Homeದಲಿತ್ ಫೈಲ್ಸ್ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಮೂರು ದಶಕಗಳ ನಂತರ 32 ಜನರಿಗೆ ಶಿಕ್ಷೆ...

ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಮೂರು ದಶಕಗಳ ನಂತರ 32 ಜನರಿಗೆ ಶಿಕ್ಷೆ ಪ್ರಕಟ

- Advertisement -
- Advertisement -

ಪ್ರಬಲ ಜಾತಿ ಸದಸ್ಯರು ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ನಡೆಸಿದ ನಂತರ ಆಗ್ರಾದ ಪನ್ವಾರಿ ಮತ್ತು ಹತ್ತಿರದ ಹಳ್ಳಿಗಳಲ್ಲಿ ಜಾತಿ ಹಿಂಸಾಚಾರ ಭುಗಿಲೆದ್ದಿದ್ದ ಮೂರು ದಶಕಗಳ ಹಿಂದಿನ ಪ್ರಕರಣದ ತೀರ್ಪು ಪ್ರಕಟವಾಗಿದ್ದು, ಸ್ಥಳೀಯ ನ್ಯಾಯಾಲಯವು ಶುಕ್ರವಾರ ಪ್ರಕರಣದಲ್ಲಿ 32 ಜನರಿಗೆ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

97 ಪುಟಗಳ ತೀರ್ಪನ್ನು ಪ್ರಕಟಿಸಿದ ನ್ಯಾಯಾಧೀಶ ಪುಷ್ಕರ್ ಉಪಾಧ್ಯಾಯ ಅವರ ವಿಶೇಷ ಎಸ್‌ಸಿ/ಎಸ್‌ಟಿ ನ್ಯಾಯಾಲಯವು, ಪ್ರತಿ ಅಪರಾಧಿಗೆ ₹41,000 ದಂಡವನ್ನು ವಿಧಿಸಿದೆ. ಈ ಮೊತ್ತದ ಅರ್ಧದಷ್ಟು ಹಣವನ್ನು ಸಂತ್ರಸ್ತ ದಲಿತ ಕುಟುಂಬಗಳಿಗೆ ಪರಿಹಾರವಾಗಿ ನೀಡಲಾಗುತ್ತದೆ.

ಸಾಕ್ಷಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯವು 15 ಜನರನ್ನು ಖುಲಾಸೆಗೊಳಿಸಿದ್ದು, 35 ಪುರುಷರನ್ನು ಅಪರಾಧಿಗಳು ಎಂದು ಘೋಷಿಸಿದೆ. ತೀರ್ಪು ಪ್ರಕಟಿಸಿದ  ಮೂರು ದಿನಗಳ ನಂತರ ಶಿಕ್ಷೆ ವಿಧಿಸಲಾಗಿದೆ. ಮೂಲ 72 ಆರೋಪಿಗಳಲ್ಲಿ 22 ಜನರು ದೀರ್ಘಕಾಲದ ವಿಚಾರಣೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಶುಕ್ರವಾರ 32 ಅಪರಾಧಿಗಳನ್ನು ವಶಕ್ಕೆ ಪಡೆಯಲಾಗಿದ್ದರೆ, ಉಳಿದ ಮೂವರ ವಿರುದ್ಧ ನ್ಯಾಯಾಲಯಕ್ಕೆ ಹಾಜರಾಗದಿದ್ದಕ್ಕಾಗಿ ಜಾಮೀನು ರಹಿತ ವಾರಂಟ್‌ಗಳನ್ನು ಹೊರಡಿಸಲಾಗಿದೆ.

ರಾಜ್ಯ v/s ವಿಪ್ತಿ ರಾಮ್ ಮತ್ತು ಇತರರು ಎಂಬ ಶೀರ್ಷಿಕೆಯ ಈ ಪ್ರಕರಣವು ಜೂನ್ 21–22, 1990 ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದೆ. ಪನ್ವಾರಿಯಲ್ಲಿ ತನ್ನ ಮದುವೆ ಮೆರವಣಿಗೆಯಲ್ಲಿ ದಲಿತ ವರನೊಬ್ಬ ಕುದುರೆ ಸವಾರಿ ಮಾಡಿದ್ದು ಇದಕ್ಕೆ ಕಾರಣವಾಗಿತ್ತು. ದಲಿತರ ಕುದುರೆ ಮೆರವಣಿಗೆಗೆ ಜಾಟ್ ಜಾತಿ ಜನರು ಆಕ್ಷೇಪ ವ್ಯಕ್ತಪಡಿಸಿದ್ದರು. ನಂತರ ನಡೆದ ವಾಗ್ವಾದ, ಮರುದಿನ ನಡೆದ ಎರಡೂ ಕಡೆಯವರು ಗುಂಡಿನ ಚಕಮಕಿಯಲ್ಲಿ 50 ವರ್ಷದ ಸೋನಿ ರಾಮ್ ಜಾಟ್ ಸಾವನ್ನಪ್ಪಿದರು. ಇದರ ಪರಿಣಾಮವಾಗಿ ಹಲವಾರು ದಲಿತ ಮನೆಗಳನ್ನು ಸುಟ್ಟುಹಾಕಲಾಯಿತು. ಜೂನ್ 22 ರ ಮಧ್ಯಾಹ್ನದ ವೇಳೆಗೆ, ಹಿಂಸಾಚಾರವು ಅಕೋಲಾ ಮತ್ತು ಹತ್ತಿರದ ಇತರ ಹಳ್ಳಿಗಳಿಗೆ ಹರಡಿತು, ಅಲ್ಲಿ ದಲಿತರ ಮೇಲೆ ಹೆಚ್ಚಿನ ದಾಳಿಗಳು ವರದಿಯಾಗಿವೆ.

ಹಿಂಸಾಚಾರವು ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿ ಮತ್ತು ಪೊಲೀಸ್ ಪಡೆಗಳ ಭಾರೀ ನಿಯೋಜನೆಗೆ ಕಾರಣವಾಯಿತು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಒಂದು ತಿಂಗಳ ಕಾಲ ಕರ್ಫ್ಯೂ ವಿಧಿಸಲಾಯಿತು. ಹಿಂಸಾಚಾರದ ನಂತರ ಆಗಿನ ಕಾಂಗ್ರೆಸ್ ನಾಯಕ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಅವರೊಂದಿಗೆ ಪನ್ವಾರಿ ಗ್ರಾಮಕ್ಕೆ ಭೇಟಿ ನೀಡಿದ್ದರು.

ಕಾಗರೋಲ್ ಪೊಲೀಸ್ ಠಾಣೆಯಲ್ಲಿ ಆಗಿನ ಪೊಲೀಸ್ ಅಧಿಕಾರಿ ಓಂವೀರ್ ಸಿಂಗ್ ರಾಣಾ ಪ್ರಕರಣ ದಾಖಲಿಸಿದ್ದರು. ಐಪಿಸಿ ಸೆಕ್ಷನ್ 148 (ಮಾರಕ ಆಯುಧಗಳಿಂದ ಗಲಭೆ), 149 (ಕಾನೂನುಬಾಹಿರ ಸಭೆ), 323 (ಸ್ವಯಂಪ್ರೇರಣೆಯಿಂದ ನೋವುಂಟುಮಾಡುವುದು), 144 (ಆಯುಧದೊಂದಿಗೆ ಕಾನೂನುಬಾಹಿರ ಸಭೆ ಸೇರುವುದು), 325 (ತೀವ್ರ ಗಾಯ ಉಂಟುಮಾಡುವುದು), ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 3/2/5 ರ ಅಡಿಯಲ್ಲಿ ಆರೋಪ ಹೊರಿಸಲಾಯಿತು.

ಹೆಚ್ಚುವರಿ ಜಿಲ್ಲಾ ಸರ್ಕಾರಿ ವಕೀಲ ಹೇಮಂತ್ ದೀಕ್ಷಿತ್, “ಅಕೋಲಾದಲ್ಲಿ ಕನಿಷ್ಠ 200–250 ಜನರು ಸ್ಥಳದಲ್ಲಿದ್ದರು. ಪ್ರಕರಣದಲ್ಲಿ ಒಟ್ಟು 72 ಜನರನ್ನು ಹೆಸರಿಸಲಾಯಿತು, ವಿಚಾರಣೆಯ ಸಮಯದಲ್ಲಿ 31 ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು ವಿಚಾರಣೆ ನಡೆಸಲಾಯಿತು” ಎಂದು ಹೇಳಿದರು.

ಶುಕ್ರವಾರದ ವಿಚಾರಣೆಯ ಸಮಯದಲ್ಲಿ, ಪ್ರತಿವಾದಿಯ ಕಡೆಯವರು ದಾಳಿಕೋರರ ಪರವಾಗಿ ವಾದಿಸಿದರು. ಶಿಕ್ಷೆಗೊಳಗಾದ ಪುರುಷರು ಈಗ 80 ರಿಂದ 85 ವರ್ಷ ವಯಸ್ಸಿನವರು, ಕೃಷಿ ಹಿನ್ನೆಲೆಯಿಂದ ಬಂದವರು, ಯಾವುದೇ ಹಿಂದಿನ ಕ್ರಿಮಿನಲ್ ದಾಖಲೆಯನ್ನು ಹೊಂದಿಲ್ಲ ಎಂದು ಹೇಳಿದರು. ಪ್ರಮುಖ ಸಾಕ್ಷಿಗಳು ಪ್ರತಿಕೂಲ ಪ್ರತಿಕ್ರಿಯೆ ತೋರಿದ ನಂತರ ಮತ್ತು ಮೂಲ ಪ್ರಕರಣದ ಡೈರಿ ಕಾಣೆಯಾದ ನಂತರ 2022 ರಲ್ಲಿ ಬಿಜೆಪಿ ಶಾಸಕ ಚೌಧರಿ ಬಾಬು ಲಾಲ್ ಮತ್ತು ಇತರ ಏಳು ಜನರನ್ನು ಖುಲಾಸೆಗೊಳಿಸಲಾಯಿತು.

“ಘಟನೆಯ ಸಮಯದಲ್ಲಿ ಎಲ್ಲಾ ಆರೋಪಿಗಳು ಚಿಕ್ಕವರಾಗಿದ್ದರು. ಅಕೋಲಾದಲ್ಲಿ ನಡೆದ ಹಿಂಸಾಚಾರ ಎಷ್ಟು ಕ್ರೂರವಾಗಿತ್ತೆಂದರೆ ಅದು ದಲಿತ ಕುಟುಂಬಗಳ ಸಾಮೂಹಿಕ ವಲಸೆಗೆ ಕಾರಣವಾಯಿತು. ಆದ್ದರಿಂದ, ನಾವು ಗರಿಷ್ಠ ಶಿಕ್ಷೆಯನ್ನು ಕೋರಿದ್ದೇವೆ” ಎಂದು ದೀಕ್ಷಿತ್ ಪ್ರತಿವಾದಿಯ ವಾದಗಳನ್ನು ವಿರೋಧಿಸಿದರು.

ಈ ಮಧ್ಯೆ, ಅಪರಾಧಿಗಳು ತೀರ್ಪಿನ ವಿರುದ್ಧ ಅಲಹಾಬಾದ್ ಹೈಕೋರ್ಟ್‌ಗೆ ಹೋಗಲು ಯೋಜಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. “ಘಟನೆಯ ನಂತರ ಸರಿಯಾದ ತನಿಖೆ ನಡೆದಿಲ್ಲ. ಈಗ ಪರಿಸ್ಥಿತಿ ಶಾಂತಿಯುತವಾಗಿದೆ, ಊರು ತೊರೆದ ದಲಿತ ಕುಟುಂಬಗಳು ಹಿಂತಿರುಗಿದ್ದಾರೆ, ಮನೆಗಳನ್ನು ನಿರ್ಮಿಸಿದ್ದಾರೆ. ನಾವು ಇಂದು ಸಾಮರಸ್ಯದಿಂದ ಬದುಕುತ್ತಿದ್ದೇವೆ” ಎಂದು ಅಪರಾಧಿಗಳಲ್ಲಿ ಒಬ್ಬರ ಸಹಚರರು ಹೇಳಿದರು.

ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...