಬೆನ್ನಿಗೆ ನಿಂತಿದ್ದಕ್ಕೆ, ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಬಿಬಿಸಿಯನ್ನು ಬಿಜೆಪಿ ”ಅತ್ಯಂತ ಭ್ರಷ್ಟ ಸಂಸ್ಥೆ” ಎಂದಿದೆ. ಅಷ್ಟೇ ಅಲ್ಲದೇ, ಬಿಬಿಸಿ ”ಪತ್ರಿಕೋದ್ಯಮದ ಸೋಗಿನಲ್ಲಿ ದುರುದ್ದೇಶದಿಂದ ಪ್ರಚಾರ ಮಾಡುತ್ತಿದೆ” ಎಂದು ಆರೋಪಿಸಿದೆ.

ರಾಜಕೀಯ ಎನ್ನುವುದು ಗ್ರಹಿಕೆಗೆ ಸಂಬಂಧಿಸಿದ್ದು ಎಂಬುದು ಮೋದಿಗಿಂತ ಚೆನ್ನಾಗಿ ಯಾರಿಗೂ ತಿಳಿದಿಲ್ಲ. ಬಹುಶಃ ಅವರು ಬಿಬಿಸಿಗೆ ‘ನನ್ನನ್ನು ಹೆದರಿಸಲು ಸಾಧ್ಯವಿಲ್ಲ’ ಎಂಬುದನ್ನು ತೋರಿಸಲು ದಾಳಿ ನಡೆಸಿದ್ದಾರೆ. ಇದು ಅವರ ಪೌರುಷದ ಇಮೇಜ್‌ಅನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದು ಅವರು ಭಾವಿಸಿರಬಹುದು.

ಆದರೆ ಇವರ ಈ ಪೌರುಷದ ನಡೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಯುವುದಿಲ್ಲ. 2002ರ ಗಲಭೆಯ ನಂತರ ಹಲವಾರು ಪಾಶ್ಚಿಮಾತ್ಯ ದೇಶಗಳು ಅವರ ಮೇಲೆ ಹೇರಿದ್ದ ವೀಸಾ ನಿಷೇಧಗಳನ್ನು ಅವರು ಮರೆಯಬಾರದು. ಅದನ್ನೀಗ ಅವರು ಬಗೆಹರಿಸಿಕೊಂಡಿದ್ದಾರೆ ಆದರೆ ಪ್ರಧಾನಿಯಾಗಿ ಮೋದಿಯವರು ಮೊದಲ ವಿಶ್ವ ನಾಯಕ ಎಂದು ಕರೆಸಿಕೊಳ್ಳುವ ಹಂಬಲದಲ್ಲಿದ್ದಾರೆ. ಆದರೆ, ಜವಾಹರಲಾಲ್ ನೆಹರು, ಇಂದಿರಾಗಾಂಧಿ, ರಾಜೀವ್ ಗಾಂಧಿ, ಪಿ ವಿ ನರಸಿಂಹ ರಾವ್ ಮತ್ತು ಅಟಲ್ ಬಿಹಾರಿ ವಾಜಪೇಯಿ, ಮನಮೋಹನ್ ಸಿಂಗ್ ಅವರು ತಮ್ಮ ಪಾಂಡಿತ್ಯದ ಕಾರಣದಿಂದಾಗಿ ಸುಲಭವಾಗಿ ವಿಶ್ವ ಮಟ್ಟದಲ್ಲಿ ಗೌರವ ಸಂಪಾದಿಸಿದ್ದರು. ಆದೇ ರೀತಿ ನರೇಂದ್ರ ಮೋದಿ ಅವರು 2014ರಿಂದ ವಿಶ್ವಮಟ್ಟದಲ್ಲಿ ತಾವು ಕೂಡ ವಿಶ್ವನಾಯಕ ಎನ್ನುವ ಗೌರವ ಪಡೆಯಬೇಕು ಎಂದು ಹವಣಿಸುತ್ತಿದ್ದಾರೆ. ಅವರು ಜಿ20ಯ ಅಧ್ಯಕ್ಷತೆಯ ಮೂಲಕ ಆ ಮಹತ್ವಾಕಾಂಕ್ಷೆಯನ್ನು ಸಾಧಿಸುವ ಅಂಚಿನಲ್ಲಿದ್ದರು, ಆದರೆ ಈ ದಾಳಿ ನಡೆಸುವ ಮೂಲಕ ಮತ್ತೆ ತಮ್ಮ ಇಮೇಜ್‌ಗೆ ತಾವೇ ಡ್ಯಾಮೇಜ್ ಮಾಡಿಕೊಂಡಿದ್ದಾರೆ.

ಮೊದಲು BBC ಸಾಕ್ಷ್ಯಚಿತ್ರ, ನಂತರ ಇದೀಗ ಅದಾನಿ ಗ್ರೂಪ್‌ನ ಹಿಂಡೆನ್‌ಬರ್ಗ್ ಸಂಶೋಧನಾ ವರದಿಯು ಮೋದಿ ಆಡಳಿತದ ಆಶ್ರಯದಲ್ಲಿ ಕ್ರೋನಿ ಬಂಡವಾಳಶಾಹಿಗಳು ಪ್ರವರ್ಧಮಾನಕ್ಕೆ ಬಂದವು ಎಂದು ಸೂಚಿಸುತ್ತವೆ. ಇವು ಮೋದಿ ಅವರು ಜಿ20ಯ ಅಧ್ಯಕ್ಷತೆಯ ಮೂಲಕ ವಿಶ್ವ ನಾಯಕರಾಗಿ ಏರುವ ಸಾಧ್ಯತೆಯನ್ನು ಅಪಾಯಕ್ಕೆ ಸಿಲುಕಿಸಿವೆ. ಮಾಧ್ಯಮಗಳ ಅಬ್ಬರದ ಪ್ರಚಾರ ಮತ್ತು ವಿಶ್ವದ ಇತರ ನಾಯಕರೊಂದಿಗಿನ ಬಾಂಧವ್ಯವು ಭಾರತೀಯ ಮತದಾರರಿಗೆ ಸಂದೇಶವನ್ನು ಕಳುಹಿಸುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಜಗತ್ತು ಮೋದಿಯನ್ನು ನಾಯಕ ಎಂದು ಒಪ್ಪಿಕೊಂಡರೆ, 2024ರಲ್ಲಿ ಮೂರನೇ ಅವಧಿಗೆ ಪ್ರಧಾನಿ ಪಟ್ಟವನ್ನು ಏರಬಹುದಿತ್ತು. ಆದರೆ ಇದೀಗ ವಿಶ್ವಮಟ್ಟದಲ್ಲೇ ತಮ್ಮ ಇಮೇಜ್‌ ಅನ್ನು ಮೋದಿ ಹಾಳುಮಾಡಿಕೊಂಡಿದ್ದಾರೆ.

ಮುಂಬರುವ ದಿನಗಳಲ್ಲಿ ಮೋದಿಯವರ ಜಾಗತಿಕ ಸಂಕಷ್ಟಗಳು ಹೆಚ್ಚಾಗಬಹುದು. ಸಂಸತ್ತು, ನ್ಯಾಯಾಂಗ ಮತ್ತು ಮಾಧ್ಯಮಗಳಂತ ಪ್ರಜಾಪ್ರಭುತ್ವ ಸಂಸ್ಥೆಗಳ ಕುಸಿತವು ಅವರ ಆಡಳಿತದ ಪರಿಣಾಮ ಎಂದೇ ಎಲ್ಲಾ ಜಾಗತಿಕ ಮಾಧ್ಯಮ ವೇದಿಕೆಗಳು ಹೇಳುತ್ತಿವೆ. ಭಾರತವು BBC ಸಾಕ್ಷ್ಯಚಿತ್ರವನ್ನು ನಿರ್ಬಂಧಸಿದ ನಂತರ ನ್ಯೂಯಾರ್ಕ್ ಟೈಮ್ಸ್ ಸಂಪಾದಕೀಯ ಮಂಡಳಿಯು ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. “ಸ್ವತಂತ್ರ ಸುದ್ದಿ ಮಾಧ್ಯಮವನ್ನು ಬೆದರಿಸಲು, ಸೆನ್ಸಾರ್ ಮಾಡಲು, ಮೌನಗೊಳಿಸಲು ಅಥವಾ ಶಿಕ್ಷಿಸಲು ಅವರ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಜನಪ್ರಿಯ ಮತ್ತು ನಿರಂಕುಶ ನಾಯಕರ ಆತಂಕಕಾರಿ ಲಕ್ಷಣವಾಗಿದೆ” ಮತ್ತು “ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ರೀತಿ ಮಾಧ್ಯಮ ಸ್ವಾತಂತ್ರದ ಹರಣ ಮಾಡುತ್ತಿದ್ದಾರೆ” ಎಂದು ಅದು ಹೇಳಿದೆ. ಭಾರತವು ಅಂತರರಾಷ್ಟ್ರೀಯ ಮಟ್ಟದಲ್ಲಿ ಶಕ್ತಿಯುವಾದ ದೇಶ ಮತ್ತು ನಿರ್ಣಾಯಕ ಪಾತ್ರವಹಿಸುವ ದೇಶವಾಗಿದೆ ಎಂದು ಒಪ್ಪಿಕೊಳ್ಳುವ ಸಂದರ್ಭದಲ್ಲಿ, ಮೋದಿಯವರು, ಪತ್ರಿಕಾ ಮಾಧ್ಯಮಗಳ ಸ್ವಾತಂತ್ರವನ್ನು ಕಿತ್ತುಕೊಳ್ಳುವ ಕೆಲಸ ಮಾಡಬಾರದು ಎಂದು ಟೈಮ್ಸ್ ಸಂಪಾದಕೀಯ ಮಂಡಳಿಯು ಎಚ್ಚರಿಸಿದೆ.

ಮೂಲ: ಭರತ್ ಭೂಷಣ್

ಕೃಪೆ: ಡೆಕ್ಕನ್ ಹೆರಾಲ್ಡ್

ಇದನ್ನೂ ಓದಿ: ಫಾರ್ಬಿಡನ್‌ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ಸರಣಿಗೆ ಗೌರಿ ಲಂಕೇಶ್‌ ಸ್ಫೂರ್ತಿ; ಗಾರ್ಡಿಯನ್‌ ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...