Homeಮುಖಪುಟ‘ಬಿಹಾರಿಗಳ ಮೇಲೆ ತಮಿಳುನಾಡಿನಲ್ಲಿ ಹಲ್ಲೆ’ ಎಂದು ಸುಳ್ಳು ಸುದ್ದಿ ಪ್ರಕಟ; ಒಪಿಇಂಡಿಯಾ ಎಡಿಟರ್‌, ಸಿಇಒ ವಿರುದ್ಧ...

‘ಬಿಹಾರಿಗಳ ಮೇಲೆ ತಮಿಳುನಾಡಿನಲ್ಲಿ ಹಲ್ಲೆ’ ಎಂದು ಸುಳ್ಳು ಸುದ್ದಿ ಪ್ರಕಟ; ಒಪಿಇಂಡಿಯಾ ಎಡಿಟರ್‌, ಸಿಇಒ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಬಿಜೆಪಿಯ ಪ್ರೊಪಗಾಂಡ ಮೀಡಿಯಾ ಎಂದೇ ಖ್ಯಾತವಾಗಿರುವ ‘ಒಪಿ ಇಂಡಿಯಾ ಇಂಡಿಯಾ’ದ ಮುಖ್ಯ ಸಂಪಾದಕಿ ನೂಪುರ್ ಜೆ ಶರ್ಮಾ ಮತ್ತು ವೆಬ್‌ಸೈಟ್‌ನ ಸಿಇಒ ರಾಹುಲ್ ರೋಷನ್ ವಿರುದ್ಧ ಚೆನ್ನೈನ ತಿರುನಿನ್ರವೂರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ತಮಿಳುನಾಡಿನಲ್ಲಿ ಹಿಂದಿ ಮಾತನಾಡುವ, ವಿಶೇಷವಾಗಿ ಬಿಹಾರದ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಕೊಲ್ಲಲಾಗುತ್ತಿದೆ ಎಂದು ‘ಒಪಿ ಇಂಡಿಯಾ’ ಹರಡುತ್ತಿರುವ ಸುಳ್ಳು ಸುದ್ದಿಗಳ ವಿರುದ್ಧ ಪೊಲೀಸರು ಕ್ರಮ ಜರುಗಿಸಿದ್ದಾರೆ.

ಅಂತಹ ದಾಳಿಗಳಿಗೆ ಸಾಕ್ಷಿಗಳೆಂದು ಹರಿಬಿಡಲಾಗಿರುವ ಹಲವಾರು ವೀಡಿಯೊಗಳ ಅಸಲಿ ಸತ್ಯವನ್ನು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ‘ಆಲ್ಟ್ ನ್ಯೂಸ್’ ಬಯಲಿಗೆಳೆದಿದೆ.

ತಮಿಳುನಾಡು ಕಾರ್ಮಿಕ ಕಲ್ಯಾಣ ಮತ್ತು ಕೌಶಲ್ಯ ಅಭಿವೃದ್ಧಿ ಸಂಸ್ಥೆಯು ಈ ವಾರದ ಆರಂಭದಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿ, ಇಂತಹ ದಾಳಿಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿತ್ತು. ಇದಲ್ಲದೆ ಬಿಹಾರ ರಾಜ್ಯ ಸರ್ಕಾರವು ಈ ಕುರಿತು ತನಿಖೆ ಮಾಡಲು ತಂಡವೊಂದನ್ನು ಕಳಿಸಿತ್ತು. ಈ ಆರೋಪಗಳಲ್ಲಿ ಸತ್ಯವಿಲ್ಲ ಎಂಬುದನ್ನು ತಂಡವು ಕಂಡುಕೊಂಡಿದೆ.

ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಸೂರ್ಯಪ್ರಕಾಶ್ ಅವರು ನೀಡಿದ ದೂರಿನ ಆಧಾರದ ಮೇಲೆ ನೂಪುರ್ ಜೆ ಶರ್ಮಾ ಮತ್ತು ಒಪಿ ಇಂಡಿಯಾ ಸಿಇಒ ವಿರುದ್ಧ ಐಪಿಸಿ ಸೆಕ್ಷನ್ 153 ಎ (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಕನಿಷ್ಠ 15 ವಲಸೆ ಕಾರ್ಮಿಕರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಮತ್ತು ಕೊಲೆಯಾದ ಕಾರ್ಮಿಕರ ಶವಗಳನ್ನು ಬಿಹಾರದ ಹಲವು ಜಿಲ್ಲೆಗಳಿಗೆ ಹಿಂತಿರುಗಿಸಲಾಗುತ್ತಿದೆ ಎಂದು ಒಪಿಇಂಡಿಯಾ ಹೇಳಿಕೊಂಡಿತ್ತು. ಈ ಆರೋಪಗಳನ್ನು ಮಾಡುತ್ತಿರುವ ಬಿಹಾರಿ ಕಾರ್ಮಿಕರೊಂದಿಗೆ ಮಾತನಾಡಿರುವುದಾಗಿ ಒಪಿ ಇಂಡಿಯಾ ಬಿಂಬಿಸಿಕೊಂಡಿತ್ತು. ಇದೇ ರೀತಿಯ ವರದಿಗಳನ್ನು ಪ್ರಕಟಿಸಿರುವ ‘ದೈನಿಕ್ ಭಾಸ್ಕರ್’ ಮಾಧ್ಯಮದ ವರದಿಗಳನ್ನು ಒಪಿಇಂಡಿಯಾ ವೆಬ್‌ಸೈಟ್ ಉಲ್ಲೇಖಿಸಿದೆ.

ತಾಲಿಬಾನಿ ಶೈಲಿಯ ದಾಳಿಯನ್ನು ಬಿಹಾರಿಗಳು ತಮಿಳುನಾಡಿನಲ್ಲಿ ಎದುರಿಸುತ್ತಾರೆ ಎಂದು ಪ್ರಮುಖ ಹಿಂದಿ ದಿನಪತ್ರಿಕೆ ‘ದೈನಿಕ್ ಭಾಸ್ಕರ್‌‌’ ಆರೋಪಿಸಿತ್ತು. ತಮಿಳುನಾಡಿನ ದಕ್ಷಿಣ ಭಾಗದಲ್ಲಿ 15 ಮಂದಿ ಬಿಹಾರಿಗಳಿಗೆ ಜೀವ ಬೆದರಿಕೆ ಇದೆ  ಎಂದು ವ್ಯಕ್ತಿಯೊಬ್ಬರು ಹೇಳಿರುವುದಾಗಿ ವರದಿ ಉಲ್ಲೇಖಿಸಿತ್ತು.

ವರದಿಯೊಂದಿಗೆ ವಿಡಿಯೊ ಲಗತ್ತಿಸಲಾಗಿದ್ದು, ಎರಡು ಗುಂಪಿನ ಪುರುಷರ ನಡುವೆ ವಾಗ್ವಾದಗಳು ನಡೆಯುತ್ತಿರುವುದನ್ನು ಅಲ್ಲಿ ಕಾಣಬಹುದಿತ್ತು. ವರದಿ ಪ್ರಕಟವಾದ ಬಳಿಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಜೊತೆಯಲ್ಲಿ ಕಳವಳ ವ್ಯಕ್ತಪಡಿಸಿವ ಘಟನೆಯೂ ನಡೆದಿದೆ.

ದೈನಿಕ್ ಭಾಸ್ಕರ್‌ ವರದಿಗೆ ಸಂಬಂಧಿಸಿದಂತೆ ಆಲ್ಟ್‌ನ್ಯೂಸ್‌ ವರದಿ ಮಾಡಿದ್ದು, “ವ್ಯಯಕ್ತಿಕ ಅಂದರೆ ವಿವಾಹೇತರ ಸಂಬಂಧದ ಕಾರಣ ನಡೆದಿರುವ ಕೊಲೆಗಳನ್ನು ಬಿಹಾರಿ ಕಾರ್ಮಿಕರ ಕೊಲೆಗೆ ಥಳುಕು ಹಾಕಲಾಗಿದೆ” ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

ಮುಖ್ಯವಾಗಿ ವೈರಲ್ ಆದ ಐದು ವಿಡಿಯೊಗಳನ್ನು ಫ್ಯಾಕ್ಟ್‌ಚೆಕ್‌ ಮಾಡಿರುವ ಆಲ್ಟ್‌ನ್ಯೂಸ್‌, ಇಲ್ಲಿನ ನಾಲ್ಕು ವಿಡಿಯೊಗಳು ದಾಳಿಯ ಉದ್ದೇಶವನ್ನು ಹೊಂದಿಲ್ಲ. ವಲಸೆ ಕಾರ್ಮಿಕರಿಗೆ ಸಂಬಂಧಪಡದ ಬೇರ್‍ಯಾವುದೋ ಹಳೆಯ ವಿಡಿಯೊಗಳನ್ನು ಹಂಚಿಕೊಳ್ಳಲಾಗುತ್ತಿದೆ ಎಂದು ಬಯಲಿಗೆಳೆದಿದೆ.

ಆಲ್ಟ್ ನ್ಯೂಸ್ ಪರಿಶೀಲಿಸಿದ ಎರಡು ವೀಡಿಯೊಗಳು ತಮಿಳುನಾಡಿನ ಹೊರಗೆ ನಡೆದ ಘಟನೆಗಳಿಗೆ ಸಂಬಂಧಿಸಿವೆ. ಐದನೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸೈಲೇಂದ್ರ ಬಾಬು ಅವರು ಹೇಳಿಕೆ ನೀಡಿದ್ದು, “ನಕಲಿ” ಎಂದು ಸ್ಪಷ್ಟಪಡಿಸಿದ್ದಾರೆ.

ಸ್ವತಂತ್ರ ಮಾಧ್ಯಮವಾದ ‘ಆಲ್ಟ್‌ನ್ಯೂಸ್’ ಮಾಡಿರುವ ವರದಿಗಳಿಗೆ ತಮಿಳುನಾಡಿನ ಜನತೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ‘ತಮಿಳುನಾಡಿನ ಕುರಿತು ಹಬ್ಬಿಸಲಾಗುತ್ತಿರುವ ಸುಳ್ಳು ಸುದ್ದಿಗಳಿಂದ ಬೇಸರವಾಗಿತ್ತು. ಆಲ್ಟ್‌ನ್ಯೂಸ್ ಸತ್ಯಗಳನ್ನು ಬಯಲಿಗೆಳೆದು ತಮಿಳು ಜನತೆಯ ಮೇಲಿನ ಅಪವಾದಗಳಿಗೆ ಉತ್ತರ ಕೊಟ್ಟಿದೆ’ ಎಂಬ ಶ್ಲಾಘನೆಯನ್ನು ಟ್ವೀಟರ್‌ನಲ್ಲಿ ವ್ಯಕ್ತಪಡಿಸಲಾಗುತ್ತಿದೆ. ಜೊತೆಗೆ ‘ಆಲ್ಟ್‌ನ್ಯೂಸ್‌’ಗೆ ಸ್ವಯಂಪ್ರೇರಣೆಯಿಂದ ದೇಣಿಗೆಯನ್ನೂ ತಮಿಳುನಾಡಿನ ಜನತೆ ನೀಡಲಾರಂಭಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...