Homeಕರ್ನಾಟಕಬಿಜೆಪಿಯ ಆಂತರಿಕ ಕುತಂತ್ರದಿಂದ ಬಿಎಸ್‌ವೈ ಮನೆ ಮೇಲೆ ದಾಳಿ: ಡಿ.ಕೆ.ಶಿವಕುಮಾರ್

ಬಿಜೆಪಿಯ ಆಂತರಿಕ ಕುತಂತ್ರದಿಂದ ಬಿಎಸ್‌ವೈ ಮನೆ ಮೇಲೆ ದಾಳಿ: ಡಿ.ಕೆ.ಶಿವಕುಮಾರ್

- Advertisement -
- Advertisement -

“ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸುವ ಬಿಜೆಪಿಯ ಆಂತರಿಕ ಕುತಂತ್ರದ ಭಾಗವಾಗಿ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಮೀಸಲಾತಿ ವಿಚಾರದಲ್ಲಿ ಗೊಂದಲ ಮೂಡಿಸಿರುವವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಜನ ತಮಗೆ ಅನ್ಯಾಯ ಆದಾಗ ಅಧಿಕಾರದಲ್ಲಿರುವವರ ಮೇಲೆ ಆಕ್ರೋಶ ವ್ಯಕ್ತಪಡಿಸುವುದು ಸಹಜ. ಆದರೆ, ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳು, ಸಚಿವರ ಮನೆ ಮೇಲೆ ದಾಳಿ ಆಗದೆ ಯಾವುದೇ ಅಧಿಕಾರ ಇಲ್ಲದ ಯಡಿಯೂರಪ್ಪ ಅವರ ಮನೆ ಮೇಲೆ ದಾಳಿ ಆಗಿದೆ ಎಂದರೆ ಇದು ಬಿಜೆಪಿಯ ಕುತಂತ್ರಕ್ಕೆ ಸಾಕ್ಷಿಯಲ್ಲದೆ ಮತ್ತೇನೂ?” ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ದಾಳಿ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಗಮನ ಸೆಳೆದಾಗ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ.

“ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿತ್ತು. ಈಗ ಗೃಹ ಸಚಿವ ಅಮಿತ್ ಶಾ ಅವರು ಯಡಿಯೂರಪ್ಪ ಅವರ ಮನೆಗೆ ಹೋಗಿ ಅವರ ಜತೆ ಉತ್ತಮ ಸಂಬಂಧ ಹೊಂದಿರುವಂತೆ ತೋರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿದೆ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಆಂತರಿಕವಾಗಿ ಯಡಿಯೂರಪ್ಪ ಅವರನ್ನು ನಿಯಂತ್ರಿಸಲು ಸಾಕಷ್ಟು ಒತ್ತಡ ಹೇರಲಾಗುತ್ತಿದೆ. ನಾನು ಈಗ ಆ ವಿಚಾರದ ಬಗ್ಗೆ ಚರ್ಚೆ ಮಾಡುವುದಿಲ್ಲ” ಎಂದಿದ್ದಾರೆ.

“ಈ ಮೀಸಲಾತಿ ವಿಚಾರ ಕೇವಲ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲೇ ಗೊಂದಲ ಮೂಡಿಸಿದೆ. ಬೇರೆ ರಾಜ್ಯಗಳಲ್ಲಿ ಈಗಾಗಲೇ ಇಂತಹ ಗೊಂದಲದ ಮೀಸಲಾತಿ ತಂದಾಗ ಅದರ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪು ಕೊಟ್ಟಿದೆ. ಆದರೂ ಈ ಸರ್ಕಾರ ಜನರಿಗೆ ವಂಚಿಸಲು ಇಬ್ಬರು ಸಚಿವರೇ ಕೂತು ಈ ಸುಳ್ಳು ಮೀಸಲಾತಿಗೆ ಹೆಚ್ಚಳಕ್ಕೆ ಮುಂದಾಗಿದ್ದಾರೆ. ಯಾವ ವರದಿ ಆಧಾರದ ಮೇಲೆ ಸರ್ಕಾರ ಈ ತೀರ್ಮಾನ ಮಾಡಿದೆ? ಹಿಂದುಳಿದ ವರ್ಗಗಳ ಆಯೋಗ ಕಳೆದ ಡಿಸೆಂಬರ್ ನಲ್ಲಿ ನೀಡಿದ ಮಧ್ಯಂತರ ವರದಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿ ಎಂದು ತಿಳಿಸಿದೆಯೇ? ಮಧ್ಯಂತರ ವರದಿ ಮೇಲೆ ಮೀಸಲಾತಿ ಹೆಚ್ಚಳ ಮಾಡಲು ಸಾಧ್ಯವೇ?” ಎಂದು ಕೇಳಿದ್ದಾರೆ.

“ಮೀಸಲಾತಿ ಹೆಚ್ಚಳವಾಗಲಿ ಅಥವಾ ಒಳ ಮೀಸಲಾತಿ ಆಗಲಿ, ಸರಿಯಾದ ಅಧ್ಯಯನ ವರದಿ ಆಧರಿಸಿ, ಸಂವಿಧಾನದಲ್ಲಿ ತಿದ್ದುಪಡಿ ತಂದು ಜಾರಿಗೆ ತರಬೇಕೆ ಹೊರತು ಕೇವಲ ಚುನಾವಣೆ ಗಿಮಿಕ್ ಮಾಡಲು ಏಕಾಏಕಿ ಆದೇಶ ನೀಡಿದರೆ ಜಾರಿಗೆ ಬರುವುದಿಲ್ಲ. ಅಲ್ಪಸಂಖ್ಯಾತರ ಮೀಸಲಾತಿ ಕಸಿದು ನಮಗೆ ನೀಡಿ ಎಂದು ಒಕ್ಕಲಿಗ ಹಾಗೂ ಲಿಂಗಾಯತ ಸ್ವಾಮೀಜಿಗಳು ಕೇಳಿದ್ದರೇ? ಒಕ್ಕಲಿಗರು ಹಾಗೂ ಲಿಂಗಾಯತರು ತಮ್ಮ ಜನಸಂಖ್ಯೆ ಆಧಾರದ ಮೇಲೆ ಕ್ರಮವಾಗಿ 12% ಹಾಗೂ 15% ಹೆಚ್ಚಳಕ್ಕೆ ಬೇಡಿಕೆ ಇಡಲಾಗಿತ್ತು. ಮುಸಲ್ಮಾನರಿಂದ ಕಸಿದು 2% ಮೀಸಲಾತಿಗೆ ಬೇಡಿಕೆ ಇಟ್ಟಿರಲಿಲ್ಲ. ಈಗಾಗಲೇ ಮೀಸಲಾತಿ 56% ಆಗಿದ್ದು, ಒಕ್ಕಲಿಗರು ಲಿಂಗಾಯತರು ಮೀಸಲಾತಿ ಸೇರಿಸಿ ವಿಸ್ತರಣೆ ಮಾಡಲಿ” ಎಂದು ಹೇಳಿದ್ದಾರೆ.

“ಅಲ್ಪಸಂಖ್ಯಾತರ ಮೀಸಲಾತಿ ಕಸಿದಿರುವ ಬಗ್ಗೆ ಜೆಡಿಎಸ್ ನಾಯಕರಾದ ಸಿ.ಎಂ. ಇಬ್ರಾಹಿಂ ಅವರು ಇದುವರೆಗೂ ಏನು ಮಾತನಾಡಿಲ್ಲ. ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಮೀಸಲಾತಿ ಬದಲಾವಣೆ ಮಾಡಬಾರದು ಎಂದು ಆಗ್ರಹಿಸುತ್ತದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರು, ಒಕ್ಕಲಿಗರು, ಲಿಂಗಾಯತರ ಹಿತ ಕಾಯುವ ತೀರ್ಮಾನ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಒಳಮೀಸಲಾತಿ: ಮಾದಿಗ ಸಮುದಾಯಕ್ಕೆ ಮತ್ತೆ ಮೋಸ

ಮಾಡಾಳ ವಿರೂಪಾಕ್ಷಪ್ಪ ಅವರ ಬಂಧನದ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಲೋಕಾಯುಕ್ತ ಪೊಲೀಸರು ಕಾನೂನಿನ ಪ್ರಕಾರ ಕರ್ತವ್ಯ ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಕೆಲಸ ಅವರು ಮಾಡಲಿ. ಇಷ್ಟು ದಿನ ಬಿಜೆಪಿ ಸರ್ಕಾರ ಅವರನ್ನು ರಕ್ಷಣೆ ಮಾಡಿತ್ತು. ಅವರಿಗೆ ನಿರೀಕ್ಷಣಾ ಜಾಮೀನು ಸಿಗುವವರೆಗೂ ಬಂಧಿಸಿರಲಿಲ್ಲ” ಎಂದು ವಿಷಾದಿಸಿದ್ದಾರೆ.

ಇನ್ನು ಎರಡನೇ ಅಭ್ಯರ್ಥಿ ಪಟ್ಟಿಯಲ್ಲಿ ಗೊಂದಲ ಇದೆಯೇ ಎಂದು ಕೇಳಿದ ಪ್ರಶ್ನೆಗೆ, “ಮಾರ್ಚ್ 30ರ ನಂತರ ಪಟ್ಟಿ ಬಿಡುಗಡೆ ಮಾಡಲಾಗುವುದು. ಮೊದಲ ಪಟ್ಟಿಯಲ್ಲಿ ಯಾವುದಾದರೂ ಗೊಂದಲ ಕಾಣುತ್ತಿದೆಯೆ? ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ” ಸ್ಪಷ್ಟಪಡಿಸಿದ್ದಾರೆ.

ಎರಡೂ ರಾಷ್ಟ್ರೀಯ ಪಕ್ಷಗಳು ತಮ್ಮನ್ನು ಸಂಪರ್ಕಿಸಿವೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಗಮನ ಸೆಳೆದಾಗ ಅದಕ್ಕೆ ಉತ್ತರಿಸಿದ ಶಿವಕುಮಾರ್ ಅವರು, “ಇದು ಸುಳ್ಳು. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದ್ದು, ಯಾರ ಬೆಂಬಲವನ್ನು ಪಡೆಯುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷ ಯಾರನ್ನು ಸಂಪರ್ಕ ಮಾಡಿಲ್ಲ. ಅವರನ್ನು ಯಾರೂ ಸಂಪರ್ಕಿಸಿದ್ದಾರೆ ಎಂದು ಹೆಸರು ಬಹಿರಂಗಪಡಿಸಲಿ” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...