Homeಅಂತರಾಷ್ಟ್ರೀಯBBC ಮೇಲೆ ಐಟಿ ದಾಳಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ವರ್ಚಸ್ಸಿಗೆ ಧಕ್ಕೆ

BBC ಮೇಲೆ ಐಟಿ ದಾಳಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ವರ್ಚಸ್ಸಿಗೆ ಧಕ್ಕೆ

ನ್ಯಾಯಾಂಗ ಮತ್ತು ಮಾಧ್ಯಮಗಳಂತ ಪ್ರಜಾಪ್ರಭುತ್ವ ಸಂಸ್ಥೆಗಳ ಕುಸಿತವು ಮೋದಿ ಆಡಳಿತದ ಪರಿಣಾಮ ಎಂದೇ ಎಲ್ಲಾ ಜಾಗತಿಕ ಮಾಧ್ಯಮ ವೇದಿಕೆಗಳು ಹೇಳುತ್ತಿವೆ.

- Advertisement -
- Advertisement -

ಐಟಿ ಇಲಾಖೆ ಅಧಿಕಾರಿಗಳು ಸಮೀಕ್ಷೆಯ ಹೆಸರಿನಲ್ಲಿ ದೆಹಲಿ ಮತ್ತು ಮುಂಬೈನಲ್ಲಿರುವ BBC ಕಚೇರಿಗಳ ಮೇಲೆ ದಾಳಿ ನಡೆಸಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಇದ್ದ ಇಮೇಜ್‌ಗೆ ಧಕ್ಕೆಯಾಗಿದೆ. ಏಕೆಂದರೆ ಈ ದಾಳಿಯನ್ನು ಹಲವು ರಾಷ್ಟ್ರಗಳು ಖಂಡಿಸಿವೆ. ಗುಜರಾತ್ ಹತ್ಯಾಕಾಂಡ ಮತ್ತು ಅದರಲ್ಲಿ ಮೋದಿ ಪಾತ್ರದ ಕುರಿತಾದ ವಿಚಾರವನ್ನು BBC ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ. ಹಾಗಾಗಿ ಇದು ಪ್ರತಿಕಾರದ ದಾಳಿ ಎಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

ಇಂಗ್ಲೆಂಡ್‌ನ ವಿದೇಶಾಂಗ ಕಚೇರಿಯ ವರದಿಯನ್ನು ಉಲ್ಲೇಖಿಸಿರುವ BBCಯ ಸಾಕ್ಷ್ಯಚಿತ್ರವು, 2002ರಲ್ಲಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಮುಸ್ಲಿಮರ ಮೇಲೆ ನಡೆದ ಹತ್ಯಾಕಾಂಡಕ್ಕೆ ಅವರೇ ಹೊಣೆಗಾರರು ಎಂಬುದಾಗಿ ತೋರಿಸಲಾಗಿದೆ. ಈ ಸಾಕ್ಷ್ಯಚಿತ್ರವನ್ನು ಕಳೆದ ತಿಂಗಳು ಮೋದಿ ನೇತೃತ್ವದ ಸರ್ಕಾರವು ಭಾರತ ದೇಶದಲ್ಲಿ ನಿರ್ಬಂಧಿಸಿತ್ತು. ಈ ವಿವಾದ ತಾರಕಕ್ಕೇರುತ್ತಿರುವಾಗಲೇ ಸರ್ಕಾರ ಐಟಿ ಇಲಾಖೆಯ ಮೂಲಕ ಬಿಬಿಸಿ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಈ ರೀತಿ ಮಾಧ್ಯಮ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿರುವುದು ಮೊದಲೇನಲ್ಲ, 2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾದಾಗಿನಿಂದ ಸರ್ಕಾರದ ಕ್ರಮಗಳನ್ನು ಟೀಕಿಸಿದ ಅನೇಕ ಭಾರತೀಯ ಮಾಧ್ಯಮ ಸಂಸ್ಥೆಗಳ ಮೇಲೆ ಇದೇ ರೀತಿ ದಾಳಿ ಮಾಡಲಾಗಿದೆ. ಅಷ್ಟೇ ಅಲ್ಲದೇ ವಿವಿಧ ರೀತಿಯಲ್ಲಿ ಬೆದರಿಕೆಗಳನ್ನು ಹಾಕಲಾಗಿದೆ. ‘ಐಟಿ ಸಮೀಕ್ಷೆಗಳಿಂದ’ 2019ರಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಮತ್ತು 2022 ರಲ್ಲಿ ಆಕ್ಸ್‌ಫ್ಯಾಮ್ ಇಂಡಿಯಾದಂತಹ ಅಂತರಾಷ್ಟ್ರೀಯ ಸಂಸ್ಥೆಗಳನ್ನು ಸಹ ಉಳಿಸಲಾಗಿಲ್ಲ. ಟ್ವಿಟರ್ ಸಂಸ್ಥೆಯು ಮೇ 2021ರಲ್ಲಿ  ಬಿಜೆಪಿ ವಕ್ತಾರರ ಟ್ವೀಟ್‌ಗಳಿಗೆ ‘ತಿರುಚಿದ ಸುದ್ದಿ’ (manipulated media) ಎಂಬ ಟ್ಯಾಗ್ ಹಾಕಿ ಅದು ತಪ್ಪು ಮಾಹಿತಿ ಎಂಬ ಅಡಿಟಿಪ್ಪಣಿ ಹಾಕಿತ್ತು. ನಂತರ  ದೆಹಲಿ ಮತ್ತು ಗುರ್ಗಾಂವ್‌ನಲ್ಲಿನ ಟ್ವಿಟರ್ ಕಚೇರಿಗಳ ಮೇಲೆಯೇ ಪೋಲೀಸ್ ದಾಳಿಗಳು ನಡೆದಿವೆ. ಆದ್ದರಿಂದ BBC ಮೇಲಿನ ಈ ‘ಐ-ಟಿ ಸಮೀಕ್ಷೆ’ (ದಾಳಿ) ಸ್ವತಂತ್ರ ಮಾಧ್ಯಮಗಳ ಮೇಲಿನ ಮೊದಲ ದಾಳಿಯಲ್ಲ.

IT ಇಲಾಖೆಯ ಕ್ರಮವನ್ನು ಭಾರತದ ವಿರೋಧ ಪಕ್ಷಗಳು ”ವಿಮರ್ಶಾತ್ಮಕ ಧ್ವನಿಗಳ ಕತ್ತು ಹಿಸುಕುವ ಲಜ್ಜೆಗೆಟ್ಟ ಮತ್ತು ಕ್ಷಮೆಯಿಲ್ಲದ ಪ್ರತೀಕಾರ”, ”ಅಘೋಷಿತ ತುರ್ತುಸ್ಥಿತಿ”, ”ಟೆಲಿವಿಷನ್ ಚಾನೆಲ್‌ನ್ನು ಬೆದರಿಸುವ ಮತ್ತು ಕಿರುಕುಳ ನೀಡುವ ಪ್ರಯತ್ನ” ಎಂದು ವಾಗ್ದಾಳಿ ನಡೆಸಿವೆ. ಅಷ್ಟೇ ಅಲ್ಲದೇ, ಪ್ರೇಮಿಗಳ ದಿನದ ‘ಸಮೀಕ್ಷೆಗಳು’ ಎಂದು ಕೂಡ ವಿರೋಧ ಪಕ್ಷಗಳು ವ್ಯಂಗ್ಯವಾಗಿ ಟೀಕಿಸಿವೆ.

ಮೋದಿ ಸರ್ಕಾರ ಇಂತಹ ಪ್ರತಿಕಾರದ ಕ್ರಮಕ್ಕೆ ಕೈಹಾಕಿದ್ದು ಏಕೆ? ಅಥವಾ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ದೇಶೀಯ ಮತ್ತು ಅಂತರಾಷ್ಟ್ರೀಯ ಮಾಧ್ಯಮಗಳು ಆಡಳಿತ ಪಕ್ಷದ ವಿರುದ್ಧ ಸುದ್ದಿ ಅಥವಾ ವಿಶ್ಲೇಷಣೆ ಮಾಡಬಾರದೇ? ಬಿಜೆಪಿಯ ಕೋಮುವಾದಿ ಸಿದ್ಧಾಂತ ಮತ್ತು 2002ರ ಗುಜರಾತ್ ಗಲಭೆಯಲ್ಲಿ ಮೋದಿ ಪಾತ್ರದ ಬಗ್ಗೆ BBC ಸಾಕ್ಷ್ಯಚಿತ್ರದ ಟೀಕೆಯು, ಚುನಾವಣಾ ಪ್ರಚಾರದ ಸಮಯದಲ್ಲಿ ಮೋದಿ ಹಾಗೂ ಬಿಜೆಪಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿದೆ. ಈ ಸಂದರ್ಭದಲ್ಲಿ ಪ್ರತಿಪಕ್ಷಗಳು ಬಿಬಿಸಿಯ ಬೆನ್ನಿಗೆ ನಿಂತಿದ್ದಕ್ಕೆ, ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಬಿಬಿಸಿಯನ್ನು ಬಿಜೆಪಿ ”ಅತ್ಯಂತ ಭ್ರಷ್ಟ ಸಂಸ್ಥೆ” ಎಂದಿದೆ. ಅಷ್ಟೇ ಅಲ್ಲದೇ, ಬಿಬಿಸಿ ”ಪತ್ರಿಕೋದ್ಯಮದ ಸೋಗಿನಲ್ಲಿ ದುರುದ್ದೇಶದಿಂದ ಪ್ರಚಾರ ಮಾಡುತ್ತಿದೆ” ಎಂದು ಆರೋಪಿಸಿದೆ.

ರಾಜಕೀಯ ಎನ್ನುವುದು ಗ್ರಹಿಕೆಗೆ ಸಂಬಂಧಿಸಿದ್ದು ಎಂಬುದು ಮೋದಿಗಿಂತ ಚೆನ್ನಾಗಿ ಯಾರಿಗೂ ತಿಳಿದಿಲ್ಲ. ಬಹುಶಃ ಅವರು ಬಿಬಿಸಿಗೆ ‘ನನ್ನನ್ನು ಹೆದರಿಸಲು ಸಾಧ್ಯವಿಲ್ಲ’ ಎಂಬುದನ್ನು ತೋರಿಸಲು ದಾಳಿ ನಡೆಸಿದ್ದಾರೆ. ಇದು ಅವರ ಪೌರುಷದ ಇಮೇಜ್‌ಅನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದು ಅವರು ಭಾವಿಸಿರಬಹುದು.

ಆದರೆ ಇವರ ಈ ಪೌರುಷದ ನಡೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಯುವುದಿಲ್ಲ. 2002ರ ಗಲಭೆಯ ನಂತರ ಹಲವಾರು ಪಾಶ್ಚಿಮಾತ್ಯ ದೇಶಗಳು ಅವರ ಮೇಲೆ ಹೇರಿದ್ದ ವೀಸಾ ನಿಷೇಧಗಳನ್ನು ಅವರು ಮರೆಯಬಾರದು. ಅದನ್ನೀಗ ಅವರು ಬಗೆಹರಿಸಿಕೊಂಡಿದ್ದಾರೆ ಆದರೆ ಪ್ರಧಾನಿಯಾಗಿ ಮೋದಿಯವರು ಮೊದಲ ವಿಶ್ವ ನಾಯಕ ಎಂದು ಕರೆಸಿಕೊಳ್ಳುವ ಹಂಬಲದಲ್ಲಿದ್ದಾರೆ. ಆದರೆ, ಜವಾಹರಲಾಲ್ ನೆಹರು, ಇಂದಿರಾಗಾಂಧಿ, ರಾಜೀವ್ ಗಾಂಧಿ, ಪಿ ವಿ ನರಸಿಂಹ ರಾವ್ ಮತ್ತು ಅಟಲ್ ಬಿಹಾರಿ ವಾಜಪೇಯಿ, ಮನಮೋಹನ್ ಸಿಂಗ್ ಅವರು ತಮ್ಮ ಪಾಂಡಿತ್ಯದ ಕಾರಣದಿಂದಾಗಿ ಸುಲಭವಾಗಿ ವಿಶ್ವ ಮಟ್ಟದಲ್ಲಿ ಗೌರವ ಸಂಪಾದಿಸಿದ್ದರು. ಆದೇ ರೀತಿ ನರೇಂದ್ರ ಮೋದಿ ಅವರು 2014ರಿಂದ ವಿಶ್ವಮಟ್ಟದಲ್ಲಿ ತಾವು ಕೂಡ ವಿಶ್ವನಾಯಕ ಎನ್ನುವ ಗೌರವ ಪಡೆಯಬೇಕು ಎಂದು ಹವಣಿಸುತ್ತಿದ್ದಾರೆ. ಅವರು ಜಿ20ಯ ಅಧ್ಯಕ್ಷತೆಯ ಮೂಲಕ ಆ ಮಹತ್ವಾಕಾಂಕ್ಷೆಯನ್ನು ಸಾಧಿಸುವ ಅಂಚಿನಲ್ಲಿದ್ದರು, ಆದರೆ ಈ ದಾಳಿ ನಡೆಸುವ ಮೂಲಕ ಮತ್ತೆ ತಮ್ಮ ಇಮೇಜ್‌ಗೆ ತಾವೇ ಡ್ಯಾಮೇಜ್ ಮಾಡಿಕೊಂಡಿದ್ದಾರೆ.

ಮೊದಲು BBC ಸಾಕ್ಷ್ಯಚಿತ್ರ, ನಂತರ ಇದೀಗ ಅದಾನಿ ಗ್ರೂಪ್‌ನ ಹಿಂಡೆನ್‌ಬರ್ಗ್ ಸಂಶೋಧನಾ ವರದಿಯು ಮೋದಿ ಆಡಳಿತದ ಆಶ್ರಯದಲ್ಲಿ ಕ್ರೋನಿ ಬಂಡವಾಳಶಾಹಿಗಳು ಪ್ರವರ್ಧಮಾನಕ್ಕೆ ಬಂದವು ಎಂದು ಸೂಚಿಸುತ್ತವೆ. ಇವು ಮೋದಿ ಅವರು ಜಿ20ಯ ಅಧ್ಯಕ್ಷತೆಯ ಮೂಲಕ ವಿಶ್ವ ನಾಯಕರಾಗಿ ಏರುವ ಸಾಧ್ಯತೆಯನ್ನು ಅಪಾಯಕ್ಕೆ ಸಿಲುಕಿಸಿವೆ. ಮಾಧ್ಯಮಗಳ ಅಬ್ಬರದ ಪ್ರಚಾರ ಮತ್ತು ವಿಶ್ವದ ಇತರ ನಾಯಕರೊಂದಿಗಿನ ಬಾಂಧವ್ಯವು ಭಾರತೀಯ ಮತದಾರರಿಗೆ ಸಂದೇಶವನ್ನು ಕಳುಹಿಸುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಜಗತ್ತು ಮೋದಿಯನ್ನು ನಾಯಕ ಎಂದು ಒಪ್ಪಿಕೊಂಡರೆ, 2024ರಲ್ಲಿ ಮೂರನೇ ಅವಧಿಗೆ ಪ್ರಧಾನಿ ಪಟ್ಟವನ್ನು ಏರಬಹುದಿತ್ತು. ಆದರೆ ಇದೀಗ ವಿಶ್ವಮಟ್ಟದಲ್ಲೇ ತಮ್ಮ ಇಮೇಜ್‌ ಅನ್ನು ಮೋದಿ ಹಾಳುಮಾಡಿಕೊಂಡಿದ್ದಾರೆ.

ಮುಂಬರುವ ದಿನಗಳಲ್ಲಿ ಮೋದಿಯವರ ಜಾಗತಿಕ ಸಂಕಷ್ಟಗಳು ಹೆಚ್ಚಾಗಬಹುದು. ಸಂಸತ್ತು, ನ್ಯಾಯಾಂಗ ಮತ್ತು ಮಾಧ್ಯಮಗಳಂತ ಪ್ರಜಾಪ್ರಭುತ್ವ ಸಂಸ್ಥೆಗಳ ಕುಸಿತವು ಅವರ ಆಡಳಿತದ ಪರಿಣಾಮ ಎಂದೇ ಎಲ್ಲಾ ಜಾಗತಿಕ ಮಾಧ್ಯಮ ವೇದಿಕೆಗಳು ಹೇಳುತ್ತಿವೆ. ಭಾರತವು BBC ಸಾಕ್ಷ್ಯಚಿತ್ರವನ್ನು ನಿರ್ಬಂಧಸಿದ ನಂತರ ನ್ಯೂಯಾರ್ಕ್ ಟೈಮ್ಸ್ ಸಂಪಾದಕೀಯ ಮಂಡಳಿಯು ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. “ಸ್ವತಂತ್ರ ಸುದ್ದಿ ಮಾಧ್ಯಮವನ್ನು ಬೆದರಿಸಲು, ಸೆನ್ಸಾರ್ ಮಾಡಲು, ಮೌನಗೊಳಿಸಲು ಅಥವಾ ಶಿಕ್ಷಿಸಲು ಅವರ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಜನಪ್ರಿಯ ಮತ್ತು ನಿರಂಕುಶ ನಾಯಕರ ಆತಂಕಕಾರಿ ಲಕ್ಷಣವಾಗಿದೆ” ಮತ್ತು “ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ರೀತಿ ಮಾಧ್ಯಮ ಸ್ವಾತಂತ್ರದ ಹರಣ ಮಾಡುತ್ತಿದ್ದಾರೆ” ಎಂದು ಅದು ಹೇಳಿದೆ. ಭಾರತವು ಅಂತರರಾಷ್ಟ್ರೀಯ ಮಟ್ಟದಲ್ಲಿ ಶಕ್ತಿಯುವಾದ ದೇಶ ಮತ್ತು ನಿರ್ಣಾಯಕ ಪಾತ್ರವಹಿಸುವ ದೇಶವಾಗಿದೆ ಎಂದು ಒಪ್ಪಿಕೊಳ್ಳುವ ಸಂದರ್ಭದಲ್ಲಿ, ಮೋದಿಯವರು, ಪತ್ರಿಕಾ ಮಾಧ್ಯಮಗಳ ಸ್ವಾತಂತ್ರವನ್ನು ಕಿತ್ತುಕೊಳ್ಳುವ ಕೆಲಸ ಮಾಡಬಾರದು ಎಂದು ಟೈಮ್ಸ್ ಸಂಪಾದಕೀಯ ಮಂಡಳಿಯು ಎಚ್ಚರಿಸಿದೆ.

ಮೂಲ: ಭರತ್ ಭೂಷಣ್

ಕೃಪೆ: ಡೆಕ್ಕನ್ ಹೆರಾಲ್ಡ್

ಇದನ್ನೂ ಓದಿ: ಫಾರ್ಬಿಡನ್‌ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ಸರಣಿಗೆ ಗೌರಿ ಲಂಕೇಶ್‌ ಸ್ಫೂರ್ತಿ; ಗಾರ್ಡಿಯನ್‌ ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...