Homeಮುಖಪುಟಸಿಜೆಐ ಮೇಲೆ ದಾಳಿ: ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಎಜಿ ಒಪ್ಪಿಗೆ

ಸಿಜೆಐ ಮೇಲೆ ದಾಳಿ: ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಎಜಿ ಒಪ್ಪಿಗೆ

- Advertisement -
- Advertisement -

ಕಳೆದ ವಾರ ಸುಪ್ರೀಂ ಕೋರ್ಟ್‌ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಗಳನ್ನು ಆರಂಭಿಸಲು ಭಾರತದ ಅಟಾರ್ನಿ ಜನರಲ್ (ಎಜಿ) ಆರ್. ವೆಂಕಟರಮಣಿ ಒಪ್ಪಿಗೆ ನೀಡಿದ್ದಾರೆ ಎಂದು ಗುರುವಾರ (ಅ.16) ಸುಪ್ರೀಂ ಕೋರ್ಟ್‌ಗೆ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (ಎಸ್‌ಸಿಬಿಎ) ಅಧ್ಯಕ್ಷ, ಹಿರಿಯ ವಕೀಲ ವಿಕಾಸ್ ಸಿಂಗ್ ಮತ್ತು ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರು ಜಂಟಿಯಾಗಿ ಎರಡನೇ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದ್ದು, ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣವನ್ನು ವಿಚಾರಣೆಗೆ ಒಳಪಡಿಸುವಂತೆ ಕೋರಿದ್ದಾರೆ.

ಅಟಾರ್ನಿ ಜನರಲ್ ಅನುಮತಿ ನೀಡಿದ ಬಗ್ಗೆ ವಕೀಲ ವಿಕಾಸ್ ಸಿಂಗ್ ಪೀಠಕ್ಕೆ ಮಾಹಿತಿ ನೀಡಿದ್ದು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಸಂಗತಿಯನ್ನು ದೃಢಪಡಿಸಿದ್ದಾರೆ.

“ನಾನು ಅಟಾರ್ನಿ ಜನರಲ್ ಅವರ ಒಪ್ಪಿಗೆ ಪಡೆದುಕೊಂಡಿದ್ದೇನೆ ಮತ್ತು ನಾಳೆ ಈ ವಿಷಯವನ್ನು ಪಟ್ಟಿ ಮಾಡಲು ಕೋರುತ್ತೇನೆ” ಎಂದು ಸಿಂಗ್ ಹೇಳಿದ್ದಾರೆ. ಇದಕ್ಕೆ ಧ್ವನಿಗೂಡಿಸಿದ ತುಷಾರ್ ಮೆಹ್ತಾ ಅವರು, “ಅಟಾರ್ನಿ ಜನರಲ್ ಒಪ್ಪಿಗೆ ನೀಡಿದ್ದಾರೆ. ನಾನು ನನ್ನ ಸ್ನೇಹಿತನೊಂದಿಗೆ ಸೇರಿ ಈ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಗೆತ್ತಿಕೊಳ್ಳಲು ನಿಮ್ಮನ್ನು ವಿನಂತಿಸುತ್ತೇನೆ. ಇದು ಪ್ರಶ್ನಾರ್ಹ ಸಾಂವಿಧಾನಿಕ ಸಮಗ್ರತೆಯ ಪ್ರಕರಣ” ಎಂದು ಹೇಳಿದ್ದಾರೆ. 

ಘಟನೆಯನ್ನು ವೈಭವೀಕರಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ನಿರ್ಬಂಧಿಸಲು “ಜಾನ್-ಡೋ” ಆದೇಶವನ್ನು ಸಹ ಕೋರುತ್ತಿರುವುದಾಗಿ ಸಿಂಗ್ ಪೀಠಕ್ಕೆ ಹೇಳಿದ್ದಾರೆ.

ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು, ಈ ವಿಷಯವನ್ನು ಮತ್ತಷ್ಟು ಕೆದಕಬೇಕೇ? ಎಂದು ಪ್ರಶ್ನಿಸಿದೆ. ಸಿಜೆಐ ಸ್ವತಃ ಘಟನೆಯನ್ನು ಬಿಟ್ಟುಬಿಟ್ಟಿದ್ದಾರೆ ಎಂದಿದೆ. “ಗೌರವಾನ್ವಿತ ಸಿಜೆಐ ಅತ್ಯಂತ ಉದಾರ ಮನಸಿನವರು. ಇದು ನ್ಯಾಯಾಂಗ ಸಂಸ್ಥೆಯ ಮೇಲೆ ಈ ರೀತಿಯ ಘಟನೆಗಳಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತೋರಿಸುತ್ತದೆ” ಎಂದು ನ್ಯಾಯಮೂರ್ತಿ ಕಾಂತ್ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ ಸಿಂಗ್, “ಘಟನೆಯ ನಂತರದ ಬೆಳವಣಿಗೆಗಳು ಮತ್ತು ಸಾಮಾಜಿಕ ಮಾಧ್ಯಮಗಳು ಅದಕ್ಕೆ ಒತ್ತು ನೀಡುತ್ತಿರುವ ರೀತಿಯಿಂದ ನ್ಯಾಯಾಂಗ ಸಂಸ್ಥೆಗೆ ಸ್ವಲ್ಪ ಹಾನಿಯನ್ನುಂಟುಮಾಡುತ್ತಿದೆ” ಎಂದು ಹೇಳಿದ್ದಾರೆ. “ವಕೀಲರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಸಿಜೆಐ ಅವರ ‘ಗಾಂಭೀರ್ಯದ ಸೂಚಕ’. ಆದರೆ, ಘಟನೆಯನ್ನು ಸಮರ್ಥಿಸಲು ಕೆಲವರು ಸಾಮಾಜಿಕ ಮಾಧ್ಯಮವನ್ನು ಬಳಸುವ ರೀತಿ ಕಳವಳಕಾರಿಯಾಗಿದೆ. ಇದು ಸಾಂಸ್ಥಿಕ ಸಮಗ್ರತೆಯ ವಿಷಯ” ಎಂದು ತುಷಾರ್ ಮೆಹ್ತಾ ತಿಳಿಸಿದ್ದಾರೆ.

“ಸಿಜೆಐ ಮೇಲಿನ ದಾಳಿಯನ್ನು ವಿಷ್ಣು ತೃಪ್ತನಾಗುತ್ತಾನೆ ಎಂದು ಕೆಲವರು ಹೇಳುತ್ತಿದ್ದಾರೆ. ವಿಷ್ಣು ಎಂದಿಗೂ ಈ ರೀತಿಯ ಹಿಂಸೆಯನ್ನು ಸಮರ್ಥಿಸಲು ಸಾಧ್ಯವಿಲ್ಲ. ಇದು ವಿಷ್ಣುವಿಗೂ ಅವಮಾನ ಎಂದು ವಕೀಲ ಸಿಂಗ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್ ಅವರು, “ಪವಿತ್ರ ಗ್ರಂಥಗಳು ಎಂದಿಗೂ ಹಿಂಸೆಯನ್ನು ಕ್ಷಮಿಸುವುದಿಲ್ಲ. ಆದರೆ, ಈ ವಿಷಯವನ್ನು ಕೈಗೆತ್ತಿಕೊಂಡರೆ ಅದು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಜೀವಂತವಾಗುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಇವತ್ತು ಏನಾಗುತ್ತಿದೆ ಎಂದರೆ, ಎಲ್ಲವೂ ಆಗುತ್ತಿದೆ” ಎಂದಿದ್ದಾರೆ. 

ಪೀಠದಲ್ಲಿದ್ದ ನ್ಯಾಯಾಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರು ಕೂಡ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಮಾತಿಗೆ ಧ್ವನಿಗೂಡಿಸಿದ್ದು, “ಈ ವಿಷಯವನ್ನು ಮತ್ತೆ ಕೆದಕುವುದರಿಂದ ಪ್ರಚಾರ ಬಯಸುವವರಿಗೆ ಮತ್ತಷ್ಟು ಅವಕಾಶ ಸಿಗುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸಿಜೆಐ ಮೇಲಿನ ದಾಳಿಯನ್ನು ಸಮರ್ಥಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಸಾಮಾಜಿಕ ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವಂತೆ ವಕೀಲ ಸಿಂಗ್ ಮತ್ತು ಎಸ್‌ಜಿ ತುಷಾರ್ ಮೆಹ್ತಾ ಕೋರಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಪೀಠ, “ವಾಕ್ ಮತ್ತು ಅಭಿವ್ಯಕ್ತಿಯ ಮೂಲಭೂತ ಹಕ್ಕು ಮಿತಿಯಿಲ್ಲದಲ್ಲ. ಅದು ಇತರರ ಸಮಗ್ರತೆ ಮತ್ತು ಘನತೆಯನ್ನು ಬಲಿಕೊಡಲು ಸಾಧ್ಯವಿಲ್ಲ” ಎಂದು ಹೇಳಿದೆ.

ಆದರೆ, ಪ್ರಕರಣವನ್ನು ತುರ್ತಾಗಿ ವಿಚಾರಣೆಗೆ ಪಟ್ಟಿ ಮಾಡಲು ಪೀಠ ಒಲವು ತೋರಿಲ್ಲ. ಒಂದು ವಾರ ಬೆಳವಣಿಗೆಗಳ ಬಗ್ಗೆ ಕಾದು ನೋಡೋಣ” ಎಂದಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಅಕ್ಟೋಬರ್ 6ರಂದು, ಸುಪ್ರೀಂ ಕೋರ್ಟ್‌ನಲ್ಲಿ 71 ವರ್ಷದ ವಕೀಲ ರಾಕೇಶ್ ಕಿಶೋರ್ ಎಂಬಾತ ಸಿಜೆಐ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯುವ ಪ್ರಯತ್ನ ಮಾಡಿದ್ದರು.

ಭಾರತೀಯ ಪುರಾತತ್ವ ಇಲಾಖೆ ಅಧೀನದಲ್ಲಿ ಬರುವ ಮಧ್ಯಪ್ರದೇಶದ ಐತಿಹಾಸಿಕ ತಾಣ ಖಜುರಾಹೊ ದೇವಾಲಯಕ್ಕೆ ಸಂಬಂಧಪಟ್ಟ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ತಿರಸ್ಕರಿಸುವ ವೇಳೆ ಸಿಜೆಐ ಗವಾಯಿ ಅವರು ನೀಡಿರುವ ಮೌಖಿಕ ಹೇಳಿಕೆಯೇ ವಕೀಲ ರಾಕೇಶ್ ಕಿಶೋರ್ ದಾಳಿ ಅವರ ಮೇಲೆ ದಾಳಿ ಮಾಡಲು ಕಾರಣ ಎಂದು ಹೇಳಲಾಗ್ತಿದೆ.

ಖಜುರಾಹೊದಲ್ಲಿನ ಶಿರಚ್ಛೇದಗೊಂಡ ವಿಷ್ಣುವಿನ ವಿಗ್ರಹವನ್ನು ಪುನಃಸ್ಥಾಪಿಸಲು ನಿರ್ದೇಶಿಸುವಂತೆ ಕೋರಿ ಪಿಐಎಲ್‌ ಸಲ್ಲಿಸಲಾಗಿತ್ತು. ಅದನ್ನು ತಿರಸ್ಕರಿಸಿದ್ದ ಸಿಜೆಐ, “ಈ ಅರ್ಜಿಯಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ. ಪ್ರಚಾರದ ಹಿತಾಸಕ್ತಿ ಇದ್ದಂತಿದೆ. ಭಗ್ನಗೊಂಡ ವಿಷ್ಣು ವಿಗ್ರಹವನ್ನು ದುರಸ್ಥಿಗೊಳಿಸಲು ಪುರಾತತ್ವ ಇಲಾಖೆಗೆ ಮನವಿ ಸಲ್ಲಿಸಿ ಎಂದಿದ್ದರು.

ಮುಂದುವರಿದು, “ನೀವು ವಿಷ್ಣುವಿನ ಪರಮ ಭಕ್ತ ಎಂದು ಹೇಳಿಕೊಳ್ಳುತ್ತೀರಿ. ಹೋಗಿ ನಿಮ್ಮ ದೇವರ ಬಳಿಯೇ ಪ್ರಾರ್ಥಿಸಿ, ಆ ದೇವರೇ ಏನಾದರೂ ಮಾಡಲಿ” ಎಂದು ಅರ್ಜಿದಾರರಿಗೆ ಸಿಜೆಐ ಮೌಖಿಕವಾಗಿ ಹೇಳಿದ್ದರು.

ಸಿಜೆಐ ಮೇಲಿನ ದಾಳಿಗೆ ದೇಶದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ವಿವಿಧ ಸಂಘ- ಸಂಸ್ಥೆಗಳು ಸಾರ್ವಜನಿಕರು ಘಟನೆಯನ್ನು ಖಂಡಿಸಿ ಪ್ರತಿಭಟಿಸಿದ್ದಾರೆ.

ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ಬಾಲಕಿಯ ಶವ ಪತ್ತೆ: ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Pls mention Dalit CJI and Dalit Lawer why not mentioning here….
    Every where u ppl mention

    Dalit girls raped
    Dalit boy or women beaten
    Dalit ppl not allowed temple
    Dalit not allowed to drink water in well like that

    Why not in this case mentioning Dalit

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...