Homeಮುಖಪುಟ‘ಬಿಹಾರಿಗಳ ಮೇಲೆ ತಮಿಳುನಾಡಿನಲ್ಲಿ ಹಲ್ಲೆ’ ಎಂದು ಸುಳ್ಳು ಸುದ್ದಿ ಪ್ರಕಟ; ಒಪಿಇಂಡಿಯಾ ಎಡಿಟರ್‌, ಸಿಇಒ ವಿರುದ್ಧ...

‘ಬಿಹಾರಿಗಳ ಮೇಲೆ ತಮಿಳುನಾಡಿನಲ್ಲಿ ಹಲ್ಲೆ’ ಎಂದು ಸುಳ್ಳು ಸುದ್ದಿ ಪ್ರಕಟ; ಒಪಿಇಂಡಿಯಾ ಎಡಿಟರ್‌, ಸಿಇಒ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಬಿಜೆಪಿಯ ಪ್ರೊಪಗಾಂಡ ಮೀಡಿಯಾ ಎಂದೇ ಖ್ಯಾತವಾಗಿರುವ ‘ಒಪಿ ಇಂಡಿಯಾ ಇಂಡಿಯಾ’ದ ಮುಖ್ಯ ಸಂಪಾದಕಿ ನೂಪುರ್ ಜೆ ಶರ್ಮಾ ಮತ್ತು ವೆಬ್‌ಸೈಟ್‌ನ ಸಿಇಒ ರಾಹುಲ್ ರೋಷನ್ ವಿರುದ್ಧ ಚೆನ್ನೈನ ತಿರುನಿನ್ರವೂರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ತಮಿಳುನಾಡಿನಲ್ಲಿ ಹಿಂದಿ ಮಾತನಾಡುವ, ವಿಶೇಷವಾಗಿ ಬಿಹಾರದ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಕೊಲ್ಲಲಾಗುತ್ತಿದೆ ಎಂದು ‘ಒಪಿ ಇಂಡಿಯಾ’ ಹರಡುತ್ತಿರುವ ಸುಳ್ಳು ಸುದ್ದಿಗಳ ವಿರುದ್ಧ ಪೊಲೀಸರು ಕ್ರಮ ಜರುಗಿಸಿದ್ದಾರೆ.

ಅಂತಹ ದಾಳಿಗಳಿಗೆ ಸಾಕ್ಷಿಗಳೆಂದು ಹರಿಬಿಡಲಾಗಿರುವ ಹಲವಾರು ವೀಡಿಯೊಗಳ ಅಸಲಿ ಸತ್ಯವನ್ನು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ‘ಆಲ್ಟ್ ನ್ಯೂಸ್’ ಬಯಲಿಗೆಳೆದಿದೆ.

ತಮಿಳುನಾಡು ಕಾರ್ಮಿಕ ಕಲ್ಯಾಣ ಮತ್ತು ಕೌಶಲ್ಯ ಅಭಿವೃದ್ಧಿ ಸಂಸ್ಥೆಯು ಈ ವಾರದ ಆರಂಭದಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿ, ಇಂತಹ ದಾಳಿಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿತ್ತು. ಇದಲ್ಲದೆ ಬಿಹಾರ ರಾಜ್ಯ ಸರ್ಕಾರವು ಈ ಕುರಿತು ತನಿಖೆ ಮಾಡಲು ತಂಡವೊಂದನ್ನು ಕಳಿಸಿತ್ತು. ಈ ಆರೋಪಗಳಲ್ಲಿ ಸತ್ಯವಿಲ್ಲ ಎಂಬುದನ್ನು ತಂಡವು ಕಂಡುಕೊಂಡಿದೆ.

ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಸೂರ್ಯಪ್ರಕಾಶ್ ಅವರು ನೀಡಿದ ದೂರಿನ ಆಧಾರದ ಮೇಲೆ ನೂಪುರ್ ಜೆ ಶರ್ಮಾ ಮತ್ತು ಒಪಿ ಇಂಡಿಯಾ ಸಿಇಒ ವಿರುದ್ಧ ಐಪಿಸಿ ಸೆಕ್ಷನ್ 153 ಎ (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಕನಿಷ್ಠ 15 ವಲಸೆ ಕಾರ್ಮಿಕರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಮತ್ತು ಕೊಲೆಯಾದ ಕಾರ್ಮಿಕರ ಶವಗಳನ್ನು ಬಿಹಾರದ ಹಲವು ಜಿಲ್ಲೆಗಳಿಗೆ ಹಿಂತಿರುಗಿಸಲಾಗುತ್ತಿದೆ ಎಂದು ಒಪಿಇಂಡಿಯಾ ಹೇಳಿಕೊಂಡಿತ್ತು. ಈ ಆರೋಪಗಳನ್ನು ಮಾಡುತ್ತಿರುವ ಬಿಹಾರಿ ಕಾರ್ಮಿಕರೊಂದಿಗೆ ಮಾತನಾಡಿರುವುದಾಗಿ ಒಪಿ ಇಂಡಿಯಾ ಬಿಂಬಿಸಿಕೊಂಡಿತ್ತು. ಇದೇ ರೀತಿಯ ವರದಿಗಳನ್ನು ಪ್ರಕಟಿಸಿರುವ ‘ದೈನಿಕ್ ಭಾಸ್ಕರ್’ ಮಾಧ್ಯಮದ ವರದಿಗಳನ್ನು ಒಪಿಇಂಡಿಯಾ ವೆಬ್‌ಸೈಟ್ ಉಲ್ಲೇಖಿಸಿದೆ.

ತಾಲಿಬಾನಿ ಶೈಲಿಯ ದಾಳಿಯನ್ನು ಬಿಹಾರಿಗಳು ತಮಿಳುನಾಡಿನಲ್ಲಿ ಎದುರಿಸುತ್ತಾರೆ ಎಂದು ಪ್ರಮುಖ ಹಿಂದಿ ದಿನಪತ್ರಿಕೆ ‘ದೈನಿಕ್ ಭಾಸ್ಕರ್‌‌’ ಆರೋಪಿಸಿತ್ತು. ತಮಿಳುನಾಡಿನ ದಕ್ಷಿಣ ಭಾಗದಲ್ಲಿ 15 ಮಂದಿ ಬಿಹಾರಿಗಳಿಗೆ ಜೀವ ಬೆದರಿಕೆ ಇದೆ  ಎಂದು ವ್ಯಕ್ತಿಯೊಬ್ಬರು ಹೇಳಿರುವುದಾಗಿ ವರದಿ ಉಲ್ಲೇಖಿಸಿತ್ತು.

ವರದಿಯೊಂದಿಗೆ ವಿಡಿಯೊ ಲಗತ್ತಿಸಲಾಗಿದ್ದು, ಎರಡು ಗುಂಪಿನ ಪುರುಷರ ನಡುವೆ ವಾಗ್ವಾದಗಳು ನಡೆಯುತ್ತಿರುವುದನ್ನು ಅಲ್ಲಿ ಕಾಣಬಹುದಿತ್ತು. ವರದಿ ಪ್ರಕಟವಾದ ಬಳಿಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಜೊತೆಯಲ್ಲಿ ಕಳವಳ ವ್ಯಕ್ತಪಡಿಸಿವ ಘಟನೆಯೂ ನಡೆದಿದೆ.

ದೈನಿಕ್ ಭಾಸ್ಕರ್‌ ವರದಿಗೆ ಸಂಬಂಧಿಸಿದಂತೆ ಆಲ್ಟ್‌ನ್ಯೂಸ್‌ ವರದಿ ಮಾಡಿದ್ದು, “ವ್ಯಯಕ್ತಿಕ ಅಂದರೆ ವಿವಾಹೇತರ ಸಂಬಂಧದ ಕಾರಣ ನಡೆದಿರುವ ಕೊಲೆಗಳನ್ನು ಬಿಹಾರಿ ಕಾರ್ಮಿಕರ ಕೊಲೆಗೆ ಥಳುಕು ಹಾಕಲಾಗಿದೆ” ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

ಮುಖ್ಯವಾಗಿ ವೈರಲ್ ಆದ ಐದು ವಿಡಿಯೊಗಳನ್ನು ಫ್ಯಾಕ್ಟ್‌ಚೆಕ್‌ ಮಾಡಿರುವ ಆಲ್ಟ್‌ನ್ಯೂಸ್‌, ಇಲ್ಲಿನ ನಾಲ್ಕು ವಿಡಿಯೊಗಳು ದಾಳಿಯ ಉದ್ದೇಶವನ್ನು ಹೊಂದಿಲ್ಲ. ವಲಸೆ ಕಾರ್ಮಿಕರಿಗೆ ಸಂಬಂಧಪಡದ ಬೇರ್‍ಯಾವುದೋ ಹಳೆಯ ವಿಡಿಯೊಗಳನ್ನು ಹಂಚಿಕೊಳ್ಳಲಾಗುತ್ತಿದೆ ಎಂದು ಬಯಲಿಗೆಳೆದಿದೆ.

ಆಲ್ಟ್ ನ್ಯೂಸ್ ಪರಿಶೀಲಿಸಿದ ಎರಡು ವೀಡಿಯೊಗಳು ತಮಿಳುನಾಡಿನ ಹೊರಗೆ ನಡೆದ ಘಟನೆಗಳಿಗೆ ಸಂಬಂಧಿಸಿವೆ. ಐದನೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸೈಲೇಂದ್ರ ಬಾಬು ಅವರು ಹೇಳಿಕೆ ನೀಡಿದ್ದು, “ನಕಲಿ” ಎಂದು ಸ್ಪಷ್ಟಪಡಿಸಿದ್ದಾರೆ.

ಸ್ವತಂತ್ರ ಮಾಧ್ಯಮವಾದ ‘ಆಲ್ಟ್‌ನ್ಯೂಸ್’ ಮಾಡಿರುವ ವರದಿಗಳಿಗೆ ತಮಿಳುನಾಡಿನ ಜನತೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ‘ತಮಿಳುನಾಡಿನ ಕುರಿತು ಹಬ್ಬಿಸಲಾಗುತ್ತಿರುವ ಸುಳ್ಳು ಸುದ್ದಿಗಳಿಂದ ಬೇಸರವಾಗಿತ್ತು. ಆಲ್ಟ್‌ನ್ಯೂಸ್ ಸತ್ಯಗಳನ್ನು ಬಯಲಿಗೆಳೆದು ತಮಿಳು ಜನತೆಯ ಮೇಲಿನ ಅಪವಾದಗಳಿಗೆ ಉತ್ತರ ಕೊಟ್ಟಿದೆ’ ಎಂಬ ಶ್ಲಾಘನೆಯನ್ನು ಟ್ವೀಟರ್‌ನಲ್ಲಿ ವ್ಯಕ್ತಪಡಿಸಲಾಗುತ್ತಿದೆ. ಜೊತೆಗೆ ‘ಆಲ್ಟ್‌ನ್ಯೂಸ್‌’ಗೆ ಸ್ವಯಂಪ್ರೇರಣೆಯಿಂದ ದೇಣಿಗೆಯನ್ನೂ ತಮಿಳುನಾಡಿನ ಜನತೆ ನೀಡಲಾರಂಭಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...