Homeಮುಖಪುಟ‘ಬಿಹಾರಿಗಳ ಮೇಲೆ ತಮಿಳುನಾಡಿನಲ್ಲಿ ಹಲ್ಲೆ’ ಎಂದು ಸುಳ್ಳು ಸುದ್ದಿ ಪ್ರಕಟ; ಒಪಿಇಂಡಿಯಾ ಎಡಿಟರ್‌, ಸಿಇಒ ವಿರುದ್ಧ...

‘ಬಿಹಾರಿಗಳ ಮೇಲೆ ತಮಿಳುನಾಡಿನಲ್ಲಿ ಹಲ್ಲೆ’ ಎಂದು ಸುಳ್ಳು ಸುದ್ದಿ ಪ್ರಕಟ; ಒಪಿಇಂಡಿಯಾ ಎಡಿಟರ್‌, ಸಿಇಒ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಬಿಜೆಪಿಯ ಪ್ರೊಪಗಾಂಡ ಮೀಡಿಯಾ ಎಂದೇ ಖ್ಯಾತವಾಗಿರುವ ‘ಒಪಿ ಇಂಡಿಯಾ ಇಂಡಿಯಾ’ದ ಮುಖ್ಯ ಸಂಪಾದಕಿ ನೂಪುರ್ ಜೆ ಶರ್ಮಾ ಮತ್ತು ವೆಬ್‌ಸೈಟ್‌ನ ಸಿಇಒ ರಾಹುಲ್ ರೋಷನ್ ವಿರುದ್ಧ ಚೆನ್ನೈನ ತಿರುನಿನ್ರವೂರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ತಮಿಳುನಾಡಿನಲ್ಲಿ ಹಿಂದಿ ಮಾತನಾಡುವ, ವಿಶೇಷವಾಗಿ ಬಿಹಾರದ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಕೊಲ್ಲಲಾಗುತ್ತಿದೆ ಎಂದು ‘ಒಪಿ ಇಂಡಿಯಾ’ ಹರಡುತ್ತಿರುವ ಸುಳ್ಳು ಸುದ್ದಿಗಳ ವಿರುದ್ಧ ಪೊಲೀಸರು ಕ್ರಮ ಜರುಗಿಸಿದ್ದಾರೆ.

ಅಂತಹ ದಾಳಿಗಳಿಗೆ ಸಾಕ್ಷಿಗಳೆಂದು ಹರಿಬಿಡಲಾಗಿರುವ ಹಲವಾರು ವೀಡಿಯೊಗಳ ಅಸಲಿ ಸತ್ಯವನ್ನು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ‘ಆಲ್ಟ್ ನ್ಯೂಸ್’ ಬಯಲಿಗೆಳೆದಿದೆ.

ತಮಿಳುನಾಡು ಕಾರ್ಮಿಕ ಕಲ್ಯಾಣ ಮತ್ತು ಕೌಶಲ್ಯ ಅಭಿವೃದ್ಧಿ ಸಂಸ್ಥೆಯು ಈ ವಾರದ ಆರಂಭದಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿ, ಇಂತಹ ದಾಳಿಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿತ್ತು. ಇದಲ್ಲದೆ ಬಿಹಾರ ರಾಜ್ಯ ಸರ್ಕಾರವು ಈ ಕುರಿತು ತನಿಖೆ ಮಾಡಲು ತಂಡವೊಂದನ್ನು ಕಳಿಸಿತ್ತು. ಈ ಆರೋಪಗಳಲ್ಲಿ ಸತ್ಯವಿಲ್ಲ ಎಂಬುದನ್ನು ತಂಡವು ಕಂಡುಕೊಂಡಿದೆ.

ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಸೂರ್ಯಪ್ರಕಾಶ್ ಅವರು ನೀಡಿದ ದೂರಿನ ಆಧಾರದ ಮೇಲೆ ನೂಪುರ್ ಜೆ ಶರ್ಮಾ ಮತ್ತು ಒಪಿ ಇಂಡಿಯಾ ಸಿಇಒ ವಿರುದ್ಧ ಐಪಿಸಿ ಸೆಕ್ಷನ್ 153 ಎ (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಕನಿಷ್ಠ 15 ವಲಸೆ ಕಾರ್ಮಿಕರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಮತ್ತು ಕೊಲೆಯಾದ ಕಾರ್ಮಿಕರ ಶವಗಳನ್ನು ಬಿಹಾರದ ಹಲವು ಜಿಲ್ಲೆಗಳಿಗೆ ಹಿಂತಿರುಗಿಸಲಾಗುತ್ತಿದೆ ಎಂದು ಒಪಿಇಂಡಿಯಾ ಹೇಳಿಕೊಂಡಿತ್ತು. ಈ ಆರೋಪಗಳನ್ನು ಮಾಡುತ್ತಿರುವ ಬಿಹಾರಿ ಕಾರ್ಮಿಕರೊಂದಿಗೆ ಮಾತನಾಡಿರುವುದಾಗಿ ಒಪಿ ಇಂಡಿಯಾ ಬಿಂಬಿಸಿಕೊಂಡಿತ್ತು. ಇದೇ ರೀತಿಯ ವರದಿಗಳನ್ನು ಪ್ರಕಟಿಸಿರುವ ‘ದೈನಿಕ್ ಭಾಸ್ಕರ್’ ಮಾಧ್ಯಮದ ವರದಿಗಳನ್ನು ಒಪಿಇಂಡಿಯಾ ವೆಬ್‌ಸೈಟ್ ಉಲ್ಲೇಖಿಸಿದೆ.

ತಾಲಿಬಾನಿ ಶೈಲಿಯ ದಾಳಿಯನ್ನು ಬಿಹಾರಿಗಳು ತಮಿಳುನಾಡಿನಲ್ಲಿ ಎದುರಿಸುತ್ತಾರೆ ಎಂದು ಪ್ರಮುಖ ಹಿಂದಿ ದಿನಪತ್ರಿಕೆ ‘ದೈನಿಕ್ ಭಾಸ್ಕರ್‌‌’ ಆರೋಪಿಸಿತ್ತು. ತಮಿಳುನಾಡಿನ ದಕ್ಷಿಣ ಭಾಗದಲ್ಲಿ 15 ಮಂದಿ ಬಿಹಾರಿಗಳಿಗೆ ಜೀವ ಬೆದರಿಕೆ ಇದೆ  ಎಂದು ವ್ಯಕ್ತಿಯೊಬ್ಬರು ಹೇಳಿರುವುದಾಗಿ ವರದಿ ಉಲ್ಲೇಖಿಸಿತ್ತು.

ವರದಿಯೊಂದಿಗೆ ವಿಡಿಯೊ ಲಗತ್ತಿಸಲಾಗಿದ್ದು, ಎರಡು ಗುಂಪಿನ ಪುರುಷರ ನಡುವೆ ವಾಗ್ವಾದಗಳು ನಡೆಯುತ್ತಿರುವುದನ್ನು ಅಲ್ಲಿ ಕಾಣಬಹುದಿತ್ತು. ವರದಿ ಪ್ರಕಟವಾದ ಬಳಿಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಜೊತೆಯಲ್ಲಿ ಕಳವಳ ವ್ಯಕ್ತಪಡಿಸಿವ ಘಟನೆಯೂ ನಡೆದಿದೆ.

ದೈನಿಕ್ ಭಾಸ್ಕರ್‌ ವರದಿಗೆ ಸಂಬಂಧಿಸಿದಂತೆ ಆಲ್ಟ್‌ನ್ಯೂಸ್‌ ವರದಿ ಮಾಡಿದ್ದು, “ವ್ಯಯಕ್ತಿಕ ಅಂದರೆ ವಿವಾಹೇತರ ಸಂಬಂಧದ ಕಾರಣ ನಡೆದಿರುವ ಕೊಲೆಗಳನ್ನು ಬಿಹಾರಿ ಕಾರ್ಮಿಕರ ಕೊಲೆಗೆ ಥಳುಕು ಹಾಕಲಾಗಿದೆ” ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

ಮುಖ್ಯವಾಗಿ ವೈರಲ್ ಆದ ಐದು ವಿಡಿಯೊಗಳನ್ನು ಫ್ಯಾಕ್ಟ್‌ಚೆಕ್‌ ಮಾಡಿರುವ ಆಲ್ಟ್‌ನ್ಯೂಸ್‌, ಇಲ್ಲಿನ ನಾಲ್ಕು ವಿಡಿಯೊಗಳು ದಾಳಿಯ ಉದ್ದೇಶವನ್ನು ಹೊಂದಿಲ್ಲ. ವಲಸೆ ಕಾರ್ಮಿಕರಿಗೆ ಸಂಬಂಧಪಡದ ಬೇರ್‍ಯಾವುದೋ ಹಳೆಯ ವಿಡಿಯೊಗಳನ್ನು ಹಂಚಿಕೊಳ್ಳಲಾಗುತ್ತಿದೆ ಎಂದು ಬಯಲಿಗೆಳೆದಿದೆ.

ಆಲ್ಟ್ ನ್ಯೂಸ್ ಪರಿಶೀಲಿಸಿದ ಎರಡು ವೀಡಿಯೊಗಳು ತಮಿಳುನಾಡಿನ ಹೊರಗೆ ನಡೆದ ಘಟನೆಗಳಿಗೆ ಸಂಬಂಧಿಸಿವೆ. ಐದನೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸೈಲೇಂದ್ರ ಬಾಬು ಅವರು ಹೇಳಿಕೆ ನೀಡಿದ್ದು, “ನಕಲಿ” ಎಂದು ಸ್ಪಷ್ಟಪಡಿಸಿದ್ದಾರೆ.

ಸ್ವತಂತ್ರ ಮಾಧ್ಯಮವಾದ ‘ಆಲ್ಟ್‌ನ್ಯೂಸ್’ ಮಾಡಿರುವ ವರದಿಗಳಿಗೆ ತಮಿಳುನಾಡಿನ ಜನತೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ‘ತಮಿಳುನಾಡಿನ ಕುರಿತು ಹಬ್ಬಿಸಲಾಗುತ್ತಿರುವ ಸುಳ್ಳು ಸುದ್ದಿಗಳಿಂದ ಬೇಸರವಾಗಿತ್ತು. ಆಲ್ಟ್‌ನ್ಯೂಸ್ ಸತ್ಯಗಳನ್ನು ಬಯಲಿಗೆಳೆದು ತಮಿಳು ಜನತೆಯ ಮೇಲಿನ ಅಪವಾದಗಳಿಗೆ ಉತ್ತರ ಕೊಟ್ಟಿದೆ’ ಎಂಬ ಶ್ಲಾಘನೆಯನ್ನು ಟ್ವೀಟರ್‌ನಲ್ಲಿ ವ್ಯಕ್ತಪಡಿಸಲಾಗುತ್ತಿದೆ. ಜೊತೆಗೆ ‘ಆಲ್ಟ್‌ನ್ಯೂಸ್‌’ಗೆ ಸ್ವಯಂಪ್ರೇರಣೆಯಿಂದ ದೇಣಿಗೆಯನ್ನೂ ತಮಿಳುನಾಡಿನ ಜನತೆ ನೀಡಲಾರಂಭಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...