Homeದಲಿತ್ ಫೈಲ್ಸ್ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಮೂರು ದಶಕಗಳ ನಂತರ 32 ಜನರಿಗೆ ಶಿಕ್ಷೆ...

ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಮೂರು ದಶಕಗಳ ನಂತರ 32 ಜನರಿಗೆ ಶಿಕ್ಷೆ ಪ್ರಕಟ

- Advertisement -
- Advertisement -

ಪ್ರಬಲ ಜಾತಿ ಸದಸ್ಯರು ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ನಡೆಸಿದ ನಂತರ ಆಗ್ರಾದ ಪನ್ವಾರಿ ಮತ್ತು ಹತ್ತಿರದ ಹಳ್ಳಿಗಳಲ್ಲಿ ಜಾತಿ ಹಿಂಸಾಚಾರ ಭುಗಿಲೆದ್ದಿದ್ದ ಮೂರು ದಶಕಗಳ ಹಿಂದಿನ ಪ್ರಕರಣದ ತೀರ್ಪು ಪ್ರಕಟವಾಗಿದ್ದು, ಸ್ಥಳೀಯ ನ್ಯಾಯಾಲಯವು ಶುಕ್ರವಾರ ಪ್ರಕರಣದಲ್ಲಿ 32 ಜನರಿಗೆ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

97 ಪುಟಗಳ ತೀರ್ಪನ್ನು ಪ್ರಕಟಿಸಿದ ನ್ಯಾಯಾಧೀಶ ಪುಷ್ಕರ್ ಉಪಾಧ್ಯಾಯ ಅವರ ವಿಶೇಷ ಎಸ್‌ಸಿ/ಎಸ್‌ಟಿ ನ್ಯಾಯಾಲಯವು, ಪ್ರತಿ ಅಪರಾಧಿಗೆ ₹41,000 ದಂಡವನ್ನು ವಿಧಿಸಿದೆ. ಈ ಮೊತ್ತದ ಅರ್ಧದಷ್ಟು ಹಣವನ್ನು ಸಂತ್ರಸ್ತ ದಲಿತ ಕುಟುಂಬಗಳಿಗೆ ಪರಿಹಾರವಾಗಿ ನೀಡಲಾಗುತ್ತದೆ.

ಸಾಕ್ಷಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯವು 15 ಜನರನ್ನು ಖುಲಾಸೆಗೊಳಿಸಿದ್ದು, 35 ಪುರುಷರನ್ನು ಅಪರಾಧಿಗಳು ಎಂದು ಘೋಷಿಸಿದೆ. ತೀರ್ಪು ಪ್ರಕಟಿಸಿದ  ಮೂರು ದಿನಗಳ ನಂತರ ಶಿಕ್ಷೆ ವಿಧಿಸಲಾಗಿದೆ. ಮೂಲ 72 ಆರೋಪಿಗಳಲ್ಲಿ 22 ಜನರು ದೀರ್ಘಕಾಲದ ವಿಚಾರಣೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಶುಕ್ರವಾರ 32 ಅಪರಾಧಿಗಳನ್ನು ವಶಕ್ಕೆ ಪಡೆಯಲಾಗಿದ್ದರೆ, ಉಳಿದ ಮೂವರ ವಿರುದ್ಧ ನ್ಯಾಯಾಲಯಕ್ಕೆ ಹಾಜರಾಗದಿದ್ದಕ್ಕಾಗಿ ಜಾಮೀನು ರಹಿತ ವಾರಂಟ್‌ಗಳನ್ನು ಹೊರಡಿಸಲಾಗಿದೆ.

ರಾಜ್ಯ v/s ವಿಪ್ತಿ ರಾಮ್ ಮತ್ತು ಇತರರು ಎಂಬ ಶೀರ್ಷಿಕೆಯ ಈ ಪ್ರಕರಣವು ಜೂನ್ 21–22, 1990 ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದೆ. ಪನ್ವಾರಿಯಲ್ಲಿ ತನ್ನ ಮದುವೆ ಮೆರವಣಿಗೆಯಲ್ಲಿ ದಲಿತ ವರನೊಬ್ಬ ಕುದುರೆ ಸವಾರಿ ಮಾಡಿದ್ದು ಇದಕ್ಕೆ ಕಾರಣವಾಗಿತ್ತು. ದಲಿತರ ಕುದುರೆ ಮೆರವಣಿಗೆಗೆ ಜಾಟ್ ಜಾತಿ ಜನರು ಆಕ್ಷೇಪ ವ್ಯಕ್ತಪಡಿಸಿದ್ದರು. ನಂತರ ನಡೆದ ವಾಗ್ವಾದ, ಮರುದಿನ ನಡೆದ ಎರಡೂ ಕಡೆಯವರು ಗುಂಡಿನ ಚಕಮಕಿಯಲ್ಲಿ 50 ವರ್ಷದ ಸೋನಿ ರಾಮ್ ಜಾಟ್ ಸಾವನ್ನಪ್ಪಿದರು. ಇದರ ಪರಿಣಾಮವಾಗಿ ಹಲವಾರು ದಲಿತ ಮನೆಗಳನ್ನು ಸುಟ್ಟುಹಾಕಲಾಯಿತು. ಜೂನ್ 22 ರ ಮಧ್ಯಾಹ್ನದ ವೇಳೆಗೆ, ಹಿಂಸಾಚಾರವು ಅಕೋಲಾ ಮತ್ತು ಹತ್ತಿರದ ಇತರ ಹಳ್ಳಿಗಳಿಗೆ ಹರಡಿತು, ಅಲ್ಲಿ ದಲಿತರ ಮೇಲೆ ಹೆಚ್ಚಿನ ದಾಳಿಗಳು ವರದಿಯಾಗಿವೆ.

ಹಿಂಸಾಚಾರವು ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿ ಮತ್ತು ಪೊಲೀಸ್ ಪಡೆಗಳ ಭಾರೀ ನಿಯೋಜನೆಗೆ ಕಾರಣವಾಯಿತು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಒಂದು ತಿಂಗಳ ಕಾಲ ಕರ್ಫ್ಯೂ ವಿಧಿಸಲಾಯಿತು. ಹಿಂಸಾಚಾರದ ನಂತರ ಆಗಿನ ಕಾಂಗ್ರೆಸ್ ನಾಯಕ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಅವರೊಂದಿಗೆ ಪನ್ವಾರಿ ಗ್ರಾಮಕ್ಕೆ ಭೇಟಿ ನೀಡಿದ್ದರು.

ಕಾಗರೋಲ್ ಪೊಲೀಸ್ ಠಾಣೆಯಲ್ಲಿ ಆಗಿನ ಪೊಲೀಸ್ ಅಧಿಕಾರಿ ಓಂವೀರ್ ಸಿಂಗ್ ರಾಣಾ ಪ್ರಕರಣ ದಾಖಲಿಸಿದ್ದರು. ಐಪಿಸಿ ಸೆಕ್ಷನ್ 148 (ಮಾರಕ ಆಯುಧಗಳಿಂದ ಗಲಭೆ), 149 (ಕಾನೂನುಬಾಹಿರ ಸಭೆ), 323 (ಸ್ವಯಂಪ್ರೇರಣೆಯಿಂದ ನೋವುಂಟುಮಾಡುವುದು), 144 (ಆಯುಧದೊಂದಿಗೆ ಕಾನೂನುಬಾಹಿರ ಸಭೆ ಸೇರುವುದು), 325 (ತೀವ್ರ ಗಾಯ ಉಂಟುಮಾಡುವುದು), ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 3/2/5 ರ ಅಡಿಯಲ್ಲಿ ಆರೋಪ ಹೊರಿಸಲಾಯಿತು.

ಹೆಚ್ಚುವರಿ ಜಿಲ್ಲಾ ಸರ್ಕಾರಿ ವಕೀಲ ಹೇಮಂತ್ ದೀಕ್ಷಿತ್, “ಅಕೋಲಾದಲ್ಲಿ ಕನಿಷ್ಠ 200–250 ಜನರು ಸ್ಥಳದಲ್ಲಿದ್ದರು. ಪ್ರಕರಣದಲ್ಲಿ ಒಟ್ಟು 72 ಜನರನ್ನು ಹೆಸರಿಸಲಾಯಿತು, ವಿಚಾರಣೆಯ ಸಮಯದಲ್ಲಿ 31 ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು ವಿಚಾರಣೆ ನಡೆಸಲಾಯಿತು” ಎಂದು ಹೇಳಿದರು.

ಶುಕ್ರವಾರದ ವಿಚಾರಣೆಯ ಸಮಯದಲ್ಲಿ, ಪ್ರತಿವಾದಿಯ ಕಡೆಯವರು ದಾಳಿಕೋರರ ಪರವಾಗಿ ವಾದಿಸಿದರು. ಶಿಕ್ಷೆಗೊಳಗಾದ ಪುರುಷರು ಈಗ 80 ರಿಂದ 85 ವರ್ಷ ವಯಸ್ಸಿನವರು, ಕೃಷಿ ಹಿನ್ನೆಲೆಯಿಂದ ಬಂದವರು, ಯಾವುದೇ ಹಿಂದಿನ ಕ್ರಿಮಿನಲ್ ದಾಖಲೆಯನ್ನು ಹೊಂದಿಲ್ಲ ಎಂದು ಹೇಳಿದರು. ಪ್ರಮುಖ ಸಾಕ್ಷಿಗಳು ಪ್ರತಿಕೂಲ ಪ್ರತಿಕ್ರಿಯೆ ತೋರಿದ ನಂತರ ಮತ್ತು ಮೂಲ ಪ್ರಕರಣದ ಡೈರಿ ಕಾಣೆಯಾದ ನಂತರ 2022 ರಲ್ಲಿ ಬಿಜೆಪಿ ಶಾಸಕ ಚೌಧರಿ ಬಾಬು ಲಾಲ್ ಮತ್ತು ಇತರ ಏಳು ಜನರನ್ನು ಖುಲಾಸೆಗೊಳಿಸಲಾಯಿತು.

“ಘಟನೆಯ ಸಮಯದಲ್ಲಿ ಎಲ್ಲಾ ಆರೋಪಿಗಳು ಚಿಕ್ಕವರಾಗಿದ್ದರು. ಅಕೋಲಾದಲ್ಲಿ ನಡೆದ ಹಿಂಸಾಚಾರ ಎಷ್ಟು ಕ್ರೂರವಾಗಿತ್ತೆಂದರೆ ಅದು ದಲಿತ ಕುಟುಂಬಗಳ ಸಾಮೂಹಿಕ ವಲಸೆಗೆ ಕಾರಣವಾಯಿತು. ಆದ್ದರಿಂದ, ನಾವು ಗರಿಷ್ಠ ಶಿಕ್ಷೆಯನ್ನು ಕೋರಿದ್ದೇವೆ” ಎಂದು ದೀಕ್ಷಿತ್ ಪ್ರತಿವಾದಿಯ ವಾದಗಳನ್ನು ವಿರೋಧಿಸಿದರು.

ಈ ಮಧ್ಯೆ, ಅಪರಾಧಿಗಳು ತೀರ್ಪಿನ ವಿರುದ್ಧ ಅಲಹಾಬಾದ್ ಹೈಕೋರ್ಟ್‌ಗೆ ಹೋಗಲು ಯೋಜಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. “ಘಟನೆಯ ನಂತರ ಸರಿಯಾದ ತನಿಖೆ ನಡೆದಿಲ್ಲ. ಈಗ ಪರಿಸ್ಥಿತಿ ಶಾಂತಿಯುತವಾಗಿದೆ, ಊರು ತೊರೆದ ದಲಿತ ಕುಟುಂಬಗಳು ಹಿಂತಿರುಗಿದ್ದಾರೆ, ಮನೆಗಳನ್ನು ನಿರ್ಮಿಸಿದ್ದಾರೆ. ನಾವು ಇಂದು ಸಾಮರಸ್ಯದಿಂದ ಬದುಕುತ್ತಿದ್ದೇವೆ” ಎಂದು ಅಪರಾಧಿಗಳಲ್ಲಿ ಒಬ್ಬರ ಸಹಚರರು ಹೇಳಿದರು.

ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...