Homeಮುಖಪುಟಟ್ವಿಟರ್‌ ಖಾತೆ ಸ್ಥಗಿತ: 'ಪ್ರಜಾಪ್ರಭುತ್ವದ ಮೇಲಿನ ದಾಳಿ' ಎಂದ ರಾಹುಲ್ ಗಾಂಧಿ

ಟ್ವಿಟರ್‌ ಖಾತೆ ಸ್ಥಗಿತ: ‘ಪ್ರಜಾಪ್ರಭುತ್ವದ ಮೇಲಿನ ದಾಳಿ’ ಎಂದ ರಾಹುಲ್ ಗಾಂಧಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್‌ ಖಾತೆಯನ್ನು ಸ್ಥಗಿತಗೊಳಿಸಿರುವ ಕಂಪನಿ ವಿರುದ್ಧ ತಿರುಗಿ ಬಿದ್ದಿರುವ ಅವರು, ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ ಎಂದು ಕಿಡಿ ಕಾರಿದ್ದಾರೆ.

ಕಳೆದ ವಾರ ದೆಹಲಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾದ 9 ವರ್ಷದ ದಲಿತ ಬಾಲಕಿಯ ಕುಟುಂಬದೊಂದಿಗೆ ರಾಹುಲ್ ಗಾಂಧಿ ಮಾತನಾಡುತ್ತಿರುವ ಫೋಟೋಗಳನ್ನು ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಫೋಟೋಗಳನ್ನು ಹಂಚಿಕೊಂಡ ರಾಹುಲ್ ಗಾಂಧಿ ಮತ್ತು ಇತರ ಹಲವು ಕಾಂಗ್ರೆಸ್ ನಾಯಕರ ಟ್ವಿಟರ್ ಹ್ಯಾಂಡಲ್‌ಗಳನ್ನು ಸ್ಥಗಿತ ಮಾಡಲಾಗಿದೆ.

“ಟ್ವಿಟರ್‌ ಖಾತೆ ನಿರ್ಬಂಧ ರಾಹುಲ್ ಗಾಂಧಿಯ ಮೇಲಿನ ದಾಳಿ ಅಲ್ಲ. ನಾನು 19 ರಿಂದ 20 ಮಿಲಿಯನ್ ಫಾಲೋವರ್ಸ್ ಹೊಂದಿದ್ದೇನೆ. ನೀವು ಅವರ ಅಭಿಪ್ರಾಯದ ಹಕ್ಕನ್ನು ಕೂಡ ನಿರಾಕರಿಸುತ್ತಿದ್ದೀರಿ” ಎಂದು ರಾಹುಲ್ ಗಾಂಧಿ ಯೂಟ್ಯೂಬ್ ವಿಡಿಯೊ ಮೂಲಕ ಹೇಳಿದ್ದಾರೆ.

“ನಮ್ಮ ರಾಜಕೀಯವನ್ನು ವ್ಯಾಖ್ಯಾನಿಸಲು ಕಂಪನಿ ಪ್ರಯತ್ನಿಸುತ್ತಿದೆ. ರಾಜಕೀಯ ಪ್ರಕ್ರಿಯೆಯಲ್ಲಿ ಕಂಪನಿ ಹಸ್ತಕ್ಷೇಪ ಮಾಡುತ್ತಿದೆ. ಒಬ್ಬ ರಾಜಕಾರಣಿಯಾಗಿ ನಾನು ಅದನ್ನು ಇಷ್ಟಪಡುವುದಿಲ್ಲ. ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ” ಎಂದು ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ದೆಹಲಿ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಜೊತೆಯಲ್ಲಿರುತ್ತೇನೆ: ರಾಹುಲ್ ಗಾಂಧಿ

ಟ್ವಿಟ್ಟರ್ ಕಂಪನಿಯನ್ನು ಪಕ್ಷಪಾತಿ ಎಂದು ಕರೆದಿರುವ ರಾಹುಲ್ ಗಾಂಧಿ, “ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿಯಾಗುತ್ತಿದೆ. ಸಂಸತ್ತಿನಲ್ಲಿ ನಮಗೆ ಮಾತನಾಡಲು ಅವಕಾಶವಿಲ್ಲ. ಮಾಧ್ಯಮವನ್ನು ನಿಯಂತ್ರಿಸಲಾಗುತ್ತಿದೆ. ಇಂತಹ ಸಮಯದಲ್ಲಿ ನಾವು ಟ್ವಿಟರ್‌ನಲ್ಲಿ ನಮ್ಮ ಆಲೋಚನೆಗಳನ್ನು ಹಾಕಬಹುದು ಎಂದು ನಾನು ಭಾವಿಸಿದೆ. ಆದರೆ ಅದು ಸಾಧ್ಯವಿಲ್ಲ. ಟ್ವಿಟರ್ ವಾಸ್ತವವಾಗಿ ತಟಸ್ಥ, ವಸ್ತುನಿಷ್ಠ ವೇದಿಕೆಯಲ್ಲ ಎಂಬುದು ಈಗ ಸ್ಪಷ್ಟವಾಗಿದೆ. ಅದು ಸರ್ಕಾರ ಹೇಳುವುದನ್ನು ಕೇಳುತ್ತದೆ” ಎಂದು ಆರೋಪಿಸಿದ್ದಾರೆ.

ಆದರೆ ಟ್ವಿಟರ್‌ ಮಾತ್ರ, ತಾನು ತನ್ನ ನಿಯಮಗಳನ್ನು “ಎಲ್ಲರಿಗೂ ನ್ಯಾಯಯುತವಾಗಿ ಮತ್ತು ನಿಷ್ಪಕ್ಷಪಾತವಾಗಿ ಜಾರಿಗೊಳಿಸಿದೆ” ಎಂದು ಹೇಳಿದೆ.  “ನಮ್ಮ ನಿಯಮಗಳನ್ನು ಉಲ್ಲಂಘಿಸುವ ಚಿತ್ರವನ್ನು ಪೋಸ್ಟ್ ಮಾಡಿದ ನೂರಾರು ಟ್ವೀಟ್‌ಗಳ ಮೇಲೆ ಕ್ರಮವನ್ನು ತೆಗೆದುಕೊಳ್ಳಲಾಗಿದೆ” ಎಂದು ಸ್ಪಷ್ಟಪಡಿಸಿದೆ.

ಇತ್ತ ರಾಹುಲ್ ಗಾಂಧಿಗೆ ಬೆಂಬಲವಾಗಿ ಹಲವಾರು ಕಾಂಗ್ರೆಸ್ ನಾಯಕರು ತಮ್ಮ ಟ್ವಿಟರ್ ಹ್ಯಾಂಡಲ್‌ಗಳಲ್ಲಿ ಹೆಸರು ಮತ್ತು ಫೋಟೋವನ್ನು ಬದಲಿಸಿದ್ದಾರೆ. ತಮ್ಮ ಹೆಸರು ಮತ್ತು ಫೋಟೋ ಬದಲು ರಾಹುಲ್ ಗಾಂಧಿ ಫೋಟೋ ಹಾಕಿ ಬೆಂಬಲ ತೋರಿಸಿದ್ದಾರೆ.

ಕಾಂಗ್ರೆಸ್ ಯುವ ಘಟಕದ ಟ್ವಿಟರ್‌ ಖಾತೆಗಳಲ್ಲಿ ರಾಹುಲ್ ಗಾಂಧಿಯ ಪ್ರೋಫೈಲ್‌ ಚಿತ್ರವನ್ನು ಹಾಕಿಕೊಂಡಿರುವುದು.

ಟ್ವಿಟರ್‌ ಖಾತೆ ಸ್ಥಗಿತಗೊಳಿಸಿರುವ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತು

 

ಇದನ್ನೂ ಓದಿ: ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...