Homeಮುಖಪುಟಸಿಜೆಐ ಮೇಲೆ ದಾಳಿ: ಬಲಪಂಥೀಯ ಪ್ರಚೋದನೆಯ ಫಲಿತಾಂಶ

ಸಿಜೆಐ ಮೇಲೆ ದಾಳಿ: ಬಲಪಂಥೀಯ ಪ್ರಚೋದನೆಯ ಫಲಿತಾಂಶ

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ. ಆರ್ ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿದ ಆಘಾತಕಾರಿ ಘಟನೆ ಸೋಮವಾರ (ಅ.6) ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ.

ಸಂವಿಧಾನವನ್ನು ಅನುಸರಿಸುವ ಭಾರತೀಯರು ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದು, ದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ, ಕೆಲ ಹಿಂದುತ್ವ ಬಲಪಂಥೀಯರು, ಧರ್ಮಾಂಧರು ಮತ್ತು ಜಾತಿವಾದಿಗಳು ದಲಿತ ಸಮುದಾಯದ ಸಿಜೆಐ ಮೇಲಿನ ದಾಳಿಯನ್ನು ಸಂಭ್ರಮಿಸಿದ್ದಾರೆ.

ಕೆಲ ದುಷ್ಕರ್ಮಿಗಳು ಕಾನೂನಿನ ಯಾವುದೇ ಭಯವಿಲ್ಲದೆ ಬಹಿರಂಗವಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಸಿಜೆಐಗೆ ಗುಂಡಿಕ್ಕುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ.

ಇನ್ನೂ ಕೆಲವರು ಎಐ ವಿಡಿಯೋಗಳ ಮೂಲಕ ಸಿಜೆಐ ಅವರನ್ನು ಅವಮಾನಿಸಿದ್ದಾರೆ.


ಸಾಮಾಜಿಕ ಜಾಲತಾಣಗಳಾದ ಎಕ್ಸ್‌, ಮತ್ತು ಫೇಸ್‌ಬುಕ್‌ಗಳು ಕೊಲೆ, ಹಲ್ಲೆ, ಅತ್ಮಹತ್ಯೆ ಇತ್ಯಾದಿ ಪದಗಳನ್ನು ಬಳಸಿ ಏನಾದರು ಪೋಸ್ಟ್‌ಗಳನ್ನು ಹಾಕಿದರೆ ನಿಯಮಗಳನ್ನು ಮೀರಿದ ಕಾರಣ ಕೊಟ್ಟು ತಕ್ಷಣ ಅವುಗಳನ್ನು ತೆಗೆದು ಹಾಕುತ್ತವೆ. ಆದರೆ, ಮೇಲೆ ನಾವು ಉಲ್ಲೇಖಿಸಿದ ಪೋಸ್ಟ್‌ಗಳ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವುದು ಇಲ್ಲಿ ಗಮನಾರ್ಹ.

ಸಿಜೆಐ ಮೇಲೆ ಶೂ ಎಸೆಯಲು ಕಾರಣವೇನು?

ಭಾರತೀಯ ಪುರಾತತ್ವ ಇಲಾಖೆ ಅಧೀನದಲ್ಲಿ ಬರುವ ಮಧ್ಯಪ್ರದೇಶದ ಐತಿಹಾಸಿಕ ತಾಣ ಖಜುರಾಹೊ ದೇವಾಲಯಕ್ಕೆ ಸಂಬಂಧಪಟ್ಟ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ತಿರಸ್ಕರಿಸುವ ವೇಳೆ ಸಿಜೆಐ ಗವಾಯಿ ಅವರು ನೀಡಿರುವ ಮೌಖಿಕ ಹೇಳಿಕೆಯೇ ವಕೀಲ ರಾಕೇಶ್ ಕಿಶೋರ್ ದಾಳಿ ಅವರ ಮೇಲೆ ದಾಳಿ ಮಾಡಲು ಕಾರಣ ಎಂದು ಹೇಳಲಾಗ್ತಿದೆ.

ಖಜುರಾಹೊದಲ್ಲಿನ ಶಿರಚ್ಛೇದಗೊಂಡ ವಿಷ್ಣುವಿನ ವಿಗ್ರಹವನ್ನು ಪುನಃಸ್ಥಾಪಿಸಲು ನಿರ್ದೇಶಿಸುವಂತೆ ಕೋರಿ ಪಿಐಎಲ್‌ ಸಲ್ಲಿಸಲಾಗಿತ್ತು. ಅದನ್ನು ತಿರಸ್ಕರಿಸಿದ್ದ ಸಿಜೆಐ, “ಈ ಅರ್ಜಿಯಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ. ಪ್ರಚಾರದ ಹಿತಾಸಕ್ತಿ ಇದ್ದಂತಿದೆ. ಭಗ್ನಗೊಂಡ ವಿಷ್ಣು ವಿಗ್ರಹವನ್ನು ದುರಸ್ಥಿಗೊಳಿಸಲು ಪುರಾತತ್ವ ಇಲಾಖೆಗೆ ಮನವಿ ಸಲ್ಲಿಸಿ ಎಂದಿದ್ದರು.

ಮುಂದುವರಿದು, “ನೀವು ವಿಷ್ಣುವಿನ ಪರಮ ಭಕ್ತ ಎಂದು ಹೇಳಿಕೊಳ್ಳುತ್ತೀರಿ. ಹೋಗಿ ನಿಮ್ಮ ದೇವರ ಬಳಿಯೇ ಪ್ರಾರ್ಥಿಸಿ, ಆ ದೇವರೇ ಏನಾದರೂ ಮಾಡಲಿ” ಎಂದು ಅರ್ಜಿದಾರರಿಗೆ ಸಿಜೆಐ ಮೌಖಿಕವಾಗಿ ಹೇಳಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಬೆಂಕಿ ಹೊತ್ತಿಸಿದ ಸಿಜೆಐ ಹೇಳಿಕೆ

ಸಿಜೆಐ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹರಡಿತ್ತು. #ImpeachCJI ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್‌ ಆಗಿತ್ತು. ಹಿಂದುತ್ವ ಸಂಘಟನೆಗಳು ಸಿಜೆಐ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿತ್ತು.

ಹೇಳಿಕೆ ವಿವಾದ ಸ್ವರೂಪ ಪಡೆದ ಎರಡು ದಿನಗಳ ನಂತರ ಪ್ರತಿಕ್ರಿಯಿಸಿದ್ದ ಸಿಜೆಐ ಗವಾಯಿ “ನಾನು ಧರ್ಮವನ್ನು ಅವಹೇಳನ ಮಾಡಿಲ್ಲ, ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ” ಎಂದು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದರು.

ಅಜಿತ್ ಭಾರ್ತಿಯ ಪ್ರಚೋದನಕಾರಿ ಅಭಿಯಾನ

ಸಿಜೆಐ ಹೇಳಿಕೆ ವಿವಾದದ ಬೆಂಕಿ ಹೊತ್ತಿಸಿದಾಗ ಅದಕ್ಕೆ ತುಪ್ಪ ಸುರಿದ ಪ್ರಮುಖರಲ್ಲಿ ಬಲಪಂಥೀಯ ಯೂಟ್ಯೂಬರ್ ಅಜಿತ್ ಭಾರ್ತಿಯೂ ಒಬ್ಬ. ಈ ವಿಚಾರದಲ್ಲಿ ಈತನ ಪಾತ್ರ ದೊಡ್ಡದಿದೆ.

ಸೋಮವಾರ (ಅ.6) ಸಿಜೆಐ ಮೇಲೆ ಶೂ ಎಸೆದ ಘಟನೆ ನಡೆದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದ ಅಜಿತ್ ಭಾರ್ತಿ, “ಇಂದು ಸಿಜೆಐ ಗವಾಯಿ ಅವರತ್ತ ವಕೀಲ ಎಸೆದ ಶೂ ಬಹುತೇಕ ತಗುಲಿದೆ. ವಕೀಲ ಗವಾಯಿ ಅವರ ಪೀಠದ ಬಳಿಗೆ ಹೋಗಿ, ತನ್ನ ಶೂ ತೆಗೆದು ಹೊಡೆಯಲು ಮುಂದಾದಾಗ ಭದ್ರತಾ ಸಿಬ್ಬಂದಿ ಅವರನ್ನು ತಡೆದರು. ನಂತರ ಹೊರಗಡೆ ಕರೆದೊಯ್ಯುವಾಗ “ಸನಾತನ ಧರ್ಮದ ಅವಮಾನವನ್ನು ಸಹಿಸುವುದಿಲ್ಲ ಎಂದು ವಕೀಲರು ಕೂಗಿದ್ದಾರೆ” ಎಂದು ಬರೆದುಕೊಂಡಿದ್ದಾನೆ.

ತನ್ನ ಇನ್ನೊಂದು ಪೋಸ್ಟ್‌ನಲ್ಲಿ ಅಜಿತ್ ಭಾರ್ತಿ ಆಕ್ರಮಣಕಾರಿ ಭಾಷೆ ಬಳಸಿದ್ದು, “ಇದು ಕೇವಲ ಆರಂಭ. ನ್ಯಾಯಾಧೀಶರು ಹಿಂದೂ ವಿರೋಧಿ ಧೋರಣೆ ತೋರಿದರೆ ಮತ್ತು ತಮ್ಮ ಆದೇಶಗಳಲ್ಲಿ ಹಿಂದೂಗಳನ್ನು ಅವಮಾನಿಸುವ ರೀತಿಯಲ್ಲಿ ತಮ್ಮ ಕೆಟ್ಟ ಉದ್ದೇಶಗಳನ್ನು ತೋರಿದರೆ, ಅಂತಹ ನ್ಯಾಯಾಧೀಶರ ವಿರುದ್ಧ ಜನರು ಬೀದಿಗಳಲ್ಲಿಯೂ ಇದೇ ರೀತಿಯಾಗಿ ವರ್ತಿಸಬಹುದು” ಎಂದು ಎಚ್ಚರಿಕೆ ನೀಡಿದ್ದಾನೆ.

ಈ ಹಿಂದೆ ಸೆಪ್ಟೆಂಬರ್ 18ರಂದು ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್‌ ಮಾಡಿದ್ದ ಅಜಿತ್ ಭಾರ್ತಿ ಸಿಜೆಐ ಗವಾಯಿ ಅವರನ್ನು “ಹಿಂದೂ ದ್ವೇಷ ಹೊಂದಿರುವ ಕೀಳು ನ್ಯಾಯಾಧೀಶ” ಎಂದು ಕರೆದಿದ್ದ. ಜೊತೆಗೆ, ಹಿರಣ್ಯಕಶಿಪುನ ಕಥೆಯನ್ನು ಉಲ್ಲೇಖಿಸಿ, “ಗವಾಯಿ ಗಮನದಲ್ಲಿಡಿ, ಹಿರಣ್ಯಕಶಿಪು ಕೂಡ ತನ್ನ ಅಹಂಕಾರದಿಂದ ಪ್ರಹ್ಲಾದನಿಗೆ ‘ಈ ಕಂಬದಲ್ಲಿ ವಿಷ್ಣು ಇದ್ದಾನೆಯೇ?’ ಎಂದು ಕೇಳಿದ್ದ. ಅವನಿಗೆ ವರವಿತ್ತು, ಆದರೂ ನರಸಿಂಹ ಭಗವಾನ್ ಅವನನ್ನು ತೊಡೆಯ ಮೇಲಿಟ್ಟು ಉಗುರಿನಿಂದ ಕಿತ್ತು ಹಾಕಿದ್ದ. ನೀನು ಕೇವಲ ಒಬ್ಬ ಅಂಬೇಡ್ಕರವಾದಿ ಮನುಷ್ಯ ಮಾತ್ರ” ಎಂದಿದ್ದ.

ಹಿಂದುತ್ವ ವೆಬ್‌ಸೈಟ್‌ ಒಂದು ಸಿಜೆಐ ಗವಾಯಿ ಅವರಿಗೆ ಇದೇ ರೀತಿಯ ಬೆದರಿಕೆ ಹಾಕಿತ್ತು

ಹಿಂದೂ ಕೆಫೆಯ ಕೌಶಲೇಶ್ ರಾಯ್‌ನಿಂದ ಹಿಂಸಾತ್ಮಕ ಬೆದರಿಕೆ

ಸೆಪ್ಟೆಂಬರ್ 29ರಂದು ಅಜಿತ್ ಭಾರ್ತಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಸಿಜೆಐ ಗವಾಯಿ vs ಸ್ಲೀಪಿಂಗ್ ಹಿಂದೂಸ್’ ಎಂಬ ಕಾರ್ಯಕ್ರಮವನ್ನು ಪ್ರಸಾರ ಮಾಡಲಾಗಿತ್ತು.

ಯೂಟ್ಯೂಬ್ ವಿಡಿಯೋ ವಿವರಣೆಯಲ್ಲಿ (ಡಿಸ್ಕ್ರಿಪ್ಶನ್) “ಪ್ರಶ್ನೆ ಏನೆಂದರೆ, ಸಿಜೆಐ ಗವಾಯಿ ಅವರಂತವರು ತಮ್ಮ ಹಿಂದೂ ವಿರೋಧಿ ಹೇಳಿಕೆಗಳ ಹೊರತಾಗಿಯೂ ಯಾವುದೇ ಪರಿಣಾಮಗಳಿಲ್ಲದೆ ತಪ್ಪಿಸಿಕೊಳ್ಳುವುದು ಏಕೆ?” ಎಂದು ಬರೆಯಲಾಗಿತ್ತು.

ವಿಡಿಯೋದಲ್ಲಿ ಹಿಂದುತ್ವ ಸಂಘಟನೆಯಾದ ‘ಹಿಂದೂ ಕೆಫೆ ಫೌಂಡೇಶನ್‌’ನ ಸಂಸ್ಥಾಪಕ ಕೌಶಲೇಶ್ ರಾಯ್, ಸಿಜೆಐ ಗವಾಯಿ ವಿರುದ್ಧ ಬಹಿರಂಗವಾಗಿ ಹಿಂಸಾಚಾರದ ಬೆದರಿಕೆ ಹಾಕಿದ್ದ.

“ನಾನು ಗಾಂಧಿವಾದಿಯಾಗಿದ್ದೇನೆ, ಆದ್ದರಿಂದ ನಾನು ಹಿಂಸೆಯನ್ನು ಬೆಂಬಲಿಸುವುದಿಲ್ಲ. ಒಂದು ವೇಳೆ ನಾನು ಹಿಂಸೆಯನ್ನು ಬೆಂಬಲಿಸಿದ್ದರೆ, ನಾನು ಹೀಗೆ ಹೇಳುತ್ತಿದ್ದೆ: ಸಿಜೆಐ ಗವಾಯಿ ಅವರು ಕೋರ್ಟ್‌ನಲ್ಲಿ ಇರುವಾಗ, ಒಬ್ಬ ಹಿಂದೂ ವಕೀಲ ಅವರ ತಲೆಯನ್ನು ಹಿಡಿದು ಗೋಡೆಗೆ ಬಡಿದು, ತಲೆಯನ್ನು ಎರಡು ತುಂಡು ಮಾಡಬಹುದು. ಆದರೆ ನಾನು ಖಂಡಿತವಾಗಿಯೂ ಹಿಂಸೆಯನ್ನು ಬೆಂಬಲಿಸುವುದಿಲ್ಲ” ಎಂದು ಕೌಶಲೇಶ್ ರೈ ಹೇಳಿದ್ದ.

ಮುಂದುವರಿದು, ” ಹಿಂದೂ ಧರ್ಮದ ಬಗ್ಗೆ ಯಾರು ಏನು ಹೇಳಿದರೂ, ಅವರಿಗೆ ದೊಡ್ಡ ಮಟ್ಟದ ಶಿಕ್ಷೆಯಾಗುವುದಿಲ್ಲ. ಆದ್ದರಿಂದ ಎಲ್ಲರೂ ಸುಲಭವಾಗಿ ಮಾತನಾಡುತ್ತಾರೆ. ನ್ಯಾಯಮೂರ್ತಿ ಗವಾಯಿ ಅವರು ವಿಷ್ಣು ದೇವರ ಬಗ್ಗೆ ಟೀಕೆ ಮಾಡಿರುವುದು ಗೊತ್ತಿದ್ದೂ ಅವರು ಜಾಗರೂಕರಾಗಿಬೇಕು. ಗೋಡ್ಸೆಯಂತಹ ಹಿಂಸೆ ಮಾಡುವುದು ಸರಿಯಲ್ಲ, ಆದರೆ ಗಾಂಧಿಯಂತೆ ಶಾಂತಿಯಿಂದ ಪ್ರತಿಭಟಿಸಬಹುದು. ಒಂದು ವೇಳೆ ಗವಾಯಿ ಅವರ ಮುಖದ ಮೇಲೆ ಯಾರಾದರೂ ಉಗುಳಿದರೆ, ಕಾನೂನಿನ ಪ್ರಕಾರ ಗರಿಷ್ಠ ಆರು ತಿಂಗಳು ಜೈಲು ಶಿಕ್ಷೆಯಾಗಬಹುದು. ಆದರೆ, ಹಿಂದೂಗಳು ಇಂತಹ ಸಣ್ಣ ಕ್ರಮವನ್ನೂ ತೆಗೆದುಕೊಳ್ಳುತ್ತಿಲ್ಲ” ಎಂದಿದ್ದ.

“ಗವಾಯಿ ಅವರಂತಹವರು ಅಥವಾ ಯಾರಾದರೂ ಹಿಂದೂಗಳ ವಿರುದ್ಧ ಧಾರ್ಮಿಕವಾಗಿ ಟೀಕೆ ಮಾಡಿದರೆ, ಅವರಿಗೆ ಯಾವುದೇ ಶಿಕ್ಷೆಯಾಗುವುದಿಲ್ಲ ಎಂದು ಅವರಿಗೆ ಗೊತ್ತಿದೆ. ಆದರೆ, ಹಿಂದೂಗಳು ಒಂದು ದಿನ ಈ ರೀತಿಯ ಟೀಕೆಗೆ ಒಂದು ಬೆಲೆ (ಶಿಕ್ಷೆ ಅಥವಾ ಪರಿಣಾಮ) ನಿಗದಿಪಡಿಸಿದರೆ, ಉದಾಹರಣೆಗೆ, “ವಿಷ್ಣು ದೇವರ ಬಗ್ಗೆ ಟೀಕಿಸಿದರೆ ಇಂತಹ ಶಿಕ್ಷೆ ಎದುರಿಸಬೇಕು” ಎಂದು ಹೇಳಿದರೆ, ಜನರು ಜಾಗರೂಕರಾಗುತ್ತಾರೆ. ಒಂದೆರಡು ಜನರಿಗೆ ಶಿಕ್ಷೆಯಾದರೆ, ಇಂತಹ ಘಟನೆಗಳು 60-70% ಕಡಿಮೆಯಾಗುತ್ತವೆ” ಎಂದು ಹೇಳಿದ್ದ.

ಕಾರ್ಯಕ್ರಮದಲ್ಲಿ ಅಜಿತ್ ಭಾರ್ತಿ ನ್ಯಾಯಮೂರ್ತಿ ಗವಾಯಿ ಅವರ ಕಾರನ್ನು ಸುತ್ತುವರಿಯುವಂತೆ ಸೂಚಿಸಿದ್ದ.

ಸೋಮವಾರ ಗವಾಯಿ ಅವರ ಮೇಲಿನ ದಾಳಿಯ ನಂತರ, ರಾಯ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೂ ಬೆದರಿಕೆ ಹಾಕಿದ್ದ.

ಸಿಜೆಐ ಮೇಲಿನ ದಾಳಿಯನ್ನು ಖಂಡಿಸಿದ್ದ ಪ್ರಶಾಂತ್ ಭೂಷಣ್, “ಇದು ಸಿಜೆಐ ಅವರನ್ನು ಬೆದರಿಸಲು ಬ್ರಾಹ್ಮಣ ಮನಸ್ಥಿತಿಯ ವಕೀಲರೊಬ್ಬರು ಮಾಡಿರುವ ಹೇಯ ಪ್ರಯತ್ನ. ಇದು ಕ್ರಿಮಿನಲ್ ನ್ಯಾಯಾಂಗ ನಿಂದನೆಯಾಗಿದೆ. ವಕೀಲರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದರು.

ಪ್ರಶಾಂತ್ ಭೂಷಣ್ ಅವರ ಈ ಪೋಸ್ಟ್ ಅನ್ನು ರಿಪೋಸ್ಟ್ ಮಾಡಿದ್ದ ರಾಯ್‌ “ಭೂಷಣ್ ಜಿ ರ‍್ಯಾಪ್‌ನಿಂದ ತೃಪ್ತರಾಗಿಲ್ಲ ಎಂದು ತೋರುತ್ತದೆ” ಎಂದು ಬರೆದಿದ್ದ.

ಅಜಿತ್ ಭಾರ್ತಿಯ ಕಾರ್ಯಕ್ರಮದಲ್ಲಿ ಕೌಶಲೇಶ್ ರಾಯ್ ಸಿಜೆಐ ಗವಾಯಿ ಅವರ ಕುಟುಂಬದ ಬಗ್ಗೆಯೂ ಟೀಕೆ ಮಾಡಿದ್ದ. “ಗವಾಯಿ ಅವರ ತಂದೆ ಮೂರು ರಾಜ್ಯಗಳ ಗವರ್ನರ್ ಆಗಿದ್ದರು ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಸಂಸ್ಥಾಪಕರಾಗಿದ್ದರು. ಈ ಎಲ್ಲ ವಿಷಯಗಳನ್ನು ಜೋಡಿಸಿದರೆ, ಭಾರತದಲ್ಲಿ ಕೆಲವು ಕೆಟ್ಟ ಬರಹಗಳು ಅಥವಾ ದ್ವೇಷ ಹರಡುವ ಸಾಹಿತ್ಯಕ್ಕೆ (‘ದೌರ್ಜನ್ಯ ಸಾಹಿತ್ಯ’) ಗವಾಯಿ ಕುಟುಂಬವೇ ಕಾರಣ ಎಂದು ತೋರುತ್ತದೆ” ಎಂದು ಹೇಳಿದ್ದ.

ಅಕ್ಟೋಬರ್ 5ರಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ಆಯೋಜಿಸಿದ್ದ ಆರ್‌ಎಸ್‌ಎಸ್‌ 100ನೇ ವರ್ಷಾಚರಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸಿಜೆಐ ಗವಾಯಿ ಅವರ ತಾಯಿ ಕಮಲಾತೈ ಗವಾಯಿ ಅವರನ್ನು ಆಹ್ವಾನಿಸಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಕಮಲಾತೈ ಅವರು, ನಾವು ಅಂಬೇಡ್ಕರ್ ಸಿದ್ದಾಂತದವರು, ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ನಾನು ಒಂದು ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ ಅಂಬೇಡ್ಕರ್ ಸಿದ್ದಾಂತವನ್ನೇ ಹೇಳುತ್ತಿದ್ದೆ ಎಂದಿದ್ದರು. ಈ ಬೆಳವಣಿಗೆಗಳನ್ನು ಸಿಜೆಐ ಮೇಲಿನ ದಾಳಿಯ ಈ ಸಂದರ್ಭದಲ್ಲಿ ನಾವು ಗಮನಿಸಬೇಕಿದೆ.

ಹಿಂದುತ್ವ ಬಲಪಂಥೀಯರಿಂದ ವ್ಯಾಪಕ ಅಭಿಯಾನ

ಅಜಿತ್ ಭಾರ್ತಿ ಮತ್ತು ಕೌಶಲೇಶ್ ರಾಯ್ ಇತರ ಹಲವಾರು ಹಿಂದುತ್ವ ಬಲಪಂಥೀಯ ಸಂಘಟನೆಗಳು ಮತ್ತು ವ್ಯಕ್ತಿಗಳೊಂದಿಗೆ ಸೇರಿ ಮುಖ್ಯ ನ್ಯಾಯಮೂರ್ತಿ ಗವಾಯಿ ವಿರುದ್ಧ ಪ್ರಚಾರ ಮಾಡಿದ್ದರು. ವಿಶ್ವ ಹಿಂದೂ ಪರಿಷತ್ ಮುಖ್ಯಸ್ಥ ಅಲೋಕ್ ಕುಮಾರ್ “ನ್ಯಾಯಾಲಯದಲ್ಲಿ ಭಾಷೆಯಲ್ಲಿ ಸಂಯಮ” ವನ್ನು ಕಾಯ್ದುಕೊಳ್ಳುವಂತೆ ಹೇಳಿದ್ದರು. ಸನಾತನ ಕಥಾ ವಾಚಕ್ ಸಮನ್ವಯ ಪರಿಷತ್ ಎಂಬ ಗುಂಪು ಅಕ್ಟೋಬರ್ 2 ರಂದು ಸುಪ್ರೀಂ ಕೋರ್ಟ್‌ಗೆ ಮೆರವಣಿಗೆಗೆ ಕರೆ ನೀಡಿತ್ತು.

ವಕೀಲ ವಿನೀತ್ ಜಿಂದಾಲ್ ಅವರು ತಮ್ಮ ಹೇಳಿಕೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರಿಗೆ ಪತ್ರ ಬರೆದಿದ್ದರು. ರಾಷ್ಟ್ರಪತಿಗೂ ಪತ್ರ ಕಳುಹಿಸಿದ್ದರು. #ImpeachCJI ಎಂಬ ಹ್ಯಾಶ್‌ಟ್ಯಾಗ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಹಲವಾರು ಯೂಟ್ಯೂಬ್ ಚಾನೆಲ್‌ಗಳು ಮುಖ್ಯ ನ್ಯಾಯಮೂರ್ತಿ ಗವಾಯಿ ವಿರುದ್ಧ ಅಭಿಯಾನ ಆರಂಭಿಸಿತ್ತು.

Courtesy : thewirehindi.com

ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...