Homeಕರ್ನಾಟಕಬಿಜೆಪಿಯ ಆಂತರಿಕ ಕುತಂತ್ರದಿಂದ ಬಿಎಸ್‌ವೈ ಮನೆ ಮೇಲೆ ದಾಳಿ: ಡಿ.ಕೆ.ಶಿವಕುಮಾರ್

ಬಿಜೆಪಿಯ ಆಂತರಿಕ ಕುತಂತ್ರದಿಂದ ಬಿಎಸ್‌ವೈ ಮನೆ ಮೇಲೆ ದಾಳಿ: ಡಿ.ಕೆ.ಶಿವಕುಮಾರ್

- Advertisement -
- Advertisement -

“ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸುವ ಬಿಜೆಪಿಯ ಆಂತರಿಕ ಕುತಂತ್ರದ ಭಾಗವಾಗಿ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಮೀಸಲಾತಿ ವಿಚಾರದಲ್ಲಿ ಗೊಂದಲ ಮೂಡಿಸಿರುವವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಜನ ತಮಗೆ ಅನ್ಯಾಯ ಆದಾಗ ಅಧಿಕಾರದಲ್ಲಿರುವವರ ಮೇಲೆ ಆಕ್ರೋಶ ವ್ಯಕ್ತಪಡಿಸುವುದು ಸಹಜ. ಆದರೆ, ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳು, ಸಚಿವರ ಮನೆ ಮೇಲೆ ದಾಳಿ ಆಗದೆ ಯಾವುದೇ ಅಧಿಕಾರ ಇಲ್ಲದ ಯಡಿಯೂರಪ್ಪ ಅವರ ಮನೆ ಮೇಲೆ ದಾಳಿ ಆಗಿದೆ ಎಂದರೆ ಇದು ಬಿಜೆಪಿಯ ಕುತಂತ್ರಕ್ಕೆ ಸಾಕ್ಷಿಯಲ್ಲದೆ ಮತ್ತೇನೂ?” ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ದಾಳಿ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಗಮನ ಸೆಳೆದಾಗ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ.

“ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿತ್ತು. ಈಗ ಗೃಹ ಸಚಿವ ಅಮಿತ್ ಶಾ ಅವರು ಯಡಿಯೂರಪ್ಪ ಅವರ ಮನೆಗೆ ಹೋಗಿ ಅವರ ಜತೆ ಉತ್ತಮ ಸಂಬಂಧ ಹೊಂದಿರುವಂತೆ ತೋರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿದೆ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಆಂತರಿಕವಾಗಿ ಯಡಿಯೂರಪ್ಪ ಅವರನ್ನು ನಿಯಂತ್ರಿಸಲು ಸಾಕಷ್ಟು ಒತ್ತಡ ಹೇರಲಾಗುತ್ತಿದೆ. ನಾನು ಈಗ ಆ ವಿಚಾರದ ಬಗ್ಗೆ ಚರ್ಚೆ ಮಾಡುವುದಿಲ್ಲ” ಎಂದಿದ್ದಾರೆ.

“ಈ ಮೀಸಲಾತಿ ವಿಚಾರ ಕೇವಲ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲೇ ಗೊಂದಲ ಮೂಡಿಸಿದೆ. ಬೇರೆ ರಾಜ್ಯಗಳಲ್ಲಿ ಈಗಾಗಲೇ ಇಂತಹ ಗೊಂದಲದ ಮೀಸಲಾತಿ ತಂದಾಗ ಅದರ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪು ಕೊಟ್ಟಿದೆ. ಆದರೂ ಈ ಸರ್ಕಾರ ಜನರಿಗೆ ವಂಚಿಸಲು ಇಬ್ಬರು ಸಚಿವರೇ ಕೂತು ಈ ಸುಳ್ಳು ಮೀಸಲಾತಿಗೆ ಹೆಚ್ಚಳಕ್ಕೆ ಮುಂದಾಗಿದ್ದಾರೆ. ಯಾವ ವರದಿ ಆಧಾರದ ಮೇಲೆ ಸರ್ಕಾರ ಈ ತೀರ್ಮಾನ ಮಾಡಿದೆ? ಹಿಂದುಳಿದ ವರ್ಗಗಳ ಆಯೋಗ ಕಳೆದ ಡಿಸೆಂಬರ್ ನಲ್ಲಿ ನೀಡಿದ ಮಧ್ಯಂತರ ವರದಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿ ಎಂದು ತಿಳಿಸಿದೆಯೇ? ಮಧ್ಯಂತರ ವರದಿ ಮೇಲೆ ಮೀಸಲಾತಿ ಹೆಚ್ಚಳ ಮಾಡಲು ಸಾಧ್ಯವೇ?” ಎಂದು ಕೇಳಿದ್ದಾರೆ.

“ಮೀಸಲಾತಿ ಹೆಚ್ಚಳವಾಗಲಿ ಅಥವಾ ಒಳ ಮೀಸಲಾತಿ ಆಗಲಿ, ಸರಿಯಾದ ಅಧ್ಯಯನ ವರದಿ ಆಧರಿಸಿ, ಸಂವಿಧಾನದಲ್ಲಿ ತಿದ್ದುಪಡಿ ತಂದು ಜಾರಿಗೆ ತರಬೇಕೆ ಹೊರತು ಕೇವಲ ಚುನಾವಣೆ ಗಿಮಿಕ್ ಮಾಡಲು ಏಕಾಏಕಿ ಆದೇಶ ನೀಡಿದರೆ ಜಾರಿಗೆ ಬರುವುದಿಲ್ಲ. ಅಲ್ಪಸಂಖ್ಯಾತರ ಮೀಸಲಾತಿ ಕಸಿದು ನಮಗೆ ನೀಡಿ ಎಂದು ಒಕ್ಕಲಿಗ ಹಾಗೂ ಲಿಂಗಾಯತ ಸ್ವಾಮೀಜಿಗಳು ಕೇಳಿದ್ದರೇ? ಒಕ್ಕಲಿಗರು ಹಾಗೂ ಲಿಂಗಾಯತರು ತಮ್ಮ ಜನಸಂಖ್ಯೆ ಆಧಾರದ ಮೇಲೆ ಕ್ರಮವಾಗಿ 12% ಹಾಗೂ 15% ಹೆಚ್ಚಳಕ್ಕೆ ಬೇಡಿಕೆ ಇಡಲಾಗಿತ್ತು. ಮುಸಲ್ಮಾನರಿಂದ ಕಸಿದು 2% ಮೀಸಲಾತಿಗೆ ಬೇಡಿಕೆ ಇಟ್ಟಿರಲಿಲ್ಲ. ಈಗಾಗಲೇ ಮೀಸಲಾತಿ 56% ಆಗಿದ್ದು, ಒಕ್ಕಲಿಗರು ಲಿಂಗಾಯತರು ಮೀಸಲಾತಿ ಸೇರಿಸಿ ವಿಸ್ತರಣೆ ಮಾಡಲಿ” ಎಂದು ಹೇಳಿದ್ದಾರೆ.

“ಅಲ್ಪಸಂಖ್ಯಾತರ ಮೀಸಲಾತಿ ಕಸಿದಿರುವ ಬಗ್ಗೆ ಜೆಡಿಎಸ್ ನಾಯಕರಾದ ಸಿ.ಎಂ. ಇಬ್ರಾಹಿಂ ಅವರು ಇದುವರೆಗೂ ಏನು ಮಾತನಾಡಿಲ್ಲ. ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಮೀಸಲಾತಿ ಬದಲಾವಣೆ ಮಾಡಬಾರದು ಎಂದು ಆಗ್ರಹಿಸುತ್ತದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರು, ಒಕ್ಕಲಿಗರು, ಲಿಂಗಾಯತರ ಹಿತ ಕಾಯುವ ತೀರ್ಮಾನ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಒಳಮೀಸಲಾತಿ: ಮಾದಿಗ ಸಮುದಾಯಕ್ಕೆ ಮತ್ತೆ ಮೋಸ

ಮಾಡಾಳ ವಿರೂಪಾಕ್ಷಪ್ಪ ಅವರ ಬಂಧನದ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಲೋಕಾಯುಕ್ತ ಪೊಲೀಸರು ಕಾನೂನಿನ ಪ್ರಕಾರ ಕರ್ತವ್ಯ ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಕೆಲಸ ಅವರು ಮಾಡಲಿ. ಇಷ್ಟು ದಿನ ಬಿಜೆಪಿ ಸರ್ಕಾರ ಅವರನ್ನು ರಕ್ಷಣೆ ಮಾಡಿತ್ತು. ಅವರಿಗೆ ನಿರೀಕ್ಷಣಾ ಜಾಮೀನು ಸಿಗುವವರೆಗೂ ಬಂಧಿಸಿರಲಿಲ್ಲ” ಎಂದು ವಿಷಾದಿಸಿದ್ದಾರೆ.

ಇನ್ನು ಎರಡನೇ ಅಭ್ಯರ್ಥಿ ಪಟ್ಟಿಯಲ್ಲಿ ಗೊಂದಲ ಇದೆಯೇ ಎಂದು ಕೇಳಿದ ಪ್ರಶ್ನೆಗೆ, “ಮಾರ್ಚ್ 30ರ ನಂತರ ಪಟ್ಟಿ ಬಿಡುಗಡೆ ಮಾಡಲಾಗುವುದು. ಮೊದಲ ಪಟ್ಟಿಯಲ್ಲಿ ಯಾವುದಾದರೂ ಗೊಂದಲ ಕಾಣುತ್ತಿದೆಯೆ? ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ” ಸ್ಪಷ್ಟಪಡಿಸಿದ್ದಾರೆ.

ಎರಡೂ ರಾಷ್ಟ್ರೀಯ ಪಕ್ಷಗಳು ತಮ್ಮನ್ನು ಸಂಪರ್ಕಿಸಿವೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಗಮನ ಸೆಳೆದಾಗ ಅದಕ್ಕೆ ಉತ್ತರಿಸಿದ ಶಿವಕುಮಾರ್ ಅವರು, “ಇದು ಸುಳ್ಳು. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದ್ದು, ಯಾರ ಬೆಂಬಲವನ್ನು ಪಡೆಯುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷ ಯಾರನ್ನು ಸಂಪರ್ಕ ಮಾಡಿಲ್ಲ. ಅವರನ್ನು ಯಾರೂ ಸಂಪರ್ಕಿಸಿದ್ದಾರೆ ಎಂದು ಹೆಸರು ಬಹಿರಂಗಪಡಿಸಲಿ” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....