Homeಅಂತರಾಷ್ಟ್ರೀಯBBC ಮೇಲೆ ಐಟಿ ದಾಳಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ವರ್ಚಸ್ಸಿಗೆ ಧಕ್ಕೆ

BBC ಮೇಲೆ ಐಟಿ ದಾಳಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ವರ್ಚಸ್ಸಿಗೆ ಧಕ್ಕೆ

ನ್ಯಾಯಾಂಗ ಮತ್ತು ಮಾಧ್ಯಮಗಳಂತ ಪ್ರಜಾಪ್ರಭುತ್ವ ಸಂಸ್ಥೆಗಳ ಕುಸಿತವು ಮೋದಿ ಆಡಳಿತದ ಪರಿಣಾಮ ಎಂದೇ ಎಲ್ಲಾ ಜಾಗತಿಕ ಮಾಧ್ಯಮ ವೇದಿಕೆಗಳು ಹೇಳುತ್ತಿವೆ.

- Advertisement -
- Advertisement -

ಐಟಿ ಇಲಾಖೆ ಅಧಿಕಾರಿಗಳು ಸಮೀಕ್ಷೆಯ ಹೆಸರಿನಲ್ಲಿ ದೆಹಲಿ ಮತ್ತು ಮುಂಬೈನಲ್ಲಿರುವ BBC ಕಚೇರಿಗಳ ಮೇಲೆ ದಾಳಿ ನಡೆಸಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಇದ್ದ ಇಮೇಜ್‌ಗೆ ಧಕ್ಕೆಯಾಗಿದೆ. ಏಕೆಂದರೆ ಈ ದಾಳಿಯನ್ನು ಹಲವು ರಾಷ್ಟ್ರಗಳು ಖಂಡಿಸಿವೆ. ಗುಜರಾತ್ ಹತ್ಯಾಕಾಂಡ ಮತ್ತು ಅದರಲ್ಲಿ ಮೋದಿ ಪಾತ್ರದ ಕುರಿತಾದ ವಿಚಾರವನ್ನು BBC ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ. ಹಾಗಾಗಿ ಇದು ಪ್ರತಿಕಾರದ ದಾಳಿ ಎಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

ಇಂಗ್ಲೆಂಡ್‌ನ ವಿದೇಶಾಂಗ ಕಚೇರಿಯ ವರದಿಯನ್ನು ಉಲ್ಲೇಖಿಸಿರುವ BBCಯ ಸಾಕ್ಷ್ಯಚಿತ್ರವು, 2002ರಲ್ಲಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಮುಸ್ಲಿಮರ ಮೇಲೆ ನಡೆದ ಹತ್ಯಾಕಾಂಡಕ್ಕೆ ಅವರೇ ಹೊಣೆಗಾರರು ಎಂಬುದಾಗಿ ತೋರಿಸಲಾಗಿದೆ. ಈ ಸಾಕ್ಷ್ಯಚಿತ್ರವನ್ನು ಕಳೆದ ತಿಂಗಳು ಮೋದಿ ನೇತೃತ್ವದ ಸರ್ಕಾರವು ಭಾರತ ದೇಶದಲ್ಲಿ ನಿರ್ಬಂಧಿಸಿತ್ತು. ಈ ವಿವಾದ ತಾರಕಕ್ಕೇರುತ್ತಿರುವಾಗಲೇ ಸರ್ಕಾರ ಐಟಿ ಇಲಾಖೆಯ ಮೂಲಕ ಬಿಬಿಸಿ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಈ ರೀತಿ ಮಾಧ್ಯಮ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿರುವುದು ಮೊದಲೇನಲ್ಲ, 2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾದಾಗಿನಿಂದ ಸರ್ಕಾರದ ಕ್ರಮಗಳನ್ನು ಟೀಕಿಸಿದ ಅನೇಕ ಭಾರತೀಯ ಮಾಧ್ಯಮ ಸಂಸ್ಥೆಗಳ ಮೇಲೆ ಇದೇ ರೀತಿ ದಾಳಿ ಮಾಡಲಾಗಿದೆ. ಅಷ್ಟೇ ಅಲ್ಲದೇ ವಿವಿಧ ರೀತಿಯಲ್ಲಿ ಬೆದರಿಕೆಗಳನ್ನು ಹಾಕಲಾಗಿದೆ. ‘ಐಟಿ ಸಮೀಕ್ಷೆಗಳಿಂದ’ 2019ರಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಮತ್ತು 2022 ರಲ್ಲಿ ಆಕ್ಸ್‌ಫ್ಯಾಮ್ ಇಂಡಿಯಾದಂತಹ ಅಂತರಾಷ್ಟ್ರೀಯ ಸಂಸ್ಥೆಗಳನ್ನು ಸಹ ಉಳಿಸಲಾಗಿಲ್ಲ. ಟ್ವಿಟರ್ ಸಂಸ್ಥೆಯು ಮೇ 2021ರಲ್ಲಿ  ಬಿಜೆಪಿ ವಕ್ತಾರರ ಟ್ವೀಟ್‌ಗಳಿಗೆ ‘ತಿರುಚಿದ ಸುದ್ದಿ’ (manipulated media) ಎಂಬ ಟ್ಯಾಗ್ ಹಾಕಿ ಅದು ತಪ್ಪು ಮಾಹಿತಿ ಎಂಬ ಅಡಿಟಿಪ್ಪಣಿ ಹಾಕಿತ್ತು. ನಂತರ  ದೆಹಲಿ ಮತ್ತು ಗುರ್ಗಾಂವ್‌ನಲ್ಲಿನ ಟ್ವಿಟರ್ ಕಚೇರಿಗಳ ಮೇಲೆಯೇ ಪೋಲೀಸ್ ದಾಳಿಗಳು ನಡೆದಿವೆ. ಆದ್ದರಿಂದ BBC ಮೇಲಿನ ಈ ‘ಐ-ಟಿ ಸಮೀಕ್ಷೆ’ (ದಾಳಿ) ಸ್ವತಂತ್ರ ಮಾಧ್ಯಮಗಳ ಮೇಲಿನ ಮೊದಲ ದಾಳಿಯಲ್ಲ.

IT ಇಲಾಖೆಯ ಕ್ರಮವನ್ನು ಭಾರತದ ವಿರೋಧ ಪಕ್ಷಗಳು ”ವಿಮರ್ಶಾತ್ಮಕ ಧ್ವನಿಗಳ ಕತ್ತು ಹಿಸುಕುವ ಲಜ್ಜೆಗೆಟ್ಟ ಮತ್ತು ಕ್ಷಮೆಯಿಲ್ಲದ ಪ್ರತೀಕಾರ”, ”ಅಘೋಷಿತ ತುರ್ತುಸ್ಥಿತಿ”, ”ಟೆಲಿವಿಷನ್ ಚಾನೆಲ್‌ನ್ನು ಬೆದರಿಸುವ ಮತ್ತು ಕಿರುಕುಳ ನೀಡುವ ಪ್ರಯತ್ನ” ಎಂದು ವಾಗ್ದಾಳಿ ನಡೆಸಿವೆ. ಅಷ್ಟೇ ಅಲ್ಲದೇ, ಪ್ರೇಮಿಗಳ ದಿನದ ‘ಸಮೀಕ್ಷೆಗಳು’ ಎಂದು ಕೂಡ ವಿರೋಧ ಪಕ್ಷಗಳು ವ್ಯಂಗ್ಯವಾಗಿ ಟೀಕಿಸಿವೆ.

ಮೋದಿ ಸರ್ಕಾರ ಇಂತಹ ಪ್ರತಿಕಾರದ ಕ್ರಮಕ್ಕೆ ಕೈಹಾಕಿದ್ದು ಏಕೆ? ಅಥವಾ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ದೇಶೀಯ ಮತ್ತು ಅಂತರಾಷ್ಟ್ರೀಯ ಮಾಧ್ಯಮಗಳು ಆಡಳಿತ ಪಕ್ಷದ ವಿರುದ್ಧ ಸುದ್ದಿ ಅಥವಾ ವಿಶ್ಲೇಷಣೆ ಮಾಡಬಾರದೇ? ಬಿಜೆಪಿಯ ಕೋಮುವಾದಿ ಸಿದ್ಧಾಂತ ಮತ್ತು 2002ರ ಗುಜರಾತ್ ಗಲಭೆಯಲ್ಲಿ ಮೋದಿ ಪಾತ್ರದ ಬಗ್ಗೆ BBC ಸಾಕ್ಷ್ಯಚಿತ್ರದ ಟೀಕೆಯು, ಚುನಾವಣಾ ಪ್ರಚಾರದ ಸಮಯದಲ್ಲಿ ಮೋದಿ ಹಾಗೂ ಬಿಜೆಪಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿದೆ. ಈ ಸಂದರ್ಭದಲ್ಲಿ ಪ್ರತಿಪಕ್ಷಗಳು ಬಿಬಿಸಿಯ ಬೆನ್ನಿಗೆ ನಿಂತಿದ್ದಕ್ಕೆ, ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಬಿಬಿಸಿಯನ್ನು ಬಿಜೆಪಿ ”ಅತ್ಯಂತ ಭ್ರಷ್ಟ ಸಂಸ್ಥೆ” ಎಂದಿದೆ. ಅಷ್ಟೇ ಅಲ್ಲದೇ, ಬಿಬಿಸಿ ”ಪತ್ರಿಕೋದ್ಯಮದ ಸೋಗಿನಲ್ಲಿ ದುರುದ್ದೇಶದಿಂದ ಪ್ರಚಾರ ಮಾಡುತ್ತಿದೆ” ಎಂದು ಆರೋಪಿಸಿದೆ.

ರಾಜಕೀಯ ಎನ್ನುವುದು ಗ್ರಹಿಕೆಗೆ ಸಂಬಂಧಿಸಿದ್ದು ಎಂಬುದು ಮೋದಿಗಿಂತ ಚೆನ್ನಾಗಿ ಯಾರಿಗೂ ತಿಳಿದಿಲ್ಲ. ಬಹುಶಃ ಅವರು ಬಿಬಿಸಿಗೆ ‘ನನ್ನನ್ನು ಹೆದರಿಸಲು ಸಾಧ್ಯವಿಲ್ಲ’ ಎಂಬುದನ್ನು ತೋರಿಸಲು ದಾಳಿ ನಡೆಸಿದ್ದಾರೆ. ಇದು ಅವರ ಪೌರುಷದ ಇಮೇಜ್‌ಅನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದು ಅವರು ಭಾವಿಸಿರಬಹುದು.

ಆದರೆ ಇವರ ಈ ಪೌರುಷದ ನಡೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಯುವುದಿಲ್ಲ. 2002ರ ಗಲಭೆಯ ನಂತರ ಹಲವಾರು ಪಾಶ್ಚಿಮಾತ್ಯ ದೇಶಗಳು ಅವರ ಮೇಲೆ ಹೇರಿದ್ದ ವೀಸಾ ನಿಷೇಧಗಳನ್ನು ಅವರು ಮರೆಯಬಾರದು. ಅದನ್ನೀಗ ಅವರು ಬಗೆಹರಿಸಿಕೊಂಡಿದ್ದಾರೆ ಆದರೆ ಪ್ರಧಾನಿಯಾಗಿ ಮೋದಿಯವರು ಮೊದಲ ವಿಶ್ವ ನಾಯಕ ಎಂದು ಕರೆಸಿಕೊಳ್ಳುವ ಹಂಬಲದಲ್ಲಿದ್ದಾರೆ. ಆದರೆ, ಜವಾಹರಲಾಲ್ ನೆಹರು, ಇಂದಿರಾಗಾಂಧಿ, ರಾಜೀವ್ ಗಾಂಧಿ, ಪಿ ವಿ ನರಸಿಂಹ ರಾವ್ ಮತ್ತು ಅಟಲ್ ಬಿಹಾರಿ ವಾಜಪೇಯಿ, ಮನಮೋಹನ್ ಸಿಂಗ್ ಅವರು ತಮ್ಮ ಪಾಂಡಿತ್ಯದ ಕಾರಣದಿಂದಾಗಿ ಸುಲಭವಾಗಿ ವಿಶ್ವ ಮಟ್ಟದಲ್ಲಿ ಗೌರವ ಸಂಪಾದಿಸಿದ್ದರು. ಆದೇ ರೀತಿ ನರೇಂದ್ರ ಮೋದಿ ಅವರು 2014ರಿಂದ ವಿಶ್ವಮಟ್ಟದಲ್ಲಿ ತಾವು ಕೂಡ ವಿಶ್ವನಾಯಕ ಎನ್ನುವ ಗೌರವ ಪಡೆಯಬೇಕು ಎಂದು ಹವಣಿಸುತ್ತಿದ್ದಾರೆ. ಅವರು ಜಿ20ಯ ಅಧ್ಯಕ್ಷತೆಯ ಮೂಲಕ ಆ ಮಹತ್ವಾಕಾಂಕ್ಷೆಯನ್ನು ಸಾಧಿಸುವ ಅಂಚಿನಲ್ಲಿದ್ದರು, ಆದರೆ ಈ ದಾಳಿ ನಡೆಸುವ ಮೂಲಕ ಮತ್ತೆ ತಮ್ಮ ಇಮೇಜ್‌ಗೆ ತಾವೇ ಡ್ಯಾಮೇಜ್ ಮಾಡಿಕೊಂಡಿದ್ದಾರೆ.

ಮೊದಲು BBC ಸಾಕ್ಷ್ಯಚಿತ್ರ, ನಂತರ ಇದೀಗ ಅದಾನಿ ಗ್ರೂಪ್‌ನ ಹಿಂಡೆನ್‌ಬರ್ಗ್ ಸಂಶೋಧನಾ ವರದಿಯು ಮೋದಿ ಆಡಳಿತದ ಆಶ್ರಯದಲ್ಲಿ ಕ್ರೋನಿ ಬಂಡವಾಳಶಾಹಿಗಳು ಪ್ರವರ್ಧಮಾನಕ್ಕೆ ಬಂದವು ಎಂದು ಸೂಚಿಸುತ್ತವೆ. ಇವು ಮೋದಿ ಅವರು ಜಿ20ಯ ಅಧ್ಯಕ್ಷತೆಯ ಮೂಲಕ ವಿಶ್ವ ನಾಯಕರಾಗಿ ಏರುವ ಸಾಧ್ಯತೆಯನ್ನು ಅಪಾಯಕ್ಕೆ ಸಿಲುಕಿಸಿವೆ. ಮಾಧ್ಯಮಗಳ ಅಬ್ಬರದ ಪ್ರಚಾರ ಮತ್ತು ವಿಶ್ವದ ಇತರ ನಾಯಕರೊಂದಿಗಿನ ಬಾಂಧವ್ಯವು ಭಾರತೀಯ ಮತದಾರರಿಗೆ ಸಂದೇಶವನ್ನು ಕಳುಹಿಸುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಜಗತ್ತು ಮೋದಿಯನ್ನು ನಾಯಕ ಎಂದು ಒಪ್ಪಿಕೊಂಡರೆ, 2024ರಲ್ಲಿ ಮೂರನೇ ಅವಧಿಗೆ ಪ್ರಧಾನಿ ಪಟ್ಟವನ್ನು ಏರಬಹುದಿತ್ತು. ಆದರೆ ಇದೀಗ ವಿಶ್ವಮಟ್ಟದಲ್ಲೇ ತಮ್ಮ ಇಮೇಜ್‌ ಅನ್ನು ಮೋದಿ ಹಾಳುಮಾಡಿಕೊಂಡಿದ್ದಾರೆ.

ಮುಂಬರುವ ದಿನಗಳಲ್ಲಿ ಮೋದಿಯವರ ಜಾಗತಿಕ ಸಂಕಷ್ಟಗಳು ಹೆಚ್ಚಾಗಬಹುದು. ಸಂಸತ್ತು, ನ್ಯಾಯಾಂಗ ಮತ್ತು ಮಾಧ್ಯಮಗಳಂತ ಪ್ರಜಾಪ್ರಭುತ್ವ ಸಂಸ್ಥೆಗಳ ಕುಸಿತವು ಅವರ ಆಡಳಿತದ ಪರಿಣಾಮ ಎಂದೇ ಎಲ್ಲಾ ಜಾಗತಿಕ ಮಾಧ್ಯಮ ವೇದಿಕೆಗಳು ಹೇಳುತ್ತಿವೆ. ಭಾರತವು BBC ಸಾಕ್ಷ್ಯಚಿತ್ರವನ್ನು ನಿರ್ಬಂಧಸಿದ ನಂತರ ನ್ಯೂಯಾರ್ಕ್ ಟೈಮ್ಸ್ ಸಂಪಾದಕೀಯ ಮಂಡಳಿಯು ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. “ಸ್ವತಂತ್ರ ಸುದ್ದಿ ಮಾಧ್ಯಮವನ್ನು ಬೆದರಿಸಲು, ಸೆನ್ಸಾರ್ ಮಾಡಲು, ಮೌನಗೊಳಿಸಲು ಅಥವಾ ಶಿಕ್ಷಿಸಲು ಅವರ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಜನಪ್ರಿಯ ಮತ್ತು ನಿರಂಕುಶ ನಾಯಕರ ಆತಂಕಕಾರಿ ಲಕ್ಷಣವಾಗಿದೆ” ಮತ್ತು “ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ರೀತಿ ಮಾಧ್ಯಮ ಸ್ವಾತಂತ್ರದ ಹರಣ ಮಾಡುತ್ತಿದ್ದಾರೆ” ಎಂದು ಅದು ಹೇಳಿದೆ. ಭಾರತವು ಅಂತರರಾಷ್ಟ್ರೀಯ ಮಟ್ಟದಲ್ಲಿ ಶಕ್ತಿಯುವಾದ ದೇಶ ಮತ್ತು ನಿರ್ಣಾಯಕ ಪಾತ್ರವಹಿಸುವ ದೇಶವಾಗಿದೆ ಎಂದು ಒಪ್ಪಿಕೊಳ್ಳುವ ಸಂದರ್ಭದಲ್ಲಿ, ಮೋದಿಯವರು, ಪತ್ರಿಕಾ ಮಾಧ್ಯಮಗಳ ಸ್ವಾತಂತ್ರವನ್ನು ಕಿತ್ತುಕೊಳ್ಳುವ ಕೆಲಸ ಮಾಡಬಾರದು ಎಂದು ಟೈಮ್ಸ್ ಸಂಪಾದಕೀಯ ಮಂಡಳಿಯು ಎಚ್ಚರಿಸಿದೆ.

ಮೂಲ: ಭರತ್ ಭೂಷಣ್

ಕೃಪೆ: ಡೆಕ್ಕನ್ ಹೆರಾಲ್ಡ್

ಇದನ್ನೂ ಓದಿ: ಫಾರ್ಬಿಡನ್‌ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ಸರಣಿಗೆ ಗೌರಿ ಲಂಕೇಶ್‌ ಸ್ಫೂರ್ತಿ; ಗಾರ್ಡಿಯನ್‌ ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...